AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಕ್ರಾಂತಿ ಹಬ್ಬದಲ್ಲಿ ಪುನೀತ್​ ರಾಜ್​ಕುಮಾರ್​ ನೆನಪು; ಫ್ಯಾನ್ಸ್​ ಜೊತೆ ಹೊಸ ಸುದ್ದಿ ಹಂಚಿಕೊಂಡ ಶಿವಣ್ಣ

‘ಇನ್ನು ಕೆಲವೇ ಗಂಟೆಗಳಲ್ಲಿ ಇನ್ನೊಂದು ಸರ್ಪ್ರೈಸ್​ ಕಾದಿದೆ. ಅಪ್ಪು ಐ ಲವ್​ ಯೂ’ ಎಂದು ಶಿವರಾಜ್​ಕುಮಾರ್​ ಹೇಳಿದ್ದಾರೆ.

ಸಂಕ್ರಾಂತಿ ಹಬ್ಬದಲ್ಲಿ ಪುನೀತ್​ ರಾಜ್​ಕುಮಾರ್​ ನೆನಪು; ಫ್ಯಾನ್ಸ್​ ಜೊತೆ ಹೊಸ ಸುದ್ದಿ ಹಂಚಿಕೊಂಡ ಶಿವಣ್ಣ
ಶಿವರಾಜ್​ಕುಮಾರ್​, ಬೈರಾಗಿ ಪೋಸ್ಟರ್​, ಪುನೀತ್​ ರಾಜ್​ಕುಮಾರ್
TV9 Web
| Edited By: |

Updated on: Jan 15, 2022 | 1:33 PM

Share

ವರ್ಷದ ಮೊದಲ ಹಬ್ಬ ಸಂಕ್ರಾಂತಿ. ಈ ಬಾರಿ ಕೊರೊನಾ ಹಾವಳಿ ನಡುವೆ ಸಿಂಪಲ್​ ಆಗಿ ಹಬ್ಬ ಆಚರಿಸಲಾಗುತ್ತಿದೆ. ನೈಟ್​ ಕರ್ಫ್ಯೂ, ವೀಕೆಂಡ್​​ ಕರ್ಫ್ಯೂ ಕಾರಣಗಳಿಂದ ಕನ್ನಡದಲ್ಲಿ ಯಾವುದೇ ಸಿನಿಮಾ ರಿಲೀಸ್​ ಆಗಿಲ್ಲ. ಹಾಗಾಗಿ ಸಂಕ್ರಾಂತಿಯ (Sankranti 2022) ಈ ಸಂದರ್ಭದಲ್ಲಿ ಕನ್ನಡ ಚಿತ್ರರಂಗದಲ್ಲಿ ಹೇಳಿಕೊಳ್ಳುವಂತಹ ಕಳೆ ಇಲ್ಲ. ಅದರ ನಡುವೆಯೂ ಭರವಸೆಯ ಬೆಳಕನ್ನು ಹುಡುಕುತ್ತ ಮುನ್ನಡೆಯಲೇ ಬೇಕಾಗಿದೆ. ನಟ ಶಿವರಾಜ್​ಕುಮಾರ್​​ (Shivarajkumar) ಅವರು ಎಲ್ಲರಿಗೂ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದಾರೆ. ಈ ವೇಳೆ ಪುನೀತ್​ ರಾಜ್​ಕುಮಾರ್​  (Puneeth Rajkumar) ಅವರನ್ನು ಶಿವಣ್ಣ ನೆನಪು ಮಾಡಿಕೊಂಡಿದ್ದಾರೆ. ಜೊತೆಗೊಂದು ಗುಡ್​ ನ್ಯೂಸ್​ ಸಹ ನೀಡಿದ್ದಾರೆ. ಶಿವರಾಜ್​ಕುಮಾರ್​ ನಟನೆಯ ‘ಬೈರಾಗಿ’ ಚಿತ್ರದ ಶೂಟಿಂಗ್​ ಮಗಿದಿರುವುದೇ ಆ ಸಿಹಿ ಸುದ್ದಿ. ಶೀಘ್ರದಲ್ಲೇ ಈ ಸಿನಿಮಾದ ಟೀಸರ್​ ಕೂಡ ರಿಲೀಸ್​ ಆಗಲಿದೆ ಎಂದು ಶಿವಣ್ಣ ಹೇಳಿದ್ದಾರೆ. ಒಂದು ಸರ್ಪ್ರೈಸ್​ ಕೂಡ ಇದೆ ಅಂತ ಅವರು ತಿಳಿಸಿದ್ದಾರೆ.

‘ಪ್ರತಿಯೊಬ್ಬರಿಗೂ ಸಂಕ್ರಾಂತಿ ಹಬ್ಬದ ಶುಭಾಶಯಗಳು. ಬೈರಾಗಿ ಸಿನಿಮಾದ ಶೂಟಿಂಗ್ ಮುಕ್ತಾಯ ಆಯ್ತು. ಆದಷ್ಟು ಬೇಗ ನಿಮ್ಮ ಮುಂದೆ ಬರಲಿದೆ. ಈ ವರ್ಷದ ಮೊದಲ ಬೈರಾಗಿ ಪೋಸ್ಟರ್​ ಅನ್ನು ನನ್ನ ಪೇಜ್​ನಿಂದ ರಿಲೀಸ್​ ಮಾಡುತ್ತಿದ್ದೇನೆ. ನೋಡಿ ಆನಂದಿಸಿ. ಇನ್ನು ಕೆಲವೇ ಗಂಟೆಗಳಲ್ಲಿ ಇನ್ನೊಂದು ಸರ್ಪ್ರೈಸ್​ ಕಾದಿದೆ. ಅಪ್ಪು ಐ ಲವ್​ ಯೂ’ ಎಂದು ಶಿವರಾಜ್​ಕುಮಾರ್​ ಹೇಳಿದ್ದಾರೆ.

​ಬೈರಾಗಿ ಸಿನಿಮಾದಲ್ಲಿ ಶಿವರಾಜ್​ಕುಮಾರ್​ ಜೊತೆ ಡಾಲಿ ಧನಂಜಯ್​ ಕೂಡ ಕಾಣಿಸಿಕೊಳ್ಳಲಿರುವುದು ವಿಶೇಷ. ‘ಟಗರು’ ಸಿನಿಮಾ ನಂತರ ಇವರಿಬ್ಬರ ಕಾಂಬಿನೇಷನ್​ ಮೇಲೆ ಪ್ರೇಕ್ಷಕರಿಗೆ ನಿರೀಕ್ಷೆ ಹೆಚ್ಚಿದೆ. ಕಾಲಿವುಡ್​ ಮೂಲದ ನಿರ್ದೇಶಕ ವಿಜಯ್​ ಮಿಲ್ಟನ್​ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಮೊದಲ ಲಾಕ್​ಡೌನ್​ ಮುಗಿದ ಬಳಿಕ ‘ಬೈರಾಗಿ’ ಲಾಂಚ್ ಆಗಿತ್ತು. ಈಗ ಶೂಟಿಂಗ್​ ಪೂರ್ಣಗೊಳಿಸಿಕೊಂಡಿದೆ.

ಕೃಷ್ಣ ಸಾರ್ಥಕ್​ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಸಂಕ್ರಾಂತಿ ಪ್ರಯುಕ್ತ ಬಿಡುಗಡೆ ಆಗಿರುವ ಹೊಸ ಪೋಸ್ಟರ್ ಸಖತ್​ ವೈರಲ್​ ಆಗುತ್ತಿದೆ. ಯಶ್​ ಶಿವಕುಮಾರ್​, ಅಂಜಲಿ, ಪೃಥ್ವಿ ಅಂಬರ್​ ಮುಂತಾದ ಕಲಾವಿದರು ಈ ಸಿನಿಮಾದಲ್ಲಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ‘ಬೈರಾಗಿ’ ಚಿತ್ರ ಹೈಪ್​ ಸೃಷ್ಟಿ ಮಾಡಿದೆ. ಆದಷ್ಟು ಬೇಗ ಈ ಸಿನಿಮಾವನ್ನು ನೋಡಲು ಫ್ಯಾನ್ಸ್​ ಕಾದಿದ್ದಾರೆ.​

ಇದನ್ನೂ ಓದಿ:

ಪುನೀತ್​ ಒಂದು ಹೃದಯ, ಆತ ಎಲ್ಲರ ಹೃದಯದಲ್ಲೂ ಬೆರೆತು ಹೋಗಿದ್ದಾನೆ; ತಮ್ಮನನ್ನು ನೆನೆದು ಭಾವುಕರಾದ ನಟ ಶಿವರಾಜ್​ಕುಮಾರ್

ಪುನೀತ್​ಗೆ ತಮಿಳುನಾಡು ವಿಧಾನಸಭೆ ಅಧಿವೇಶನದಲ್ಲಿ ಗೌರವ; ಮೊದಲ ದಿನವೇ ಅಪ್ಪು ಬಗ್ಗೆ ಮಾತು

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು