AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ಫೈಟ್​ ಅಲ್ಲ, ಗೇಮ್ ಅಷ್ಟೇ’; ಕೆಸಿಸಿ ಕಪ್​ಗೆ ರೆಡಿ ಆದ ಶಿವರಾಜ್​ಕುಮಾರ್

ಕೆಸಿಸಿ ನಡೆಯುವಾಗ ಒಂದಷ್ಟು ಹೀರೋಗಳು ಬರುವುದಿಲ್ಲ. ಇದಕ್ಕೆ ಹಲವು ಕಾರಣಗಳು ಇರುತ್ತವೆ. ಈ ಬಗ್ಗೆ ಯಾವಾಗಲೂ ಪ್ರಶ್ನೆ ಎದುರಾಗುತ್ತಲೇ ಇರುತ್ತದೆ. ಶಿವಣ್ಣ ಈ ಬಗ್ಗೆ ಮಾತನಾಡಿದ್ದಾರೆ.

‘ಇದು ಫೈಟ್​ ಅಲ್ಲ, ಗೇಮ್ ಅಷ್ಟೇ’; ಕೆಸಿಸಿ ಕಪ್​ಗೆ ರೆಡಿ ಆದ ಶಿವರಾಜ್​ಕುಮಾರ್
ಶಿವಣ್ಣ
ರಾಜೇಶ್ ದುಗ್ಗುಮನೆ
|

Updated on: Dec 15, 2023 | 10:26 AM

Share

ಕೆಸಿಸಿ (KCC) ಕಪ್​ನ ಮೂರನೇ ಸೀಸನ್ ಆರಂಭಕ್ಕೆ ದಿನ ಗಣನೆ ಶುರುವಾಗಿದೆ. ಚಿತ್ರರಂಗದ ಅನೇಕರು ಇದರಲ್ಲಿ ಭಾಗಿ ಆಗುತ್ತಾರೆ. ದೊಡ್ಡ ಪರದೆ ಮೇಲೆ ಅಬ್ಬರಿಸುವ ಕಲಾವಿದರು ಮೈದಾನದಲ್ಲಿ ಕ್ರಿಕೆಟ್​ ಆಡುವುದನ್ನು ನೋಡಲು ಫ್ಯಾನ್ಸ್ ಕೂಡ ಕಾದಿರುತ್ತಾರೆ. ಕೆಲವು ಹೀರೋಗಳು ಇದಕ್ಕೆ ಪ್ರಾಕ್ಟಿಸ್ ಮಾಡುತ್ತಿದ್ದಾರೆ. ಶಿವರಾಜ್​ಕುಮಾರ್ ಅವರು ಇಂದು (ಡಿಸೆಂಬರ್ 15) ಮುಂಜಾನೆಯೇ ಮೈದಾನಕ್ಕೆ ಇಳಿದಿದ್ದಾರೆ. ಅವರು ಕ್ರಿಕೆಟ್ ಪ್ರಾಕ್ಟಿಸ್ ಮಾಡಿದ್ದಾರೆ. ಆಟದ ಮಧ್ಯೆ ಬಿಡುವು ಮಾಡಿಕೊಂಡು ಗೇಮ್ ಬಗ್ಗೆ ಒಂದಷ್ಟು ವಿಚಾರಗಳನ್ನು ಅವರು ಟಿವಿ9 ಕನ್ನಡದ ಜೊತೆ ಹಂಚಿಕೊಂಡಿದ್ದಾರೆ.

ಎಲ್ಲರೂ ಬರೋಕೆ ಆಗಲ್ಲ..

ಕೆಸಿಸಿ ನಡೆಯುವಾಗ ಒಂದಷ್ಟು ಹೀರೋಗಳು ಬರುವುದಿಲ್ಲ. ಇದಕ್ಕೆ ಹಲವು ಕಾರಣಗಳು ಇರುತ್ತವೆ. ಈ ಬಗ್ಗೆ ಯಾವಾಗಲೂ ಪ್ರಶ್ನೆ ಎದುರಾಗುತ್ತಲೇ ಇರುತ್ತದೆ. ಶಿವಣ್ಣ ಈ ಬಗ್ಗೆ ಮಾತನಾಡಿದ್ದಾರೆ. ‘ಎಲ್ಲರೂ ಅವರದ್ದೇ ಆದ ಕೆಲಸದಲ್ಲಿ ಬ್ಯುಸಿ ಇರ್ತಾರೆ. ಅವರಿಗೆ ಒತ್ತಾಯ ಮಾಡೋಕೆ ಆಗಲ್ಲ. ಹಿರಿಯ ನಟನಾಗಿ ನಾವು ಸಪೋರ್ಟ್ ಮಾಡಬೇಕು. ಹಾಗಾಗಿ ಬಂದಿದ್ದೀನಿ. ನಾವು ಎಲ್ಲರನ್ನೂ ಸಪೋರ್ಟ್ ಮಾಡುತ್ತೇವೆ. ಎಲ್ಲರಿಗೂ ಸಿನಿಮಾ ಪ್ರಮೋಷನ್​, ಶೂಟಿಂಗ್ ಇರುತ್ತದೆ. ಹೀಗಾಗಿ ಕೆಲವರಿಗೆ ಬರೋಕೆ ಆಗಲ್ಲ’ ಎಂದಿದ್ದಾರೆ ಶಿವಣ್ಣ.

ಕ್ರಿಕೆಟ್, ಶೂಟಿಂಗ್ ಎರಡೂ ಒಂದೇ..

ಶಿವರಾಜ್​ಕುಮಾರ್ ಅವರು ಕ್ರಿಕೆಟ್​ನ ಇಷ್ಟಪಡುತ್ತಾರೆ. ಅವರಿಗೆ ಶೂಟಿಂಗ್ ಹಾಗೂ ಕ್ರಿಕೆಟ್​ ಎರಡರ ಮಧ್ಯೆ ಸಾಮ್ಯತೆ ಕಾಣಿಸಿದೆ. ‘ಶೂಟಿಂಗ್ ಹಾಗೂ ಕ್ರಿಕೆಟ್ ಎರಡೂ ನನಗೆ ಮೈದಾನನೇ. ಎರಡಕ್ಕೂ ಸಿದ್ಧತೆ ಬೇಕು. ಕ್ರಿಕೆಟ್ ಆಡೋದು ಜಾಲಿ ಆಗಿರುತ್ತದೆ. ಸದಾ ಶೂಟಿಂಗ್ ಜಂಜಾಟದಲ್ಲಿ ಇರ್ತೀವಿ. 10 ದಿನ ಎಂಟರ್​ಟೇನ್​ಮೆಂಟ್ ಇರುತ್ತದೆ. ಎಲ್ಲಾ ಕಲಾವಿದರ ಜೊತೆ ಬೆರೆಯಲು ಒಂದು ಒಳ್ಳೆಯ ವೇದಿಕೆ. ಅಂತಾರಾಷ್ಟ್ರೀಯ ಪ್ಲೇಯರ್​ಗಳು ಬರುತ್ತಿರುವುದು ಖುಷಿ ಇದೆ’ ಎಂದು ಶಿವಣ್ಣ ಹೇಳಿದ್ದಾರೆ.

ಇದನ್ನೂ ಓದಿ: ರಮ್ಯಾ, ಡಾಲಿ ಧನಂಜಯ್​ ಜೊತೆ ‘ಉತ್ತರಕಾಂಡ’ ಚಿತ್ರತಂಡಕ್ಕೆ ಸೇರ್ಪಡೆ ಆದ ಶಿವರಾಜ್​ಕುಮಾರ್​

ಇದು ಗೇಮ್ ಅಷ್ಟೇ

ಶಿವಣ್ಣ ಹಾಗೂ ಸುದೀಪ್ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಇದೆ. ಇಬ್ಬರೂ ಮ್ಯಾಚ್​ನಲ್ಲಿ ಎದುರು ಬದುರಾಗುತ್ತಿದ್ದಾರೆ. ಈ ಬಗ್ಗೆ ಶಿವಣ್ಣ ಮಾತನಾಡಿದ್ದಾರೆ. ‘ಇದು ಗೇಮ್ ಅಷ್ಟೇ. ಗೇಮ್ ಎಂದು ಬಂದಾಗ ಎಲ್ಲರೂ ಎಲ್ಲರ ಜೊತೆ ಆಡಬೇಕು. ಇದು ಫೈಟ್​ ಅಲ್ಲ. ಜನರಿಗೆ ಈ ಬಗ್ಗೆ ಕುತೂಹಲ ಇರುತ್ತದೆ. ಇದು ಅಪೋಸಿಷನ್ ಎಂಬುದಕ್ಕಿಂತ ಇದೊಂದು ಗೇಮ್’ ಎಂದಿದ್ದಾರೆ ಶಿವಣ್ಣ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?