AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಕ್ರಾಂತಿ ಹಬ್ಬದಲ್ಲಿ ಪುನೀತ್​ ರಾಜ್​ಕುಮಾರ್​ ನೆನಪು; ಫ್ಯಾನ್ಸ್​ ಜೊತೆ ಹೊಸ ಸುದ್ದಿ ಹಂಚಿಕೊಂಡ ಶಿವಣ್ಣ

‘ಇನ್ನು ಕೆಲವೇ ಗಂಟೆಗಳಲ್ಲಿ ಇನ್ನೊಂದು ಸರ್ಪ್ರೈಸ್​ ಕಾದಿದೆ. ಅಪ್ಪು ಐ ಲವ್​ ಯೂ’ ಎಂದು ಶಿವರಾಜ್​ಕುಮಾರ್​ ಹೇಳಿದ್ದಾರೆ.

ಸಂಕ್ರಾಂತಿ ಹಬ್ಬದಲ್ಲಿ ಪುನೀತ್​ ರಾಜ್​ಕುಮಾರ್​ ನೆನಪು; ಫ್ಯಾನ್ಸ್​ ಜೊತೆ ಹೊಸ ಸುದ್ದಿ ಹಂಚಿಕೊಂಡ ಶಿವಣ್ಣ
ಶಿವರಾಜ್​ಕುಮಾರ್​, ಬೈರಾಗಿ ಪೋಸ್ಟರ್​, ಪುನೀತ್​ ರಾಜ್​ಕುಮಾರ್
Follow us
TV9 Web
| Updated By: ಮದನ್​ ಕುಮಾರ್​

Updated on: Jan 15, 2022 | 1:33 PM

ವರ್ಷದ ಮೊದಲ ಹಬ್ಬ ಸಂಕ್ರಾಂತಿ. ಈ ಬಾರಿ ಕೊರೊನಾ ಹಾವಳಿ ನಡುವೆ ಸಿಂಪಲ್​ ಆಗಿ ಹಬ್ಬ ಆಚರಿಸಲಾಗುತ್ತಿದೆ. ನೈಟ್​ ಕರ್ಫ್ಯೂ, ವೀಕೆಂಡ್​​ ಕರ್ಫ್ಯೂ ಕಾರಣಗಳಿಂದ ಕನ್ನಡದಲ್ಲಿ ಯಾವುದೇ ಸಿನಿಮಾ ರಿಲೀಸ್​ ಆಗಿಲ್ಲ. ಹಾಗಾಗಿ ಸಂಕ್ರಾಂತಿಯ (Sankranti 2022) ಈ ಸಂದರ್ಭದಲ್ಲಿ ಕನ್ನಡ ಚಿತ್ರರಂಗದಲ್ಲಿ ಹೇಳಿಕೊಳ್ಳುವಂತಹ ಕಳೆ ಇಲ್ಲ. ಅದರ ನಡುವೆಯೂ ಭರವಸೆಯ ಬೆಳಕನ್ನು ಹುಡುಕುತ್ತ ಮುನ್ನಡೆಯಲೇ ಬೇಕಾಗಿದೆ. ನಟ ಶಿವರಾಜ್​ಕುಮಾರ್​​ (Shivarajkumar) ಅವರು ಎಲ್ಲರಿಗೂ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದಾರೆ. ಈ ವೇಳೆ ಪುನೀತ್​ ರಾಜ್​ಕುಮಾರ್​  (Puneeth Rajkumar) ಅವರನ್ನು ಶಿವಣ್ಣ ನೆನಪು ಮಾಡಿಕೊಂಡಿದ್ದಾರೆ. ಜೊತೆಗೊಂದು ಗುಡ್​ ನ್ಯೂಸ್​ ಸಹ ನೀಡಿದ್ದಾರೆ. ಶಿವರಾಜ್​ಕುಮಾರ್​ ನಟನೆಯ ‘ಬೈರಾಗಿ’ ಚಿತ್ರದ ಶೂಟಿಂಗ್​ ಮಗಿದಿರುವುದೇ ಆ ಸಿಹಿ ಸುದ್ದಿ. ಶೀಘ್ರದಲ್ಲೇ ಈ ಸಿನಿಮಾದ ಟೀಸರ್​ ಕೂಡ ರಿಲೀಸ್​ ಆಗಲಿದೆ ಎಂದು ಶಿವಣ್ಣ ಹೇಳಿದ್ದಾರೆ. ಒಂದು ಸರ್ಪ್ರೈಸ್​ ಕೂಡ ಇದೆ ಅಂತ ಅವರು ತಿಳಿಸಿದ್ದಾರೆ.

‘ಪ್ರತಿಯೊಬ್ಬರಿಗೂ ಸಂಕ್ರಾಂತಿ ಹಬ್ಬದ ಶುಭಾಶಯಗಳು. ಬೈರಾಗಿ ಸಿನಿಮಾದ ಶೂಟಿಂಗ್ ಮುಕ್ತಾಯ ಆಯ್ತು. ಆದಷ್ಟು ಬೇಗ ನಿಮ್ಮ ಮುಂದೆ ಬರಲಿದೆ. ಈ ವರ್ಷದ ಮೊದಲ ಬೈರಾಗಿ ಪೋಸ್ಟರ್​ ಅನ್ನು ನನ್ನ ಪೇಜ್​ನಿಂದ ರಿಲೀಸ್​ ಮಾಡುತ್ತಿದ್ದೇನೆ. ನೋಡಿ ಆನಂದಿಸಿ. ಇನ್ನು ಕೆಲವೇ ಗಂಟೆಗಳಲ್ಲಿ ಇನ್ನೊಂದು ಸರ್ಪ್ರೈಸ್​ ಕಾದಿದೆ. ಅಪ್ಪು ಐ ಲವ್​ ಯೂ’ ಎಂದು ಶಿವರಾಜ್​ಕುಮಾರ್​ ಹೇಳಿದ್ದಾರೆ.

​ಬೈರಾಗಿ ಸಿನಿಮಾದಲ್ಲಿ ಶಿವರಾಜ್​ಕುಮಾರ್​ ಜೊತೆ ಡಾಲಿ ಧನಂಜಯ್​ ಕೂಡ ಕಾಣಿಸಿಕೊಳ್ಳಲಿರುವುದು ವಿಶೇಷ. ‘ಟಗರು’ ಸಿನಿಮಾ ನಂತರ ಇವರಿಬ್ಬರ ಕಾಂಬಿನೇಷನ್​ ಮೇಲೆ ಪ್ರೇಕ್ಷಕರಿಗೆ ನಿರೀಕ್ಷೆ ಹೆಚ್ಚಿದೆ. ಕಾಲಿವುಡ್​ ಮೂಲದ ನಿರ್ದೇಶಕ ವಿಜಯ್​ ಮಿಲ್ಟನ್​ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಮೊದಲ ಲಾಕ್​ಡೌನ್​ ಮುಗಿದ ಬಳಿಕ ‘ಬೈರಾಗಿ’ ಲಾಂಚ್ ಆಗಿತ್ತು. ಈಗ ಶೂಟಿಂಗ್​ ಪೂರ್ಣಗೊಳಿಸಿಕೊಂಡಿದೆ.

ಕೃಷ್ಣ ಸಾರ್ಥಕ್​ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಸಂಕ್ರಾಂತಿ ಪ್ರಯುಕ್ತ ಬಿಡುಗಡೆ ಆಗಿರುವ ಹೊಸ ಪೋಸ್ಟರ್ ಸಖತ್​ ವೈರಲ್​ ಆಗುತ್ತಿದೆ. ಯಶ್​ ಶಿವಕುಮಾರ್​, ಅಂಜಲಿ, ಪೃಥ್ವಿ ಅಂಬರ್​ ಮುಂತಾದ ಕಲಾವಿದರು ಈ ಸಿನಿಮಾದಲ್ಲಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ‘ಬೈರಾಗಿ’ ಚಿತ್ರ ಹೈಪ್​ ಸೃಷ್ಟಿ ಮಾಡಿದೆ. ಆದಷ್ಟು ಬೇಗ ಈ ಸಿನಿಮಾವನ್ನು ನೋಡಲು ಫ್ಯಾನ್ಸ್​ ಕಾದಿದ್ದಾರೆ.​

ಇದನ್ನೂ ಓದಿ:

ಪುನೀತ್​ ಒಂದು ಹೃದಯ, ಆತ ಎಲ್ಲರ ಹೃದಯದಲ್ಲೂ ಬೆರೆತು ಹೋಗಿದ್ದಾನೆ; ತಮ್ಮನನ್ನು ನೆನೆದು ಭಾವುಕರಾದ ನಟ ಶಿವರಾಜ್​ಕುಮಾರ್

ಪುನೀತ್​ಗೆ ತಮಿಳುನಾಡು ವಿಧಾನಸಭೆ ಅಧಿವೇಶನದಲ್ಲಿ ಗೌರವ; ಮೊದಲ ದಿನವೇ ಅಪ್ಪು ಬಗ್ಗೆ ಮಾತು

ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಸತ್ಕಾರ ಸಮಾರಂಭವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸಿದ್ದು: ಶಿವಕುಮಾರ್
ಸತ್ಕಾರ ಸಮಾರಂಭವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸಿದ್ದು: ಶಿವಕುಮಾರ್
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್