AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರಮಹಾಲಕ್ಷ್ಮೀ ಹಬ್ಬದ ದಿನವೇ ಗುಡ್​ ನ್ಯೂಸ್​ ನೀಡಿದ ಶಿವಣ್ಣ; ಅಚ್ಚರಿ ಮೂಡಿಸಿದ ಹೊಸ ಚಿತ್ರದ ಪೋಸ್ಟರ್​

ಶಿವರಾಜ್​ಕುಮಾರ್​ ನಟನೆಯ 123ನೇ ಸಿನಿಮಾ ‘ಬೈರಾಗಿ’ಯ ಕೆಲಸಗಳು ಚುರುಕಿನಿಂದ ಸಾಗುತ್ತಿವೆ. ಆ ಚಿತ್ರಕ್ಕೆ ಬಂಡವಾಳ ಹೂಡುತ್ತಿರುವ ಕೃಷ್ಣ ಸಾರ್ಥಕ್​ ಅವರೇ ‘ಸತ್ಯಮಂಗಳ’ ಸಿನಿಮಾವನ್ನೂ ನಿರ್ಮಾಣ ಮಾಡುತ್ತಿದ್ದಾರೆ. ‘ಮಮ್ಮಿ’ ಖ್ಯಾತಿಯ ಲೋಹಿತ್​ ಇದರ ನಿರ್ದೇಶಕರು.

ವರಮಹಾಲಕ್ಷ್ಮೀ ಹಬ್ಬದ ದಿನವೇ ಗುಡ್​ ನ್ಯೂಸ್​ ನೀಡಿದ ಶಿವಣ್ಣ; ಅಚ್ಚರಿ ಮೂಡಿಸಿದ ಹೊಸ ಚಿತ್ರದ ಪೋಸ್ಟರ್​
ವರಮಹಾಲಕ್ಷ್ಮೀ ಹಬ್ಬದ ದಿನವೇ ಗುಡ್​ ನ್ಯೂಸ್​ ನೀಡಿದ ಶಿವಣ್ಣ
TV9 Web
| Edited By: |

Updated on: Aug 20, 2021 | 1:21 PM

Share

ಸ್ಯಾಂಡಲ್​ವುಡ್​ನಲ್ಲಿ ಬ್ಯಾಕ್​ ಟು ಬ್ಯಾಕ್​ ಸಿನಿಮಾ ಮಾಡುತ್ತ ಬ್ಯುಸಿ ಆಗಿದ್ದಾರೆ ನಟ ಶಿವರಾಜ್​ಕುಮಾರ್​. ಎನರ್ಜಿ ವಿಚಾರದಲ್ಲಿ ಯುವ ಹೀರೋಗಳಿಗೂ ಪೈಪೋಟಿ ನೀಡುತ್ತ ಅವರು ಮುನ್ನುಗ್ಗುತ್ತಿದ್ದಾರೆ. ಇತ್ತೀಚೆಗಷ್ಟೇ ಅವರ ಹೊಸ ಸಿನಿಮಾ ‘ನೀ ಸಿಗೋವರೆಗೂ’ ಸೆಟ್ಟೇರಿತು. ಅದ್ದೂರಿಯಾಗಿ ಮುಹೂರ್ತ ಮಾಡಿಕೊಂಡು ಚಿತ್ರೀಕರಣವನ್ನೂ ಆರಂಭಿಸಲಾಗಿದೆ. ಅದರ ಬೆನ್ನಲ್ಲೇ ಶಿವರಾಜ್​ಕುಮಾರ್​ ನಟನೆಯ ಮತ್ತೊಂದು ಹೊಸ ಸಿನಿಮಾ ಅನೌನ್ಸ್​ ಆಗಿದೆ. ಯುವ ನಿರ್ದೇಶಕ ಲೋಹಿತ್​ ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳಲಿದ್ದು ‘ಸತ್ಯಮಂಗಳ’ ಎಂಬ ಇಂಟರೆಸ್ಟಿಂಗ್​ ಶೀರ್ಷಿಕೆ ಇಡಲಾಗಿದೆ.

ಇಂದು (ಆ.20) ವರಮಹಾಲಕ್ಷ್ಮೀ ಹಬ್ಬ. ನಾಡಿನಾದ್ಯಂತ ಸಡಗರದಿಂದ ಹಬ್ಬ ಆಚರಿಸಲಾಗುತ್ತಿದೆ. ಈ ಶುಭದಿನದಂದೇ ಶಿವಣ್ಣನ ಹೊಸ ಸಿನಿಮಾ ಘೋಷಣೆ ಆಗಿರುವುದು ಫ್ಯಾನ್ಸ್​ಗೆ ಖುಷಿ ನೀಡಿದೆ. ಟೈಟಲ್​ ಅನೌನ್ಸ್​ ಮಾಡುವುದರ ಜೊತೆಗೆ ಪೋಸ್ಟರ್​ ಕೂಡ ಬಿಡುಗಡೆ ಮಾಡಲಾಗಿದೆ. ಕಾಡಿನ ಹಿನ್ನೆಲೆಯಲ್ಲಿ, ಗಾಂಭೀರ್ಯದಿಂದ ನಡೆದುಬರುತ್ತಿರುವ ಕರಿಚಿರತೆಯ ಖಡಕ್​ ಲುಕ್​ ಈ ಪೋಸ್ಟರ್​ನಲ್ಲಿ ಹೈಲೈಟ್​ ಆಗಿದೆ.

ಈ ಹಿಂದೆ ‘ಮಮ್ಮಿ’ ಮತ್ತು ‘ದೇವಕಿ’ ಸಿನಿಮಾಗಳನ್ನು ಮಾಡಿ ಗುರುತಿಸಿಕೊಂಡವರು ನಿರ್ದೇಶಕ ಲೋಹಿತ್​. ಈಗ ಅವರಿಗೆ ಶಿವರಾಜ್​ಕುಮಾರ್​ ಅವರಂಥ ಹಿರಿಯ ಸ್ಟಾರ್​ ಹೀರೋ ಜೊತೆ ಸಿನಿಮಾ ಮಾಡುವ ಚಾನ್ಸ್​ ಸಿಕ್ಕಿದೆ. ಲೋಹಿತ್​ ಹೇಳಿದ ಕಥೆ ಕೇಳಿ ಇಷ್ಟಪಟ್ಟಿರುವ ‘ಹ್ಯಾಟ್ರಿಕ್​ ಹೀರೋ’ ಶಿವಣ್ಣ ಈ ಸಿನಿಮಾಗೆ ಗ್ರೀನ್​ ಸಿಗ್ನಲ್​ ನೀಡಿದ್ದಾರೆ. ತಮ್ಮ ಮೊದಲೆರಡು ಸಿನಿಮಾಗಳಲ್ಲಿ ನಾಯಕಿಪ್ರಧಾನ ಕಥೆ ಆಯ್ಕೆ ಮಾಡಿಕೊಂಡಿದ್ದ ಲೋಹಿತ್​ ಅವರು ಮೂರನೇ ಸಿನಿಮಾದಲ್ಲಿ ಯಾವ ರೀತಿಯ ಕಥೆ ಹೇಳಲಿದ್ದಾರೆ ಎಂಬ ಕೌತುಕ ಸಿನಿಪ್ರಿಯರಲ್ಲಿ ಮೂಡಿದೆ.

ಶಿವರಾಜ್​ಕುಮಾರ್​ ನಟನೆಯ 123ನೇ ಸಿನಿಮಾ ‘ಬೈರಾಗಿ’ಯ ಕೆಲಸಗಳು ಚುರುಕಿನಿಂದ ಸಾಗುತ್ತಿವೆ. ಆ ಚಿತ್ರಕ್ಕೆ ಬಂಡವಾಳ ಹೂಡುತ್ತಿರುವ ಕೃಷ್ಣ ಸಾರ್ಥಕ್​ ಅವರೇ ‘ಸತ್ಯಮಂಗಳ’ ಸಿನಿಮಾವನ್ನೂ ನಿರ್ಮಾಣ ಮಾಡುತ್ತಿದ್ದಾರೆ. ಸದ್ಯ ಚಿತ್ರ ಅನೌನ್ಸ್​ ಆಗಿದ್ದು, 2022ರಲ್ಲಿ ಸೆಟ್ಟೇರಲಿದೆ. ಈ ಸಿನಿಮಾದಲ್ಲಿ ಶಿವರಾಜ್​ಕುಮಾರ್​ ಜೊತೆ ಯಾರೆಲ್ಲ ನಟಿಸಲಿದ್ದಾರೆ? ತಾಂತ್ರಿಕ ವರ್ಗದಲ್ಲಿ ಯಾರೆಲ್ಲ ಇದ್ದಾರೆ ಎಂಬುದರ ಪೂರ್ಣ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.

ಶಿವರಾಜ್​ಕುಮಾರ್​ ಜೊತೆ ಸಿನಿಮಾ ಮಾಡಲು ಹಲವು ನಿರ್ದೇಶಕರು ಕಾಯುತ್ತಿದ್ದಾರೆ. ಅವರ 126ನೇ ಚಿತ್ರವನ್ನು ರಿಷಬ್​ ಶೆಟ್ಟಿ ನಿರ್ದೇಶಿಸಲಿದ್ದಾರೆ. ‘ವೇದ’ ಸಿನಿಮಾದ ಕೆಲಸಗಳು ನಡೆಯುತ್ತಿವೆ. ಎ. ಹರ್ಷ ಆ್ಯಕ್ಷನ್​-ಕಟ್​ ಹೇಳಿರುವ ‘ಭಜರಂಗಿ 2’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಇಂದು ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಈ ಚಿತ್ರದ ಮೂರನೇ​ ಸಾಂಗ್​ ರಿಲೀಸ್​ ಆಗಿದೆ.

ಇದನ್ನೂ ಓದಿ:

ಶಿವರಾಜ್​ಕುಮಾರ್​ 124ನೇ ಚಿತ್ರಕ್ಕೆ ಅಪ್ಪಟ ಕನ್ನಡ ಶೀರ್ಷಿಕೆ ‘ನೀ ಸಿಗೋವರೆಗೂ’; ಮುಹೂರ್ತಕ್ಕೆ ಕಿಚ್ಚ ಅತಿಥಿ

ಸುದೀಪ್​ ನಿರ್ದೇಶನದಲ್ಲಿ ಶಿವಣ್ಣ ನಟನೆ; ಹೊಸ ಸಿನಿಮಾ ಬಗ್ಗೆ ವೇದಿಕೆ ಮೇಲೆ ‘ಹ್ಯಾಟ್ರಿಕ್​ ಹೀರೋ’ ಮಾತು

Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!