AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭಾಸ್​ ಜತೆ ‘ರಾಧೆ ಶ್ಯಾಮ್​’ ಚಿತ್ರತಂಡ ಸೇರಿದ ಶಿವಣ್ಣ; ತೆಲುಗು ಸಿನಿಮಾದಲ್ಲಿ ‘ಸೆಂಚುರಿ ಸ್ಟಾರ್​’ ಕೆಲಸ ಏನು?

Shivarajkumar | Radhe Shyam Movie: ಶಿವರಾಜ್​ಕುಮಾರ್​ ಅವರಿಗೆ ‘ರಾಧೆ ಶ್ಯಾಮ್​’ ನಿರ್ಮಾಣ ಸಂಸ್ಥೆಯಾದ ‘ಯುವಿ ಕ್ರಿಯೇಷನ್ಸ್​’ ಧನ್ಯವಾದ ತಿಳಿಸಿದೆ. ಅದ್ದೂರಿ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಆಗಿದೆ.

ಪ್ರಭಾಸ್​ ಜತೆ ‘ರಾಧೆ ಶ್ಯಾಮ್​’ ಚಿತ್ರತಂಡ ಸೇರಿದ ಶಿವಣ್ಣ; ತೆಲುಗು ಸಿನಿಮಾದಲ್ಲಿ ‘ಸೆಂಚುರಿ ಸ್ಟಾರ್​’ ಕೆಲಸ ಏನು?
ಶಿವರಾಜ್​ಕುಮಾರ್​, ಪ್ರಭಾಸ್​, ಪೂಜಾ ಹೆಗ್ಡೆ
TV9 Web
| Edited By: |

Updated on: Feb 28, 2022 | 8:06 AM

Share

ಇನ್ನೇನು ಕೆಲವೇ ದಿನಗಳಲ್ಲಿ ‘ರಾಧೆ ಶ್ಯಾಮ್​’ (Radhe Shyam Movie) ಸಿನಿಮಾ ಬಿಡುಗಡೆ ಆಗಲಿದೆ. ಬಹುಭಾಷಾ ನಟಿ ಪೂಜಾ ಹೆಗ್ಡೆ ಹಾಗೂ ಪ್ಯಾನ್​ ಇಂಡಿಯಾ ಸ್ಟಾರ್​ ಪ್ರಭಾಸ್​ (Prabhas) ಅಭಿನಯದ ಈ ಬಹುನಿರೀಕ್ಷಿತ ಸಿನಿಮಾ ಬಗ್ಗೆ ಸಿಕ್ಕಾಪಟ್ಟೆ ಹೈಪ್​ ಸೃಷ್ಟಿ ಆಗಿದೆ. ಆ ನಿರೀಕ್ಷೆಯನ್ನು ಇನ್ನಷ್ಟು ಹೆಚ್ಚಿಸುವಂತಹ ಹೊಸ ಸುದ್ದಿ ಈಗ ಹೊರಬಿದ್ದಿದೆ. ಮೂಲ ತೆಲುಗಿನ ಈ ಚಿತ್ರತಂಡಕ್ಕೆ ಈಗ ಶಿವರಾಜ್​ಕುಮಾರ್​ (Shivarajkumar) ಕೂಡ ಜೊತೆಯಾಗಿದ್ದಾರೆ. ಇದು ಗಾಸಿಪ್​ ಅಲ್ಲವೇ ಅಲ್ಲ. ‘ರಾಧೆ ಶ್ಯಾಮ್​’ ಸಿನಿಮಾದ ನಿರ್ಮಾಪಕರು ಸ್ವತಃ ಈ ಮಾಹಿತಿ ಬಿಟ್ಟುಕೊಟ್ಟಿದ್ದಾರೆ. ಆ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಶಿವರಾಜ್​ಕುಮಾರ್​ ಮಾತ್ರವಲ್ಲದೇ ಖ್ಯಾತ ನಿರ್ದೇಶಕ ರಾಜಮೌಳಿ, ಮಲಯಾಳಂ ಸೂಪರ್​ ಸ್ಟಾರ್​ ಪೃಥ್ವಿರಾಜ್ ಸುಕುಮಾರನ್​ ಕೂಡ ‘ರಾಧೆ ಶ್ಯಾಮ್​’ ಚಿತ್ರತಂಡ ಸೇರಿಕೊಂಡಿದ್ದಾರೆ. ಈ ಸುದ್ದಿಕೇಳಿ ಅಭಿಮಾನಿಗಳಿಗೆ ಸಖತ್​ ಥ್ರಿಲ್​ ಆಗಿದೆ. ಕೊನೇ ಹಂತದಲ್ಲಿ ಈ ದಿಗ್ಗಜರೆಲ್ಲ ‘ರಾಧೆ ಶ್ಯಾಮ್​’ ಸಿನಿಮಾ ತಂಡವನ್ನು ಸೇರಿಕೊಂಡಿದ್ದು ಯಾಕೆ? ಈ ಸಿನಿಮಾದಲ್ಲಿ ಅವರ ಕೆಲಸ ಏನು? ಈ ಎಲ್ಲ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ..

ಈಗಾಗಲೇ ತಿಳಿದಿರುವಂತೆ ‘ರಾಧೆ ಶ್ಯಾಮ್​’ ಸಿನಿಮಾ ತೆಲುಗಿನಲ್ಲಿ ಮಾತ್ರವಲ್ಲದೇ ಬೇರೆ ಬೇರೆ ಭಾಷೆಗಳಲ್ಲಿ ಬಿಡುಗಡೆ ಆಗುತ್ತಿದೆ. ‘ಬಾಹುಬಲಿ’ ಯಶಸ್ಸಿನ ನಂತರ ಪ್ರಭಾಸ್​ ಅವರು ದೇಶಾದ್ಯಂತ ಫೇಮಸ್​ ಆದರು. ಹಾಗಾಗಿ ಅವರ ಎಲ್ಲ ಸಿನಿಮಾಗಳು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗುತ್ತದೆ. ‘ರಾಧೆ ಶ್ಯಾಮ್​’ ಕೂಡ ಅದೇ ಮಾರ್ಗವನ್ನು ಅನುಸರಿಸುತ್ತಿದೆ. ಕನ್ನಡ, ತಮಿಳು, ಮಲಯಾಳಂ, ಹಿಂದಿ ಭಾಷೆಗಳಿಗೆ ಈ ಸಿನಿಮಾ ಡಬ್​ ಆಗಿ ರಿಲೀಸ್​ ಆಗುತ್ತಿದೆ. ಸಿನಿಮಾದಲ್ಲಿ ಬರುವ ಒಂದು ಹಿನ್ನೆಲೆ ನಿರೂಪಣೆಗೆ ಧ್ವನಿ ನೀಡಲು ಆಯಾ ಭಾಷೆಯ ದೊಡ್ಡ ಸೆಲೆಬ್ರಿಟಿಗಳು ಒಪ್ಪಿಕೊಂಡಿದ್ದಾರೆ.

‘ರಾಧೆ ಶ್ಯಾಮ್​’ ಚಿತ್ರದ ಕನ್ನಡ ವರ್ಷನ್​ ನಿರೂಪಣೆಗೆ ಶಿವರಾಜ್​ಕುಮಾರ್​ ಅವರು ಹಿನ್ನೆಲೆ ಧ್ವನಿ ನೀಡಿದ್ದಾರೆ. ಅದೇ ರೀತಿ, ತೆಲುಗಿನಲ್ಲಿ ರಾಜಮೌಳಿ ಹಾಗೂ ಮಲಯಾಳಂನಲ್ಲಿ ಪೃಥ್ವಿರಾಜ್​ ಸುಕುಮಾರನ್​ ಅವರು ಈ ಕೆಲಸ ಮಾಡಿದ್ದಾರೆ. ಆ ಮೂಲಕ ಈ ಘಟಾನುಘಟಿಗಳು ‘ರಾಧೆ ಶ್ಯಾಮ್​’ ತಂಡದ ಭಾಗವಾಗಿದ್ದಾರೆ. ಇದರಿಂದ ಸಿನಿಮಾ ಮೇಲಿನ ನಿರೀಕ್ಷೆ ಡಬಲ್ ಆಗಿದೆ.

‘ನಿಮ್ಮ ಧ್ವನಿಯಿಂದಾಗಿ ಈ ರೊಮ್ಯಾಂಟಿಕ್​ ಕಥೆಯನ್ನು ಇನ್ನಷ್ಟು ವಿಶೇಷವಾಗಿಸಿದ್ದಕ್ಕೆ ಧನ್ಯವಾದಗಳು’ ಎಂದು ಶಿವರಾಜ್​ಕುಮಾರ್​, ರಾಜಮೌಳಿ ಹಾಗೂ ಪೃಥ್ವಿರಾಜ್​ ಸುಕುಮಾರನ್​ ಅವರಿಗೆ ‘ರಾಧೆ ಶ್ಯಾಮ್​’ ನಿರ್ಮಾಣ ಸಂಸ್ಥೆಯಾದ ‘ಯುವಿ ಕ್ರಿಯೇಷನ್ಸ್​’ ಟ್ವೀಟ್​ ಮೂಲಕ ಧನ್ಯವಾದ ತಿಳಿಸಿದೆ. ಅದ್ದೂರಿ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಆಗಿದೆ.

‘ರಾಧೆ ಶ್ಯಾಮ್​’ ಹಿಂದಿ ವರ್ಷನ್​ಗೆ ಬಾಲಿವುಡ್​ನ ಬಿಗ್​ ಬಿ ಅಮಿತಾಭ್​ ಬಚ್ಚನ್​ ಅವರು ಹಿನ್ನೆಲೆ ಧ್ವನಿ ನೀಡಿದ್ದಾರೆ. ಆ ಕಾರಣದಿಂದ ಹಿಂದಿ ಪ್ರೇಕ್ಷಕರಲ್ಲೂ ನಿರೀಕ್ಷೆ ಹೆಚ್ಚುವಂತಾಗಿದೆ. ಮಾ.11ರಂದು ವಿಶ್ವಾದ್ಯಂತ ಈ ಸಿನಿಮಾ ಬಿಡುಗಡೆ ಆಗಲಿದೆ. ರಾಧಾಕೃಷ್ಣ ಕುಮಾರ್​ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಟ್ರೇಲರ್​ಗೆ ಸಿನಿಪ್ರಿಯರಿಂದ ಅತ್ಯುತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಚಿತ್ರಮಂದಿರದಲ್ಲಿ ಈ ಸಿನಿಮಾವನ್ನು ಕಣ್ತಂಬಿಕೊಳ್ಳಲು ಫ್ಯಾನ್ಸ್​ ಕಾಯುತ್ತಿದ್ದಾರೆ. ಇದು ಪ್ರಭಾಸ್​ ಅವರ ವೃತ್ತಿಜೀವನದ ಡಿಫರೆಂಟ್​ ಸಿನಿಮಾ ಎಂದು ಹೇಳಲಾಗಿದೆ. ಆ ಕಾರಣದಿಂದಲೂ ಹೈಪ್​ ಸೃಷ್ಟಿ ಆಗಿದೆ. ಲವರ್​ ಬಾಯ್​ ಅವತಾರದಲ್ಲಿ ಪ್ರಭಾಸ್​ ಕಾಣಿಸಿಕೊಂಡಿದ್ದಾರೆ. ಇದಲ್ಲದೇ, ‘ಸಲಾರ್​’, ‘ಆದಿಪುರುಷ್​’ ಮುಂತಾದ ಸಿನಿಮಾ ಕೆಲಸಗಳಲ್ಲಿ ಕೂಡ ಪ್ರಭಾಸ್​ ಬ್ಯುಸಿ ಆಗಿದ್ದಾರೆ.

ಇದನ್ನೂ ಓದಿ:

ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಭೇಟಿ ಮಾಡಿದ ಶಿವರಾಜ್​​ಕುಮಾರ್​; ಇಲ್ಲಿವೆ ಫೋಟೋಗಳು

‘ಜೇಮ್ಸ್​’ ಚಿತ್ರದಲ್ಲಿ ಪುನೀತ್​ಗೆ ಡಬ್​ ಮಾಡುವಾಗ ಶಿವಣ್ಣ ಎಮೋಷನಲ್​ ಆಗಿದ್ದರು: ನಿರ್ದೇಶಕ ಚೇತನ್​

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ