AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾಜ್​ಕುಮಾರ್​ ಹೊಸ ಸಿನಿಮಾ ಅನೌನ್ಸ್; ‘ಎಂಬಿ’ ಚಿತ್ರಕ್ಕೆ ಮುಂಬೈ ನಿರ್ಮಾಣ ಸಂಸ್ಥೆ ಬಂಡವಾಳ

ನಟ ಶಿವರಾಜ್​ಕುಮಾರ್​ ಅವರು ಅನಾರೋಗ್ಯದ ಕಾರಣದಿಂದ ಸಿನಿಮಾದ ಕೆಲಸಗಳಿಗೆ ಸಣ್ಣ ಬ್ರೇಕ್​ ನೀಡಿದ್ದಾರೆ. ಅದರ ನಡುವೆಯೂ ಅಭಿಮಾನಿಗಳಿಗೆ ಖುಷಿ ನೀಡುವಂತಹ ಸುದ್ದಿಯೊಂದು ಸಿಕ್ಕಿದೆ. ಶಿವಣ್ಣ ನಟಿಸಲಿರುವ ಹೊಸ ಸಿನಿಮಾಗೆ ಮುಂಬೈ ಮೂಲದ ‘ADD-ONE ಫಿಲ್ಮ್ಸ್​’ ನಿರ್ಮಾಣ ಸಂಸ್ಥೆಯು ಬಂಡವಾಳ ಹೂಡಲಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಶಿವರಾಜ್​ಕುಮಾರ್​ ಹೊಸ ಸಿನಿಮಾ ಅನೌನ್ಸ್; ‘ಎಂಬಿ’ ಚಿತ್ರಕ್ಕೆ ಮುಂಬೈ ನಿರ್ಮಾಣ ಸಂಸ್ಥೆ ಬಂಡವಾಳ
Shivarajkumar With Mb Movie Team
ಮದನ್​ ಕುಮಾರ್​
|

Updated on: Dec 19, 2024 | 8:23 PM

Share

ಬ್ಯಾಕ್​ ಟು ಬ್ಯಾಕ್ ಸಿನಿಮಾಗಳನ್ನು ಮಾಡುವಲ್ಲಿ ಶಿವರಾಜ್​ಕುಮಾರ್​ ಫೇಮಸ್​. ‘ಹ್ಯಾಟ್ರಿಕ್ ಹೀರೋ’ ಎನರ್ಜಿಯೇ ಅಂಥದ್ದು. ಸದ್ಯಕ್ಕೆ ಅವರಿಗೆ ಅನಾರೋಗ್ಯ ಉಂಟಾಗಿದ್ದು, ಚಿಕಿತ್ಸೆ ಪಡೆಯಲು ವಿದೇಶಕ್ಕೆ ತೆರಳಿದ್ದಾರೆ. ಅದರ ನಡುವೆಯೇ ಒಂದು ಗುಡ್ ನ್ಯೂಸ್​ ಸಿಕ್ಕಿದೆ. ಶಿವರಾಜ್​ಕುಮಾರ್​ ನಟಿಸಲಿರುವ ಹೊಸ ಸಿನಿಮಾದ ಬಗ್ಗೆ ಮಾಹಿತಿ ನೀಡಲಾಗಿದೆ. ಈ ಸಿನಿಮಾಗೆ ‘ಎಂಬಿ’ ಎಂದು ಶೀರ್ಷಿಕೆ ಇಡಲಾಗಿದೆ. ವಿಶೇಷ ಏನೆಂದರೆ, ಶಿವಣ್ಣ ಜೊತೆ ಸಿನಿಮಾ ಮಾಡಲು ಮುಂಬೈನ ನಿರ್ಮಾಣ ಸಂಸ್ಥೆ ಮುಂದೆ ಬಂದಿದೆ.

ಮುಂಬೈ ಮೂಲದ ‘ADD-ONE ಫಿಲ್ಮ್ಸ್​’ ಸಂಸ್ಥೆಯ ಮೂಲಕ ‘ಎಂಬಿ’ ಸಿನಿಮಾ ನಿರ್ಮಾಣ ಆಗಲಿದೆ. ಮನೋಜ್ ಬನೋಡೆ ಮತ್ತು ಖೇಮ್ ಚಂದ್ ಖಡ್ಗಿ ಅವರು ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ವಿಜಯಕಾಂತ್ ನಟನೆಯ ಯಶಸ್ವಿ ‘ವಲ್ಲರಸು’ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳಿದ್ದ ಎನ್. ಮಹಾರಾಜನ್ ಅವರು ಈಗ ‘ಎಂಬಿ’ ಸಿನಿಮಾಗೆ ನಿರ್ದೇಶನ ಮಾಡಲಿದ್ದಾರೆ.

ಇಲ್ಲಿಯವರೆಗೆ 3 ತಮಿಳು ಮತ್ತು ಸನ್ನಿ ಡಿಯೋಲ್ ನಟನೆಯ ಹಿಂದಿ ಸಿನಿಮಾವೊಂದನ್ನು ನಿರ್ದೇಶನ ಮಾಡಿರುವ ಮಹಾರಾಜನ್ ಅವರು ‘ಎಂಬಿ’ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ನೀಡುತ್ತಿದ್ದಾರೆ. ‘ADD-ONE ಫಿಲ್ಮ್ಸ್​’ ಸಂಸ್ಥೆಯ ವತಿಯಿಂದ ಅನೇಕ ದೊಡ್ಡದೊಡ್ಡ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿರುವ ಮನೋಜ್ ಬನೋಡೆ ಮತ್ತು ಖೇಮ್ ಚಂದ್ ಖಡ್ಗಿ ಅವರು ಈಗ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದಾರೆ.

ಇದನ್ನೂ ಓದಿ: ಶಿವರಾಜ್​ಕುಮಾರ್​ಗೆ ಹಾರೈಸಲು ತಮಿಳುನಾಡಿನಿಂದ ಬಂದ ಫ್ಯಾನ್ಸ್

ಮನೋಜ್ ಬನೋಡೆ, ಖೇಮ್ ಚಂದ್ ಖಡ್ಗಿ ಅವರು ತಮ್ಮ ಮೊದಲ ಸಿನಿಮಾವನ್ನು ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ, ಅದರಲ್ಲೂ ಕನ್ನಡದಲ್ಲಿ ನಿರ್ಮಾಣ ಮಾಡುತ್ತಿರುವುದು ವಿಶೇಷ. ಅಷ್ಟಕ್ಕೂ ‘MB’ ಎಂದರೆ ಏನು ಎಂಬುದನ್ನು ಸದ್ಯಕ್ಕೆ ಗೌಪ್ಯವಾಗಿ ಇಡಲಾಗಿದೆ. ಮುಂದಿನ‌ ದಿನಗಳಲ್ಲಿ ಶೀರ್ಷಿಕೆಯ ವಿವರಣೆ ಮತ್ತು ಚಿತ್ರತಂಡದ ಬಗ್ಗೆ ಹೆಚ್ಚಿನ ವಿವರ ನೀಡುವುದಾಗಿ ನಿರ್ದೇಶಕರು ತಿಳಿಸಿದ್ದಾರೆ. 2025ರ ಮಧ್ಯದಲ್ಲಿ ‘MB’ ಚಿತ್ರದ ಶೂಟಿಂಗ್ ಆರಂಭ ಆಗಲಿದೆ. ಈ ಸಿನಿಮಾ ಕನ್ನಡ ಸೇರಿದಂತೆ 6 ಭಾಷೆಗಳಲ್ಲಿ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿದ್ಧವಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕನ್ನಡಪರ ಮಾತನಾಡಿ ‘ಕೋಗಿಲು’ ಆಗು, ಇಲ್ಲದಿದ್ರೆ ಕಾಗೆ ಆಗ್ತೀಯಾ: ಅಶೋಕ್
ಕನ್ನಡಪರ ಮಾತನಾಡಿ ‘ಕೋಗಿಲು’ ಆಗು, ಇಲ್ಲದಿದ್ರೆ ಕಾಗೆ ಆಗ್ತೀಯಾ: ಅಶೋಕ್
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ