AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಭಾಷಿಗರಿಗೂ ಹತ್ತಿರವಾದ ಶಿವರಾಜ್​ಕುಮಾರ್; ಹ್ಯಾಟ್ರಿಕ್ ಹೀರೋಈ ಖದರ್​ಗೆ ಭರಪೂರ ಮೆಚ್ಚುಗೆ

ಶಿವರಾಜ್​ಕುಮಾರ್ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. 125ಕ್ಕೂ ಅಧಿಕ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಈ ಪೈಕಿ ಅವರ ಖಾತೆಯಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳು ಇವೆ. ಅವರು ರಗಡ್ ಪಾತ್ರ ಮಾಡಿದರೆ ಅಭಿಮಾನಿಗಳಿಗೆ ಸಾಕಷ್ಟು ಇಷ್ಟವಾಗುತ್ತದೆ

ಪರಭಾಷಿಗರಿಗೂ ಹತ್ತಿರವಾದ ಶಿವರಾಜ್​ಕುಮಾರ್; ಹ್ಯಾಟ್ರಿಕ್ ಹೀರೋಈ ಖದರ್​ಗೆ ಭರಪೂರ ಮೆಚ್ಚುಗೆ
ಶಿವಣ್ಣ
ರಾಜೇಶ್ ದುಗ್ಗುಮನೆ
|

Updated on: Aug 11, 2023 | 11:14 AM

Share

ರಜನಿಕಾಂತ್ ನಟನೆಯ ‘ಜೈಲರ್’ ಸಿನಿಮಾ (Jailer Movie) ಸೂಪರ್ ಹಿಟ್ ಆಗಿದೆ. ಈ ಚಿತ್ರದ ಮೂಲಕ ರಜನಿಕಾಂತ್ ಮತ್ತೊಂದು ಗೆಲುವು ಕಂಡಿದ್ದಾರೆ. ಈ ಚಿತ್ರದಲ್ಲಿ ಶಿವರಾಜ್​ಕುಮಾರ್ ಅವರು ಮಂಡ್ಯದ ಡಾನ್ ಆಗಿ ಮಿಂಚಿದ್ದಾರೆ. ಅವರ ಸ್ಕ್ರೀನ್​ ಪ್ರೆಸೆನ್ಸ್ ಬಗ್ಗೆ ಭರಪೂರ ಮೆಚ್ಚುಗೆ ಸಿಗುತ್ತಿದೆ. ಕೆಲವೇ ನಿಮಿಷ ತೆರೆಮೇಲೆ ಕಾಣಿಸಿಕೊಂಡರೂ ಅವರ ನಟನೆಗೆ ಎಲ್ಲರ ಗಮನ ಸೆಳೆದಿದೆ. ಪರಭಾಷಿಗರು ಶಿವಣ್ಣ (Shivanna Movie) ಅವರನ್ನು ಹಾಡಿ ಹೊಗಳುತ್ತಿದ್ದಾರೆ. ಶಿವರಾಜ್​ಕುಮಾರ್ ಖದರ್​ನೆಸ್​ ನೋಡಿ ಅನೇಕರು ಭೇಷ್ ಎನ್ನುತ್ತಿದ್ದಾರೆ.

ಶಿವರಾಜ್​ಕುಮಾರ್ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. 125ಕ್ಕೂ ಅಧಿಕ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಈ ಪೈಕಿ ಅವರ ಖಾತೆಯಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳು ಇವೆ. ಶಿವರಾಜ್​ಕುಮಾರ್ ಅವರು ಹಲವು ರೀತಿಯ ಪಾತ್ರಗಳನ್ನು ಮಾಡಿದ್ದಾರೆ. ಅವರು ರಗಡ್ ಪಾತ್ರ ಮಾಡಿದರೆ ಅಭಿಮಾನಿಗಳಿಗೆ ಸಾಕಷ್ಟು ಇಷ್ಟವಾಗುತ್ತದೆ. ‘ಜೈಲರ್’ ಸಿನಿಮಾ ಇದಕ್ಕೆ ಉತ್ತಮ ಉದಾಹರಣೆ. ಅವರು ಮಾಡಿರುವ ನರಸಿಂಹ ಪಾತ್ರ ಜನರಿಗೆ ಇಷ್ಟವಾಗಿದೆ.

ಇದನ್ನೂ ಓದಿ: ಬಾಕ್ಸ್ ಆಫೀಸ್​​ನಲ್ಲಿ ಅಬ್ಬರಿಸಿದ ‘ಜೈಲರ್’ ಸಿನಿಮಾ; ಮೊದಲ ದಿನದ ಕಲೆಕ್ಷನ್ ವಿವರ ಇಲ್ಲಿದೆ

ಟ್ವಿಟರ್​ನಲ್ಲಿ ಶಿವರಾಜ್​ಕುಮಾರ್ ಪಾತ್ರದ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ಕ್ಲೈಮ್ಯಾಕ್ಸ್​ನಲ್ಲಿ ಅವರು ಕಾಣಿಸಿಕೊಳ್ಳುವ ರೀತಿಗೆ ಜನರು ಭೇಷ್ ಎಂದಿದ್ದಾರೆ. ಕೆಲ ಪರಭಾಷಿಗರು ಶಿವರಾಜ್​ಕುಮಾರ್ ನಟನೆಯ ಬೆಸ್ಟ್ ಸಿನಿಮಾಗಳು ಯಾವವು ಎಂಬುದರ ಲಿಸ್ಟ್ ತೆಗೆದಿದ್ದಾರೆ.

‘ಜೈಲರ್’ ಸಿನಿಮಾ ಭಾರತದಲ್ಲಿ ಮೊದಲ ದಿನ 50+ ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಮೂಲಕ ಎಲ್ಲಾ ದಾಖಲೆಗಳನ್ನು ಉಡೀಸ್ ಮಾಡಿದೆ. ಶಿವರಾಜ್​ಕುಮಾರ್ ಇರುವ ಕಾರಣಕ್ಕೆ ಕರ್ನಾಕಟದಲ್ಲಿ ಹಾಗೂ ಮೋಹನ್​ಲಾಲ್ ಇರುವುದಕ್ಕೆ ಕೇರಳದಲ್ಲಿ ಸಿನಿಮಾ ಉತ್ತಮ ಕಮಾಯಿ ಮಾಡುತ್ತಿದೆ.

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ