AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರಮಹಾಲಕ್ಷ್ಮೀ ಹಬ್ಬದ ದಿನವೇ ಗುಡ್​ ನ್ಯೂಸ್​ ನೀಡಿದ ಶಿವಣ್ಣ; ಅಚ್ಚರಿ ಮೂಡಿಸಿದ ಹೊಸ ಚಿತ್ರದ ಪೋಸ್ಟರ್​

ಶಿವರಾಜ್​ಕುಮಾರ್​ ನಟನೆಯ 123ನೇ ಸಿನಿಮಾ ‘ಬೈರಾಗಿ’ಯ ಕೆಲಸಗಳು ಚುರುಕಿನಿಂದ ಸಾಗುತ್ತಿವೆ. ಆ ಚಿತ್ರಕ್ಕೆ ಬಂಡವಾಳ ಹೂಡುತ್ತಿರುವ ಕೃಷ್ಣ ಸಾರ್ಥಕ್​ ಅವರೇ ‘ಸತ್ಯಮಂಗಳ’ ಸಿನಿಮಾವನ್ನೂ ನಿರ್ಮಾಣ ಮಾಡುತ್ತಿದ್ದಾರೆ. ‘ಮಮ್ಮಿ’ ಖ್ಯಾತಿಯ ಲೋಹಿತ್​ ಇದರ ನಿರ್ದೇಶಕರು.

ವರಮಹಾಲಕ್ಷ್ಮೀ ಹಬ್ಬದ ದಿನವೇ ಗುಡ್​ ನ್ಯೂಸ್​ ನೀಡಿದ ಶಿವಣ್ಣ; ಅಚ್ಚರಿ ಮೂಡಿಸಿದ ಹೊಸ ಚಿತ್ರದ ಪೋಸ್ಟರ್​
ವರಮಹಾಲಕ್ಷ್ಮೀ ಹಬ್ಬದ ದಿನವೇ ಗುಡ್​ ನ್ಯೂಸ್​ ನೀಡಿದ ಶಿವಣ್ಣ
TV9 Web
| Edited By: |

Updated on: Aug 20, 2021 | 1:21 PM

Share

ಸ್ಯಾಂಡಲ್​ವುಡ್​ನಲ್ಲಿ ಬ್ಯಾಕ್​ ಟು ಬ್ಯಾಕ್​ ಸಿನಿಮಾ ಮಾಡುತ್ತ ಬ್ಯುಸಿ ಆಗಿದ್ದಾರೆ ನಟ ಶಿವರಾಜ್​ಕುಮಾರ್​. ಎನರ್ಜಿ ವಿಚಾರದಲ್ಲಿ ಯುವ ಹೀರೋಗಳಿಗೂ ಪೈಪೋಟಿ ನೀಡುತ್ತ ಅವರು ಮುನ್ನುಗ್ಗುತ್ತಿದ್ದಾರೆ. ಇತ್ತೀಚೆಗಷ್ಟೇ ಅವರ ಹೊಸ ಸಿನಿಮಾ ‘ನೀ ಸಿಗೋವರೆಗೂ’ ಸೆಟ್ಟೇರಿತು. ಅದ್ದೂರಿಯಾಗಿ ಮುಹೂರ್ತ ಮಾಡಿಕೊಂಡು ಚಿತ್ರೀಕರಣವನ್ನೂ ಆರಂಭಿಸಲಾಗಿದೆ. ಅದರ ಬೆನ್ನಲ್ಲೇ ಶಿವರಾಜ್​ಕುಮಾರ್​ ನಟನೆಯ ಮತ್ತೊಂದು ಹೊಸ ಸಿನಿಮಾ ಅನೌನ್ಸ್​ ಆಗಿದೆ. ಯುವ ನಿರ್ದೇಶಕ ಲೋಹಿತ್​ ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳಲಿದ್ದು ‘ಸತ್ಯಮಂಗಳ’ ಎಂಬ ಇಂಟರೆಸ್ಟಿಂಗ್​ ಶೀರ್ಷಿಕೆ ಇಡಲಾಗಿದೆ.

ಇಂದು (ಆ.20) ವರಮಹಾಲಕ್ಷ್ಮೀ ಹಬ್ಬ. ನಾಡಿನಾದ್ಯಂತ ಸಡಗರದಿಂದ ಹಬ್ಬ ಆಚರಿಸಲಾಗುತ್ತಿದೆ. ಈ ಶುಭದಿನದಂದೇ ಶಿವಣ್ಣನ ಹೊಸ ಸಿನಿಮಾ ಘೋಷಣೆ ಆಗಿರುವುದು ಫ್ಯಾನ್ಸ್​ಗೆ ಖುಷಿ ನೀಡಿದೆ. ಟೈಟಲ್​ ಅನೌನ್ಸ್​ ಮಾಡುವುದರ ಜೊತೆಗೆ ಪೋಸ್ಟರ್​ ಕೂಡ ಬಿಡುಗಡೆ ಮಾಡಲಾಗಿದೆ. ಕಾಡಿನ ಹಿನ್ನೆಲೆಯಲ್ಲಿ, ಗಾಂಭೀರ್ಯದಿಂದ ನಡೆದುಬರುತ್ತಿರುವ ಕರಿಚಿರತೆಯ ಖಡಕ್​ ಲುಕ್​ ಈ ಪೋಸ್ಟರ್​ನಲ್ಲಿ ಹೈಲೈಟ್​ ಆಗಿದೆ.

ಈ ಹಿಂದೆ ‘ಮಮ್ಮಿ’ ಮತ್ತು ‘ದೇವಕಿ’ ಸಿನಿಮಾಗಳನ್ನು ಮಾಡಿ ಗುರುತಿಸಿಕೊಂಡವರು ನಿರ್ದೇಶಕ ಲೋಹಿತ್​. ಈಗ ಅವರಿಗೆ ಶಿವರಾಜ್​ಕುಮಾರ್​ ಅವರಂಥ ಹಿರಿಯ ಸ್ಟಾರ್​ ಹೀರೋ ಜೊತೆ ಸಿನಿಮಾ ಮಾಡುವ ಚಾನ್ಸ್​ ಸಿಕ್ಕಿದೆ. ಲೋಹಿತ್​ ಹೇಳಿದ ಕಥೆ ಕೇಳಿ ಇಷ್ಟಪಟ್ಟಿರುವ ‘ಹ್ಯಾಟ್ರಿಕ್​ ಹೀರೋ’ ಶಿವಣ್ಣ ಈ ಸಿನಿಮಾಗೆ ಗ್ರೀನ್​ ಸಿಗ್ನಲ್​ ನೀಡಿದ್ದಾರೆ. ತಮ್ಮ ಮೊದಲೆರಡು ಸಿನಿಮಾಗಳಲ್ಲಿ ನಾಯಕಿಪ್ರಧಾನ ಕಥೆ ಆಯ್ಕೆ ಮಾಡಿಕೊಂಡಿದ್ದ ಲೋಹಿತ್​ ಅವರು ಮೂರನೇ ಸಿನಿಮಾದಲ್ಲಿ ಯಾವ ರೀತಿಯ ಕಥೆ ಹೇಳಲಿದ್ದಾರೆ ಎಂಬ ಕೌತುಕ ಸಿನಿಪ್ರಿಯರಲ್ಲಿ ಮೂಡಿದೆ.

ಶಿವರಾಜ್​ಕುಮಾರ್​ ನಟನೆಯ 123ನೇ ಸಿನಿಮಾ ‘ಬೈರಾಗಿ’ಯ ಕೆಲಸಗಳು ಚುರುಕಿನಿಂದ ಸಾಗುತ್ತಿವೆ. ಆ ಚಿತ್ರಕ್ಕೆ ಬಂಡವಾಳ ಹೂಡುತ್ತಿರುವ ಕೃಷ್ಣ ಸಾರ್ಥಕ್​ ಅವರೇ ‘ಸತ್ಯಮಂಗಳ’ ಸಿನಿಮಾವನ್ನೂ ನಿರ್ಮಾಣ ಮಾಡುತ್ತಿದ್ದಾರೆ. ಸದ್ಯ ಚಿತ್ರ ಅನೌನ್ಸ್​ ಆಗಿದ್ದು, 2022ರಲ್ಲಿ ಸೆಟ್ಟೇರಲಿದೆ. ಈ ಸಿನಿಮಾದಲ್ಲಿ ಶಿವರಾಜ್​ಕುಮಾರ್​ ಜೊತೆ ಯಾರೆಲ್ಲ ನಟಿಸಲಿದ್ದಾರೆ? ತಾಂತ್ರಿಕ ವರ್ಗದಲ್ಲಿ ಯಾರೆಲ್ಲ ಇದ್ದಾರೆ ಎಂಬುದರ ಪೂರ್ಣ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.

ಶಿವರಾಜ್​ಕುಮಾರ್​ ಜೊತೆ ಸಿನಿಮಾ ಮಾಡಲು ಹಲವು ನಿರ್ದೇಶಕರು ಕಾಯುತ್ತಿದ್ದಾರೆ. ಅವರ 126ನೇ ಚಿತ್ರವನ್ನು ರಿಷಬ್​ ಶೆಟ್ಟಿ ನಿರ್ದೇಶಿಸಲಿದ್ದಾರೆ. ‘ವೇದ’ ಸಿನಿಮಾದ ಕೆಲಸಗಳು ನಡೆಯುತ್ತಿವೆ. ಎ. ಹರ್ಷ ಆ್ಯಕ್ಷನ್​-ಕಟ್​ ಹೇಳಿರುವ ‘ಭಜರಂಗಿ 2’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಇಂದು ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಈ ಚಿತ್ರದ ಮೂರನೇ​ ಸಾಂಗ್​ ರಿಲೀಸ್​ ಆಗಿದೆ.

ಇದನ್ನೂ ಓದಿ:

ಶಿವರಾಜ್​ಕುಮಾರ್​ 124ನೇ ಚಿತ್ರಕ್ಕೆ ಅಪ್ಪಟ ಕನ್ನಡ ಶೀರ್ಷಿಕೆ ‘ನೀ ಸಿಗೋವರೆಗೂ’; ಮುಹೂರ್ತಕ್ಕೆ ಕಿಚ್ಚ ಅತಿಥಿ

ಸುದೀಪ್​ ನಿರ್ದೇಶನದಲ್ಲಿ ಶಿವಣ್ಣ ನಟನೆ; ಹೊಸ ಸಿನಿಮಾ ಬಗ್ಗೆ ವೇದಿಕೆ ಮೇಲೆ ‘ಹ್ಯಾಟ್ರಿಕ್​ ಹೀರೋ’ ಮಾತು

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್