AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಕ್ರಾಂತಿ ಹಬ್ಬದಲ್ಲಿ ಪುನೀತ್​ ರಾಜ್​ಕುಮಾರ್​ ನೆನಪು; ಫ್ಯಾನ್ಸ್​ ಜೊತೆ ಹೊಸ ಸುದ್ದಿ ಹಂಚಿಕೊಂಡ ಶಿವಣ್ಣ

‘ಇನ್ನು ಕೆಲವೇ ಗಂಟೆಗಳಲ್ಲಿ ಇನ್ನೊಂದು ಸರ್ಪ್ರೈಸ್​ ಕಾದಿದೆ. ಅಪ್ಪು ಐ ಲವ್​ ಯೂ’ ಎಂದು ಶಿವರಾಜ್​ಕುಮಾರ್​ ಹೇಳಿದ್ದಾರೆ.

ಸಂಕ್ರಾಂತಿ ಹಬ್ಬದಲ್ಲಿ ಪುನೀತ್​ ರಾಜ್​ಕುಮಾರ್​ ನೆನಪು; ಫ್ಯಾನ್ಸ್​ ಜೊತೆ ಹೊಸ ಸುದ್ದಿ ಹಂಚಿಕೊಂಡ ಶಿವಣ್ಣ
ಶಿವರಾಜ್​ಕುಮಾರ್​, ಬೈರಾಗಿ ಪೋಸ್ಟರ್​, ಪುನೀತ್​ ರಾಜ್​ಕುಮಾರ್
TV9 Web
| Updated By: ಮದನ್​ ಕುಮಾರ್​|

Updated on: Jan 15, 2022 | 1:33 PM

Share

ವರ್ಷದ ಮೊದಲ ಹಬ್ಬ ಸಂಕ್ರಾಂತಿ. ಈ ಬಾರಿ ಕೊರೊನಾ ಹಾವಳಿ ನಡುವೆ ಸಿಂಪಲ್​ ಆಗಿ ಹಬ್ಬ ಆಚರಿಸಲಾಗುತ್ತಿದೆ. ನೈಟ್​ ಕರ್ಫ್ಯೂ, ವೀಕೆಂಡ್​​ ಕರ್ಫ್ಯೂ ಕಾರಣಗಳಿಂದ ಕನ್ನಡದಲ್ಲಿ ಯಾವುದೇ ಸಿನಿಮಾ ರಿಲೀಸ್​ ಆಗಿಲ್ಲ. ಹಾಗಾಗಿ ಸಂಕ್ರಾಂತಿಯ (Sankranti 2022) ಈ ಸಂದರ್ಭದಲ್ಲಿ ಕನ್ನಡ ಚಿತ್ರರಂಗದಲ್ಲಿ ಹೇಳಿಕೊಳ್ಳುವಂತಹ ಕಳೆ ಇಲ್ಲ. ಅದರ ನಡುವೆಯೂ ಭರವಸೆಯ ಬೆಳಕನ್ನು ಹುಡುಕುತ್ತ ಮುನ್ನಡೆಯಲೇ ಬೇಕಾಗಿದೆ. ನಟ ಶಿವರಾಜ್​ಕುಮಾರ್​​ (Shivarajkumar) ಅವರು ಎಲ್ಲರಿಗೂ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದಾರೆ. ಈ ವೇಳೆ ಪುನೀತ್​ ರಾಜ್​ಕುಮಾರ್​  (Puneeth Rajkumar) ಅವರನ್ನು ಶಿವಣ್ಣ ನೆನಪು ಮಾಡಿಕೊಂಡಿದ್ದಾರೆ. ಜೊತೆಗೊಂದು ಗುಡ್​ ನ್ಯೂಸ್​ ಸಹ ನೀಡಿದ್ದಾರೆ. ಶಿವರಾಜ್​ಕುಮಾರ್​ ನಟನೆಯ ‘ಬೈರಾಗಿ’ ಚಿತ್ರದ ಶೂಟಿಂಗ್​ ಮಗಿದಿರುವುದೇ ಆ ಸಿಹಿ ಸುದ್ದಿ. ಶೀಘ್ರದಲ್ಲೇ ಈ ಸಿನಿಮಾದ ಟೀಸರ್​ ಕೂಡ ರಿಲೀಸ್​ ಆಗಲಿದೆ ಎಂದು ಶಿವಣ್ಣ ಹೇಳಿದ್ದಾರೆ. ಒಂದು ಸರ್ಪ್ರೈಸ್​ ಕೂಡ ಇದೆ ಅಂತ ಅವರು ತಿಳಿಸಿದ್ದಾರೆ.

‘ಪ್ರತಿಯೊಬ್ಬರಿಗೂ ಸಂಕ್ರಾಂತಿ ಹಬ್ಬದ ಶುಭಾಶಯಗಳು. ಬೈರಾಗಿ ಸಿನಿಮಾದ ಶೂಟಿಂಗ್ ಮುಕ್ತಾಯ ಆಯ್ತು. ಆದಷ್ಟು ಬೇಗ ನಿಮ್ಮ ಮುಂದೆ ಬರಲಿದೆ. ಈ ವರ್ಷದ ಮೊದಲ ಬೈರಾಗಿ ಪೋಸ್ಟರ್​ ಅನ್ನು ನನ್ನ ಪೇಜ್​ನಿಂದ ರಿಲೀಸ್​ ಮಾಡುತ್ತಿದ್ದೇನೆ. ನೋಡಿ ಆನಂದಿಸಿ. ಇನ್ನು ಕೆಲವೇ ಗಂಟೆಗಳಲ್ಲಿ ಇನ್ನೊಂದು ಸರ್ಪ್ರೈಸ್​ ಕಾದಿದೆ. ಅಪ್ಪು ಐ ಲವ್​ ಯೂ’ ಎಂದು ಶಿವರಾಜ್​ಕುಮಾರ್​ ಹೇಳಿದ್ದಾರೆ.

​ಬೈರಾಗಿ ಸಿನಿಮಾದಲ್ಲಿ ಶಿವರಾಜ್​ಕುಮಾರ್​ ಜೊತೆ ಡಾಲಿ ಧನಂಜಯ್​ ಕೂಡ ಕಾಣಿಸಿಕೊಳ್ಳಲಿರುವುದು ವಿಶೇಷ. ‘ಟಗರು’ ಸಿನಿಮಾ ನಂತರ ಇವರಿಬ್ಬರ ಕಾಂಬಿನೇಷನ್​ ಮೇಲೆ ಪ್ರೇಕ್ಷಕರಿಗೆ ನಿರೀಕ್ಷೆ ಹೆಚ್ಚಿದೆ. ಕಾಲಿವುಡ್​ ಮೂಲದ ನಿರ್ದೇಶಕ ವಿಜಯ್​ ಮಿಲ್ಟನ್​ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಮೊದಲ ಲಾಕ್​ಡೌನ್​ ಮುಗಿದ ಬಳಿಕ ‘ಬೈರಾಗಿ’ ಲಾಂಚ್ ಆಗಿತ್ತು. ಈಗ ಶೂಟಿಂಗ್​ ಪೂರ್ಣಗೊಳಿಸಿಕೊಂಡಿದೆ.

ಕೃಷ್ಣ ಸಾರ್ಥಕ್​ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಸಂಕ್ರಾಂತಿ ಪ್ರಯುಕ್ತ ಬಿಡುಗಡೆ ಆಗಿರುವ ಹೊಸ ಪೋಸ್ಟರ್ ಸಖತ್​ ವೈರಲ್​ ಆಗುತ್ತಿದೆ. ಯಶ್​ ಶಿವಕುಮಾರ್​, ಅಂಜಲಿ, ಪೃಥ್ವಿ ಅಂಬರ್​ ಮುಂತಾದ ಕಲಾವಿದರು ಈ ಸಿನಿಮಾದಲ್ಲಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ‘ಬೈರಾಗಿ’ ಚಿತ್ರ ಹೈಪ್​ ಸೃಷ್ಟಿ ಮಾಡಿದೆ. ಆದಷ್ಟು ಬೇಗ ಈ ಸಿನಿಮಾವನ್ನು ನೋಡಲು ಫ್ಯಾನ್ಸ್​ ಕಾದಿದ್ದಾರೆ.​

ಇದನ್ನೂ ಓದಿ:

ಪುನೀತ್​ ಒಂದು ಹೃದಯ, ಆತ ಎಲ್ಲರ ಹೃದಯದಲ್ಲೂ ಬೆರೆತು ಹೋಗಿದ್ದಾನೆ; ತಮ್ಮನನ್ನು ನೆನೆದು ಭಾವುಕರಾದ ನಟ ಶಿವರಾಜ್​ಕುಮಾರ್

ಪುನೀತ್​ಗೆ ತಮಿಳುನಾಡು ವಿಧಾನಸಭೆ ಅಧಿವೇಶನದಲ್ಲಿ ಗೌರವ; ಮೊದಲ ದಿನವೇ ಅಪ್ಪು ಬಗ್ಗೆ ಮಾತು

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು