AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಕ್ರಾಂತಿ ಹಬ್ಬದಲ್ಲಿ ಪುನೀತ್​ ರಾಜ್​ಕುಮಾರ್​ ನೆನಪು; ಫ್ಯಾನ್ಸ್​ ಜೊತೆ ಹೊಸ ಸುದ್ದಿ ಹಂಚಿಕೊಂಡ ಶಿವಣ್ಣ

‘ಇನ್ನು ಕೆಲವೇ ಗಂಟೆಗಳಲ್ಲಿ ಇನ್ನೊಂದು ಸರ್ಪ್ರೈಸ್​ ಕಾದಿದೆ. ಅಪ್ಪು ಐ ಲವ್​ ಯೂ’ ಎಂದು ಶಿವರಾಜ್​ಕುಮಾರ್​ ಹೇಳಿದ್ದಾರೆ.

ಸಂಕ್ರಾಂತಿ ಹಬ್ಬದಲ್ಲಿ ಪುನೀತ್​ ರಾಜ್​ಕುಮಾರ್​ ನೆನಪು; ಫ್ಯಾನ್ಸ್​ ಜೊತೆ ಹೊಸ ಸುದ್ದಿ ಹಂಚಿಕೊಂಡ ಶಿವಣ್ಣ
ಶಿವರಾಜ್​ಕುಮಾರ್​, ಬೈರಾಗಿ ಪೋಸ್ಟರ್​, ಪುನೀತ್​ ರಾಜ್​ಕುಮಾರ್
TV9 Web
| Updated By: ಮದನ್​ ಕುಮಾರ್​|

Updated on: Jan 15, 2022 | 1:33 PM

Share

ವರ್ಷದ ಮೊದಲ ಹಬ್ಬ ಸಂಕ್ರಾಂತಿ. ಈ ಬಾರಿ ಕೊರೊನಾ ಹಾವಳಿ ನಡುವೆ ಸಿಂಪಲ್​ ಆಗಿ ಹಬ್ಬ ಆಚರಿಸಲಾಗುತ್ತಿದೆ. ನೈಟ್​ ಕರ್ಫ್ಯೂ, ವೀಕೆಂಡ್​​ ಕರ್ಫ್ಯೂ ಕಾರಣಗಳಿಂದ ಕನ್ನಡದಲ್ಲಿ ಯಾವುದೇ ಸಿನಿಮಾ ರಿಲೀಸ್​ ಆಗಿಲ್ಲ. ಹಾಗಾಗಿ ಸಂಕ್ರಾಂತಿಯ (Sankranti 2022) ಈ ಸಂದರ್ಭದಲ್ಲಿ ಕನ್ನಡ ಚಿತ್ರರಂಗದಲ್ಲಿ ಹೇಳಿಕೊಳ್ಳುವಂತಹ ಕಳೆ ಇಲ್ಲ. ಅದರ ನಡುವೆಯೂ ಭರವಸೆಯ ಬೆಳಕನ್ನು ಹುಡುಕುತ್ತ ಮುನ್ನಡೆಯಲೇ ಬೇಕಾಗಿದೆ. ನಟ ಶಿವರಾಜ್​ಕುಮಾರ್​​ (Shivarajkumar) ಅವರು ಎಲ್ಲರಿಗೂ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದಾರೆ. ಈ ವೇಳೆ ಪುನೀತ್​ ರಾಜ್​ಕುಮಾರ್​  (Puneeth Rajkumar) ಅವರನ್ನು ಶಿವಣ್ಣ ನೆನಪು ಮಾಡಿಕೊಂಡಿದ್ದಾರೆ. ಜೊತೆಗೊಂದು ಗುಡ್​ ನ್ಯೂಸ್​ ಸಹ ನೀಡಿದ್ದಾರೆ. ಶಿವರಾಜ್​ಕುಮಾರ್​ ನಟನೆಯ ‘ಬೈರಾಗಿ’ ಚಿತ್ರದ ಶೂಟಿಂಗ್​ ಮಗಿದಿರುವುದೇ ಆ ಸಿಹಿ ಸುದ್ದಿ. ಶೀಘ್ರದಲ್ಲೇ ಈ ಸಿನಿಮಾದ ಟೀಸರ್​ ಕೂಡ ರಿಲೀಸ್​ ಆಗಲಿದೆ ಎಂದು ಶಿವಣ್ಣ ಹೇಳಿದ್ದಾರೆ. ಒಂದು ಸರ್ಪ್ರೈಸ್​ ಕೂಡ ಇದೆ ಅಂತ ಅವರು ತಿಳಿಸಿದ್ದಾರೆ.

‘ಪ್ರತಿಯೊಬ್ಬರಿಗೂ ಸಂಕ್ರಾಂತಿ ಹಬ್ಬದ ಶುಭಾಶಯಗಳು. ಬೈರಾಗಿ ಸಿನಿಮಾದ ಶೂಟಿಂಗ್ ಮುಕ್ತಾಯ ಆಯ್ತು. ಆದಷ್ಟು ಬೇಗ ನಿಮ್ಮ ಮುಂದೆ ಬರಲಿದೆ. ಈ ವರ್ಷದ ಮೊದಲ ಬೈರಾಗಿ ಪೋಸ್ಟರ್​ ಅನ್ನು ನನ್ನ ಪೇಜ್​ನಿಂದ ರಿಲೀಸ್​ ಮಾಡುತ್ತಿದ್ದೇನೆ. ನೋಡಿ ಆನಂದಿಸಿ. ಇನ್ನು ಕೆಲವೇ ಗಂಟೆಗಳಲ್ಲಿ ಇನ್ನೊಂದು ಸರ್ಪ್ರೈಸ್​ ಕಾದಿದೆ. ಅಪ್ಪು ಐ ಲವ್​ ಯೂ’ ಎಂದು ಶಿವರಾಜ್​ಕುಮಾರ್​ ಹೇಳಿದ್ದಾರೆ.

​ಬೈರಾಗಿ ಸಿನಿಮಾದಲ್ಲಿ ಶಿವರಾಜ್​ಕುಮಾರ್​ ಜೊತೆ ಡಾಲಿ ಧನಂಜಯ್​ ಕೂಡ ಕಾಣಿಸಿಕೊಳ್ಳಲಿರುವುದು ವಿಶೇಷ. ‘ಟಗರು’ ಸಿನಿಮಾ ನಂತರ ಇವರಿಬ್ಬರ ಕಾಂಬಿನೇಷನ್​ ಮೇಲೆ ಪ್ರೇಕ್ಷಕರಿಗೆ ನಿರೀಕ್ಷೆ ಹೆಚ್ಚಿದೆ. ಕಾಲಿವುಡ್​ ಮೂಲದ ನಿರ್ದೇಶಕ ವಿಜಯ್​ ಮಿಲ್ಟನ್​ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಮೊದಲ ಲಾಕ್​ಡೌನ್​ ಮುಗಿದ ಬಳಿಕ ‘ಬೈರಾಗಿ’ ಲಾಂಚ್ ಆಗಿತ್ತು. ಈಗ ಶೂಟಿಂಗ್​ ಪೂರ್ಣಗೊಳಿಸಿಕೊಂಡಿದೆ.

ಕೃಷ್ಣ ಸಾರ್ಥಕ್​ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಸಂಕ್ರಾಂತಿ ಪ್ರಯುಕ್ತ ಬಿಡುಗಡೆ ಆಗಿರುವ ಹೊಸ ಪೋಸ್ಟರ್ ಸಖತ್​ ವೈರಲ್​ ಆಗುತ್ತಿದೆ. ಯಶ್​ ಶಿವಕುಮಾರ್​, ಅಂಜಲಿ, ಪೃಥ್ವಿ ಅಂಬರ್​ ಮುಂತಾದ ಕಲಾವಿದರು ಈ ಸಿನಿಮಾದಲ್ಲಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ‘ಬೈರಾಗಿ’ ಚಿತ್ರ ಹೈಪ್​ ಸೃಷ್ಟಿ ಮಾಡಿದೆ. ಆದಷ್ಟು ಬೇಗ ಈ ಸಿನಿಮಾವನ್ನು ನೋಡಲು ಫ್ಯಾನ್ಸ್​ ಕಾದಿದ್ದಾರೆ.​

ಇದನ್ನೂ ಓದಿ:

ಪುನೀತ್​ ಒಂದು ಹೃದಯ, ಆತ ಎಲ್ಲರ ಹೃದಯದಲ್ಲೂ ಬೆರೆತು ಹೋಗಿದ್ದಾನೆ; ತಮ್ಮನನ್ನು ನೆನೆದು ಭಾವುಕರಾದ ನಟ ಶಿವರಾಜ್​ಕುಮಾರ್

ಪುನೀತ್​ಗೆ ತಮಿಳುನಾಡು ವಿಧಾನಸಭೆ ಅಧಿವೇಶನದಲ್ಲಿ ಗೌರವ; ಮೊದಲ ದಿನವೇ ಅಪ್ಪು ಬಗ್ಗೆ ಮಾತು

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ