Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivarajkumar: ರಮ್ಯಾ, ಡಾಲಿ ಧನಂಜಯ್​ ಜೊತೆ ‘ಉತ್ತರಕಾಂಡ’ ಚಿತ್ರತಂಡಕ್ಕೆ ಸೇರ್ಪಡೆ ಆದ ಶಿವರಾಜ್​ಕುಮಾರ್​

Uttarakaanda: ಡಾಲಿ ಧನಂಜಯ್​ ಮತ್ತು ಶಿವರಾಜ್​ಕುಮಾರ್​ ಅವರದ್ದು ಹಿಟ್​ ಕಾಂಬಿನೇಷನ್​. ಈ ಮೊದಲು ಅವರು ‘ಟಗರು’ ಸಿನಿಮಾದಲ್ಲಿ ಒಟ್ಟಿಗೆ ತೆರೆಹಂಚಿಕೊಂಡಿದ್ದರು. ಆ ಸಿನಿಮಾ ಸೂಪರ್​ ಹಿಟ್​ ಆಗಿತ್ತು. ಈಗ ಅವರು ಮತ್ತೊಮ್ಮೆ ‘ಉತ್ತರಕಾಂಡ’ ಚಿತ್ರದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ರೋಹಿತ್​ ಪದಕಿ ನಿರ್ದೇಶನದಲ್ಲಿ ಈ ಚಿತ್ರ ಮೂಡಿಬರುತ್ತಿದೆ.

Shivarajkumar: ರಮ್ಯಾ, ಡಾಲಿ ಧನಂಜಯ್​ ಜೊತೆ ‘ಉತ್ತರಕಾಂಡ’ ಚಿತ್ರತಂಡಕ್ಕೆ ಸೇರ್ಪಡೆ ಆದ ಶಿವರಾಜ್​ಕುಮಾರ್​
ಶಿವರಾಜ್​ಕುಮಾರ್​ ಅವರಿಗೆ ‘ಉತ್ತರಕಾಂಡ’ ತಂಡದ ಕಡೆಯಿಂದ ಸ್ವಾಗತ ಕೋರಲಾಗಿದೆ
Follow us
ಮದನ್​ ಕುಮಾರ್​
|

Updated on: Nov 19, 2023 | 3:13 PM

ನಟಿ ರಮ್ಯಾ ದಿವ್ಯ ಸ್ಪಂದನಾ ಅವರ ಕಮ್​ಬ್ಯಾಕ್​ ಪ್ರಾಜೆಕ್ಟ್​ ಎಂಬ ಕಾರಣಕ್ಕೆ ‘ಉತ್ತರಕಾಂಡ’ (Uttarakaanda) ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರದಲ್ಲಿ ಹೀರೋ ಆಗಿ ಡಾಲಿ ಧನಂಜಯ್​ (Daali Dhananjay) ಅವರು ನಟಿಸುತ್ತಿದ್ದಾರೆ. ಅವರ ಜೊತೆಗೆ ಈಗ ಶಿವರಾಜ್​ಕುಮಾರ್​ ಕೂಡ ಸೇರ್ಪಡೆ ಆಗಿದ್ದಾರೆ. ಇದರಿಂದ ಸಿನಿಮಾ ಮೇಲೆ ನಿರೀಕ್ಷೆ ಡಬಲ್​ ಆಗಿದೆ. ಈ ಸಿನಿಮಾದಲ್ಲಿ ಶಿವಣ್ಣ ನಟಿಸುತ್ತಾರೆ ಎಂಬ ಬಗ್ಗೆ ಮೊದಲಿನಿಂದಲೂ ಮಾಹಿತಿ ಕೇಳಿಬರುತ್ತಲೇ ಇತ್ತು. ಅದೀಗ ಅಧಿಕೃತವಾಗಿದೆ. ‘ಉತ್ತರಕಾಂಡ’ ಬಳಗಕ್ಕೆ ಎಂಟ್ರಿ ನೀಡಿರುವ ಶಿವರಾಜ್​ಕುಮಾರ್​ (Shivarajkumar) ಅವರಿಗೆ ತಂಡದ ಕಡೆಯಿಂದ ಸ್ವಾಗತ ಕೋರಲಾಗಿದೆ. ಈ ಸಿನಿಮಾಗೆ ರೋಹಿತ್​ ಪದಕಿ ನಿರ್ದೇಶನ ಮಾಡುತ್ತಿದ್ದಾರೆ. ‘ಕೆಆರ್​ಜಿ ಸ್ಟುಡಿಯೋಸ್​’ ಮೂಲಕ ಈ ಚಿತ್ರ ನಿರ್ಮಾಣ ಆಗುತ್ತಿದೆ.

ಶಿವರಾಜ್​ಕುಮಾರ್​ ಅವರಿಗೆ ಈ ವರ್ಷ ಸಖತ್​ ಸ್ಪೆಷಲ್​ ಆಗಿದೆ. ಅವರು ನಟಿಸಿದ ‘ಜೈಲರ್​’, ‘ಘೋಸ್ಟ್​’ ಸಿನಿಮಾಗಳು ಭರ್ಜರಿ ಸದ್ದು ಮಾಡಿವೆ. ಬೇರೆ ಬೇರೆ ಭಾಷೆಗಳಿಂದ ಅವರಿಗೆ ಬೇಡಿಕೆ ಹೆಚ್ಚಿದೆ. ಶಿವಣ್ಣ ನಟಿಸಿದರೆ ಸಿನಿಮಾದ ತೂಕ ಹೆಚ್ಚುತ್ತದೆ. ಧನುಷ್ ನಟನೆಯ ‘ಕ್ಯಾಪ್ಟನ್​ ಮಿಲ್ಲರ್​’ ಸಿನಿಮಾದಲ್ಲೂ ಶಿವರಾಜ್​ಕುಮಾರ್​ ಅವರು ಒಂದು ಪ್ರಮುಖ ಪಾತ್ರ ಮಾಡಿದ್ದು, ಆ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಈಗ ‘ಉತ್ತರಕಾಂಡ’ ಸಿನಿಮಾದಲ್ಲೂ ಶಿವರಾಜ್​ಕುಮಾರ್​ ಅವರಿಗೆ ಒಂದು ಪ್ರಮುಖ ಪಾತ್ರ ನೀಡಲಾಗಿದೆ. ಆ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ.

ಡಾಲಿ ಧನಂಜಯ್​ ಮತ್ತು ಶಿವರಾಜ್​ಕುಮಾರ್​ ಅವರದ್ದು ಹಿಟ್​ ಕಾಂಬಿನೇಷನ್​. ಈ ಮೊದಲು ಅವರು ‘ಟಗರು’ ಸಿನಿಮಾದಲ್ಲಿ ಒಟ್ಟಿಗೆ ತೆರೆಹಂಚಿಕೊಂಡಿದ್ದರು. ಆ ಸಿನಿಮಾ ಸೂಪರ್​ ಹಿಟ್​ ಆಗಿತ್ತು. ಈಗ ಅವರು ಮತ್ತೊಮ್ಮೆ ‘ಉತ್ತರಕಾಂಡ’ ಚಿತ್ರದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಧನಂಜಯ್​ ಅವರು ಗಬ್ರು ಸತ್ಯ ಎಂಬ ಪಾತ್ರ ಮಾಡುತ್ತಿದ್ದಾರೆ. ಆ ಪಾತ್ರ ಹೇಗಿರಲಿದೆ ಎಂಬುದನ್ನು ತಿಳಿಸುವಂತಹ ಟೀಸರ್​ ಈ ಮೊದಲೇ ಬಿಡುಗಡೆಯಾಗಿ ಕೌತುಕ ಮೂಡಿಸಿದೆ. ನಿರ್ದೇಶಕ ರೋಹಿತ್ ಪದಕಿ ಮತ್ತು ಡಾಲಿ ಧನಂಜಯ್​ ಅವರು ‘ರತ್ನನ್​ ಪ್ರಪಂಚ’ ಸಿನಿಮಾದಲ್ಲಿ ಜೊತೆಯಾಗಿ ಕೆಲಸ ಮಾಡಿದ್ದರು. ಅವರ ಕಾಂಬಿನೇಷನ್​ನಲ್ಲಿ ಬರುತ್ತಿರುವ ಎರಡನೇ ಸಿನಿಮಾ ‘ಉತ್ತರಕಾಂಡ’. ಈ ಎಲ್ಲ ಕಾರಣಗಳಿಂದಾಗಿ ನಿರೀಕ್ಷೆ ಮೂಡಿದೆ.

ಇದನ್ನೂ ಓದಿ: ಒಟಿಟಿಗೆ ಬಂತು ಶಿವಣ್ಣ ನಟನೆಯ ‘ಘೋಸ್ಟ್’; 10,000 ಅಡಿ ಪೋಸ್ಟರ್ ಲಾಂಚ್  

ಈ ವರ್ಷ ರಮ್ಯಾ ಅವರು ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಸಿನಿಮಾದಲ್ಲಿ ಚಿಕ್ಕದೊಂದು ಪಾತ್ರ ಮಾಡಿದ್ದರು. ಆದರೆ ಅವರನ್ನು ಪೂರ್ಣಪ್ರಮಾಣದ ಪಾತ್ರದಲ್ಲಿ ದೊಡ್ಡ ಪರದೆ ಮೇಲೆ ನೋಡಲು ಫ್ಯಾನ್ಸ್​ ಕಾದಿದ್ದಾರೆ. ಈ ಸಿನಿಮಾದಲ್ಲಿ ಉತ್ತರ ಕರ್ನಾಟಕ ಶೈಲಿಯ ಸಂಭಾಷಣೆ ಇರಲಿದೆ. ಚಿತ್ರದ ಮುಹೂರ್ತದ ವೇಳೆ ಬಿಡುಗಡೆ ಮಾಡಲಾಗಿದ್ದ ಟೀಸರ್​ನಲ್ಲಿ ರಮ್ಯಾ ಅವರ ಹಿನ್ನೆಲೆ ಧ್ವನಿ ಹೈಲೈಟ್​ ಆಗಿತ್ತು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!