AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಯ ಬೈಕ್​ ಓಡಿಸಿದ ಶಿವರಾಜ್​ಕುಮಾರ್; ವಿಡಿಯೋ ವೈರಲ್

ಶಿವರಾಜ್​ಕುಮಾರ್​ ಅಭಿಮಾನಿಯೋರ್ವ ಹೊಸ ಬೈಕ್​ ಖರೀಸಿದ್ದರು. ತಮ್ಮ ಬೈಕ್​ ಅನ್ನು ​ಶಿವಣ್ಣ ರೈಡ್ ಮಾಡಬೇಕು ಎಂಬುದು ಅವರ ಕನಸಾಗಿತ್ತು

ಅಭಿಮಾನಿಯ ಬೈಕ್​ ಓಡಿಸಿದ ಶಿವರಾಜ್​ಕುಮಾರ್; ವಿಡಿಯೋ ವೈರಲ್
ಅಭಿಮಾನಿಯ ಬೈಕ್​ ಓಡಿಸಿದ ಶಿವರಾಜ್​ಕುಮಾರ್; ವಿಡಿಯೋ ವೈರಲ್
TV9 Web
| Edited By: |

Updated on: Sep 01, 2021 | 10:42 PM

Share

ನಟ ಶಿವರಾಜ್​ಕುಮಾರ್​ ಅವರು ನೂರಾರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೆ, ಅವರು ಎಷ್ಟೇ ಎತ್ತರಕ್ಕೆ ಬೆಳೆದರೂ ಸ್ವಲ್ಪವೂ ಗರ್ವ ಬಂದಿಲ್ಲ. ಅವರು ಎಲ್ಲರ ಜತೆಗೆ ಸಾಮಾನ್ಯರಂತೆ ಬೆರೆಯುತ್ತಾರೆ. ಅಭಿಮಾನಿಗಳಿಗೆ ಅವರು ಬೇಸರ ಮಾಡಿದ ಉದಾಹರಣೆಯೇ ಇಲ್ಲ. ಈಗ ಶಿವರಾಜ್​ಕುಮಾರ್​ ಅವರು ಅಭಿಮಾನಿಯ ಬೈಕ್​ ಓಡಿಸಿ ಸುದ್ದಿಯಾಗಿದ್ದಾರೆ. ಈ ವಿಡಿಯೋ ಕೂಡ ವೈರಲ್ ಆಗುತ್ತಿದೆ.

ಹೌದು, ಶಿವರಾಜ್​ಕುಮಾರ್​ ಅಭಿಮಾನಿಯೋರ್ವ ಹೊಸ ಬೈಕ್​ ಖರೀಸಿದ್ದರು. ತಮ್ಮ ಬೈಕ್​ ಅನ್ನು ​ಶಿವಣ್ಣ ರೈಡ್ ಮಾಡಬೇಕು ಎಂಬುದು ಅವರ ಕನಸಾಗಿತ್ತು. ಈ ಕಾರಣಕ್ಕೆ ಶಿವರಾಜ್​ಕುಮಾರ್​ ಬಳಿ ಬೈಕ್​ ತೆಗೆದುಕೊಂಡು ಬಂದಿದ್ದಾರೆ. ಶಿವರಾಜ್​ಕುಮಾರ್​ ಇದಕ್ಕೆ ನೋ ಎನ್ನಲಿಲ್ಲ. ಬದಲಿಗೆ ಬೈಕ್​ ಮೇಲೆ ಆಟೋಗ್ರಾಫ್​ ಹಾಕಿ ಈ ಬೈಕ್​ ಓಡಿಸಿದ್ದಾರೆ. ಸದ್ಯ, ಈ ವಿಡಿಯೋ ವೈರಲ್​ ಆಗುತ್ತಿದೆ. ಶಿವರಾಜ್​ಕುಮಾರ್​ ಅವರ ಸಿಂಪ್ಲಿಸಿಟಿ ನೋಡಿ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಯುವ ನಟ ಶ್ರೇಯಸ್​ಗೆ ಲಾಂಗ್​ ಹಿಡಿಯೋದು ಹೇಗೆ ಎನ್ನುವ ಪಾಠವನ್ನು ಶಿವಣ್ಣ ಮಾಡಿದ್ದರು. ಗುಜ್ಜಲ್ ಪುರುಶೋತ್ತಮ್ ನಿರ್ಮಾಣ ಮಾಡುತ್ತಿರುವ ಹಾಗೂ ನಂದ ಕಿಶೋರ್ ನಿರ್ದೇಶನದ ‘ರಾಣ’ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ. ಈ ಸಿನಿಮಾಗೆ ಶ್ರೇಯಸ್ ನಾಯಕ. ಇತ್ತೀಚೆಗೆ ಚಿತ್ರತಂಡ ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್ ಅವರನ್ನು ಭೇಟಿ ಮಾಡಿತ್ತು. ಲಾಂಗ್ ಹೇಗೆ ಹಿಡಿಯಬೇಕು, ಕ್ಯಾಮೆರಾ ಮುಂದೆ ಲಾಂಗ್ ಹಿಡಿದು ಹೇಗೆ ಅಭಿನಯಿಸಬೇಕು ಎನ್ನುವುದನ್ನು ಶ್ರೇಯಸ್​​ಗೆ ಶಿವರಾಜ್​ಕುಮಾರ್​ ಹೇಳಿಕೊಟ್ಟಿದ್ದು ವಿಶೇಷವಾಗಿತ್ತು. ‘ರಾಣ’ ಚಿತ್ರಕ್ಕಾಗಿ ಶ್ರೇಯಸ್​ ಇದೇ ಮೊದಲ ಬಾರಿಗೆ ಲಾಂಗ್​ ಹಿಡಿಯುತ್ತಿದ್ದಾರೆ. ಈ ಕಾರಣಕ್ಕೆ ಹಿರಿಯ ನಟ ಶಿವಣ್ಣನ ಬಳಿ ಟ್ರೇನಿಂಗ್​ ಪಡೆದರೆ ಉತ್ತಮ ಎನ್ನುವ ಆಲೋಚನೆ ಚಿತ್ರತಂಡದ್ದಾಗಿತ್ತು. ಹೀಗಾಗಿ, ನಿರ್ದೇಶಕ ನಂದ ಕಿಶೋರ್ ಹಾಗೂ ಶ್ರೇಯಸ್​ ಹ್ಯಾಟ್ರಿಕ್​ ಹೀರೋನನ್ನು ಭೇಟಿ ಆಗಿದ್ದಾರೆ.

‘ಪಾತ್ರ ಎಂದು ಬಂದಾಗ ಎಲ್ಲ ರೀತಿಯ ಕ್ಯಾರೆಕ್ಟರ್​ಗಳನ್ನೂ ಮಾಡಬೇಕು. ನನಗಿಂತ ಉತ್ತಮವಾಗಿ ಮಚ್ಚು ಹಿಡಿಯವವರು ಇದ್ದಾರೆ. ಪ್ರತಿ ಪಾತ್ರಕ್ಕೂ ಒಂದು ಆ್ಯಟಿಟ್ಯೂಡ್​ ಇರುತ್ತದೆ. ಅದು ತುಂಬಾನೇ ಮುಖ್ಯ. ನಾನು ಮಚ್ಚು ಹಿಡಿದೆ, ಅದಕ್ಕೆ ಸಿನಿಮಾ ಹಿಟ್​ ಆಯಿತು ಎಂದು ಹೇಳೋಕಾಗಲ್ಲ. ನಾನು ಸಿನಿಮಾದಲ್ಲಿ ಮಚ್ಚು ಹಿಡಿದು ನಟಿಸ್ತೀನಿ ನಿಜ. ಆದರೆ, ಅದನ್ನು ಹೇಳಿಕೊಡಿ ಎಂದರೆ ಅದು ಸ್ವಲ್ಪ ಕಷ್ಟದ ಕೆಲಸ’ ಎಂದಿದ್ದರು ಶಿವರಾಜ್​ಕುಮಾರ್​.

ಇದನ್ನೂ ಓದಿ: ಯುವ ನಟನಿಗೆ ಮಚ್ಚು ಹಿಡಿಯುವ ಪಾಠ ಮಾಡಿದ ಶಿವರಾಜ್​ಕುಮಾರ್​

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ