‘ಬೀಸ್ಟ್​’ ನಿರ್ದೇಶಕ ನೆಲ್ಸನ್​ ದಿಲೀಪ್​ ಕುಮಾರ್​ ಸಿನಿಮಾದಲ್ಲಿ ಶಿವರಾಜ್​ಕುಮಾರ್​-ರಜನಿಕಾಂತ್​ ನಟನೆ?

Shivarajkumar | Rajinikanth: ಆಗಸ್ಟ್​ ವೇಳೆಗೆ ಈ ಸಿನಿಮಾ ಸೆಟ್ಟೇರುವ ನಿರೀಕ್ಷೆ ಇದೆ. ಇನ್ನುಳಿದ ಕಲಾವಿದರ ಆಯ್ಕೆ ಪ್ರಕ್ರಿಯೆ ಕೂಡ ನಡೆಯುತ್ತಿದೆ ಎಂದು ವರದಿ ಆಗಿದೆ.

‘ಬೀಸ್ಟ್​’ ನಿರ್ದೇಶಕ ನೆಲ್ಸನ್​ ದಿಲೀಪ್​ ಕುಮಾರ್​ ಸಿನಿಮಾದಲ್ಲಿ ಶಿವರಾಜ್​ಕುಮಾರ್​-ರಜನಿಕಾಂತ್​ ನಟನೆ?
ಗೀತಾ ಶಿವರಾಜ್​ಕುಮಾರ್​, ರಜನಿಕಾಂತ್​, ಶಿವರಾಜ್​ಕುಮಾರ್ (ಫೈಲ್​ ಫೋಟೋ)
Follow us
| Updated By: shivaprasad.hs

Updated on:May 05, 2022 | 3:05 PM

ಚಂದನವನದಲ್ಲಿ ಬ್ಯಾಕ್​ ಟು ಬ್ಯಾಟ್​ ಸಿನಿಮಾ ಮಾಡುತ್ತ ಅತಿ ಹೆಚ್ಚು ಬ್ಯುಸಿ ಆಗಿರುವ ನಟ ಎಂದರೆ ಅದು ಶಿವರಾಜ್​ಕುಮಾರ್​. ಹಿರಿಯರು-ಕಿರಿಯರು ಎಂಬ ಭೇದ ಇಲ್ಲದೇ ಎಲ್ಲ ನಿರ್ದೇಶಕರ ಜೊತೆಗೂ ಅವರು ಕೆಲಸ ಮಾಡುತ್ತಾರೆ. ಈವರೆಗೂ 125ಕ್ಕೂ ಅಧಿಕ ಸಿನಿಮಾಗಳನ್ನು ಮಾಡಿರುವ ಶಿವರಾಜ್​ಕುಮಾರ್​ (Shivarajkumar) ಅವರ ಅಭಿಮಾನಿ ಬಳಗ ದೊಡ್ಡದು. ಅವರ ಜೊತೆ ಕೆಲಸ ಮಾಡಲು ಪರಭಾಷೆಯ ಖ್ಯಾತ ನಿರ್ದೇಶಕರೆಲ್ಲ ಆಸಕ್ತಿ ತೋರುತ್ತಿದ್ದಾರೆ. ಈಗ ‘ಹ್ಯಾಟ್ರಿಕ್​ ಹೀರೋ’ ಅಭಿನಯಿಸಲಿರುವ ಮುಂದಿನ ಸಿನಿಮಾ ಬಗ್ಗೆ ಗುಸುಗುಸು ಕೇಳಿಬಂದಿದೆ. ಹೊಸ ಚಿತ್ರದಲ್ಲಿ ಶಿವರಾಜ್​ಕುಮಾರ್​ ಮತ್ತು ‘ಸೂಪರ್​ ಸ್ಟಾರ್​’ ರಜನಿಕಾಂತ್​ (Rajinikanth) ಅವರು ತೆರೆ ಹಂಚಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಈ ಸಿನಿಮಾಗೆ ‘ಬೀಸ್ಟ್​’ ಖ್ಯಾತಿಯ ನಿರ್ದೇಶಕ ನೆಲ್ಸನ್​ ದಿಲೀಪ್​ ಕುಮಾರ್​ (Nelson Dilipkumar) ಅವರು ಆ್ಯಕ್ಷನ್​-ಕಟ್​ ಹೇಳಲಿದ್ದಾರೆ ಎಂದು ವರದಿ ಆಗಿದೆ. ಈ ಸುದ್ದಿ ಕೇಳಿ ಶಿವರಾಜ್​ಕುಮಾರ್​ ಫ್ಯಾನ್ಸ್​ ಥ್ರಿಲ್​ ಆಗಿದ್ದಾರೆ. ಒಂದು ವೇಳೆ ಈ ಮಾಹಿತಿ ಖಚಿತವೇ ಆಗಿದ್ದರೆ ಇದೇ ಮೊದಲ ಬಾರಿಗೆ ಶಿವರಾಜ್​ಕುಮಾರ್​ ಮತ್ತು ರಜನಿಕಾಂತ್​ ಅವರು ಒಟ್ಟಿಗೆ ನಟಿಸಿದಂತಾಗುತ್ತದೆ. ಈ ಕುರಿತು ಚಿತ್ರತಂಡದಿಂದ ಅಧಿಕೃತ ಘೋಷಣೆ ಆಗಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ.

ಇದು ರಜನಿಕಾಂತ್​ ನಟಿಸಲಿರುವ 169ನೇ ಸಿನಿಮಾ ಆಗಿರಲಿದೆ. ರಜನಿಕಾಂತ್​ ಅವರು ನಾಯಕನಾಗಿ ಅಭಿನಯಿಸಲಿದ್ದು, ಶಿವರಾಜ್​ಕುಮಾರ್​ ಕೂಡ ಒಂದು ಮುಖ್ಯಪಾತ್ರವನ್ನು ಮಾಡಲಿದ್ದಾರಂತೆ. ಇದು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಮೂಡಿಬರಲಿದೆ. ಪ್ರತಿಷ್ಠಿತ ಸನ್​ ಪಿಕ್ಚರ್ಸ್​ ಬ್ಯಾನರ್​ ಮೂಲಕ ಈ ಸಿನಿಮಾ ನಿರ್ಮಾಣ ಆಗಲಿದೆ. ಈ ಬಗ್ಗೆ ಮೂಲಗಳು ತಿಳಿಸಿವೆ ಎಂದು ‘ಸಿನಿಮಾ​ ಎಕ್ಸ್​ಪ್ರೆಸ್’​ ವರದಿ ಮಾಡಿದೆ.

ನೆಲ್ಸನ್​ ದಿಲೀಪ್​ ಕುಮಾರ್​ ಅವರು ಈಗಾಗಲೇ ಶಿವರಾಜ್​ಕುಮಾರ್​ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಶೀಘ್ರವೇ ಅವರು ಬೆಂಗಳೂರಿಗೆ ಬಂದು ಇನ್ನೊಂದು ಸುತ್ತಿನ ಚರ್ಚೆ ನಡೆಸಲಿದ್ದಾರೆ. ಆಗಸ್ಟ್​ ವೇಳೆಗೆ ಈ ಸಿನಿಮಾ ಸೆಟ್ಟೇರುವ ನಿರೀಕ್ಷೆ ಇದೆ. ಇನ್ನುಳಿದ ಕಲಾವಿದರ ಆಯ್ಕೆ ಪ್ರಕ್ರಿಯೆ ಕೂಡ ನಡೆಯುತ್ತಿದೆ ಎಂದು ವರದಿ ಆಗಿದೆ.

ಇದನ್ನೂ ಓದಿ
Image
ಕನ್ನಡದ ‘ಟಾಕೀಸ್​’ ಲಾಂಚ್​ ಮಾಡಿದ ಶಿವಣ್ಣ; ಇದರಲ್ಲಿ ಇದ್ದಾರೆ ಸಾವಿರಕ್ಕೂ ಹೆಚ್ಚು ಕಲಾವಿದರು
Image
‘ಮಗಳ ಪ್ರೊಡಕ್ಷನ್​ನಲ್ಲಿ ನಾನೂ ಒಂದು ವೆಬ್ ಸೀರಿಸ್ ಮಾಡ್ತಾ ಇದೀನಿ’; ಶಿವರಾಜ್​ಕುಮಾರ್ ಅಚ್ಚರಿಯ ಘೋಷಣೆ
Image
ಭೂಗತ ಲೋಕದ ಕಥೆಯಲ್ಲಿ ಶಿವರಾಜ್​​ಕುಮಾರ್; ‘ಓಂ’ ರೀತಿಯಲ್ಲಿ ಹೊಸ ಸಿನಿಮಾ
Image
ದುನಿಯಾ ವಿಜಯ್ ನಿರ್ದೇಶನದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ ಶಿವರಾಜ್​ಕುಮಾರ್

ಈಗಾಗಲೇ ತಿಳಿದಿರುವಂತೆ ರಜನಿಕಾಂತ್​ ಅವರಿಗೆ ಕನ್ನಡ ಚಿತ್ರರಂಗದ ಜೊತೆ ಒಳ್ಳೆಯ ನಂಟು ಇದೆ. ಅದರಲ್ಲೂ ಡಾ. ರಾಜ್​ಕುಮಾರ್​ ಕುಟುಂಬದ ಜೊತೆ ಅವರು ಮೊದಲಿನಿಂದಲೂ ಒಡನಾಟ ಹೊಂದಿದ್ದಾರೆ. ಅಣ್ಣಾವ್ರ ಜೊತೆ ಅವರಿಗೆ ಸ್ನೇಹವಿತ್ತು. ಅಣ್ಣಾವ್ರ ಮಕ್ಕಳ ಸಿನಿಮಾಗಳಿಗೂ ಅವರು ಪ್ರೋತ್ಸಾಹ ನೀಡುತ್ತಲೇ ಬಂದಿದ್ದಾರೆ. ಈಗ ಶಿವರಾಜ್​ಕುಮಾರ್​ ಮತ್ತು ರಜನಿಕಾಂತ್​ ಒಟ್ಟಾಗಿ ನಟಿಸಿದರೆ ಅದು ಹೈವೋಲ್ಟೇಜ್​ ಸಿನಿಮಾ ಆಗಿರಲಿದೆ ಎಂಬುದರಲ್ಲಿ ಅನುಮಾನವೇ ಬೇಡ.

ಅನೇಕ ಸಿನಿಮಾಗಳ ಕೆಲಸಗಳಲ್ಲಿ ಶಿವಣ್ಣ ತೊಡಗಿಕೊಂಡಿದ್ದಾರೆ. ‘ಬೈರಾಗಿ’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ‘ವೇದ’ ಸಿನಿಮಾ ಶೂಟಿಂಗ್​ ಚಾಲ್ತಿಯಲ್ಲಿದೆ. ಯೋಗರಾಜ್​ ಭಟ್​ ಜೊತೆಗೂ ಶಿವರಾಜ್​ಕುಮಾರ್​ ಒಂದು ಸಿನಿಮಾ ಮಾಡಬೇಕಿದೆ. ಇದೆಲ್ಲದರ ನಡುವೆ ನೆಲ್ಸನ್​ ದಿಲೀಪ್​ ಕುಮಾರ್​ ಅವರ ನ್ಯೂಸ್​ ಕೇಳಿಬಂದಿದೆ. ಕಾಲಿವುಡ್​ನಲ್ಲಿ ನೆಲ್ಸನ್​ ದಿಲೀಪ್​ ಕುಮಾರ್ ಜನಪ್ರಿಯರಾಗಿದ್ದಾರೆ. ‘ದಳಪತಿ’ ವಿಜಯ್​ ನಟನೆಯ ‘ಬೀಸ್ಟ್​’ ಚಿತ್ರಕ್ಕೆ ಅವರು ನಿರ್ದೇಶನ ಮಾಡಿದ್ದರು. ‘ಕೆಜಿಎಫ್​ 2’ ಎದುರು ಬಿಡುಗಡೆಯಾದ ಆ ಸಿನಿಮಾ ನಿರೀಕ್ಷಿತ ಮಟ್ಟದಲ್ಲಿ ಗೆಲುವು ಕಾಣಲಿಲ್ಲ. ಈಗ ಮುಂದಿನ ಸಿನಿಮಾದಲ್ಲಿ ನೆಲ್ಸನ್​ ದಿಲೀಪ್​ ಕುಮಾರ್ ಯಾವ ತಂತ್ರ ಪ್ರಯೋಗ ಮಾಡಲಿದ್ದಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:09 am, Thu, 5 May 22

ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು