Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivarajkumar: ‘ಭಜರಂಗಿ 2’ ರಿಲೀಸ್​ ಡೇಟ್​ ಮುಂದೂಡಿಕೆ; ಕೊರೊನಾ ಭೀತಿಯಿಂದ ಚಿತ್ರತಂಡದ ನಿರ್ಧಾರ

Bhajarangi 2 release date: ‘ಭಜರಂಗಿ 2’ ಮೇಲೆ ಜನರಿಗೆ ಹೆಚ್ಚು ನಿರೀಕ್ಷೆ ಇದೆ. ಆದರೆ ಸಿನಿಮಾ ಕಣ್ತುಂಬಿಕೊಳ್ಳಲು ಪ್ರೇಕ್ಷಕರಿಗೆ ಕೊರೊನಾ ಅಡ್ಡಿಯಾಗಿದೆ. ಚಿತ್ರದ ರಿಲೀಸ್​ ದಿನಾಂಕ ಮುಂದೂಡಿಕೆ ಆಗಿದೆ.

Shivarajkumar: ‘ಭಜರಂಗಿ 2’ ರಿಲೀಸ್​ ಡೇಟ್​ ಮುಂದೂಡಿಕೆ; ಕೊರೊನಾ ಭೀತಿಯಿಂದ ಚಿತ್ರತಂಡದ ನಿರ್ಧಾರ
‘ಭಜರಂಗಿ 2’ ರಿಲೀಸ್​ ಡೇಟ್​ ಮುಂದೂಡಿಕೆ
Follow us
TV9 Web
| Updated By: ಮದನ್​ ಕುಮಾರ್​

Updated on: Aug 30, 2021 | 12:24 PM

ಚಿತ್ರರಂಗವನ್ನು ಕೊರೊನಾ ವೈರಸ್​ ಕಾಡುತ್ತಿದೆ. ಮೊದಲನೇ ಅಲೆ ಆರಂಭ ಆದಾಗಿನಿಂದ ಇಂದಿನವರೆಗೆ ಸಿನಿಮಾರಂಗದ ವ್ಯವಹಾರದ ಮೇಲೆ ಕೊವಿಡ್​ ಪೆಟ್ಟು ಕೊಡುತ್ತಲೇ ಇದೆ. ಇನ್ನೇನು ಎರಡನೇ ಅಲೆ ಶಮನ ಆಗುತ್ತಿದೆ ಎಂದುಕೊಂಡಿದ್ದ ಹಲವು ಸಿನಿಮಾ ತಂಡಗಳು ರಿಲೀಸ್​ ಡೇಟ್​ ಘೋಷಿಸಿಕೊಂಡಿದ್ದವು. ಶಿವರಾಜ್​ಕುಮಾರ್​ (Shivarajkumar) ನಟನೆಯ ಬಹುನಿರೀಕ್ಷಿತ ‘ಭಜರಂಗಿ 2’ (Bhajarangi 2) ಸಿನಿಮಾ ಸೆ.10ರಂದು ಬಿಡುಗಡೆಯಾಗಲು ಸಜ್ಜಾಗಿತ್ತು. ಆದರೆ ಈಗ ಕೊರೊನಾ ಭೀತಿಗೆ ಚಿತ್ರತಂಡ ನಿರ್ಧಾರ ಬದಲಿಸಿದೆ. ಸೆ.10ರಂದು ಸಿನಿಮಾ ರಿಲೀಸ್​ ಮಾಡುವುದು ಬೇಡ ಎಂದು ನಿರ್ಮಾಪಕರು ತೀರ್ಮಾನಿಸಿದ್ದಾರೆ. ಈ ಬಗ್ಗೆ ಶಿವರಾಜ್​ಕುಮಾರ್​ ಹೇಳಿಕೆ ನೀಡಿದ್ದಾರೆ.

‘ಸೆ.1ರಂದು ನಮ್ಮ ಚಿತ್ರದ ಟ್ರೇಲರ್​ ಬಿಡುಗಡೆ ಆಗಬೇಕಿತ್ತು. ಸೆ.10 ಸಿನಿಮಾ ರಿಲೀಸ್​ ಆಗಬೇಕಿತ್ತು. ಆದರೆ ಅದು ಸಾಧ್ಯವಾಗುತ್ತಿಲ್ಲ. ಅದಕ್ಕೆ ಕಾರಣ ನಿಮಗೂ ಗೊತ್ತು. ಕೊರೊನಾ ಕೇಸ್​ಗಳು ಜಾಸ್ತಿ ಆಗುತ್ತಿವೆ. ವೀಕೆಂಡ್​ ಲಾಕ್​ಡೌನ್​ ಮತ್ತು ನೈಟ್​ ಕರ್ಫ್ಯೂ ಇರುವುದರಿಂದ ಸೆ.10ರಂದು ಸಿನಿಮಾ ಬಿಡುಗಡೆ ಮಾಡಲು ಆಗುತ್ತಿಲ್ಲ’ ಎಂದು ಶಿವರಾಜ್​ಕುಮಾರ್​ ಹೇಳಿದ್ದಾರೆ.

‘ಆದಷ್ಟು ಬೇಗ ಹೊಸ ರಿಲೀಸ್​ ದಿನಾಂಕವನ್ನು ನಾವು ನಿಮಗೆ ತಿಳಿಸುತ್ತೇವೆ. ತುಂಬಾ ಲೇಟ್​ ಆಗುವುದಿಲ್ಲ. ಆದಷ್ಟು ಬೇಗ ರಿಲೀಸ್​ ಮಾಡಬೇಕು ಎಂದು ನಾವು ಪ್ರಯತ್ನಿಸುತ್ತಿದ್ದೇವೆ. ಶೇ.100ರಷ್ಟು ಚಿತ್ರಮಂದಿರ ತುಂಬಿದ್ದಾಗಲೇ ಜನರು ಸಿನಿಮಾದ ಮಜವನ್ನು ಅನುಭವಿಸಬಹುದು. ತಡ ಆಗುತ್ತಿರುವುದಕ್ಕೆ ದಯವಿಟ್ಟು ಬೇಜಾರು ಮಾಡಿಕೊಳ್ಳಬೇಡಿ. ಟ್ರೇಲರ್​ ರಿಲೀಸ್​ ಮಾಡಿ, ಅದರಲ್ಲೇ ಹೊಸ ರಿಲೀಸ್​ ಡೇಟ್​​ ತಿಳಿಸುತ್ತೇವೆ’ ಎಂದು ಶಿವಣ್ಣ ಹೇಳಿದ್ದಾರೆ.

‘ಈ ಸಿನಿಮಾ ಸೆಟ್ಟೇರಿದಾಗಿನಿಂದಲೂ ಎಷ್ಟೇ ಅಡೆತಡೆಗಳು ಬಂದರೂ ಆಂಜನೇಯ ಸ್ವಾಮಿ ಕೃಪೆಯಿಂದ ಮುನ್ನುಗ್ಗಿಕೊಂಡು ಹೋಗುತ್ತಿದ್ದೇವೆ. ನಾವು ಪಟ್ಟ ಕಷ್ಟವನ್ನು ನೀವು ಅನುಭವಿಸಬಾರದು. ನೀವು ಆರಾಮಾಗಿ ಬಂದು ಸಿನಿಮಾ ನೋಡಬೇಕು. ನಾವು ಪಟ್ಟಿರುವ ಕಷ್ಟಕ್ಕೆ ನೀವು ಪ್ರತಿಫಲ ನೀಡುತ್ತೀರಿ ಎಂಬ ಭರವಸೆ ಇದೆ. ರಿಲೀಸ್​ ದಿನಾಂಕ ಮುಂದೂಡಿಕೆ ಆಗಿದ್ದಕ್ಕೆ ಇಡೀ ತಂಡದಿಂದ ಮತ್ತೊಮ್ಮೆ ಕ್ಷಮೆ ಕೇಳುತ್ತೇನೆ’ ಎಂದು ಅಭಿಮಾನಿಗಳ ಜೊತೆ ಶಿವರಾಜ್​ಕುಮಾರ್​ ಮಾಹಿತಿ ಹಂಚಿಕೊಂಡಿದ್ದಾರೆ.

ಎ. ಹರ್ಷ ನಿರ್ದೇಶನದ ಈ ಚಿತ್ರಕ್ಕೆ ಜಯಣ್ಣ ಮತ್ತು ಭೋಗೇಂದ್ರ ಬಂಡವಾಳ ಹೂಡಿದ್ದಾರೆ. ‘ಭಜರಂಗಿ’ ಸೂಪರ್​ ಹಿಟ್​ ಆಗಿದ್ದರಿಂದ ‘ಭಜರಂಗಿ 2’ ಮೇಲೆ ಜನರಿಗೆ ಹೆಚ್ಚು ನಿರೀಕ್ಷೆ ಇದೆ. ಆದರೆ ಸಿನಿಮಾ ಕಣ್ತುಂಬಿಕೊಳ್ಳಲು ಪ್ರೇಕ್ಷಕರಿಗೆ ಕೊರೊನಾ ಅಡ್ಡಿಯಾಗಿದೆ. ಹೊಸ ರಿಲೀಸ್​ ಡೇಟ್​ಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ.

ಇದನ್ನೂ ಓದಿ:

ಯುವ ನಟನಿಗೆ ಮಚ್ಚು ಹಿಡಿಯುವ ಪಾಠ ಮಾಡಿದ ಶಿವರಾಜ್​ಕುಮಾರ್​

ಕೆಎಸ್​ ಈಶ್ವರಪ್ಪ ಜೊತೆ ಶಿವರಾಜ್​ಕುಮಾರ್​ ನಡೆಸಿದ ಮಾತುಕತೆ ಏನು? ಇಲ್ಲಿದೆ ವಿಡಿಯೋ

ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ