Shivarajkumar: ‘ಭಜರಂಗಿ 2’ ರಿಲೀಸ್​ ಡೇಟ್​ ಮುಂದೂಡಿಕೆ; ಕೊರೊನಾ ಭೀತಿಯಿಂದ ಚಿತ್ರತಂಡದ ನಿರ್ಧಾರ

Bhajarangi 2 release date: ‘ಭಜರಂಗಿ 2’ ಮೇಲೆ ಜನರಿಗೆ ಹೆಚ್ಚು ನಿರೀಕ್ಷೆ ಇದೆ. ಆದರೆ ಸಿನಿಮಾ ಕಣ್ತುಂಬಿಕೊಳ್ಳಲು ಪ್ರೇಕ್ಷಕರಿಗೆ ಕೊರೊನಾ ಅಡ್ಡಿಯಾಗಿದೆ. ಚಿತ್ರದ ರಿಲೀಸ್​ ದಿನಾಂಕ ಮುಂದೂಡಿಕೆ ಆಗಿದೆ.

Shivarajkumar: ‘ಭಜರಂಗಿ 2’ ರಿಲೀಸ್​ ಡೇಟ್​ ಮುಂದೂಡಿಕೆ; ಕೊರೊನಾ ಭೀತಿಯಿಂದ ಚಿತ್ರತಂಡದ ನಿರ್ಧಾರ
‘ಭಜರಂಗಿ 2’ ರಿಲೀಸ್​ ಡೇಟ್​ ಮುಂದೂಡಿಕೆ
Follow us
| Updated By: ಮದನ್​ ಕುಮಾರ್​

Updated on: Aug 30, 2021 | 12:24 PM

ಚಿತ್ರರಂಗವನ್ನು ಕೊರೊನಾ ವೈರಸ್​ ಕಾಡುತ್ತಿದೆ. ಮೊದಲನೇ ಅಲೆ ಆರಂಭ ಆದಾಗಿನಿಂದ ಇಂದಿನವರೆಗೆ ಸಿನಿಮಾರಂಗದ ವ್ಯವಹಾರದ ಮೇಲೆ ಕೊವಿಡ್​ ಪೆಟ್ಟು ಕೊಡುತ್ತಲೇ ಇದೆ. ಇನ್ನೇನು ಎರಡನೇ ಅಲೆ ಶಮನ ಆಗುತ್ತಿದೆ ಎಂದುಕೊಂಡಿದ್ದ ಹಲವು ಸಿನಿಮಾ ತಂಡಗಳು ರಿಲೀಸ್​ ಡೇಟ್​ ಘೋಷಿಸಿಕೊಂಡಿದ್ದವು. ಶಿವರಾಜ್​ಕುಮಾರ್​ (Shivarajkumar) ನಟನೆಯ ಬಹುನಿರೀಕ್ಷಿತ ‘ಭಜರಂಗಿ 2’ (Bhajarangi 2) ಸಿನಿಮಾ ಸೆ.10ರಂದು ಬಿಡುಗಡೆಯಾಗಲು ಸಜ್ಜಾಗಿತ್ತು. ಆದರೆ ಈಗ ಕೊರೊನಾ ಭೀತಿಗೆ ಚಿತ್ರತಂಡ ನಿರ್ಧಾರ ಬದಲಿಸಿದೆ. ಸೆ.10ರಂದು ಸಿನಿಮಾ ರಿಲೀಸ್​ ಮಾಡುವುದು ಬೇಡ ಎಂದು ನಿರ್ಮಾಪಕರು ತೀರ್ಮಾನಿಸಿದ್ದಾರೆ. ಈ ಬಗ್ಗೆ ಶಿವರಾಜ್​ಕುಮಾರ್​ ಹೇಳಿಕೆ ನೀಡಿದ್ದಾರೆ.

‘ಸೆ.1ರಂದು ನಮ್ಮ ಚಿತ್ರದ ಟ್ರೇಲರ್​ ಬಿಡುಗಡೆ ಆಗಬೇಕಿತ್ತು. ಸೆ.10 ಸಿನಿಮಾ ರಿಲೀಸ್​ ಆಗಬೇಕಿತ್ತು. ಆದರೆ ಅದು ಸಾಧ್ಯವಾಗುತ್ತಿಲ್ಲ. ಅದಕ್ಕೆ ಕಾರಣ ನಿಮಗೂ ಗೊತ್ತು. ಕೊರೊನಾ ಕೇಸ್​ಗಳು ಜಾಸ್ತಿ ಆಗುತ್ತಿವೆ. ವೀಕೆಂಡ್​ ಲಾಕ್​ಡೌನ್​ ಮತ್ತು ನೈಟ್​ ಕರ್ಫ್ಯೂ ಇರುವುದರಿಂದ ಸೆ.10ರಂದು ಸಿನಿಮಾ ಬಿಡುಗಡೆ ಮಾಡಲು ಆಗುತ್ತಿಲ್ಲ’ ಎಂದು ಶಿವರಾಜ್​ಕುಮಾರ್​ ಹೇಳಿದ್ದಾರೆ.

‘ಆದಷ್ಟು ಬೇಗ ಹೊಸ ರಿಲೀಸ್​ ದಿನಾಂಕವನ್ನು ನಾವು ನಿಮಗೆ ತಿಳಿಸುತ್ತೇವೆ. ತುಂಬಾ ಲೇಟ್​ ಆಗುವುದಿಲ್ಲ. ಆದಷ್ಟು ಬೇಗ ರಿಲೀಸ್​ ಮಾಡಬೇಕು ಎಂದು ನಾವು ಪ್ರಯತ್ನಿಸುತ್ತಿದ್ದೇವೆ. ಶೇ.100ರಷ್ಟು ಚಿತ್ರಮಂದಿರ ತುಂಬಿದ್ದಾಗಲೇ ಜನರು ಸಿನಿಮಾದ ಮಜವನ್ನು ಅನುಭವಿಸಬಹುದು. ತಡ ಆಗುತ್ತಿರುವುದಕ್ಕೆ ದಯವಿಟ್ಟು ಬೇಜಾರು ಮಾಡಿಕೊಳ್ಳಬೇಡಿ. ಟ್ರೇಲರ್​ ರಿಲೀಸ್​ ಮಾಡಿ, ಅದರಲ್ಲೇ ಹೊಸ ರಿಲೀಸ್​ ಡೇಟ್​​ ತಿಳಿಸುತ್ತೇವೆ’ ಎಂದು ಶಿವಣ್ಣ ಹೇಳಿದ್ದಾರೆ.

‘ಈ ಸಿನಿಮಾ ಸೆಟ್ಟೇರಿದಾಗಿನಿಂದಲೂ ಎಷ್ಟೇ ಅಡೆತಡೆಗಳು ಬಂದರೂ ಆಂಜನೇಯ ಸ್ವಾಮಿ ಕೃಪೆಯಿಂದ ಮುನ್ನುಗ್ಗಿಕೊಂಡು ಹೋಗುತ್ತಿದ್ದೇವೆ. ನಾವು ಪಟ್ಟ ಕಷ್ಟವನ್ನು ನೀವು ಅನುಭವಿಸಬಾರದು. ನೀವು ಆರಾಮಾಗಿ ಬಂದು ಸಿನಿಮಾ ನೋಡಬೇಕು. ನಾವು ಪಟ್ಟಿರುವ ಕಷ್ಟಕ್ಕೆ ನೀವು ಪ್ರತಿಫಲ ನೀಡುತ್ತೀರಿ ಎಂಬ ಭರವಸೆ ಇದೆ. ರಿಲೀಸ್​ ದಿನಾಂಕ ಮುಂದೂಡಿಕೆ ಆಗಿದ್ದಕ್ಕೆ ಇಡೀ ತಂಡದಿಂದ ಮತ್ತೊಮ್ಮೆ ಕ್ಷಮೆ ಕೇಳುತ್ತೇನೆ’ ಎಂದು ಅಭಿಮಾನಿಗಳ ಜೊತೆ ಶಿವರಾಜ್​ಕುಮಾರ್​ ಮಾಹಿತಿ ಹಂಚಿಕೊಂಡಿದ್ದಾರೆ.

ಎ. ಹರ್ಷ ನಿರ್ದೇಶನದ ಈ ಚಿತ್ರಕ್ಕೆ ಜಯಣ್ಣ ಮತ್ತು ಭೋಗೇಂದ್ರ ಬಂಡವಾಳ ಹೂಡಿದ್ದಾರೆ. ‘ಭಜರಂಗಿ’ ಸೂಪರ್​ ಹಿಟ್​ ಆಗಿದ್ದರಿಂದ ‘ಭಜರಂಗಿ 2’ ಮೇಲೆ ಜನರಿಗೆ ಹೆಚ್ಚು ನಿರೀಕ್ಷೆ ಇದೆ. ಆದರೆ ಸಿನಿಮಾ ಕಣ್ತುಂಬಿಕೊಳ್ಳಲು ಪ್ರೇಕ್ಷಕರಿಗೆ ಕೊರೊನಾ ಅಡ್ಡಿಯಾಗಿದೆ. ಹೊಸ ರಿಲೀಸ್​ ಡೇಟ್​ಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ.

ಇದನ್ನೂ ಓದಿ:

ಯುವ ನಟನಿಗೆ ಮಚ್ಚು ಹಿಡಿಯುವ ಪಾಠ ಮಾಡಿದ ಶಿವರಾಜ್​ಕುಮಾರ್​

ಕೆಎಸ್​ ಈಶ್ವರಪ್ಪ ಜೊತೆ ಶಿವರಾಜ್​ಕುಮಾರ್​ ನಡೆಸಿದ ಮಾತುಕತೆ ಏನು? ಇಲ್ಲಿದೆ ವಿಡಿಯೋ

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್