AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜುಲೈ 1ಕ್ಕೆ ‘ಬೈರಾಗಿ’ ರಿಲೀಸ್​; ದೊಡ್ಡ ಮೊತ್ತಕ್ಕೆ ಸೇಲ್ ಆಯ್ತು ಶಿವಣ್ಣ ಸಿನಿಮಾದ ಟಿವಿ​ ರೈಟ್ಸ್​

ಶಿವರಾಜ್​ಕುಮಾರ್ ಅವರು ಈ ಬಾರಿ 60ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ. ಆದರೆ, ಈ ಬಾರಿ ಅಪ್ಪು ಇಲ್ಲ ಎನ್ನುವ ಕಾರಣಕ್ಕೆ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವ ಆಲೋಚನೆಯಲ್ಲಿ ಅವರು ಇಲ್ಲ. ಈ ಬಗ್ಗೆಯೂ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಜುಲೈ 1ಕ್ಕೆ ‘ಬೈರಾಗಿ’ ರಿಲೀಸ್​; ದೊಡ್ಡ ಮೊತ್ತಕ್ಕೆ ಸೇಲ್ ಆಯ್ತು ಶಿವಣ್ಣ ಸಿನಿಮಾದ ಟಿವಿ​ ರೈಟ್ಸ್​
ಶಿವಣ್ಣ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jun 13, 2022 | 5:18 PM

ಶಿವರಾಜ್​ಕುಮಾರ್ (Shivarajkumar) ನಟನೆಯ ‘ಬೈರಾಗಿ’ ಸಿನಿಮಾ (Bairagee Movie) ರಿಲೀಸ್​ಗೆ ರೆಡಿ ಇದೆ. ಬಹುತೇಕ ಕೆಲಸಗಳನ್ನು ಪೂರ್ಣಗೊಳಿಸಿಕೊಂಡಿರುವ ಟೀಂ ಇಂದು (ಜೂನ್ 13) ಸುದ್ದಿಗೋಷ್ಠಿ ಕರೆದಿದೆ. ಬೆಂಗಳೂರಿನಲ್ಲಿರುವ ಶಿವಣ್ಣನ ಮನೆಯಲ್ಲೇ ಸುದ್ದಿಗೋಷ್ಠಿ ನಡೆದಿದ್ದು ವಿಶೇಷವಾಗಿತ್ತು. ಈ ಕಾರ್ಯಕ್ರಮದಲ್ಲಿ ಸಿನಿಮಾ ರಿಲೀಸ್ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಯಿತು. ದೊಡ್ಡ ಮೊತ್ತಕ್ಕೆ ಟಿವಿ ಹಕ್ಕು ಮಾರಾಟವಾಗಿದೆ ಎನ್ನುವ ಮಾಹಿತಿಯನ್ನು ‘ಬೈರಾಗಿ’ ತಂಡ ಹಂಚಿಕೊಂಡಿದೆ. ಸುದ್ದಿಗೋಷ್ಠಿಯಲ್ಲಿ ಹೊರಬಿದ್ದ ಮಾಹಿತಿಗಳೇನು ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ಶಿವರಾಜ್​ಕುಮಾರ್​ಗೆ ಅಡ್ವಾನ್ಸ್​ ಬರ್ತ್​ಡೇಗೆ ಗಿಫ್ಟ್

ಶಿವರಾಜ್​ಕುಮಾರ್ ಅವರು ಜುಲೈ 12ರಂದು ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ. 11 ದಿನ ಮೊದಲು ಈ ಸಿನಿಮಾ ತೆರೆಗೆ ಬರುತ್ತಿದೆ. ಈ ಬಗ್ಗೆ ನಿರ್ಮಾಪಕ ಕೃಷ್ಣ ಸಾರ್ಥಕ್ ಅವರು ಮಾತನಾಡಿದ್ದಾರೆ. ‘ನಾವು ಹಂಚಿಕೆಯಲ್ಲಿ ಒಂದಷ್ಟು ತಂತ್ರಗಾರಿಕೆ ಮಾಡಿಕೊಂಡಿದ್ದೇವೆ. ಈ ಕಾರಣಕ್ಕೆ ಜುಲೈ 1ರಂದು ಸಿನಿಮಾ ತೆರೆಗೆ ತರುತ್ತಿದ್ದೇವೆ. ಶಿವಣ್ಣ ಅವರಿಗೆ ಇದು ಅಡ್ವಾನ್ಸ್​ ಬರ್ತ್​ಡೇ ಗಿಫ್ಟ್​’ ಎಂದರು ಅವರು.

ಇದನ್ನೂ ಓದಿ
Image
ರವಿಚಂದ್ರನ್​ ಜನ್ಮದಿನ: ಪುತ್ರನ ‘ತ್ರಿವಿಕ್ರಮ’ ಚಿತ್ರದಿಂದ ಬಂತು ವಿಡಿಯೋ ಸಾಂಗ್​​; ಸಾಥ್​ ನೀಡಿದ ಶಿವಣ್ಣ
Image
Yogaraj Bhat: ಶಿವಣ್ಣ- ಪ್ರಭುದೇವ ಕಾಂಬಿನೇಷನ್​ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿರುವ ಯೋಗರಾಜ್ ಭಟ್; ಚಿತ್ರೀಕರಣ ಯಾವಾಗ?
Image
ಸೂಪರ್​ ಹೀರೋ ಆಗ್ತಾರೆ ಶಿವಣ್ಣ; ಹೊಸ ಚಿತ್ರಕ್ಕೆ ‘ಅವನೇ ಶ್ರೀಮನ್ನಾರಾಯಣ’ ಖ್ಯಾತಿಯ ಸಚಿನ್​ ನಿರ್ದೇಶನ
Image
‘ಬೀಸ್ಟ್​’ ನಿರ್ದೇಶಕ ನೆಲ್ಸನ್​ ದಿಲೀಪ್​ ಕುಮಾರ್​ ಸಿನಿಮಾದಲ್ಲಿ ಶಿವರಾಜ್​ಕುಮಾರ್​-ರಜನಿಕಾಂತ್​ ನಟನೆ?

10 ಕೋಟಿಗೆ ಮಾರಾಟವಾಯ್ತು ಟಿವಿ ಹಕ್ಕು

‘ಬೈರಾಗಿ’ ಚಿತ್ರದ ಟಿವಿ ಹಕ್ಕು ಈಗಾಗಲೇ ಮಾರಾಟವಾಗಿದೆ. ಸಿನಿಮಾ ರಿಲೀಸ್​ಗೂ ಮೊದಲೇ ನಿರ್ಮಾಪಕರು ಸೇಫ್ ಆಗಿದ್ದಾರೆ. ಈ ಬಗ್ಗೆ ನಿರ್ಮಾಪಕರು ಮಾಹಿತಿ ಹಂಚಿಕೊಂಡಿದ್ದಾರೆ. ‘ಟಿವಿ ಹಕ್ಕು 10‌ ಕೋಟಿ ರೂಪಾಯಿಗೂ ಹೆಚ್ಚಿನ ಮೊತ್ತಕ್ಕೆ ಸೇಲ್ ಆಗಿದೆ. ರಿಲೀಸ್​​ಗೂ ಮೊದಲೇ ಸೇಫ್ ಆಗಿದ್ದೀವಿ. ಥಿಯೇಟರ್ ಮಾತುಕತೆ ನಡೆಯುತ್ತಿದೆ. ಈ ವಾರ ಅಥವಾ ಮುಂದಿನ ವಾರದಲ್ಲಿ ನಾನು ಲಾಭದಲ್ಲಿ ಇರುತ್ತೇನೆ’ ಎಂದರು ಕೃಷ್ಣ ಸಾರ್ಥಕ್.

ದೊಡ್ಡ ಮಟ್ಟದಲ್ಲಿ ಪ್ರೀ ರಿಲೀಸ್ ಕಾರ್ಯಕ್ರಮ

‘ಚಾಮರಾಜನಗರದಲ್ಲಿ ಜೂನ್ 25ಕ್ಕೆ ಪ್ರೀ ರಿಲೀಸ್ ಇವೆಂಟ್ ನಡೆಯಲಿದೆ. ಅದಕ್ಕೂ ಮೊದಲು ಒಂದು ಬೈಕ್​ ರ‍್ಯಾಲಿ ಇರುತ್ತದೆ. ಜೂನ್​ 24ರಂದು ಬೆಂಗಳೂರಿನಿಂದ ಹೊರಡುತ್ತೇವೆ. ಬೆಂಗಳೂರಿನಿಂದ ರಾಮನಗರಕ್ಕೆ ಹೋಗುತ್ತೇವೆ, ರಾಮನಗರದಿಂದ ಚೆನ್ನಪಟ್ಟಣ, ಮದ್ದೂರು, ಮಂಡ್ಯ ಆ ನಂತರ ಮೈಸೂರು. ಮೈಸೂರಲ್ಲಿ ಸಂಜೆ ಪ್ರೆಸ್​ಮೀಟ್ ಇರುತ್ತದೆ. ಮರುದಿನ (ಜೂನ್ 25) ಚಾಮರಾಜನಗರಕ್ಕೆ ಹೋಗುತ್ತೇವೆ’ ಎಂದು ಶಿವಣ್ಣ ಮಾಹಿತಿ ಹಂಚಿಕೊಂಡರು.

ಇದನ್ನೂ ಓದಿ: ರಜನಿಕಾಂತ್ ಜತೆ ಶಿವಣ್ಣ ನಟನೆ; ವಿಷಯ ಖಚಿತಪಡಿಸಿ ಹೊಸ ಅಪ್​ಡೇಟ್ ನೀಡಿದ ಶಿವರಾಜ್​ಕುಮಾರ್

ಬರ್ತ್​ಡೇ ಆಚರಿಸಿಕೊಳ್ಳುವ ಆಲೋಚನೆ ಇಲ್ಲ

ಶಿವರಾಜ್​ಕುಮಾರ್ ಅವರು ಈ ಬಾರಿ 60ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ. ಆದರೆ, ಈ ಬಾರಿ ಅಪ್ಪು ಇಲ್ಲ ಎನ್ನುವ ಕಾರಣಕ್ಕೆ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವ ಆಲೋಚನೆಯಲ್ಲಿ ಅವರು ಇಲ್ಲ. ಈ ಬಗ್ಗೆಯೂ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಸಿನಿಮಾ ಟೀಂ ವಿವರ

ಇದು ಶಿವರಾಜ್​ಕುಮಾರ್​ ನಟನೆಯ 123ನೇ ಸಿನಿಮಾ. ಇದರಲ್ಲಿ ಅವರು ಡಿಫರೆಂಟ್​ ಗೆಟಪ್​ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹುಲಿ ವೇಷದಲ್ಲಿ ಅಭಿಮಾನಿಗಳಿಗೆ ಮಸ್ತ್​ ಮನರಂಜನೆ ನೀಡಲಿದ್ದಾರೆ. ಅಂಜಲಿ, ಯಶ ಶಿವಕುಮಾರ್​, ಶಶಿ ಕುಮಾರ್​ ಕೂಡ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.  ಕೃಷ್ಣ ಸಾರ್ಥಕ್​ ಅವರು ಬಂಡವಾಳ ಹೂಡಿದ್ದಾರೆ. ಅನೂಪ್​ ಸೀಳಿನ್​ ಸಂಗೀತ ನಿರ್ದೇಶನ, ದೀಪು ಎಸ್​. ಕುಮಾರ್​ ಸಂಕಲನದಲ್ಲಿ ಈ ಸಿನಿಮಾ ತಯಾರಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:08 pm, Mon, 13 June 22

ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ