AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’, ‘ಸಿಂಗಂ ಅಗೇನ್’ ಜೊತೆ ಸ್ಪರ್ಧೆಗೆ ಇಳಿದ ‘ಭೈರತಿ ರಣಗಲ್’; ಆಗಸ್ಟ್ 15ಕ್ಕೆ ರಿಲೀಸ್

‘ಪುಷ್ಪ 2’ ಚಿತ್ರದ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಈ ಸಿನಿಮಾನ ಕರ್ನಾಟಕದಲ್ಲಿ ದೊಡ್ಡ ಮಟ್ಟದಲ್ಲಿ ರಿಲೀಸ್ ಮಾಡಲು ನಿರ್ಮಾಪಕರು ಪ್ಲ್ಯಾನ್ ಮಾಡಿದ್ದರು. ಆದರೆ, ಈಗ ಶಿವರಾಜ್​ಕುಮಾರ್ ಸಿನಿಮಾ ರಿಲೀಸ್ ಆಗುತ್ತಿದ್ದು ಭರ್ಜರಿ ಸ್ಪರ್ಧೆ ಏರ್ಪಡುತ್ತಿದೆ.

‘ಪುಷ್ಪ 2’, ‘ಸಿಂಗಂ ಅಗೇನ್’ ಜೊತೆ ಸ್ಪರ್ಧೆಗೆ ಇಳಿದ ‘ಭೈರತಿ ರಣಗಲ್’; ಆಗಸ್ಟ್ 15ಕ್ಕೆ ರಿಲೀಸ್
ಶಿವರಾಜ್​ಕುಮಾರ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Mar 10, 2024 | 8:38 AM

Share

ಶಿವರಾಜ್​ಕುಮಾರ್ (Shivarajkumar) ನಟನೆಯ ‘ಭೈರತಿ ರಣಗಲ್’ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ಸಿನಿಮಾ ‘ಮಫ್ತಿ’ ಚಿತ್ರದ ಪ್ರೀಕ್ವೆಲ್ ಎನ್ನು ಕಾರಣಕ್ಕೆ ಫ್ಯಾನ್ಸ್ ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಶಿವರಾಜ್​ಕುಮಾರ್, ರುಕ್ಮಿಣಿ ವಸಂತ್ ಮೊದಲಾದವರು ಪಾತ್ರವರ್ಗದಲ್ಲಿದ್ದಾರೆ. ಈ ಚಿತ್ರಕ್ಕೆ ‘ಮಫ್ತಿ’ ಖ್ಯಾತಿಯ ನರ್ತನ್ ನಿರ್ದೇಶನ ಮಾಡುತ್ತಿದ್ದಾರೆ. ಗೀತಾ ಶಿವರಾಜ್​ಕುಮಾರ್ ಅವರೇ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿರುವುದರಿಂದ ನಿರೀಕ್ಷೆ ಹೆಚ್ಚಿದೆ. ಈಗ ಚಿತ್ರಕ್ಕೆ ರಿಲೀಸ್ ಡೇಟ್ ಅನೌನ್ಸ್ ಆಗಿದೆ. ಆಗಸ್ಟ್ 15ರಂದು ಚಿತ್ರ ಬಿಡುಗಡೆ ಆಗಲಿದೆ.

ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆ ಇದೆ. ಈ ಬಾರಿ ಈ ದಿನ ಶುಕ್ರವಾರವೇ ಬಂದಿದೆ. ಸಿನಿಮಾ ಮಂದಿಗೆ ಶುಕ್ರವಾರ ಎಂದರೆ ವಿಶೇಷ ದಿನ. ಸರ್ಕಾರಿ ರಜೆಯ ದಿನ ಕೂಡ ಅಂದು ಬಂದಿರುವುದರಿಂದ ಅನೇಕರು ಸಿನಿಮಾ ರಿಲೀಸ್ ಮಾಡಲು ಆಸಕ್ತಿ ತೋರಿಸುತ್ತಿದ್ದಾರೆ. ಈಗಾಗಲೇ ತೆಲುಗಿನಲ್ಲಿ ‘ಪುಷ್ಪ 2’ ಚಿತ್ರ ರಿಲೀಸ್ ಮಾಡುವುದಾಗಿ ಘೋಷಣೆ ಮಾಡಲಾಗಿದೆ. ಈಗ ಇದರ ಜೊತೆ ಶಿವಣ್ಣ ನಟನೆಯ ‘ಭೈರತಿ ರಣಗಲ್’ ಕೂಡ ರಿಲೀಸ್ ಆಗಲಿದೆ.

‘ಮಫ್ತಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಹಾಗೂ ಶ್ರೀಮುರಳಿ ನಟಿಸಿದ್ದರು. ‘ಭೈರತಿ ರಣಗಲ್’ ಪಾತ್ರ ಮಾಡಿದ್ದು ಶಿವರಾಜ್​ಕುಮಾರ್. ಖಡಕ್ ಆಗಿ ಪಾತ್ರ ಮೂಡಿ ಬಂದಿತ್ತು. ಹೊರ ಜಗತ್ತಿಗೆ ಹಣ ಮಾಡುವ, ಮೋಸ ಮಾಡುವ ವ್ಯಕ್ತಿಯಂತೆ ಕಾಣುವ ಈ ವ್ಯಕ್ತಿಯ ನಿಜವಾದ ವ್ಯಕ್ತಿತ್ವ ನಂತರದಲ್ಲಿ ಅನಾವರಣ ಆಗುತ್ತಾ ಹೋಗುತ್ತದೆ. ಆ ವ್ಯಕ್ತಿಯ ಹಿಂದಿನ ಕಥೆ ‘ಭೈರತಿ ರಣಗಲ್’ ಚಿತ್ರದಲ್ಲಿ ಇರಲಿದೆ.

‘ಪುಷ್ಪ 2’ ಚಿತ್ರದ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಈ ಸಿನಿಮಾನ ಕರ್ನಾಟಕದಲ್ಲಿ ದೊಡ್ಡ ಮಟ್ಟದಲ್ಲಿ ರಿಲೀಸ್ ಮಾಡಲು ನಿರ್ಮಾಪಕರು ಪ್ಲ್ಯಾನ್ ಮಾಡಿದ್ದರು. ಆದರೆ, ಈಗ ಶಿವರಾಜ್​ಕುಮಾರ್ ಸಿನಿಮಾ ರಿಲೀಸ್ ಆಗುತ್ತಿದ್ದು ಭರ್ಜರಿ ಸ್ಪರ್ಧೆ ಏರ್ಪಡುತ್ತಿದೆ. ಅಜಯ್​ ದೇವಗನ್​, ರಣವೀರ್ ಸಿಂಗ್ ಮೊದಲಾದವರ ನಟನೆಯ, ರೋಹಿತ್​ ಶೆಟ್ಟಿ ನಿರ್ದೇಶನದ ‘ಸಿಂಗಂ ಅಗೇನ್​’ ಸಿನಿಮಾ ಈಗಾಗಲೇ ರೇಸ್​ನಲ್ಲಿದೆ. ಈ ಚಿತ್ರ ಕೂಡ ಕೂಡ ಆಗಸ್ಟ್​ 15ರಂದು ಬಿಡುಗಡೆ ಆಗಲಿದೆ. ಇನ್ನು ದಳಪತಿ ವಿಜಯ್ ನಟನೆಯ ‘ದಿ ಗ್ರೇಟೆಸ್ಟ್​ ಆಫ್​ ಆಲ್​ ಟೈಮ್​’ ಸಿನಿಮಾ ಕೂಡ ಆಗಸ್ಟ್​ 15ರಂದು ಬಿಡುಗಡೆಯಾಗುವ ಸಾಧ್ಯತೆ ಇದೆ. ವೆಂಕಟ್​ ಪ್ರಭು ನಿರ್ದೇಶನ ಮಾಡುತ್ತಿರುವ ಈ ಸಿನಿಮಾದಲ್ಲಿ ಸೈನ್ಸ್​ ಫಿಕ್ಷನ್​ ಕಥೆ ಇರಲಿದೆ.

ಇದನ್ನೂ ಓದಿ: ರಜನಿಕಾಂತ್-ರಾಣಾ ದಗ್ಗುಬಾಟಿ ಒಟ್ಟಿಗೆ ನೋಡಲು ಹೋದ ಫ್ಯಾನ್ಸ್​ಗೆ ನಿರಾಸೆ

ರಜನಿಕಾಂತ್​ ಕೂಡ ಆಗಸ್ಟ್​ 15ರ ರೇಸ್​ನಲ್ಲಿ ಸೇರಿದರೂ ಅಚ್ಚರಿ ಏನಿಲ್ಲ. ‘ವೆಟ್ಟೈಯನ್​’ ಸಿನಿಮಾದಲ್ಲಿ ರಜನಿಕಾಂತ್​ ಅಭಿನಯಿಸುತ್ತಿದ್ದಾರೆ. ಈ ಸಿನಿಮಾ ಆಗಸ್ಟ್​ ತಿಂಗಳಲ್ಲೇ ಬಿಡುಗಡೆ ಆಗಲಿದೆ ಎಂದು ಕೆಲವು ಕಡೆಗಳಲ್ಲಿ ವರದಿ ಆಗಿದೆ. ಇದರಿಂದ ರೇಸ್ ಮತ್ತಷ್ಟು ಟಫ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ