AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ಫೈಟ್​ ಅಲ್ಲ, ಗೇಮ್ ಅಷ್ಟೇ’; ಕೆಸಿಸಿ ಕಪ್​ಗೆ ರೆಡಿ ಆದ ಶಿವರಾಜ್​ಕುಮಾರ್

ಕೆಸಿಸಿ ನಡೆಯುವಾಗ ಒಂದಷ್ಟು ಹೀರೋಗಳು ಬರುವುದಿಲ್ಲ. ಇದಕ್ಕೆ ಹಲವು ಕಾರಣಗಳು ಇರುತ್ತವೆ. ಈ ಬಗ್ಗೆ ಯಾವಾಗಲೂ ಪ್ರಶ್ನೆ ಎದುರಾಗುತ್ತಲೇ ಇರುತ್ತದೆ. ಶಿವಣ್ಣ ಈ ಬಗ್ಗೆ ಮಾತನಾಡಿದ್ದಾರೆ.

‘ಇದು ಫೈಟ್​ ಅಲ್ಲ, ಗೇಮ್ ಅಷ್ಟೇ’; ಕೆಸಿಸಿ ಕಪ್​ಗೆ ರೆಡಿ ಆದ ಶಿವರಾಜ್​ಕುಮಾರ್
ಶಿವಣ್ಣ
ರಾಜೇಶ್ ದುಗ್ಗುಮನೆ
|

Updated on: Dec 15, 2023 | 10:26 AM

Share

ಕೆಸಿಸಿ (KCC) ಕಪ್​ನ ಮೂರನೇ ಸೀಸನ್ ಆರಂಭಕ್ಕೆ ದಿನ ಗಣನೆ ಶುರುವಾಗಿದೆ. ಚಿತ್ರರಂಗದ ಅನೇಕರು ಇದರಲ್ಲಿ ಭಾಗಿ ಆಗುತ್ತಾರೆ. ದೊಡ್ಡ ಪರದೆ ಮೇಲೆ ಅಬ್ಬರಿಸುವ ಕಲಾವಿದರು ಮೈದಾನದಲ್ಲಿ ಕ್ರಿಕೆಟ್​ ಆಡುವುದನ್ನು ನೋಡಲು ಫ್ಯಾನ್ಸ್ ಕೂಡ ಕಾದಿರುತ್ತಾರೆ. ಕೆಲವು ಹೀರೋಗಳು ಇದಕ್ಕೆ ಪ್ರಾಕ್ಟಿಸ್ ಮಾಡುತ್ತಿದ್ದಾರೆ. ಶಿವರಾಜ್​ಕುಮಾರ್ ಅವರು ಇಂದು (ಡಿಸೆಂಬರ್ 15) ಮುಂಜಾನೆಯೇ ಮೈದಾನಕ್ಕೆ ಇಳಿದಿದ್ದಾರೆ. ಅವರು ಕ್ರಿಕೆಟ್ ಪ್ರಾಕ್ಟಿಸ್ ಮಾಡಿದ್ದಾರೆ. ಆಟದ ಮಧ್ಯೆ ಬಿಡುವು ಮಾಡಿಕೊಂಡು ಗೇಮ್ ಬಗ್ಗೆ ಒಂದಷ್ಟು ವಿಚಾರಗಳನ್ನು ಅವರು ಟಿವಿ9 ಕನ್ನಡದ ಜೊತೆ ಹಂಚಿಕೊಂಡಿದ್ದಾರೆ.

ಎಲ್ಲರೂ ಬರೋಕೆ ಆಗಲ್ಲ..

ಕೆಸಿಸಿ ನಡೆಯುವಾಗ ಒಂದಷ್ಟು ಹೀರೋಗಳು ಬರುವುದಿಲ್ಲ. ಇದಕ್ಕೆ ಹಲವು ಕಾರಣಗಳು ಇರುತ್ತವೆ. ಈ ಬಗ್ಗೆ ಯಾವಾಗಲೂ ಪ್ರಶ್ನೆ ಎದುರಾಗುತ್ತಲೇ ಇರುತ್ತದೆ. ಶಿವಣ್ಣ ಈ ಬಗ್ಗೆ ಮಾತನಾಡಿದ್ದಾರೆ. ‘ಎಲ್ಲರೂ ಅವರದ್ದೇ ಆದ ಕೆಲಸದಲ್ಲಿ ಬ್ಯುಸಿ ಇರ್ತಾರೆ. ಅವರಿಗೆ ಒತ್ತಾಯ ಮಾಡೋಕೆ ಆಗಲ್ಲ. ಹಿರಿಯ ನಟನಾಗಿ ನಾವು ಸಪೋರ್ಟ್ ಮಾಡಬೇಕು. ಹಾಗಾಗಿ ಬಂದಿದ್ದೀನಿ. ನಾವು ಎಲ್ಲರನ್ನೂ ಸಪೋರ್ಟ್ ಮಾಡುತ್ತೇವೆ. ಎಲ್ಲರಿಗೂ ಸಿನಿಮಾ ಪ್ರಮೋಷನ್​, ಶೂಟಿಂಗ್ ಇರುತ್ತದೆ. ಹೀಗಾಗಿ ಕೆಲವರಿಗೆ ಬರೋಕೆ ಆಗಲ್ಲ’ ಎಂದಿದ್ದಾರೆ ಶಿವಣ್ಣ.

ಕ್ರಿಕೆಟ್, ಶೂಟಿಂಗ್ ಎರಡೂ ಒಂದೇ..

ಶಿವರಾಜ್​ಕುಮಾರ್ ಅವರು ಕ್ರಿಕೆಟ್​ನ ಇಷ್ಟಪಡುತ್ತಾರೆ. ಅವರಿಗೆ ಶೂಟಿಂಗ್ ಹಾಗೂ ಕ್ರಿಕೆಟ್​ ಎರಡರ ಮಧ್ಯೆ ಸಾಮ್ಯತೆ ಕಾಣಿಸಿದೆ. ‘ಶೂಟಿಂಗ್ ಹಾಗೂ ಕ್ರಿಕೆಟ್ ಎರಡೂ ನನಗೆ ಮೈದಾನನೇ. ಎರಡಕ್ಕೂ ಸಿದ್ಧತೆ ಬೇಕು. ಕ್ರಿಕೆಟ್ ಆಡೋದು ಜಾಲಿ ಆಗಿರುತ್ತದೆ. ಸದಾ ಶೂಟಿಂಗ್ ಜಂಜಾಟದಲ್ಲಿ ಇರ್ತೀವಿ. 10 ದಿನ ಎಂಟರ್​ಟೇನ್​ಮೆಂಟ್ ಇರುತ್ತದೆ. ಎಲ್ಲಾ ಕಲಾವಿದರ ಜೊತೆ ಬೆರೆಯಲು ಒಂದು ಒಳ್ಳೆಯ ವೇದಿಕೆ. ಅಂತಾರಾಷ್ಟ್ರೀಯ ಪ್ಲೇಯರ್​ಗಳು ಬರುತ್ತಿರುವುದು ಖುಷಿ ಇದೆ’ ಎಂದು ಶಿವಣ್ಣ ಹೇಳಿದ್ದಾರೆ.

ಇದನ್ನೂ ಓದಿ: ರಮ್ಯಾ, ಡಾಲಿ ಧನಂಜಯ್​ ಜೊತೆ ‘ಉತ್ತರಕಾಂಡ’ ಚಿತ್ರತಂಡಕ್ಕೆ ಸೇರ್ಪಡೆ ಆದ ಶಿವರಾಜ್​ಕುಮಾರ್​

ಇದು ಗೇಮ್ ಅಷ್ಟೇ

ಶಿವಣ್ಣ ಹಾಗೂ ಸುದೀಪ್ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಇದೆ. ಇಬ್ಬರೂ ಮ್ಯಾಚ್​ನಲ್ಲಿ ಎದುರು ಬದುರಾಗುತ್ತಿದ್ದಾರೆ. ಈ ಬಗ್ಗೆ ಶಿವಣ್ಣ ಮಾತನಾಡಿದ್ದಾರೆ. ‘ಇದು ಗೇಮ್ ಅಷ್ಟೇ. ಗೇಮ್ ಎಂದು ಬಂದಾಗ ಎಲ್ಲರೂ ಎಲ್ಲರ ಜೊತೆ ಆಡಬೇಕು. ಇದು ಫೈಟ್​ ಅಲ್ಲ. ಜನರಿಗೆ ಈ ಬಗ್ಗೆ ಕುತೂಹಲ ಇರುತ್ತದೆ. ಇದು ಅಪೋಸಿಷನ್ ಎಂಬುದಕ್ಕಿಂತ ಇದೊಂದು ಗೇಮ್’ ಎಂದಿದ್ದಾರೆ ಶಿವಣ್ಣ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು