AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೈಲರ್​’ ಸಿನಿಮಾದ ನರಸಿಂಹ ಪಾತ್ರದ ಮೇಲೆ ಹೊಸ ಸಿನಿಮಾ ಬರುತ್ತಾ? ಇಲ್ಲಿದೆ ಶಿವರಾಜ್​ಕುಮಾರ್​ ಪ್ರತಿಕ್ರಿಯೆ

‘ಜೈಲರ್​’ ಚಿತ್ರದ ಒಂದೆರಡು ಸನ್ನಿವೇಶಗಳಲ್ಲಿ ಶಿವಣ್ಣ ಮಾಡಿರುವ ನರಸಿಂಹ ಎಂಬ ಪಾತ್ರ ಸಖತ್​ ಹೈಲೈಟ್​ ಆಗಿದೆ. ಚಿತ್ರಮಂದಿರದಲ್ಲಿ ಜನರಿಂದ ಸಿಕ್ಕ ಪ್ರತಿಕ್ರಿಯೆ ನೋಡಿ ಸ್ವತಃ ಶಿವರಾಜ್​ಕುಮಾರ್​ ಅವರಿಗೆ ಅಚ್ಚರಿ ಆಗಿದೆ. ಈ ಪಾತ್ರದ ಮೇಲೆ ಹೊಸ ಸಿನಿಮಾ ಮಾಡುವುದಾದರೆ ತಮಗೇನೂ ಅಭ್ಯಂತರ ಇಲ್ಲ ಎಂದು ಅವರು ಹೇಳಿದ್ದಾರೆ.

‘ಜೈಲರ್​’ ಸಿನಿಮಾದ ನರಸಿಂಹ ಪಾತ್ರದ ಮೇಲೆ ಹೊಸ ಸಿನಿಮಾ ಬರುತ್ತಾ? ಇಲ್ಲಿದೆ ಶಿವರಾಜ್​ಕುಮಾರ್​ ಪ್ರತಿಕ್ರಿಯೆ
ಶಿವರಾಜ್​ಕುಮಾರ್​
ಮದನ್​ ಕುಮಾರ್​
|

Updated on: Oct 24, 2023 | 10:56 AM

Share

ನಟ ಶಿವರಾಜ್​ಕುಮಾರ್​ ಅವರು ಈಗ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಮಿಂಚುತ್ತಿದ್ದಾರೆ. ‘ಜೈಲರ್​’ (Jailer) ಸಿನಿಮಾದಲ್ಲಿ ಅವರು ಮಾಡಿದ ಸಣ್ಣ ಪಾತ್ರಕ್ಕೆ ದೊಡ್ಡ ಮಟ್ಟದ ರೆಸ್ಪಾನ್ಸ್​ ಸಿಕ್ಕಿದೆ. ರಜನಿಕಾಂತ್​ (Rajinikanth) ಅವರ ಸ್ನೇಹಿತನಾಗಿ ಅವರು ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕರ್ನಾಟಕದಲ್ಲಿ ಮಾತ್ರವಲ್ಲದೇ ಹೊರರಾಜ್ಯಗಳ ಪ್ರೇಕ್ಷಕರೂ ಕೂಡ ಈ ಪಾತ್ರವನ್ನು ಮೆಚ್ಚಿಕೊಂಡಿದ್ದಾರೆ. ಈ ಪಾತ್ರದ ಹೆಸರು ನರಸಿಂಹ. ಒಂದು ವೇಳೆ ನರಸಿಂಹನ ಪಾತ್ರವನ್ನೇ ಪ್ರಧಾನವಾಗಿ ಇಟ್ಟುಕೊಂಡು ಹೊಸ ಸಿನಿಮಾ ಮಾಡಿದರೆ ಹೇಗಿರುತ್ತದೆ? ಈ ಬಗ್ಗೆ ಶಿವರಾಜ್​ಕುಮಾರ್​ (Shivarajkumar) ಪ್ರತಿಕ್ರಿಯೆ ನೀಡಿದ್ದಾರೆ. ‘ಇಂಡಿಯಾ ಟುಡೇ’ ನಡೆಸಿದ ಸಂದರ್ಶನದಲ್ಲಿ ಅವರು ಈ ವಿಚಾರದ ಬಗ್ಗೆ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

ಜೈಲರ್​ ಸಿನಿಮಾದ ಕಥಾನಾಯಕ ಟೈಗರ್​ ಕಷ್ಟದ ಸಂದರ್ಭದಲ್ಲಿ ಇರುತ್ತಾನೆ. ಆಗ ಆತ ತಮಿಳುನಾಡಿನಿಂದ ಕರ್ನಾಟಕದ ಮಂಡ್ಯಕ್ಕೆ ಬಂದು ತನ್ನ ಸ್ನೇಹಿತ ನರಸಿಂಹನ ಬಳಿ ಸಹಾಯ ಕೇಳುತ್ತಾನೆ. ನರಸಿಂಹ ಕಳಿಸುವ ಶಾರ್ಪ್​ ಶೂಟರ್​ಗಳ ಸಹಾಯದಿಂದ ವಿಲನ್​ಗಳನ್ನು ಟೈಗರ್​ ಮಟ್ಟ ಹಾಕುತ್ತಾನೆ. ಈ ಎಲ್ಲ ಸನ್ನಿವೇಶಗಳಲ್ಲಿ ಶಿವಣ್ಣ ಮಾಡಿರುವ ನರಸಿಂಹ ಪಾತ್ರ ಸಖತ್​ ಹೈಲೈಟ್​ ಆಗಿದೆ. ಚಿತ್ರಮಂದಿರದಲ್ಲಿ ಜನರಿಂದ ಸಿಕ್ಕ ಪ್ರತಿಕ್ರಿಯೆ ನೋಡಿ ಸ್ವತಃ ಶಿವರಾಜ್​ಕುಮಾರ್​ ಅವರಿಗೆ ಅಚ್ಚರಿ ಆಗಿದೆ. ಒಂದು ವೇಳೆ ಈ ಪಾತ್ರದ ಮೇಲೆ ಹೊಸ ಸಿನಿಮಾ ಮಾಡುವುದಾದರೆ ತಮಗೇನೂ ಅಭ್ಯಂತರ ಇಲ್ಲ ಎಂದು ಶಿವಣ್ಣ ಹೇಳಿದ್ದಾರೆ.

ಇದನ್ನೂ ಓದಿ: ನಿಖಿಲ್​ ಕುಮಾರ್​ ಸಿನಿಮಾದ ಸೆಟ್​ಗೆ ಭೇಟಿ ನೀಡಿದ ಶಿವರಾಜ್​ಕುಮಾರ್​; ಫೋಟೋ ವೈರಲ್​

‘ಅದು ಹೇಗೆ ಮೂಡಿಬರುತ್ತದೆ ಎಂಬುದು ನನಗೆ ಗೊತ್ತಿಲ್ಲ. ನಿರ್ದೇಶಕ ನೆಲ್ಸನ್​ ದಿಲೀಪ್​ ಕುಮಾರ್​ ಅವರು ಅದನ್ನು ಕ್ರಿಯೇಟ್​ ಮಾಡಬೇಕು. ಜೈಲರ್​ ಸಕ್ಸಸ್​ ನಂತರ ಮುಂದಿನ ಸಿನಿಮಾಗಾಗಿ ಅವರ ಜವಾಬ್ದಾರಿ ಹೆಚ್ಚಾಗಿದೆ. ಜೈಲಿನಲ್ಲಿ ಒಂದು ದೃಶ್ಯದ ಚಿತ್ರೀಕರಣ ಮಾಡಬೇಕಿತ್ತು. ಆದರೆ ನಂತರದಲ್ಲಿ ಅದರ ಅವಶ್ಯಕತೆ ಇಲ್ಲ ಅಂತ ಅವರೇ ಹೇಳಿದರು. ಅದು ಏನಾಗುತ್ತೋ ನನಗೆ ತಿಳಿದಿಲ್ಲ. ಇದೇ ರೀತಿ ಮೂಡಿಬರುವುದಾದರೆ ನನಗೆ ಏನೂ ಅಭ್ಯಂತರ ಇಲ್ಲ. ಗ್ರೇ ಪಾತ್ರಗಳನ್ನು ಕಟ್ಟಿಕೊಡುವಲ್ಲಿ ನೆಲ್ಸನ್​ ಫೇಮಸ್​’ ಎಂದು ಶಿವರಾಜ್​ಕುಮಾರ್​ ಹೇಳಿದ್ದಾರೆ.

ಇದನ್ನೂ ಓದಿ: ‘ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಚಿಂತನೆಯನ್ನು ಮಕ್ಕಳು ಅಳವಡಿಸಿಕೊಳ್ಳಲಿ’: ಶಿವರಾಜ್​ಕುಮಾರ್​

ಆಗಸ್ಟ್​ 10ರಂದು ‘ಜೈಲರ್​​’ ಸಿನಿಮಾ ಬಿಡುಗಡೆ ಆಗಿತ್ತು. ವಿಶ್ವಾದ್ಯಂತ ಈ ಸಿನಿಮಾ ಅಂದಾಜು 600 ಕೋಟಿ ರೂಪಾಯಿ ಗಳಿಸಿದೆ. ಈ ಚಿತ್ರದ ಸಕ್ಸಸ್​ ಬಳಿಕ ಶಿವರಾಜ್​ಕುಮಾರ್​ ಅವರಿಗೆ ಪರಭಾಷೆಯಿಂದ ಬರುವ ಆಫರ್​ಗಳು ಹೆಚ್ಚಾಗಿದೆ. ಈಗಾಗಲೇ ಅವರು ಧನುಶ್​ ಅಭಿನಯದ ‘ಕ್ಯಾಪ್ಟನ್​ ಮಿಲ್ಲರ್​’ ಚಿತ್ರದಲ್ಲಿ ಒಂದು ಪ್ರಮುಖ ಪಾತ್ರ ಮಾಡಿದ್ದು, ಆ ಸಿನಿಮಾದ ಬಿಡುಗಡೆಗಾಗಿ ಫ್ಯಾನ್ಸ್​ ಕಾದಿದ್ದಾರೆ. ಇನ್ನೂ ಅನೇಕ ನಿರ್ದೇಶಕರು ಶಿವರಾಜ್​ಕುಮಾರ್​ ಅವರಿಗೆ ಕಥೆ ಹೇಳಲು ಕಾದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು