AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಗೆ ದಾಖಲಾದ ಶಿವರಾಜ್​ಕುಮಾರ್​; ಆರೋಗ್ಯ ವಿಚಾರಿಸಲು ಬಂದ ಮಧು ಬಂಗಾರಪ್ಪ

ಕಳೆದ ಒಂದಷ್ಟು ದಿನಗಳಿಂದ ನಟ ಶಿವರಾಜ್​ಕುಮಾರ್​ ಅವರು ತುಂಬ ಬ್ಯುಸಿ ಆಗಿದ್ದಾರೆ. ಅವರ ಪತ್ನಿ ಗೀತಾ ಶಿವರಾಜ್​ಕುಮಾರ್ ಅವರು ಈ ಬಾರಿ ಶಿವಮೊಗ್ಗದಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಪ್ರಚಾರದಲ್ಲಿ ಶಿವಣ್ಣ ಭಾಗಿ ಆಗುತ್ತಿದ್ದಾರೆ. ಇಂದು (ಏ.1) ಅವರು ಅನಾರೋಗ್ಯದ ಕಾರಣದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆಸ್ಪತ್ರೆಗೆ ದಾಖಲಾದ ಶಿವರಾಜ್​ಕುಮಾರ್​; ಆರೋಗ್ಯ ವಿಚಾರಿಸಲು ಬಂದ ಮಧು ಬಂಗಾರಪ್ಪ
ಆಸ್ಪತ್ರೆಗೆ ದಾಖಲಾದ ಶಿವರಾಜ್​ಕುಮಾರ್​; ಆರೋಗ್ಯ ವಿಚಾರಿಸಲು ಬಂದ ಮಧು ಬಂಗಾರಪ್ಪ
ಮದನ್​ ಕುಮಾರ್​
|

Updated on:Apr 01, 2024 | 6:30 PM

Share

‘ಹ್ಯಾಟ್ರಿಕ್ ಹೀರೋ’ ಶಿವರಾಜ್​ಕುಮಾರ್​ (Shivarajkumar) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಅನಾರೋಗ್ಯದ ಕಾರಣದಿಂದ ಇಂದು (ಏಪ್ರಿಲ್​ 1) ಅವರನ್ನು ವಿಠಲ್​ ಮಲ್ಯ ರಸ್ತೆಯಲ್ಲಿ ಇರುವ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲಗಳ ಪ್ರಕಾರ ಯಾವುದೇ ಗಂಭೀರ ಆರೋಗ್ಯ ಸಮಸ್ಯೆ ಇಲ್ಲ. ಜನರಲ್​ ಚಕಪ್​ ಸಲುವಾಗಿ ಅವರು ಆಸ್ಪತ್ರೆಗೆ ಬಂದಿದ್ದಾರೆ ಎನ್ನಲಾಗಿದೆ. ಮಂಗಳವಾರ (ಏ.2) ಬೆಳಗ್ಗೆ ಅವರನ್ನು ಡಿಸ್ಚಾರ್ಜ್​ ಮಾಡುವ ಸಾಧ್ಯತೆ ಇದೆ. ಶಿವರಾಜ್​ಕುಮಾರ್​ ಅವರನ್ನು ನೋಡಲು ಮಧು ಬಂಗಾರಪ್ಪ (Madhu Bangarappa) ಅವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಕಳೆದ ಕೆಲವು ದಿನಗಳಿಂದ ಶಿವರಾಜ್​ಕುಮಾರ್​ ಅವರು ಸಖತ್​ ಬ್ಯುಸಿ ಆಗಿದ್ದಾರೆ. ಒಂದೆಡೆ ಸಿನಿಮಾ ಕೆಲಸ. ಇನ್ನೊಂದು ಲೋಕಸಭಾ ಚುನಾವಣಾ ಪ್ರಚಾರ. ಶಿವರಾಜ್​ಕುಮಾರ್​ ಅವರ ಪತ್ನಿ ಗೀತಾ ಈ ಬಾರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಹಾಗಾಗಿ ಪತ್ನಿ ಪರವಾಗಿ ಪ್ರಚಾರ ಮಾಡಲು ಅವರು ಹಲವು ಊರುಗಳನ್ನು ಸುತ್ತಿದ್ದಾರೆ.

ಶಿವರಾಜ್​ಕುಮಾರ್​ ಅವರಿಗೆ ಈಗ 61 ವರ್ಷ ವಯಸ್ಸು. ಹದಿಹರೆಯದ ಯುವಕನಂತೆ ಅವರು ಈಗಲೂ ಫೈಟಿಂಗ್​ ದೃಶ್ಯಗಳಲ್ಲಿ ನಟಿಸುತ್ತಾರೆ. ಫಿಟ್ನೆಸ್​ ಬಗ್ಗೆ ಕಾಳಜಿ ವಹಿಸುತ್ತಾರೆ. ಅವರ ಎನರ್ಜಿ ಬಗ್ಗೆ ಎಲ್ಲರೂ ಮಾತನಾಡುತ್ತಾರೆ. ಇತ್ತೀಚಿನ ಕೆಲವು ದಿನಗಳಿಂದ ಅವರು ಬಿಡುವಿಲ್ಲದೇ ಗೀತಾ ಶಿವರಾಜ್​ಕುಮಾರ್​ ಪರವಾಗಿ ಪ್ರಚಾರ ಮಾಡಿದ್ದಾರೆ. ಹಾಗಾಗಿ ಅವರು ಕೊಂಚ ದಣಿದಿರುವ ಸಾಧ್ಯತೆ ಇದೆ. ಜನರಲ್​ ಚಕಪ್​ ಸಲುವಾಗಿ ಅವರು ‘ವೈದೇಹಿ ಸೂಪರ್​ ಸ್ಪೆಷಾಲಿಟಿ ಆಸ್ಪತ್ರೆ’ಗೆ ದಾಖಲಾಗಿದ್ದಾರೆ.

ಇದನ್ನೂ ಓದಿ: ಗೀತಾ ಸರಿಯಾಗಿ ಕೆಲಸ ಮಾಡದಿದ್ರೆ ಹೆಸರು ಚೇಂಜ್ ಮಾಡ್ಕೋತೀನಿ ಎಂದ ಶಿವರಾಜ್​ಕುಮಾರ್

ಶಿವರಾಜ್​ಕುಮಾರ್​ ಹೊಸ ಸಿನಿಮಾ:

ಬ್ಯಾಟ್​ ಟು ಬ್ಯಾಕ್​ ಸಿನಿಮಾ ಮಾಡುವಲ್ಲಿ ಶಿವರಾಜ್​ಕುಮಾರ್​ ಫೇಮಸ್​. ಇತ್ತೀಚೆಗೆ ಅವರು ನಟಿಸಿದ ‘ಕರಟಕ ದಮನಕ’ ಸಿನಿಮಾ ಬಿಡುಗಡೆ ಆಯಿತು. ಈಗ ಅವರ ಇನ್ನೊಂದು ಸಿನಿಮಾ ಅನೌನ್ಸ್ ಆಗಿದೆ. ಆರ್​. ಚಂದ್ರು ಅವರ ‘ಆರ್​ಸಿ ಸ್ಟುಡಿಯೋ’ ನಿರ್ಮಾಣ ಸಂಸ್ಥೆಯ ಅಡಿಯಲ್ಲಿ 6ನೇ ಸಿನಿಮಾ ಬಗ್ಗೆ ಮಾಹಿತಿ ನೀಡಲಾಗಿದೆ. ಆ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಅವರು ನಟಿಸಲಿದ್ದಾರೆ. ಈ ಬಗ್ಗೆ ‘ಎಕ್ಸ್​’ (ಟ್ವಿಟರ್​) ಮೂಲಕ ಆರ್​. ಚಂದ್ರು ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಈ ಮೊದಲು ‘ಮೈಲಾರಿ’, ‘ಕಬ್ಜ’ ಸಿನಿಮಾಗಳಲ್ಲಿ ಶಿವರಾಜ್​ಕುಮಾರ್​ ಅವರಿಗೆ ಆರ್​. ಚಂದ್ರು ಆ್ಯಕ್ಷನ್​-ಕಟ್​ ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:28 pm, Mon, 1 April 24

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?