AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhajarangi 2: ‘ಭಜರಂಗಿ 2’ ಚಿತ್ರಕ್ಕೆ ರಾಕಿ ಭಾಯ್​ ಸಾಥ್​; ಒಂದೇ ವೇದಿಕೆಯಲ್ಲಿ ಶಿವಣ್ಣ-ಯಶ್​

Yash: ಗಾಂಧಿನಗರದಲ್ಲಿ ಈಗ ಪ್ರೀ-ರಿಲೀಸ್​ ಇವೆಂಟ್​ಗಳ ಹವಾ ಜೋರಾಗಿದೆ. ಆ ಟ್ರೆಂಡ್​ನಲ್ಲಿ ‘ಭಜರಂಗಿ 2’ ತಂಡ ಕೂಡ ಸೇರಿಕೊಳ್ಳುತ್ತಿದ್ದು, ಅದಕ್ಕೆ ಯಶ್​ ಮುಖ್ಯ ಅತಿಥಿಯಾಗಿ ಆಗಮಿಸುತ್ತಿದ್ದಾರೆ.

Bhajarangi 2: ‘ಭಜರಂಗಿ 2’ ಚಿತ್ರಕ್ಕೆ ರಾಕಿ ಭಾಯ್​ ಸಾಥ್​; ಒಂದೇ ವೇದಿಕೆಯಲ್ಲಿ ಶಿವಣ್ಣ-ಯಶ್​
ಶಿವರಾಜ್​ಕುಮಾರ್​, ಯಶ್​
TV9 Web
| Edited By: |

Updated on: Oct 26, 2021 | 9:37 AM

Share

ಕೊರೊನಾ ವೈರಸ್​ ಎರಡನೇ ಅಲೆ ಕಡಿಮೆ ಆಗಿರುವ ಹಿನ್ನೆಲೆಯಲ್ಲಿ ಗಾಂಧಿನಗರಕ್ಕೆ ಹಳೇ ಚಾರ್ಮ್​ ಮರಳಿದೆ. ಬ್ಯಾಕ್​ ಟು ಬ್ಯಾಕ್​ ಸ್ಟಾರ್​ ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಈಗಾಗಲೇ ದುನಿಯಾ ವಿಜಯ್​ ನಟನೆಯ ‘ಸಲಗ’ ಮತ್ತು ಕಿಚ್ಚ ಸುದೀಪ್​ ಅಭಿನಯದ ‘ಕೋಟಿಗೊಬ್ಬ 3’ ಸಿನಿಮಾಗಳು ರಿಲೀಸ್​ ಆಗಿ ಬಾಕ್ಸ್​ ಆಫೀಸ್​ನಲ್ಲಿ ಧೂಳೆಬ್ಬಿಸಿವೆ. ಈಗ ಶಿವರಾಜ್​ಕುಮಾರ್​ ಸರದಿ. ‘ಹ್ಯಾಟ್ರಿಕ್​ ಹೀರೋ’ ನಟನೆಯ ‘ಭಜರಂಗಿ 2’ (Bhajarangi 2) ಚಿತ್ರ ಅ.29ಕ್ಕೆ ಅದ್ದೂರಿಯಾಗಿ ಬಿಡುಗಡೆ ಆಗಲಿದ್ದು, ಈ ಚಿತ್ರತಂಡಕ್ಕೆ ‘ರಾಕಿಂಗ್​ ಸ್ಟಾರ್​’ ಯಶ್​ ಸಾಥ್​ ನೀಡುತ್ತಿದ್ದಾರೆ.

ಸ್ಯಾಂಡಲ್​​ವುಡ್​ನಲ್ಲಿ ಈಗ ಪ್ರೀ-ರಿಲೀಸ್​ ಇವೆಂಟ್​ಗಳ ಹವಾ ಜೋರಾಗಿದೆ. ಆ ಟ್ರೆಂಡ್​ನಲ್ಲಿ ‘ಭಜರಂಗಿ 2’ ತಂಡ ಕೂಡ ಸೇರಿಕೊಳ್ಳುತ್ತಿದೆ. ಇಂದು (ಅ.26) ಸಂಜೆ ಬೆಂಗಳೂರಿನ ಸ್ಟಾರ್​ ಹೋಟೆಲ್​ವೊಂದರಲ್ಲಿ ಅದ್ದೂರಿಯಾಗಿ ಈ ಸಿನಿಮಾದ ಪ್ರೀ-ರಿಲೀಸ್​ ಕಾರ್ಯಕ್ರಮ ನಡೆಯಲಿದೆ. ವಿಶೇಷ ಏನೆಂದರೆ, ಈ ಕಾರ್ಯಕ್ರಮಕ್ಕೆ ರಾಕಿಂಗ್​ ಸ್ಟಾರ್​ ಯಶ್​ ಅವರು ಮುಖ್ಯ ಅಥಿತಿಯಾಗಿ ಆಗಮಿಸಲಿದ್ದಾರೆ. ಆ ಮೂಲಕ ಚಿತ್ರತಂಡಕ್ಕೆ ಶುಭ ಕೋರಲಿದ್ದಾರೆ.

ಒಂದೇ ವೇದಿಕೆಯಲ್ಲಿ ಶಿವರಾಜ್​ಕುಮಾರ್​ ಮತ್ತು ಯಶ್​ ಕಾಣಿಸಿಕೊಳ್ಳಲಿದ್ದಾರೆ. ಇಡೀ ಚಿತ್ರತಂಡ ಈ ಕಾರ್ಯಕ್ರಮದಲ್ಲಿ ಭಾಗಿ ಆಗಲಿದೆ. ಚಿತ್ರದ ಬಗ್ಗೆ, ಶಿವಣ್ಣನ ಬಗ್ಗೆ ಯಶ್​ ಏನು ಮಾತನಾಡುತ್ತಾರೆ ಎಂಬುದನ್ನು ತಿಳಿಯಲು ಫ್ಯಾನ್ಸ್​ ಕಾತರರಾಗಿದ್ದಾರೆ.

ಹಲವು ಕಾರಣಗಳಿಗಾಗಿ ‘ಭಜರಂಗಿ 2’ ಸಿನಿಮಾ ಮೇಲೆ ನಿರೀಕ್ಷೆ ಮೂಡಿದೆ. ಕೆಲವೇ ದಿನಗಳ ಹಿಂದೆ ಬಿಡುಗಡೆ ಆಗಿರುವ ಟ್ರೇಲರ್​ ಕಂಡು ಫ್ಯಾನ್ಸ್​ ಫಿದಾ ಆಗಿದ್ದಾರೆ. ಸೂಪರ್​ ನ್ಯಾಚುರಲ್​ ಕಥೆ, ಬೃಹತ್​ ಸೆಟ್​ಗಳು, ಕಲಾವಿದರ ಭಿನ್ನ ವಿಭಿನ್ನ ಗೆಟಪ್​ಗಳು ಗಮನ ಸೆಳೆಯುತ್ತಿವೆ. ಶಿವರಾಜ್​ಕುಮಾರ್​ ಮತ್ತು ನಿರ್ದೇಶಕ ಎ. ಹರ್ಷ ಕಾಂಬಿನೇಷನ್​ನಲ್ಲಿ ಮೂಡಿಬಂದಿರುವ ಮೂರನೇ ಸಿನಿಮಾ ಇದಾಗಿದ್ದು, ಸಾಕಷ್ಟು ಹೈಪ್​ ಸೃಷ್ಟಿ ಮಾಡಿದೆ.

ಈ ಸಿನಿಮಾದಲ್ಲಿ ಹಿರಿಯ ನಟಿ ಶ್ರುತಿ, ಭಜರಂಗಿ ಲೋಕಿ, ಭಾವನಾ ಮೆನನ್​, ಶಿವರಾಜ್​ ಕೆ.ಆರ್​. ಪೇಟೆ, ಚೆಲುವ ರಾಜು ಮುಂತಾದವರು ಅಭಿನಯಿಸಿದ್ದಾರೆ. ಈ ಚಿತ್ರಕ್ಕೆ ಅರ್ಜುನ್​ ಜನ್ಯ ಸಂಗೀತ ನಿರ್ದೇಶನ ಮಾಡಿದ್ದಾರೆ. ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ. ಸ್ವಾಮಿ ಜೆ. ಗೌಡ ಛಾಯಾಗ್ರಹಣ, ದೀಪು ಎಸ್​. ಕುಮಾರ್​ ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ.

ಇದನ್ನೂ ಓದಿ:

‘ಭಜರಂಗಿ 2’ ಟ್ರೇಲರ್​ ಬಿಡುಗಡೆಗೂ ಮುನ್ನ ಧೂಳೆಬ್ಬಿಸಿದ ಪೋಸ್ಟರ್​; ಚಿತ್ರದ ಮೇಲೆ ಹೆಚ್ಚಿತು ನಿರೀಕ್ಷೆ

ಆಲಿಮ್​ ಹಕೀಮ್​ ಸಲೂನ್​ನಲ್ಲಿ ಯಶ್​; ಕೆರಳಿದ ಸಿಂಹದಂತಿರುವ ಹೇರ್​ ಸ್ಟೈಲ್​ ವಿಡಿಯೋ ವೈರಲ್​

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ