AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಭೈರತಿ ರಣಗಲ್’ ಚಿತ್ರಕ್ಕೆ ಶೂಟಿಂಗ್ ಶುರು; ನರ್ತನ್-ಶಿವಣ್ಣ ಕಾಂಬಿನೇಷನ್ ಬಗ್ಗೆ ಇದೆ ನಿರೀಕ್ಷೆ

‘ಭೈರತಿ ರಣಗಲ್’ ಸಿನಿಮಾ ‘ಮಫ್ತಿ’ ಪ್ರೀಕ್ವೆಲ್ ಆಗಿ ಮೂಡಿ ಬರಲಿದೆ. ಭೈರತಿ ರಣಗಲ್ ಹೇಗಿದ್ದ? ಆತನ ಹಿನ್ನೆಲೆ ಏನು ಎಂಬುದು ಈ ಸಿನಿಮಾದಲ್ಲಿ ತಿಳಿಯಲಿದೆ.

‘ಭೈರತಿ ರಣಗಲ್’ ಚಿತ್ರಕ್ಕೆ ಶೂಟಿಂಗ್ ಶುರು; ನರ್ತನ್-ಶಿವಣ್ಣ ಕಾಂಬಿನೇಷನ್ ಬಗ್ಗೆ ಇದೆ ನಿರೀಕ್ಷೆ
ನರ್ತನ್-ಶಿವಣ್ಣ
Mangala RR
| Edited By: |

Updated on: Aug 02, 2023 | 2:29 PM

Share

ನಟ ಶಿವರಾಜ್​ಕುಮಾರ್ (Shivarjkumar) ಹಾಗೂ ನಿರ್ದೇಶಕ ನರ್ತನ್ ಕಾಂಬಿನೇಷನ್​ನಲ್ಲಿ ಮೂಡಿಬಂದ ‘ಮಫ್ತಿ’ ಸಿನಿಮಾ (Mufti Movie) ಸೂಪರ್ ಹಿಟ್ ಆಯಿತು. ಈ ಚಿತ್ರದಲ್ಲಿ ಭೈರತಿ ರಣಗಲ್ ಹೆಸರಿನ ಪಾತ್ರ ಮಾಡುವ ಮೂಲಕ ಶಿವರಾಜ್​ಕುಮಾರ್ ಗಮನ ಸೆಳೆದರು. ಈಗ ಇವರ ಕಾಂಬಿನೇಷನ್​ನಲ್ಲಿ ‘ಭೈರತಿ ರಣಗಲ್’ ಸಿನಿಮಾ ಮೂಡಿಬರುತ್ತಿದೆ. ಕೆಲ ತಿಂಗಳ ಹಿಂದೆ ಈ ಚಿತ್ರಕ್ಕೆ ಮುಹೂರ್ತ ನೆರವೇರಿತ್ತು. ಇಂದು (ಆಗಸ್ಟ್ 2) ಚಿತ್ರಕ್ಕೆ ಶೂಟಿಂಗ್ ಆರಂಭ ಆಗಿದೆ. ಸಿನಿಮಾ ಯಾವಾಗ ರಿಲೀಸ್ ಆಗಲಿದೆ ಎನ್ನುವ ನಿರೀಕ್ಷೆ ಅಭಿಮಾನಿಗಳಲ್ಲಿ ಮೂಡಿದೆ.

2017ರಲ್ಲಿ ‘ಮಫ್ತಿ’ ಸಿನಿಮಾ ರಿಲೀಸ್ ಆಯಿತು. ಶ್ರೀಮುರಳಿ ಹಾಗೂ ಶಿವಣ್ಣ ಕಾಂಬಿನೇಷನ್ ಕೆಲಸ ಮಾಡಿತು. ಈ ಚಿತ್ರದ ಮೊದಲಾರ್ಧದಲ್ಲಿ ಶ್ರೀಮುರಳಿ ಹೈಲೈಟ್ ಆದರೆ, ಎರಡನೇ ಭಾಗದಲ್ಲಿ ಶಿವರಾಜ್​ಕುಮಾರ್ ಪಾತ್ರ ಗಮನ ಸೆಳೆದಿತ್ತು. ‘ಭೈರತಿ ರಣಗಲ್’ ಸಿನಿಮಾ ‘ಮಫ್ತಿ’ ಪ್ರೀಕ್ವೆಲ್ ಆಗಿ ಮೂಡಿ ಬರಲಿದೆ. ಭೈರತಿ ರಣಗಲ್ ಹೇಗಿದ್ದ? ಆತನ ಹಿನ್ನೆಲೆ ಏನು ಎಂಬುದು ಈ ಸಿನಿಮಾದಲ್ಲಿ ತಿಳಿಯಲಿದೆ.

‘ಗೀತಾ ಪಿಕ್ಚರ್ಸ್’ ಮೂಲಕ ಗೀತಾ ಶಿವರಾಜ್​ಕುಮಾರ್ ಅವರು ‘ಭೈರತಿ ರಣಗಲ್’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಇವರ ಪ್ರೊಡಕ್ಷನ್ ಹೌಸ್​ನ ಚೊಚ್ಚಲ ಸಿನಿಮಾ ‘ವೇದ’ ಮೆಚ್ಚುಗೆ ಪಡೆಯಿತು. ಇದು ಶಿವರಾಜ್​ಕುಮಾರ್ ನಟನೆಯ 125ನೇ ಸಿನಿಮಾ ಎಂಬ ಕಾರಣಕ್ಕೂ ವಿಶೇಷ ಎನಿಸಿಕೊಂಡಿದೆ. ‘ಭೈರತಿ ರಣಗಲ್’ ಶೂಟಿಂಗ್ ಬೇಗ ಪೂರ್ಣಗೊಳಿಸಿ ಸಿನಿಮಾನ ಆದಷ್ಟು ಬೇಗೆ ತೆರೆಗೆ ತರುವ ಆಲೋಚನೆ ಚಿತ್ರತಂಡದ್ದು. ‘ಮಫ್ತಿ’ ಚಿತ್ರದ ಪ್ರೀಕ್ವೆಲ್ ಆಗಿ ‘ಭೈರತಿ ರಣಗಲ್’ ಸಿನಿಮಾ ಮೂಡಿಬರುತ್ತಿರುವುದರಿಂದ ಪಾತ್ರವರ್ಗದಲ್ಲಿ ಬದಲಾವಣೆ ಆಗಲಿದೆ. ಶ್ರೀಮುರಳಿ ಅವರು ಈ ಚಿತ್ರದಲ್ಲಿ ನಟಿಸುತ್ತಿಲ್ಲ ಎನ್ನುವ ವಿಚಾರವನ್ನು ನಿರ್ದೇಶಕ ನರ್ತನ್ ಅವರು ಈ ಮೊದಲೇ ಖಚಿತಪಡಿಸಿದ್ದರು.

ಇದನ್ನೂ ಓದಿ: ನಂದಿನಿ ಉತ್ಪನ್ನಗಳ ರಾಯಭಾರಿ ಆದ ನಟ ಶಿವರಾಜ್​ಕುಮಾರ್

ಶಿವರಾಜ್​ಕುಮಾರ್ ಅವರು ಹಲವು ಸಿನಿಮಾ ಕೆಲಸಗಳಲ್ಲಿ ನಟಿಸುತ್ತಿದ್ದಾರೆ. ರಜನಿಕಾಂತ್​-ಶಿವಣ್ಣ ಒಟ್ಟಾಗಿ ನಟಿಸಿದ ತಮಿಳು ಸಿನಿಮಾ ‘ಜೈಲರ್​’ ಆಗಸ್ಟ್ 10ರಂದು ವಿಶ್ವಾದ್ಯಂತ ರಿಲೀಸ್ ಆಗುತ್ತಿದೆ. ಈ ಚಿತ್ರದಲ್ಲಿ ಶಿವರಾಜ್​ಕುಮಾರ್ ಪಾತ್ರ 10 ನಿಮಿಷ ಇರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ