AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬೀಸ್ಟ್​’ ನಿರ್ದೇಶಕ ನೆಲ್ಸನ್​ ದಿಲೀಪ್​ ಕುಮಾರ್​ ಸಿನಿಮಾದಲ್ಲಿ ಶಿವರಾಜ್​ಕುಮಾರ್​-ರಜನಿಕಾಂತ್​ ನಟನೆ?

Shivarajkumar | Rajinikanth: ಆಗಸ್ಟ್​ ವೇಳೆಗೆ ಈ ಸಿನಿಮಾ ಸೆಟ್ಟೇರುವ ನಿರೀಕ್ಷೆ ಇದೆ. ಇನ್ನುಳಿದ ಕಲಾವಿದರ ಆಯ್ಕೆ ಪ್ರಕ್ರಿಯೆ ಕೂಡ ನಡೆಯುತ್ತಿದೆ ಎಂದು ವರದಿ ಆಗಿದೆ.

‘ಬೀಸ್ಟ್​’ ನಿರ್ದೇಶಕ ನೆಲ್ಸನ್​ ದಿಲೀಪ್​ ಕುಮಾರ್​ ಸಿನಿಮಾದಲ್ಲಿ ಶಿವರಾಜ್​ಕುಮಾರ್​-ರಜನಿಕಾಂತ್​ ನಟನೆ?
ಗೀತಾ ಶಿವರಾಜ್​ಕುಮಾರ್​, ರಜನಿಕಾಂತ್​, ಶಿವರಾಜ್​ಕುಮಾರ್ (ಫೈಲ್​ ಫೋಟೋ)
TV9 Web
| Edited By: |

Updated on:May 05, 2022 | 3:05 PM

Share

ಚಂದನವನದಲ್ಲಿ ಬ್ಯಾಕ್​ ಟು ಬ್ಯಾಟ್​ ಸಿನಿಮಾ ಮಾಡುತ್ತ ಅತಿ ಹೆಚ್ಚು ಬ್ಯುಸಿ ಆಗಿರುವ ನಟ ಎಂದರೆ ಅದು ಶಿವರಾಜ್​ಕುಮಾರ್​. ಹಿರಿಯರು-ಕಿರಿಯರು ಎಂಬ ಭೇದ ಇಲ್ಲದೇ ಎಲ್ಲ ನಿರ್ದೇಶಕರ ಜೊತೆಗೂ ಅವರು ಕೆಲಸ ಮಾಡುತ್ತಾರೆ. ಈವರೆಗೂ 125ಕ್ಕೂ ಅಧಿಕ ಸಿನಿಮಾಗಳನ್ನು ಮಾಡಿರುವ ಶಿವರಾಜ್​ಕುಮಾರ್​ (Shivarajkumar) ಅವರ ಅಭಿಮಾನಿ ಬಳಗ ದೊಡ್ಡದು. ಅವರ ಜೊತೆ ಕೆಲಸ ಮಾಡಲು ಪರಭಾಷೆಯ ಖ್ಯಾತ ನಿರ್ದೇಶಕರೆಲ್ಲ ಆಸಕ್ತಿ ತೋರುತ್ತಿದ್ದಾರೆ. ಈಗ ‘ಹ್ಯಾಟ್ರಿಕ್​ ಹೀರೋ’ ಅಭಿನಯಿಸಲಿರುವ ಮುಂದಿನ ಸಿನಿಮಾ ಬಗ್ಗೆ ಗುಸುಗುಸು ಕೇಳಿಬಂದಿದೆ. ಹೊಸ ಚಿತ್ರದಲ್ಲಿ ಶಿವರಾಜ್​ಕುಮಾರ್​ ಮತ್ತು ‘ಸೂಪರ್​ ಸ್ಟಾರ್​’ ರಜನಿಕಾಂತ್​ (Rajinikanth) ಅವರು ತೆರೆ ಹಂಚಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಈ ಸಿನಿಮಾಗೆ ‘ಬೀಸ್ಟ್​’ ಖ್ಯಾತಿಯ ನಿರ್ದೇಶಕ ನೆಲ್ಸನ್​ ದಿಲೀಪ್​ ಕುಮಾರ್​ (Nelson Dilipkumar) ಅವರು ಆ್ಯಕ್ಷನ್​-ಕಟ್​ ಹೇಳಲಿದ್ದಾರೆ ಎಂದು ವರದಿ ಆಗಿದೆ. ಈ ಸುದ್ದಿ ಕೇಳಿ ಶಿವರಾಜ್​ಕುಮಾರ್​ ಫ್ಯಾನ್ಸ್​ ಥ್ರಿಲ್​ ಆಗಿದ್ದಾರೆ. ಒಂದು ವೇಳೆ ಈ ಮಾಹಿತಿ ಖಚಿತವೇ ಆಗಿದ್ದರೆ ಇದೇ ಮೊದಲ ಬಾರಿಗೆ ಶಿವರಾಜ್​ಕುಮಾರ್​ ಮತ್ತು ರಜನಿಕಾಂತ್​ ಅವರು ಒಟ್ಟಿಗೆ ನಟಿಸಿದಂತಾಗುತ್ತದೆ. ಈ ಕುರಿತು ಚಿತ್ರತಂಡದಿಂದ ಅಧಿಕೃತ ಘೋಷಣೆ ಆಗಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ.

ಇದು ರಜನಿಕಾಂತ್​ ನಟಿಸಲಿರುವ 169ನೇ ಸಿನಿಮಾ ಆಗಿರಲಿದೆ. ರಜನಿಕಾಂತ್​ ಅವರು ನಾಯಕನಾಗಿ ಅಭಿನಯಿಸಲಿದ್ದು, ಶಿವರಾಜ್​ಕುಮಾರ್​ ಕೂಡ ಒಂದು ಮುಖ್ಯಪಾತ್ರವನ್ನು ಮಾಡಲಿದ್ದಾರಂತೆ. ಇದು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಮೂಡಿಬರಲಿದೆ. ಪ್ರತಿಷ್ಠಿತ ಸನ್​ ಪಿಕ್ಚರ್ಸ್​ ಬ್ಯಾನರ್​ ಮೂಲಕ ಈ ಸಿನಿಮಾ ನಿರ್ಮಾಣ ಆಗಲಿದೆ. ಈ ಬಗ್ಗೆ ಮೂಲಗಳು ತಿಳಿಸಿವೆ ಎಂದು ‘ಸಿನಿಮಾ​ ಎಕ್ಸ್​ಪ್ರೆಸ್’​ ವರದಿ ಮಾಡಿದೆ.

ನೆಲ್ಸನ್​ ದಿಲೀಪ್​ ಕುಮಾರ್​ ಅವರು ಈಗಾಗಲೇ ಶಿವರಾಜ್​ಕುಮಾರ್​ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಶೀಘ್ರವೇ ಅವರು ಬೆಂಗಳೂರಿಗೆ ಬಂದು ಇನ್ನೊಂದು ಸುತ್ತಿನ ಚರ್ಚೆ ನಡೆಸಲಿದ್ದಾರೆ. ಆಗಸ್ಟ್​ ವೇಳೆಗೆ ಈ ಸಿನಿಮಾ ಸೆಟ್ಟೇರುವ ನಿರೀಕ್ಷೆ ಇದೆ. ಇನ್ನುಳಿದ ಕಲಾವಿದರ ಆಯ್ಕೆ ಪ್ರಕ್ರಿಯೆ ಕೂಡ ನಡೆಯುತ್ತಿದೆ ಎಂದು ವರದಿ ಆಗಿದೆ.

ಇದನ್ನೂ ಓದಿ
Image
ಕನ್ನಡದ ‘ಟಾಕೀಸ್​’ ಲಾಂಚ್​ ಮಾಡಿದ ಶಿವಣ್ಣ; ಇದರಲ್ಲಿ ಇದ್ದಾರೆ ಸಾವಿರಕ್ಕೂ ಹೆಚ್ಚು ಕಲಾವಿದರು
Image
‘ಮಗಳ ಪ್ರೊಡಕ್ಷನ್​ನಲ್ಲಿ ನಾನೂ ಒಂದು ವೆಬ್ ಸೀರಿಸ್ ಮಾಡ್ತಾ ಇದೀನಿ’; ಶಿವರಾಜ್​ಕುಮಾರ್ ಅಚ್ಚರಿಯ ಘೋಷಣೆ
Image
ಭೂಗತ ಲೋಕದ ಕಥೆಯಲ್ಲಿ ಶಿವರಾಜ್​​ಕುಮಾರ್; ‘ಓಂ’ ರೀತಿಯಲ್ಲಿ ಹೊಸ ಸಿನಿಮಾ
Image
ದುನಿಯಾ ವಿಜಯ್ ನಿರ್ದೇಶನದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ ಶಿವರಾಜ್​ಕುಮಾರ್

ಈಗಾಗಲೇ ತಿಳಿದಿರುವಂತೆ ರಜನಿಕಾಂತ್​ ಅವರಿಗೆ ಕನ್ನಡ ಚಿತ್ರರಂಗದ ಜೊತೆ ಒಳ್ಳೆಯ ನಂಟು ಇದೆ. ಅದರಲ್ಲೂ ಡಾ. ರಾಜ್​ಕುಮಾರ್​ ಕುಟುಂಬದ ಜೊತೆ ಅವರು ಮೊದಲಿನಿಂದಲೂ ಒಡನಾಟ ಹೊಂದಿದ್ದಾರೆ. ಅಣ್ಣಾವ್ರ ಜೊತೆ ಅವರಿಗೆ ಸ್ನೇಹವಿತ್ತು. ಅಣ್ಣಾವ್ರ ಮಕ್ಕಳ ಸಿನಿಮಾಗಳಿಗೂ ಅವರು ಪ್ರೋತ್ಸಾಹ ನೀಡುತ್ತಲೇ ಬಂದಿದ್ದಾರೆ. ಈಗ ಶಿವರಾಜ್​ಕುಮಾರ್​ ಮತ್ತು ರಜನಿಕಾಂತ್​ ಒಟ್ಟಾಗಿ ನಟಿಸಿದರೆ ಅದು ಹೈವೋಲ್ಟೇಜ್​ ಸಿನಿಮಾ ಆಗಿರಲಿದೆ ಎಂಬುದರಲ್ಲಿ ಅನುಮಾನವೇ ಬೇಡ.

ಅನೇಕ ಸಿನಿಮಾಗಳ ಕೆಲಸಗಳಲ್ಲಿ ಶಿವಣ್ಣ ತೊಡಗಿಕೊಂಡಿದ್ದಾರೆ. ‘ಬೈರಾಗಿ’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ‘ವೇದ’ ಸಿನಿಮಾ ಶೂಟಿಂಗ್​ ಚಾಲ್ತಿಯಲ್ಲಿದೆ. ಯೋಗರಾಜ್​ ಭಟ್​ ಜೊತೆಗೂ ಶಿವರಾಜ್​ಕುಮಾರ್​ ಒಂದು ಸಿನಿಮಾ ಮಾಡಬೇಕಿದೆ. ಇದೆಲ್ಲದರ ನಡುವೆ ನೆಲ್ಸನ್​ ದಿಲೀಪ್​ ಕುಮಾರ್​ ಅವರ ನ್ಯೂಸ್​ ಕೇಳಿಬಂದಿದೆ. ಕಾಲಿವುಡ್​ನಲ್ಲಿ ನೆಲ್ಸನ್​ ದಿಲೀಪ್​ ಕುಮಾರ್ ಜನಪ್ರಿಯರಾಗಿದ್ದಾರೆ. ‘ದಳಪತಿ’ ವಿಜಯ್​ ನಟನೆಯ ‘ಬೀಸ್ಟ್​’ ಚಿತ್ರಕ್ಕೆ ಅವರು ನಿರ್ದೇಶನ ಮಾಡಿದ್ದರು. ‘ಕೆಜಿಎಫ್​ 2’ ಎದುರು ಬಿಡುಗಡೆಯಾದ ಆ ಸಿನಿಮಾ ನಿರೀಕ್ಷಿತ ಮಟ್ಟದಲ್ಲಿ ಗೆಲುವು ಕಾಣಲಿಲ್ಲ. ಈಗ ಮುಂದಿನ ಸಿನಿಮಾದಲ್ಲಿ ನೆಲ್ಸನ್​ ದಿಲೀಪ್​ ಕುಮಾರ್ ಯಾವ ತಂತ್ರ ಪ್ರಯೋಗ ಮಾಡಲಿದ್ದಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:09 am, Thu, 5 May 22

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ