AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ghost Movie: ಶಿವರಾಜ್​ಕುಮಾರ್​ ನಟನೆಯ ‘ಘೋಸ್ಟ್​’ ಮೋಷನ್​ ಪೋಸ್ಟರ್​ ರಿಲೀಸ್​; ಹೊಸ ವರ್ಷಕ್ಕೆ ಶ್ರೀನಿ ಗಿಫ್ಟ್​

Ghost Movie Motion Poster: ‘ಘೋಸ್ಟ್​’ ಬಗ್ಗೆ ಫ್ಯಾನ್ಸ್​ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆ ನಿರೀಕ್ಷೆಯನ್ನು ದುಪ್ಪಟ್ಟು ಮಾಡುವ ರೀತಿಯಲ್ಲಿ ಮೋಷನ್​ ಪೋಸ್ಟರ್​ ರಿಲೀಸ್​ ಮಾಡಲಾಗಿದೆ.

Ghost Movie: ಶಿವರಾಜ್​ಕುಮಾರ್​ ನಟನೆಯ ‘ಘೋಸ್ಟ್​’ ಮೋಷನ್​ ಪೋಸ್ಟರ್​ ರಿಲೀಸ್​; ಹೊಸ ವರ್ಷಕ್ಕೆ ಶ್ರೀನಿ ಗಿಫ್ಟ್​
ಶಿವರಾಜ್​ಕುಮಾರ್
TV9 Web
| Edited By: |

Updated on:Jan 01, 2023 | 1:18 PM

Share

ನಟ, ನಿರ್ದೇಶಕ ಶ್ರೀನಿ (Srini) ಅವರು ‘ಘೋಸ್ಟ್​’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಬಹುನಿರೀಕ್ಷಿತ ಚಿತ್ರಕ್ಕೆ ‘ಸೆಂಚುರಿ ಸ್ಟಾರ್​’ ಶಿವರಾಜ್​ಕುಮಾರ್​ (Shivarajkumar) ಹೀರೋ. ಕೆಲವೇ ದಿನಗಳ ಹಿಂದೆ ಈ ಚಿತ್ರಕ್ಕೆ 2ನೇ ಹಂತದ ಚಿತ್ರೀಕರಣ ಮುಕ್ತಾಯ ಆಗಿತ್ತು. ಈಗ ಹೊಸ ವರ್ಷದ ಪ್ರಯುಕ್ತ ಮೋಷನ್​ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ. ಇದನ್ನು ಕಂಡು ‘ಹ್ಯಾಟ್ರಿಕ್​ ಹೀರೋ’ ಅಭಿಮಾನಿಗಳಿಗೆ ಖುಷಿ ಆಗಿದೆ. ‘ಘೋಸ್ಟ್​’ (Ghost Movie) ಸಿನಿಮಾದಲ್ಲಿ ಶಿವಣ್ಣ ಅವರ ಪಾತ್ರ ಸಖತ್​ ರಗಡ್​​ ಆಗಿರಲಿದೆ. ಮೇಕಿಂಗ್​ ಕೂಡ ಅದ್ದೂರಿಯಾಗಿ ಇರಲಿದೆ ಎಂಬುದಕ್ಕೆ ಈ ಮೋಷನ್​ ಪೋಸ್ಟರ್​ ಸುಳಿವು ನೀಡುತ್ತಿದೆ. ಶೀಘ್ರದಲ್ಲಿಯೇ ಟೀಸರ್​ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ.

ಬ್ಯಾಕ್​ ಟು ಬ್ಯಾಕ್​ ಸಿನಿಮಾ ಕೆಲಸಗಳಲ್ಲಿ ಶಿವರಾಜ್​ಕುಮಾರ್​ ಅವರು ಬ್ಯುಸಿ ಆಗಿದ್ದಾರೆ. ಇತ್ತೀಚೆಗೆ ತೆರೆಕಂಡ ಅವರ ‘ವೇದ’ ಸಿನಿಮಾ ಸೂಪರ್​ ಹಿಟ್​ ಆಗಿದೆ. ಆದ್ದರಿಂದ ಅವರ ಮುಂಬರುವ ಸಿನಿಮಾಗಳ ಮೇಲೆ ಸಹಜವಾಗಿಯೇ ನಿರೀಕ್ಷೆ ಜೋರಾಗಿದೆ. ಅದರಲ್ಲೂ ಶ್ರೀನಿ ಜೊತೆ ಅವರು ಕೈ ಜೋಡಿಸಿರುವುದರಿಂದ ಹೆಚ್ಚು ಹೈಪ್​ ಸೃಷ್ಟಿ ಮಾಡಿದೆ. ಶ್ರೀನಿ ಮತ್ತು ಶಿವಣ್ಣ ಅವರ ಕಾಂಬಿನೇಷನ್​ ಆದ್ದರಿಂದ ‘ಘೋಸ್ಟ್‌’ ಬಗ್ಗೆ ಫ್ಯಾನ್ಸ್​ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆ ನಿರೀಕ್ಷೆಯನ್ನು ದುಪ್ಪಟ್ಟು ಮಾಡುವ ರೀತಿಯಲ್ಲಿ ಮೋಷನ್​ ಪೋಸ್ಟರ್​ ರಿಲೀಸ್​ ಮಾಡಲಾಗಿದೆ.

ಇದನ್ನೂ ಓದಿ
Image
Vedha Movie: ‘ವೇದ’ ವಿಜಯ ಯಾತ್ರೆಯಲ್ಲಿ ಮಾತಾಡಲೂ ಬಿಡದೇ ಜೈಕಾರ ಹಾಕಿದ ಫ್ಯಾನ್ಸ್​; ಶಿವರಾಜ್​ಕುಮಾರ್​ ಗರಂ
Image
Vedha Movie: ‘ವೇದ’ ಸಿನಿಮಾ ಯಶಸ್ಸಿನ ಯಾತ್ರೆಯಲ್ಲಿ ರಥ ಬಿಟ್ಟು ಕೆಳಗಿಳಿದ ಶಿವರಾಜ್​ಕುಮಾರ್​
Image
Mangaluru: ಕೊರಗಜ್ಜನ ಆದಿಸ್ಥಳಕ್ಕೆ ಕುಟುಂಬದ ಜತೆಗೆ ಭೇಟಿ ನೀಡಿದ ಶಿವಣ್ಣ
Image
‘ಡಾ. ಶಿವರಾಜ್​ಕುಮಾರ್​ ವೃತ್ತ’: ಮಾನ್ಯತಾ ರೆಸಿಡೆನ್ಸಿ ಸರ್ಕಲ್​ಗೆ ಶಿವಣ್ಣನ ಹೆಸರಿಟ್ಟ ನಿವಾಸಿಗಳು

ಇದನ್ನೂ ಓದಿ: Shivarajkumar: ಮೊದಲ ಹಂತದ ಶೂಟಿಂಗ್​ ಮುಗಿಸಿದ ‘ಘೋಸ್ಟ್​’; ಶಿವಣ್ಣ-ಶ್ರೀನಿ ಸೂಪರ್​ ಫಾಸ್ಟ್​

ಶ್ರೀನಿ ಅವರು ಕನ್ನಡ ಚಿತ್ರರಂಗದಲ್ಲಿ ನಟನಾಗಿ, ನಿರ್ದೇಶಕನಾಗಿ ಗುರುತಿಸಿಕೊಂಡಿದ್ದಾರೆ. ‘ಬೀರ್​ಬಲ್​’ ಅಂತಹ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರಗಳನ್ನು ಅವರು ನಿರ್ದೇಶನ ಮಾಡಿದ್ದಾರೆ. 2022ರಲ್ಲಿ ತೆರೆಗೆ ಬಂದ ‘ಓಲ್ಡ್​ ಮಾಂಕ್​’ ಚಿತ್ರಕ್ಕೆ ನಿರ್ದೇಶನ ಮಾಡುವುದರ ಜೊತೆಗೆ ಮುಖ್ಯಭೂಮಿಕೆಯಲ್ಲೂ ನಟಿಸಿದರು. ಪ್ರೇಕ್ಷಕರಿಗೆ ಆ ಸಿನಿಮಾ ಸಖತ್​ ಇಷ್ಟವಾಯಿತು. ಹಾಗಾಗಿ ಶ್ರೀನಿ ಅವರ ನಿರ್ದೇಶನದ ಮೇಲೆ ಸಿನಿಪ್ರಿಯರಿಗೆ ಭರವಸೆ ಮೂಡಿದೆ.

ಇದನ್ನೂ ಓದಿ: Shivarajkumar: ‘ಎಲ್ಲರಿಗೂ ಬಾಸ್ ಒಬ್ಬರೇ’; ಬಾಸ್ ಎಂದ ಅಭಿಮಾನಿಗೆ ಬುದ್ಧಿವಾದ ಹೇಳಿದ ಶಿವಣ್ಣ

ಶ್ರೀನಿ ಅವರ ಈ ಹಿಂದಿನ ಸಿನಿಮಾಗಳಿಗಿಂತಲೂ ತುಂಬ ಡಿಫರೆಂಟ್​ ಆಗಿ ‘ಘೋಸ್ಟ್’ ಚಿತ್ರ ಮೂಡಿಬರುತ್ತಿದೆ. ನಿರ್ದೇಶಕ ಶ್ರೀನಿ ಅವರೇ ಕಥೆ-ಚಿತ್ರಕಥೆ ಬರೆದಿದ್ದಾರೆ. ಮಾಸ್ತಿ ಹಾಗೂ ಪ್ರಸನ್ನ ಅವರು ಸಂಭಾಷಣೆ ಬರೆದಿದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಹಾಗೂ ಮಹೇಂದ್ರ ಸಿಂಹ ಛಾಯಾಗ್ರಹಣದಲ್ಲಿ ‘ಘೋಸ್ಟ್‌’ ಚಿತ್ರ ಮೂಡಿಬರುತ್ತಿದೆ.

ಐದು ಸಾಹಸ ಸನ್ನಿವೇಶಗಳು ‘ಘೋಸ್ಟ್​’ ಚಿತ್ರದಲ್ಲಿ ಇರಲಿವೆ. ಶಿವರಾಜ್​ಕುಮಾರ್ ಜೊತೆ ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಮುಂತಾದವರು ನಟಿಸುತ್ತಿದ್ದಾರೆ. ‘ಸಂದೇಶ್ ಪ್ರೊಡಕ್ಷನ್ಸ್’ ಮೂಲಕ ಸಂದೇಶ್ ಎನ್. ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಬೆಂಗಳೂರಿನ ಮಿನರ್ವ ಮಿಲ್​ನಲ್ಲಿ 15ಕ್ಕೂ ಹೆಚ್ಚು ಸೆಟ್​ಗಳನ್ನು ನಿರ್ಮಿಸಿ, ಹಲವು ದಿನಗಳ ಕಾಲ ಶೂಟಿಂಗ್​ ಮಾಡಲಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:18 pm, Sun, 1 January 23

Follow Us
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​