ಸಣ್ಣ ಡೈಲಾಗ್ ಕೂಡ ಇಲ್ಲದೇ ಕಣ್ಣಲ್ಲೇ ಕಿಚ್ಚು ಹಚ್ಚಿದ ಭೈರತಿ ರಣಗಲ್ ಟೀಸರ್

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ‘ಭೈರತಿ ರಣಗಲ್’ ಕೂಡ ಇದೆ. ನಿರ್ದೇಶಕ ನರ್ತನ್​ ಮತ್ತು ನಟ ಶಿವರಾಜ್​ಕುಮಾರ್ ಅವರ ಕಾಂಬಿನೇಷನ್​ನಲ್ಲಿ ಮೂಡಿಬಂದ ಈ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈಗ ಈ ಚಿತ್ರದ ಹೊಸ ಟೀಸರ್​ ಲಾಂಚ್ ಆಗಿದೆ. ಸಿನಿಮಾ ಬಗ್ಗೆ ಕೌತುಕ ಹೆಚ್ಚಿಸುವಲ್ಲಿ ಈ ಟೀಸರ್​ ಯಶಸ್ವಿ ಆಗಿದೆ. ನ.15ರಂದು ಸಿನಿಮಾ ಬಿಡುಗಡೆ ಆಗಲಿದೆ.

ಸಣ್ಣ ಡೈಲಾಗ್ ಕೂಡ ಇಲ್ಲದೇ ಕಣ್ಣಲ್ಲೇ ಕಿಚ್ಚು ಹಚ್ಚಿದ ಭೈರತಿ ರಣಗಲ್ ಟೀಸರ್
ಶಿವರಾಜ್​ಕುಮಾರ್​

Updated on: Oct 24, 2024 | 7:30 PM

‘ಮಫ್ತಿ’ ಸಿನಿಮಾ ಮೂಲಕ ಮೋಡಿ ಮಾಡಿದ್ದ ನಿರ್ದೇಶಕ ನರ್ತನ್ ಅವರು ಈಗ ‘ಭೈರತಿ ರಣಗಲ್’ ಮೂಲಕ ಪ್ರೇಕ್ಷಕರಿಗೆ ಮಾಸ್​ ಮನರಂಜನೆ ನೀಡಲು ಸಜ್ಜಾಗಿದ್ದಾರೆ. ನವೆಂಬರ್​ 15ರಂದು ‘ಭೈರತಿ ರಣಗಲ್’ ಸಿನಿಮಾ ಅದ್ದೂರಿಯಾಗಿ ತೆರೆಕಾಣಲಿದೆ. ಈಗಾಗಲೇ ಸಿನಿಮಾ ಬಗ್ಗೆ ಭಾರಿ ಹೈಪ್ ಕ್ರಿಯೇಟ್ ಆಗಿದೆ. ಇಂದು (ಅಕ್ಟೋಬರ್​ 24) ಈ ಸಿನಿಮಾದ ಹೊಸದೊಂದು ಟೀಸರ್ ಅನಾವರಣ ಆಗಿದೆ. ಶಿವರಾಜ್​ಕುಮಾರ್​ ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದು, ಸಖತ್​ ಮಾಸ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಮಫ್ತಿ’ ನೋಡಿ ಇಷ್ಟಪಟ್ಟಿದ್ದ ಎಲ್ಲರೂ ಈಗ ‘ಭೈರತಿ ರಣಗಲ್’ ಸಿನಿಮಾವನ್ನು ಕಣ್ತುಂಬಿಕೊಳ್ಳಲು ಕಾಯುತ್ತಿದ್ದಾರೆ.

ಶಿವರಾಜ್​ಕುಮಾರ್​ ಅವರು ‘ಮಫ್ತಿ’ ಸಿನಿಮಾದಲ್ಲಿ ಭೈರತಿ ರಣಗಲ್ ಎಂಬ ಪಾತ್ರ ಮಾಡಿದ್ದರು. ಆ ಪಾತ್ರ ಜನರಿಗೆ ತುಂಬ ಇಷ್ಟ ಆಗಿತ್ತು. ಈಗ ಅದೇ ಪಾತ್ರವನ್ನು ಕೇಂದ್ರವಾಗಿ ಇಟ್ಟುಕೊಂಡು ನರ್ತನ್​ ಅವರು ಕಥೆಯನ್ನು ವಿಸ್ತರಿಸಿದ್ದಾರೆ. ಹಾಗಾಗಿ ಶಿವರಾಜ್​ಕುಮಾರ್​ ಅವರ ಅಭಿಮಾನಿಗಳಿಗೆ ಈ ಸಿನಿಮಾ ಸಖತ್ ಇಷ್ಟ ಆಗಲಿದೆ ಎಂಬ ನಿರೀಕ್ಷೆ ಇದೆ. ಟೀಸರ್​ನಲ್ಲಿ ಮೇಕಿಂಗ್​ ಗುಣಮಟ್ಟ ಗಮನ ಸೆಳೆಯುತ್ತಿದೆ.

‘ಭೈರತಿ ರಣಗಲ್’ ಟೀಸರ್:

ಆನಂದ್​ ಆಡಿಯೋ ಮೂಲಕ ಬಿಡುಗಡೆ ಆಗಿರುವ ಈ ಹೊಸ ಟೀಸರ್​ನಲ್ಲಿ ಶಿವರಾಜ್​ಕುಮಾರ್​ ಅವರು ಒಂದೇ ಒಂದು ಡೈಲಾಗ್​ ಕೂಡ ಹೇಳಿಲ್ಲ. ಹಾಗಿದ್ದರೂ ಕೂಡ ಅವರು ಕಿಚ್ಚು ಹತ್ತಿಸಿದ್ದಾರೆ. ಮಾಸ್​ ಲುಕ್​ನಲ್ಲಿ ಅಬ್ಬರಿಸಿದ್ದಾರೆ. ಸೈಲೆಂಟ್​ ಆಗಿಯೇ ಖಳರ ಎದೆಯಲ್ಲಿ ನಡುಕ ಹುಟ್ಟಿಸುವಂತಹ ಈ ಪಾತ್ರವನ್ನು ನೋಡಲು ಶಿವರಾಜ್​ಕುಮಾರ್​ ಅವರ ಅಭಿಮಾನಿಗಳು ಕಾಯುತ್ತಿದ್ದಾರೆ. ‘ಭೈರತಿ ರಣಗಲ್’ ಸಿನಿಮಾದಲ್ಲಿ ಅನೇಕ ಘಟಾನುಘಟಿ ಕಲಾವಿದರು ನಟಿಸಿದ್ದಾರೆ.

ಇದನ್ನೂ ಓದಿ: ಶಿವರಾಜ್​ಕುಮಾರ್ ಜೊತೆ ಸಣ್ಣ ಪಾತ್ರ ಮಾಡಿದ್ದ ಈ ಕಲಾವಿದ ಈಗ ಬಾಲಿವುಡ್​ನ ಸ್ಟಾರ್ ಹೀರೋ

ಗೀತಾ ಶಿವರಾಜ್​ಕುಮಾರ್​ ಅವರು ‘ಗೀತಾ ಪಿಕ್ಚರ್ಸ್​’ ಮೂಲಕ ‘ಭೈರತಿ ರಣಗಲ್’ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ನವೀನ್​ ಕುಮಾರ್​ ಅವರ ಛಾಯಾಗ್ರಹಣ ಈ ಸಿನಿಮಾಗಿದೆ. ರವಿ ಬಸ್ರೂರು ಅವರು ಸಂಗೀತ ನೀಡಿದ್ದಾರೆ. ರಾಹುಲ್ ಬೋಸ್​, ರುಕ್ಮಿಣಿ ವಸಂತ್, ದೇವರಾಜ್, ಛಾಯಾ ಸಿಂಗ್, ಬಾಬು ಹಿರಣ್ಣಯ್ಯ ಮುಂತಾದವರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ನರ್ತನ್ ಅವರ ಡೈರೆಕ್ಷನ್​ ಮೇಲೆ ಪ್ರೇಕ್ಷಕರಿಗೆ ಭರವಸೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us