AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಗೆ ದಾಖಲಾದ ಶಿವರಾಜ್​ಕುಮಾರ್​; ಆರೋಗ್ಯ ವಿಚಾರಿಸಲು ಬಂದ ಮಧು ಬಂಗಾರಪ್ಪ

ಕಳೆದ ಒಂದಷ್ಟು ದಿನಗಳಿಂದ ನಟ ಶಿವರಾಜ್​ಕುಮಾರ್​ ಅವರು ತುಂಬ ಬ್ಯುಸಿ ಆಗಿದ್ದಾರೆ. ಅವರ ಪತ್ನಿ ಗೀತಾ ಶಿವರಾಜ್​ಕುಮಾರ್ ಅವರು ಈ ಬಾರಿ ಶಿವಮೊಗ್ಗದಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಪ್ರಚಾರದಲ್ಲಿ ಶಿವಣ್ಣ ಭಾಗಿ ಆಗುತ್ತಿದ್ದಾರೆ. ಇಂದು (ಏ.1) ಅವರು ಅನಾರೋಗ್ಯದ ಕಾರಣದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆಸ್ಪತ್ರೆಗೆ ದಾಖಲಾದ ಶಿವರಾಜ್​ಕುಮಾರ್​; ಆರೋಗ್ಯ ವಿಚಾರಿಸಲು ಬಂದ ಮಧು ಬಂಗಾರಪ್ಪ
ಆಸ್ಪತ್ರೆಗೆ ದಾಖಲಾದ ಶಿವರಾಜ್​ಕುಮಾರ್​; ಆರೋಗ್ಯ ವಿಚಾರಿಸಲು ಬಂದ ಮಧು ಬಂಗಾರಪ್ಪ
Follow us
ಮದನ್​ ಕುಮಾರ್​
|

Updated on:Apr 01, 2024 | 6:30 PM

‘ಹ್ಯಾಟ್ರಿಕ್ ಹೀರೋ’ ಶಿವರಾಜ್​ಕುಮಾರ್​ (Shivarajkumar) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಅನಾರೋಗ್ಯದ ಕಾರಣದಿಂದ ಇಂದು (ಏಪ್ರಿಲ್​ 1) ಅವರನ್ನು ವಿಠಲ್​ ಮಲ್ಯ ರಸ್ತೆಯಲ್ಲಿ ಇರುವ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲಗಳ ಪ್ರಕಾರ ಯಾವುದೇ ಗಂಭೀರ ಆರೋಗ್ಯ ಸಮಸ್ಯೆ ಇಲ್ಲ. ಜನರಲ್​ ಚಕಪ್​ ಸಲುವಾಗಿ ಅವರು ಆಸ್ಪತ್ರೆಗೆ ಬಂದಿದ್ದಾರೆ ಎನ್ನಲಾಗಿದೆ. ಮಂಗಳವಾರ (ಏ.2) ಬೆಳಗ್ಗೆ ಅವರನ್ನು ಡಿಸ್ಚಾರ್ಜ್​ ಮಾಡುವ ಸಾಧ್ಯತೆ ಇದೆ. ಶಿವರಾಜ್​ಕುಮಾರ್​ ಅವರನ್ನು ನೋಡಲು ಮಧು ಬಂಗಾರಪ್ಪ (Madhu Bangarappa) ಅವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಕಳೆದ ಕೆಲವು ದಿನಗಳಿಂದ ಶಿವರಾಜ್​ಕುಮಾರ್​ ಅವರು ಸಖತ್​ ಬ್ಯುಸಿ ಆಗಿದ್ದಾರೆ. ಒಂದೆಡೆ ಸಿನಿಮಾ ಕೆಲಸ. ಇನ್ನೊಂದು ಲೋಕಸಭಾ ಚುನಾವಣಾ ಪ್ರಚಾರ. ಶಿವರಾಜ್​ಕುಮಾರ್​ ಅವರ ಪತ್ನಿ ಗೀತಾ ಈ ಬಾರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಹಾಗಾಗಿ ಪತ್ನಿ ಪರವಾಗಿ ಪ್ರಚಾರ ಮಾಡಲು ಅವರು ಹಲವು ಊರುಗಳನ್ನು ಸುತ್ತಿದ್ದಾರೆ.

ಶಿವರಾಜ್​ಕುಮಾರ್​ ಅವರಿಗೆ ಈಗ 61 ವರ್ಷ ವಯಸ್ಸು. ಹದಿಹರೆಯದ ಯುವಕನಂತೆ ಅವರು ಈಗಲೂ ಫೈಟಿಂಗ್​ ದೃಶ್ಯಗಳಲ್ಲಿ ನಟಿಸುತ್ತಾರೆ. ಫಿಟ್ನೆಸ್​ ಬಗ್ಗೆ ಕಾಳಜಿ ವಹಿಸುತ್ತಾರೆ. ಅವರ ಎನರ್ಜಿ ಬಗ್ಗೆ ಎಲ್ಲರೂ ಮಾತನಾಡುತ್ತಾರೆ. ಇತ್ತೀಚಿನ ಕೆಲವು ದಿನಗಳಿಂದ ಅವರು ಬಿಡುವಿಲ್ಲದೇ ಗೀತಾ ಶಿವರಾಜ್​ಕುಮಾರ್​ ಪರವಾಗಿ ಪ್ರಚಾರ ಮಾಡಿದ್ದಾರೆ. ಹಾಗಾಗಿ ಅವರು ಕೊಂಚ ದಣಿದಿರುವ ಸಾಧ್ಯತೆ ಇದೆ. ಜನರಲ್​ ಚಕಪ್​ ಸಲುವಾಗಿ ಅವರು ‘ವೈದೇಹಿ ಸೂಪರ್​ ಸ್ಪೆಷಾಲಿಟಿ ಆಸ್ಪತ್ರೆ’ಗೆ ದಾಖಲಾಗಿದ್ದಾರೆ.

ಇದನ್ನೂ ಓದಿ: ಗೀತಾ ಸರಿಯಾಗಿ ಕೆಲಸ ಮಾಡದಿದ್ರೆ ಹೆಸರು ಚೇಂಜ್ ಮಾಡ್ಕೋತೀನಿ ಎಂದ ಶಿವರಾಜ್​ಕುಮಾರ್

ಶಿವರಾಜ್​ಕುಮಾರ್​ ಹೊಸ ಸಿನಿಮಾ:

ಬ್ಯಾಟ್​ ಟು ಬ್ಯಾಕ್​ ಸಿನಿಮಾ ಮಾಡುವಲ್ಲಿ ಶಿವರಾಜ್​ಕುಮಾರ್​ ಫೇಮಸ್​. ಇತ್ತೀಚೆಗೆ ಅವರು ನಟಿಸಿದ ‘ಕರಟಕ ದಮನಕ’ ಸಿನಿಮಾ ಬಿಡುಗಡೆ ಆಯಿತು. ಈಗ ಅವರ ಇನ್ನೊಂದು ಸಿನಿಮಾ ಅನೌನ್ಸ್ ಆಗಿದೆ. ಆರ್​. ಚಂದ್ರು ಅವರ ‘ಆರ್​ಸಿ ಸ್ಟುಡಿಯೋ’ ನಿರ್ಮಾಣ ಸಂಸ್ಥೆಯ ಅಡಿಯಲ್ಲಿ 6ನೇ ಸಿನಿಮಾ ಬಗ್ಗೆ ಮಾಹಿತಿ ನೀಡಲಾಗಿದೆ. ಆ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಅವರು ನಟಿಸಲಿದ್ದಾರೆ. ಈ ಬಗ್ಗೆ ‘ಎಕ್ಸ್​’ (ಟ್ವಿಟರ್​) ಮೂಲಕ ಆರ್​. ಚಂದ್ರು ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಈ ಮೊದಲು ‘ಮೈಲಾರಿ’, ‘ಕಬ್ಜ’ ಸಿನಿಮಾಗಳಲ್ಲಿ ಶಿವರಾಜ್​ಕುಮಾರ್​ ಅವರಿಗೆ ಆರ್​. ಚಂದ್ರು ಆ್ಯಕ್ಷನ್​-ಕಟ್​ ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:28 pm, Mon, 1 April 24