‘ಜೈಲರ್​’ ಸಿನಿಮಾದ ನರಸಿಂಹ ಪಾತ್ರದ ಮೇಲೆ ಹೊಸ ಸಿನಿಮಾ ಬರುತ್ತಾ? ಇಲ್ಲಿದೆ ಶಿವರಾಜ್​ಕುಮಾರ್​ ಪ್ರತಿಕ್ರಿಯೆ

‘ಜೈಲರ್​’ ಚಿತ್ರದ ಒಂದೆರಡು ಸನ್ನಿವೇಶಗಳಲ್ಲಿ ಶಿವಣ್ಣ ಮಾಡಿರುವ ನರಸಿಂಹ ಎಂಬ ಪಾತ್ರ ಸಖತ್​ ಹೈಲೈಟ್​ ಆಗಿದೆ. ಚಿತ್ರಮಂದಿರದಲ್ಲಿ ಜನರಿಂದ ಸಿಕ್ಕ ಪ್ರತಿಕ್ರಿಯೆ ನೋಡಿ ಸ್ವತಃ ಶಿವರಾಜ್​ಕುಮಾರ್​ ಅವರಿಗೆ ಅಚ್ಚರಿ ಆಗಿದೆ. ಈ ಪಾತ್ರದ ಮೇಲೆ ಹೊಸ ಸಿನಿಮಾ ಮಾಡುವುದಾದರೆ ತಮಗೇನೂ ಅಭ್ಯಂತರ ಇಲ್ಲ ಎಂದು ಅವರು ಹೇಳಿದ್ದಾರೆ.

‘ಜೈಲರ್​’ ಸಿನಿಮಾದ ನರಸಿಂಹ ಪಾತ್ರದ ಮೇಲೆ ಹೊಸ ಸಿನಿಮಾ ಬರುತ್ತಾ? ಇಲ್ಲಿದೆ ಶಿವರಾಜ್​ಕುಮಾರ್​ ಪ್ರತಿಕ್ರಿಯೆ
ಶಿವರಾಜ್​ಕುಮಾರ್​
Follow us
|

Updated on: Oct 24, 2023 | 10:56 AM

ನಟ ಶಿವರಾಜ್​ಕುಮಾರ್​ ಅವರು ಈಗ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಮಿಂಚುತ್ತಿದ್ದಾರೆ. ‘ಜೈಲರ್​’ (Jailer) ಸಿನಿಮಾದಲ್ಲಿ ಅವರು ಮಾಡಿದ ಸಣ್ಣ ಪಾತ್ರಕ್ಕೆ ದೊಡ್ಡ ಮಟ್ಟದ ರೆಸ್ಪಾನ್ಸ್​ ಸಿಕ್ಕಿದೆ. ರಜನಿಕಾಂತ್​ (Rajinikanth) ಅವರ ಸ್ನೇಹಿತನಾಗಿ ಅವರು ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕರ್ನಾಟಕದಲ್ಲಿ ಮಾತ್ರವಲ್ಲದೇ ಹೊರರಾಜ್ಯಗಳ ಪ್ರೇಕ್ಷಕರೂ ಕೂಡ ಈ ಪಾತ್ರವನ್ನು ಮೆಚ್ಚಿಕೊಂಡಿದ್ದಾರೆ. ಈ ಪಾತ್ರದ ಹೆಸರು ನರಸಿಂಹ. ಒಂದು ವೇಳೆ ನರಸಿಂಹನ ಪಾತ್ರವನ್ನೇ ಪ್ರಧಾನವಾಗಿ ಇಟ್ಟುಕೊಂಡು ಹೊಸ ಸಿನಿಮಾ ಮಾಡಿದರೆ ಹೇಗಿರುತ್ತದೆ? ಈ ಬಗ್ಗೆ ಶಿವರಾಜ್​ಕುಮಾರ್​ (Shivarajkumar) ಪ್ರತಿಕ್ರಿಯೆ ನೀಡಿದ್ದಾರೆ. ‘ಇಂಡಿಯಾ ಟುಡೇ’ ನಡೆಸಿದ ಸಂದರ್ಶನದಲ್ಲಿ ಅವರು ಈ ವಿಚಾರದ ಬಗ್ಗೆ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

ಜೈಲರ್​ ಸಿನಿಮಾದ ಕಥಾನಾಯಕ ಟೈಗರ್​ ಕಷ್ಟದ ಸಂದರ್ಭದಲ್ಲಿ ಇರುತ್ತಾನೆ. ಆಗ ಆತ ತಮಿಳುನಾಡಿನಿಂದ ಕರ್ನಾಟಕದ ಮಂಡ್ಯಕ್ಕೆ ಬಂದು ತನ್ನ ಸ್ನೇಹಿತ ನರಸಿಂಹನ ಬಳಿ ಸಹಾಯ ಕೇಳುತ್ತಾನೆ. ನರಸಿಂಹ ಕಳಿಸುವ ಶಾರ್ಪ್​ ಶೂಟರ್​ಗಳ ಸಹಾಯದಿಂದ ವಿಲನ್​ಗಳನ್ನು ಟೈಗರ್​ ಮಟ್ಟ ಹಾಕುತ್ತಾನೆ. ಈ ಎಲ್ಲ ಸನ್ನಿವೇಶಗಳಲ್ಲಿ ಶಿವಣ್ಣ ಮಾಡಿರುವ ನರಸಿಂಹ ಪಾತ್ರ ಸಖತ್​ ಹೈಲೈಟ್​ ಆಗಿದೆ. ಚಿತ್ರಮಂದಿರದಲ್ಲಿ ಜನರಿಂದ ಸಿಕ್ಕ ಪ್ರತಿಕ್ರಿಯೆ ನೋಡಿ ಸ್ವತಃ ಶಿವರಾಜ್​ಕುಮಾರ್​ ಅವರಿಗೆ ಅಚ್ಚರಿ ಆಗಿದೆ. ಒಂದು ವೇಳೆ ಈ ಪಾತ್ರದ ಮೇಲೆ ಹೊಸ ಸಿನಿಮಾ ಮಾಡುವುದಾದರೆ ತಮಗೇನೂ ಅಭ್ಯಂತರ ಇಲ್ಲ ಎಂದು ಶಿವಣ್ಣ ಹೇಳಿದ್ದಾರೆ.

ಇದನ್ನೂ ಓದಿ: ನಿಖಿಲ್​ ಕುಮಾರ್​ ಸಿನಿಮಾದ ಸೆಟ್​ಗೆ ಭೇಟಿ ನೀಡಿದ ಶಿವರಾಜ್​ಕುಮಾರ್​; ಫೋಟೋ ವೈರಲ್​

‘ಅದು ಹೇಗೆ ಮೂಡಿಬರುತ್ತದೆ ಎಂಬುದು ನನಗೆ ಗೊತ್ತಿಲ್ಲ. ನಿರ್ದೇಶಕ ನೆಲ್ಸನ್​ ದಿಲೀಪ್​ ಕುಮಾರ್​ ಅವರು ಅದನ್ನು ಕ್ರಿಯೇಟ್​ ಮಾಡಬೇಕು. ಜೈಲರ್​ ಸಕ್ಸಸ್​ ನಂತರ ಮುಂದಿನ ಸಿನಿಮಾಗಾಗಿ ಅವರ ಜವಾಬ್ದಾರಿ ಹೆಚ್ಚಾಗಿದೆ. ಜೈಲಿನಲ್ಲಿ ಒಂದು ದೃಶ್ಯದ ಚಿತ್ರೀಕರಣ ಮಾಡಬೇಕಿತ್ತು. ಆದರೆ ನಂತರದಲ್ಲಿ ಅದರ ಅವಶ್ಯಕತೆ ಇಲ್ಲ ಅಂತ ಅವರೇ ಹೇಳಿದರು. ಅದು ಏನಾಗುತ್ತೋ ನನಗೆ ತಿಳಿದಿಲ್ಲ. ಇದೇ ರೀತಿ ಮೂಡಿಬರುವುದಾದರೆ ನನಗೆ ಏನೂ ಅಭ್ಯಂತರ ಇಲ್ಲ. ಗ್ರೇ ಪಾತ್ರಗಳನ್ನು ಕಟ್ಟಿಕೊಡುವಲ್ಲಿ ನೆಲ್ಸನ್​ ಫೇಮಸ್​’ ಎಂದು ಶಿವರಾಜ್​ಕುಮಾರ್​ ಹೇಳಿದ್ದಾರೆ.

ಇದನ್ನೂ ಓದಿ: ‘ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಚಿಂತನೆಯನ್ನು ಮಕ್ಕಳು ಅಳವಡಿಸಿಕೊಳ್ಳಲಿ’: ಶಿವರಾಜ್​ಕುಮಾರ್​

ಆಗಸ್ಟ್​ 10ರಂದು ‘ಜೈಲರ್​​’ ಸಿನಿಮಾ ಬಿಡುಗಡೆ ಆಗಿತ್ತು. ವಿಶ್ವಾದ್ಯಂತ ಈ ಸಿನಿಮಾ ಅಂದಾಜು 600 ಕೋಟಿ ರೂಪಾಯಿ ಗಳಿಸಿದೆ. ಈ ಚಿತ್ರದ ಸಕ್ಸಸ್​ ಬಳಿಕ ಶಿವರಾಜ್​ಕುಮಾರ್​ ಅವರಿಗೆ ಪರಭಾಷೆಯಿಂದ ಬರುವ ಆಫರ್​ಗಳು ಹೆಚ್ಚಾಗಿದೆ. ಈಗಾಗಲೇ ಅವರು ಧನುಶ್​ ಅಭಿನಯದ ‘ಕ್ಯಾಪ್ಟನ್​ ಮಿಲ್ಲರ್​’ ಚಿತ್ರದಲ್ಲಿ ಒಂದು ಪ್ರಮುಖ ಪಾತ್ರ ಮಾಡಿದ್ದು, ಆ ಸಿನಿಮಾದ ಬಿಡುಗಡೆಗಾಗಿ ಫ್ಯಾನ್ಸ್​ ಕಾದಿದ್ದಾರೆ. ಇನ್ನೂ ಅನೇಕ ನಿರ್ದೇಶಕರು ಶಿವರಾಜ್​ಕುಮಾರ್​ ಅವರಿಗೆ ಕಥೆ ಹೇಳಲು ಕಾದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು