AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಭೈರತಿ ರಣಗಲ್’ ಚಿತ್ರಕ್ಕೆ ಶೂಟಿಂಗ್ ಶುರು; ನರ್ತನ್-ಶಿವಣ್ಣ ಕಾಂಬಿನೇಷನ್ ಬಗ್ಗೆ ಇದೆ ನಿರೀಕ್ಷೆ

‘ಭೈರತಿ ರಣಗಲ್’ ಸಿನಿಮಾ ‘ಮಫ್ತಿ’ ಪ್ರೀಕ್ವೆಲ್ ಆಗಿ ಮೂಡಿ ಬರಲಿದೆ. ಭೈರತಿ ರಣಗಲ್ ಹೇಗಿದ್ದ? ಆತನ ಹಿನ್ನೆಲೆ ಏನು ಎಂಬುದು ಈ ಸಿನಿಮಾದಲ್ಲಿ ತಿಳಿಯಲಿದೆ.

‘ಭೈರತಿ ರಣಗಲ್’ ಚಿತ್ರಕ್ಕೆ ಶೂಟಿಂಗ್ ಶುರು; ನರ್ತನ್-ಶಿವಣ್ಣ ಕಾಂಬಿನೇಷನ್ ಬಗ್ಗೆ ಇದೆ ನಿರೀಕ್ಷೆ
ನರ್ತನ್-ಶಿವಣ್ಣ
Mangala RR
| Updated By: ರಾಜೇಶ್ ದುಗ್ಗುಮನೆ|

Updated on: Aug 02, 2023 | 2:29 PM

Share

ನಟ ಶಿವರಾಜ್​ಕುಮಾರ್ (Shivarjkumar) ಹಾಗೂ ನಿರ್ದೇಶಕ ನರ್ತನ್ ಕಾಂಬಿನೇಷನ್​ನಲ್ಲಿ ಮೂಡಿಬಂದ ‘ಮಫ್ತಿ’ ಸಿನಿಮಾ (Mufti Movie) ಸೂಪರ್ ಹಿಟ್ ಆಯಿತು. ಈ ಚಿತ್ರದಲ್ಲಿ ಭೈರತಿ ರಣಗಲ್ ಹೆಸರಿನ ಪಾತ್ರ ಮಾಡುವ ಮೂಲಕ ಶಿವರಾಜ್​ಕುಮಾರ್ ಗಮನ ಸೆಳೆದರು. ಈಗ ಇವರ ಕಾಂಬಿನೇಷನ್​ನಲ್ಲಿ ‘ಭೈರತಿ ರಣಗಲ್’ ಸಿನಿಮಾ ಮೂಡಿಬರುತ್ತಿದೆ. ಕೆಲ ತಿಂಗಳ ಹಿಂದೆ ಈ ಚಿತ್ರಕ್ಕೆ ಮುಹೂರ್ತ ನೆರವೇರಿತ್ತು. ಇಂದು (ಆಗಸ್ಟ್ 2) ಚಿತ್ರಕ್ಕೆ ಶೂಟಿಂಗ್ ಆರಂಭ ಆಗಿದೆ. ಸಿನಿಮಾ ಯಾವಾಗ ರಿಲೀಸ್ ಆಗಲಿದೆ ಎನ್ನುವ ನಿರೀಕ್ಷೆ ಅಭಿಮಾನಿಗಳಲ್ಲಿ ಮೂಡಿದೆ.

2017ರಲ್ಲಿ ‘ಮಫ್ತಿ’ ಸಿನಿಮಾ ರಿಲೀಸ್ ಆಯಿತು. ಶ್ರೀಮುರಳಿ ಹಾಗೂ ಶಿವಣ್ಣ ಕಾಂಬಿನೇಷನ್ ಕೆಲಸ ಮಾಡಿತು. ಈ ಚಿತ್ರದ ಮೊದಲಾರ್ಧದಲ್ಲಿ ಶ್ರೀಮುರಳಿ ಹೈಲೈಟ್ ಆದರೆ, ಎರಡನೇ ಭಾಗದಲ್ಲಿ ಶಿವರಾಜ್​ಕುಮಾರ್ ಪಾತ್ರ ಗಮನ ಸೆಳೆದಿತ್ತು. ‘ಭೈರತಿ ರಣಗಲ್’ ಸಿನಿಮಾ ‘ಮಫ್ತಿ’ ಪ್ರೀಕ್ವೆಲ್ ಆಗಿ ಮೂಡಿ ಬರಲಿದೆ. ಭೈರತಿ ರಣಗಲ್ ಹೇಗಿದ್ದ? ಆತನ ಹಿನ್ನೆಲೆ ಏನು ಎಂಬುದು ಈ ಸಿನಿಮಾದಲ್ಲಿ ತಿಳಿಯಲಿದೆ.

‘ಗೀತಾ ಪಿಕ್ಚರ್ಸ್’ ಮೂಲಕ ಗೀತಾ ಶಿವರಾಜ್​ಕುಮಾರ್ ಅವರು ‘ಭೈರತಿ ರಣಗಲ್’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಇವರ ಪ್ರೊಡಕ್ಷನ್ ಹೌಸ್​ನ ಚೊಚ್ಚಲ ಸಿನಿಮಾ ‘ವೇದ’ ಮೆಚ್ಚುಗೆ ಪಡೆಯಿತು. ಇದು ಶಿವರಾಜ್​ಕುಮಾರ್ ನಟನೆಯ 125ನೇ ಸಿನಿಮಾ ಎಂಬ ಕಾರಣಕ್ಕೂ ವಿಶೇಷ ಎನಿಸಿಕೊಂಡಿದೆ. ‘ಭೈರತಿ ರಣಗಲ್’ ಶೂಟಿಂಗ್ ಬೇಗ ಪೂರ್ಣಗೊಳಿಸಿ ಸಿನಿಮಾನ ಆದಷ್ಟು ಬೇಗೆ ತೆರೆಗೆ ತರುವ ಆಲೋಚನೆ ಚಿತ್ರತಂಡದ್ದು. ‘ಮಫ್ತಿ’ ಚಿತ್ರದ ಪ್ರೀಕ್ವೆಲ್ ಆಗಿ ‘ಭೈರತಿ ರಣಗಲ್’ ಸಿನಿಮಾ ಮೂಡಿಬರುತ್ತಿರುವುದರಿಂದ ಪಾತ್ರವರ್ಗದಲ್ಲಿ ಬದಲಾವಣೆ ಆಗಲಿದೆ. ಶ್ರೀಮುರಳಿ ಅವರು ಈ ಚಿತ್ರದಲ್ಲಿ ನಟಿಸುತ್ತಿಲ್ಲ ಎನ್ನುವ ವಿಚಾರವನ್ನು ನಿರ್ದೇಶಕ ನರ್ತನ್ ಅವರು ಈ ಮೊದಲೇ ಖಚಿತಪಡಿಸಿದ್ದರು.

ಇದನ್ನೂ ಓದಿ: ನಂದಿನಿ ಉತ್ಪನ್ನಗಳ ರಾಯಭಾರಿ ಆದ ನಟ ಶಿವರಾಜ್​ಕುಮಾರ್

ಶಿವರಾಜ್​ಕುಮಾರ್ ಅವರು ಹಲವು ಸಿನಿಮಾ ಕೆಲಸಗಳಲ್ಲಿ ನಟಿಸುತ್ತಿದ್ದಾರೆ. ರಜನಿಕಾಂತ್​-ಶಿವಣ್ಣ ಒಟ್ಟಾಗಿ ನಟಿಸಿದ ತಮಿಳು ಸಿನಿಮಾ ‘ಜೈಲರ್​’ ಆಗಸ್ಟ್ 10ರಂದು ವಿಶ್ವಾದ್ಯಂತ ರಿಲೀಸ್ ಆಗುತ್ತಿದೆ. ಈ ಚಿತ್ರದಲ್ಲಿ ಶಿವರಾಜ್​ಕುಮಾರ್ ಪಾತ್ರ 10 ನಿಮಿಷ ಇರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ