AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಭಜರಂಗಿ 2’ ಟ್ರೇಲರ್​ ಬಿಡುಗಡೆಗೂ ಮುನ್ನ ಧೂಳೆಬ್ಬಿಸಿದ ಪೋಸ್ಟರ್​; ಚಿತ್ರದ ಮೇಲೆ ಹೆಚ್ಚಿತು ನಿರೀಕ್ಷೆ

Bhajarangi 2: ಕೆಲವೇ ದಿನಗಳ ಹಿಂದೆ ಹಿರಿಯ ನಟಿ ಶ್ರುತಿ, ಖಳನಟ ಲೋಕಿ ಅವರ ಪೋಸ್ಟರ್​ಗಳನ್ನು ‘ಭಜರಂಗಿ 2’ ಚಿತ್ರತಂಡ ಬಿಡುಗಡೆ ಮಾಡಿತ್ತು. ಈಗ ಮತ್ತೋರ್ವ ಖಳನಟ ಚೆಲುವರಾಜು ಅವರ ಪೋಸ್ಟರ್​ ಹೊರಬಂದಿದೆ.

‘ಭಜರಂಗಿ 2’ ಟ್ರೇಲರ್​ ಬಿಡುಗಡೆಗೂ ಮುನ್ನ ಧೂಳೆಬ್ಬಿಸಿದ ಪೋಸ್ಟರ್​; ಚಿತ್ರದ ಮೇಲೆ ಹೆಚ್ಚಿತು ನಿರೀಕ್ಷೆ
‘ಭಜರಂಗಿ 2’ ಚಿತ್ರದ ಪೋಸ್ಟರ್​
TV9 Web
| Edited By: |

Updated on: Oct 19, 2021 | 12:31 PM

Share

ನಿರ್ದೇಶಕ ಎ. ಹರ್ಷ ಮತ್ತು ನಟ ಶಿವರಾಜ್​ಕುಮಾರ್​ ಕಾಂಬಿನೇಷನ್​ನಲ್ಲಿ ಮೂಡಿಬಂದಿರುವ ‘ಭಜರಂಗಿ 2’ ಚಿತ್ರದ ಬಗ್ಗೆ ಅಭಿಮಾನಿಗಳು ಸಿಕ್ಕಾಪಟ್ಟೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈಗಾಗಲೇ ಈ ಸಿನಿಮಾದ ಟೀಸರ್​ ಮತ್ತು ಪೋಸ್ಟರ್​ಗಳು ಭಾರಿ ಹೈಪ್​ ಸೃಷ್ಟಿಸಿವೆ. ಅ.29ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಬುಧವಾರ (ಅ.20) ಟ್ರೇಲರ್​​ ಬಿಡುಗಡೆಗೆ ದಿನಾಂಕ ನಿಗದಿ ಮಾಡಲಾಗಿದೆ. ಸೂಪರ್​ ನ್ಯಾಚುರಲ್​ ಅಂಶಗಳನ್ನು ಹೊಂದಿರುವ ಈ ಸಿನಿಮಾ ಹೇಗೆ ಮೂಡಿಬಂದಿದೆ ಎಂಬುದರ ಝಲಕ್​ ಅನ್ನು ಈ ಟ್ರೇಲರ್​ನಲ್ಲಿ ತೋರಿಸಲಾಗುವುದು. ಅದಕ್ಕೂ ಮುನ್ನ ಈ ಚಿತ್ರದ ವಿಲನ್​ ಆರಕ ಪೋಸ್ಟರ್​ ಸಖತ್​ ಗಮನ ಸೆಳೆಯುತ್ತಿದೆ.

ನಾಯಕ ನಟ ಶಿವರಾಜ್​ಕುಮಾರ್​, ನಾಯಕಿ ಭಾವನಾ ಮೆನನ್​ ಮಾತ್ರವಲ್ಲದೇ ಎಲ್ಲ ಪಾತ್ರಗಳ ಪೋಸ್ಟರ್​ಗಳನ್ನು ತುಂಬ ಚೆನ್ನಾಗಿ ವಿನ್ಯಾಸಗೊಳಿಸಲಾಗಿದೆ. ಕೆಲವೇ ದಿನಗಳ ಹಿಂದೆ ಹಿರಿಯ ನಟಿ ಶ್ರುತಿ, ಖಳನಟ ಲೋಕಿ ಅವರ ಪೋಸ್ಟರ್​ಗಳನ್ನು ಬಿಡುಗಡೆ ಮಾಡಲಾಗಿತ್ತು. ಈಗ ಮತ್ತೋರ್ವ ಖಳನಟ ಚೆಲುವರಾಜು ಅವರ ಪೋಸ್ಟರ್​ ಹೊರಬಂದಿದೆ. ಟ್ರೇಲರ್​ ಬಿಡುಗಡೆಗೂ ಒಂದು ದಿನ ಮುನ್ನ ‘ಭಜರಂಗಿ 2’ ಚಿತ್ರತಂಡ ಈ ​ಪೋಸ್ಟರ್​ ಹಂಚಿಕೊಂಡಿದೆ. ಇದರಲ್ಲಿ ವಿಲನ್​ ಆರಕ ಅಬ್ಬರಿಸಿದ್ದಾನೆ. ಅದನ್ನು ನೋಡಿದರೆ ಸಿನಿಪ್ರಿಯರ ಕೌತುಕ ಡಬಲ್​ ಆಗುವುದರಲ್ಲಿ ಸಂಶಯವಿಲ್ಲ.

ಈ ಸಿನಿಮಾ ಅ.29ರಂದು ಬಿಡುಗಡೆ ಆಗಲಿದೆ ಎಂಬ ಸುದ್ದಿ ಹೊರಬೀಳುತ್ತಿದ್ದಂತೆಯೇ ಅಭಿಮಾನಿಗಳು ಅದನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದರು. ಪರಿಣಾಮವಾಗಿ ಟ್ವಿಟರ್​ನಲ್ಲಿ ‘ಭಜರಂಗಿ 2’ ಟ್ರೆಂಡ್​ ಆಗಿತ್ತು. ಮಂಜು ಪಾವಗಡ, ಶಿವರಾಜ್​ ಕೆ. ಆರ್​ ಪೇಟೆ ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಜಯಣ್ಣ ಕಂಬೈನ್ಸ್​ ಬ್ಯಾನರ್​ನಲ್ಲಿ ‘ಭಜರಂಗಿ 2’ ನಿರ್ಮಾಣ ಆಗಿದೆ.

ಬೇರೆಲ್ಲ ಸಿನಿಮಾಗಳಲ್ಲಿ​ ಗೊಂಬೆಯಂತೆ ಕಾಣಿಸಿಕೊಳ್ಳುತ್ತಿದ್ದ ಭಾವನಾ ಮೆನನ್​ ಈ ಚಿತ್ರದಲ್ಲಿ ರಗಡ್​ ಅವತಾರ ತಾಳಿದ್ದಾರೆ. ‘ಚಿಣಿಮಿಣಿಕಿ- ದಿ ಲೇಡಿ ಫೈರ್’ ಎಂಬ ಅಡಿಬರಹದಲ್ಲಿ ನಾಯಕಿ ಭಾವನಾ ಮೆನನ್​ ಪೋಸ್ಟರ್ ಅನ್ನು ಚಿತ್ರತಂಡ ಹಂಚಿಕೊಂಡಿತ್ತು. ಕೇವಲ ಪೋಸ್ಟರ್​ಗಳೇ ಈ ಮಟ್ಟಕ್ಕೆ ಕ್ರೇಜ್​ ಸೃಷ್ಟಿ ಮಾಡಿರುವಾಗ ಇನ್ನು ಟ್ರೇಲರ್​ ಹೇಗಿರಬಹುದು? ಬುಧವಾರ (ಅ.20) ಸಂಜೆ 6.45ಕ್ಕೆ ಟ್ರೇಲರ್​ ಬಿಡುಗಡೆ ಆಗಲಿದೆ. ಈ ಚಿತ್ರಕ್ಕೆ ಅರ್ಜುನ್​ ಜನ್ಯ ಸಂಗೀತ ನಿರ್ದೇಶನ ಮಾಡಿದ್ದಾರೆ. ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ. ಸ್ವಾಮಿ ಜೆ. ಗೌಡ ಛಾಯಾಗ್ರಹಣ, ದೀಪು ಎಸ್​. ಕುಮಾರ್​ ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ.

ಇದನ್ನೂ ಓದಿ:

‘ಚರಂಡಿ ಕ್ಲೀನ್​ ಮಾಡುವವನ ಪಾತ್ರ ಮಾಡ್ತೀನಿ’: ದುನಿಯಾ ವಿಜಯ್​ ನಿರ್ದೇಶನದಲ್ಲಿ ಶಿವಣ್ಣನಿಗೆ ನಟಿಸುವ ಆಸೆ

‘ಶಿವಣ್ಣನಿಗೆ ನಾನು ಡೈರೆಕ್ಷನ್​ ಮಾಡ್ತೀನಿ’; ಸಲಗ ರಿಲೀಸ್​ಗೂ ಮೊದಲು ದುನಿಯಾ ವಿಜಯ್​ ಘೋಷಣೆ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?