AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ghost Movie: ಶಿವರಾಜ್​ಕುಮಾರ್​ ನಟನೆಯ ‘ಘೋಸ್ಟ್​’ ಮೋಷನ್​ ಪೋಸ್ಟರ್​ ರಿಲೀಸ್​; ಹೊಸ ವರ್ಷಕ್ಕೆ ಶ್ರೀನಿ ಗಿಫ್ಟ್​

Ghost Movie Motion Poster: ‘ಘೋಸ್ಟ್​’ ಬಗ್ಗೆ ಫ್ಯಾನ್ಸ್​ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆ ನಿರೀಕ್ಷೆಯನ್ನು ದುಪ್ಪಟ್ಟು ಮಾಡುವ ರೀತಿಯಲ್ಲಿ ಮೋಷನ್​ ಪೋಸ್ಟರ್​ ರಿಲೀಸ್​ ಮಾಡಲಾಗಿದೆ.

Ghost Movie: ಶಿವರಾಜ್​ಕುಮಾರ್​ ನಟನೆಯ ‘ಘೋಸ್ಟ್​’ ಮೋಷನ್​ ಪೋಸ್ಟರ್​ ರಿಲೀಸ್​; ಹೊಸ ವರ್ಷಕ್ಕೆ ಶ್ರೀನಿ ಗಿಫ್ಟ್​
ಶಿವರಾಜ್​ಕುಮಾರ್
TV9 Web
| Edited By: |

Updated on:Jan 01, 2023 | 1:18 PM

Share

ನಟ, ನಿರ್ದೇಶಕ ಶ್ರೀನಿ (Srini) ಅವರು ‘ಘೋಸ್ಟ್​’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಬಹುನಿರೀಕ್ಷಿತ ಚಿತ್ರಕ್ಕೆ ‘ಸೆಂಚುರಿ ಸ್ಟಾರ್​’ ಶಿವರಾಜ್​ಕುಮಾರ್​ (Shivarajkumar) ಹೀರೋ. ಕೆಲವೇ ದಿನಗಳ ಹಿಂದೆ ಈ ಚಿತ್ರಕ್ಕೆ 2ನೇ ಹಂತದ ಚಿತ್ರೀಕರಣ ಮುಕ್ತಾಯ ಆಗಿತ್ತು. ಈಗ ಹೊಸ ವರ್ಷದ ಪ್ರಯುಕ್ತ ಮೋಷನ್​ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ. ಇದನ್ನು ಕಂಡು ‘ಹ್ಯಾಟ್ರಿಕ್​ ಹೀರೋ’ ಅಭಿಮಾನಿಗಳಿಗೆ ಖುಷಿ ಆಗಿದೆ. ‘ಘೋಸ್ಟ್​’ (Ghost Movie) ಸಿನಿಮಾದಲ್ಲಿ ಶಿವಣ್ಣ ಅವರ ಪಾತ್ರ ಸಖತ್​ ರಗಡ್​​ ಆಗಿರಲಿದೆ. ಮೇಕಿಂಗ್​ ಕೂಡ ಅದ್ದೂರಿಯಾಗಿ ಇರಲಿದೆ ಎಂಬುದಕ್ಕೆ ಈ ಮೋಷನ್​ ಪೋಸ್ಟರ್​ ಸುಳಿವು ನೀಡುತ್ತಿದೆ. ಶೀಘ್ರದಲ್ಲಿಯೇ ಟೀಸರ್​ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ.

ಬ್ಯಾಕ್​ ಟು ಬ್ಯಾಕ್​ ಸಿನಿಮಾ ಕೆಲಸಗಳಲ್ಲಿ ಶಿವರಾಜ್​ಕುಮಾರ್​ ಅವರು ಬ್ಯುಸಿ ಆಗಿದ್ದಾರೆ. ಇತ್ತೀಚೆಗೆ ತೆರೆಕಂಡ ಅವರ ‘ವೇದ’ ಸಿನಿಮಾ ಸೂಪರ್​ ಹಿಟ್​ ಆಗಿದೆ. ಆದ್ದರಿಂದ ಅವರ ಮುಂಬರುವ ಸಿನಿಮಾಗಳ ಮೇಲೆ ಸಹಜವಾಗಿಯೇ ನಿರೀಕ್ಷೆ ಜೋರಾಗಿದೆ. ಅದರಲ್ಲೂ ಶ್ರೀನಿ ಜೊತೆ ಅವರು ಕೈ ಜೋಡಿಸಿರುವುದರಿಂದ ಹೆಚ್ಚು ಹೈಪ್​ ಸೃಷ್ಟಿ ಮಾಡಿದೆ. ಶ್ರೀನಿ ಮತ್ತು ಶಿವಣ್ಣ ಅವರ ಕಾಂಬಿನೇಷನ್​ ಆದ್ದರಿಂದ ‘ಘೋಸ್ಟ್‌’ ಬಗ್ಗೆ ಫ್ಯಾನ್ಸ್​ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆ ನಿರೀಕ್ಷೆಯನ್ನು ದುಪ್ಪಟ್ಟು ಮಾಡುವ ರೀತಿಯಲ್ಲಿ ಮೋಷನ್​ ಪೋಸ್ಟರ್​ ರಿಲೀಸ್​ ಮಾಡಲಾಗಿದೆ.

ಇದನ್ನೂ ಓದಿ
Image
Vedha Movie: ‘ವೇದ’ ವಿಜಯ ಯಾತ್ರೆಯಲ್ಲಿ ಮಾತಾಡಲೂ ಬಿಡದೇ ಜೈಕಾರ ಹಾಕಿದ ಫ್ಯಾನ್ಸ್​; ಶಿವರಾಜ್​ಕುಮಾರ್​ ಗರಂ
Image
Vedha Movie: ‘ವೇದ’ ಸಿನಿಮಾ ಯಶಸ್ಸಿನ ಯಾತ್ರೆಯಲ್ಲಿ ರಥ ಬಿಟ್ಟು ಕೆಳಗಿಳಿದ ಶಿವರಾಜ್​ಕುಮಾರ್​
Image
Mangaluru: ಕೊರಗಜ್ಜನ ಆದಿಸ್ಥಳಕ್ಕೆ ಕುಟುಂಬದ ಜತೆಗೆ ಭೇಟಿ ನೀಡಿದ ಶಿವಣ್ಣ
Image
‘ಡಾ. ಶಿವರಾಜ್​ಕುಮಾರ್​ ವೃತ್ತ’: ಮಾನ್ಯತಾ ರೆಸಿಡೆನ್ಸಿ ಸರ್ಕಲ್​ಗೆ ಶಿವಣ್ಣನ ಹೆಸರಿಟ್ಟ ನಿವಾಸಿಗಳು

ಇದನ್ನೂ ಓದಿ: Shivarajkumar: ಮೊದಲ ಹಂತದ ಶೂಟಿಂಗ್​ ಮುಗಿಸಿದ ‘ಘೋಸ್ಟ್​’; ಶಿವಣ್ಣ-ಶ್ರೀನಿ ಸೂಪರ್​ ಫಾಸ್ಟ್​

ಶ್ರೀನಿ ಅವರು ಕನ್ನಡ ಚಿತ್ರರಂಗದಲ್ಲಿ ನಟನಾಗಿ, ನಿರ್ದೇಶಕನಾಗಿ ಗುರುತಿಸಿಕೊಂಡಿದ್ದಾರೆ. ‘ಬೀರ್​ಬಲ್​’ ಅಂತಹ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರಗಳನ್ನು ಅವರು ನಿರ್ದೇಶನ ಮಾಡಿದ್ದಾರೆ. 2022ರಲ್ಲಿ ತೆರೆಗೆ ಬಂದ ‘ಓಲ್ಡ್​ ಮಾಂಕ್​’ ಚಿತ್ರಕ್ಕೆ ನಿರ್ದೇಶನ ಮಾಡುವುದರ ಜೊತೆಗೆ ಮುಖ್ಯಭೂಮಿಕೆಯಲ್ಲೂ ನಟಿಸಿದರು. ಪ್ರೇಕ್ಷಕರಿಗೆ ಆ ಸಿನಿಮಾ ಸಖತ್​ ಇಷ್ಟವಾಯಿತು. ಹಾಗಾಗಿ ಶ್ರೀನಿ ಅವರ ನಿರ್ದೇಶನದ ಮೇಲೆ ಸಿನಿಪ್ರಿಯರಿಗೆ ಭರವಸೆ ಮೂಡಿದೆ.

ಇದನ್ನೂ ಓದಿ: Shivarajkumar: ‘ಎಲ್ಲರಿಗೂ ಬಾಸ್ ಒಬ್ಬರೇ’; ಬಾಸ್ ಎಂದ ಅಭಿಮಾನಿಗೆ ಬುದ್ಧಿವಾದ ಹೇಳಿದ ಶಿವಣ್ಣ

ಶ್ರೀನಿ ಅವರ ಈ ಹಿಂದಿನ ಸಿನಿಮಾಗಳಿಗಿಂತಲೂ ತುಂಬ ಡಿಫರೆಂಟ್​ ಆಗಿ ‘ಘೋಸ್ಟ್’ ಚಿತ್ರ ಮೂಡಿಬರುತ್ತಿದೆ. ನಿರ್ದೇಶಕ ಶ್ರೀನಿ ಅವರೇ ಕಥೆ-ಚಿತ್ರಕಥೆ ಬರೆದಿದ್ದಾರೆ. ಮಾಸ್ತಿ ಹಾಗೂ ಪ್ರಸನ್ನ ಅವರು ಸಂಭಾಷಣೆ ಬರೆದಿದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಹಾಗೂ ಮಹೇಂದ್ರ ಸಿಂಹ ಛಾಯಾಗ್ರಹಣದಲ್ಲಿ ‘ಘೋಸ್ಟ್‌’ ಚಿತ್ರ ಮೂಡಿಬರುತ್ತಿದೆ.

ಐದು ಸಾಹಸ ಸನ್ನಿವೇಶಗಳು ‘ಘೋಸ್ಟ್​’ ಚಿತ್ರದಲ್ಲಿ ಇರಲಿವೆ. ಶಿವರಾಜ್​ಕುಮಾರ್ ಜೊತೆ ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಮುಂತಾದವರು ನಟಿಸುತ್ತಿದ್ದಾರೆ. ‘ಸಂದೇಶ್ ಪ್ರೊಡಕ್ಷನ್ಸ್’ ಮೂಲಕ ಸಂದೇಶ್ ಎನ್. ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಬೆಂಗಳೂರಿನ ಮಿನರ್ವ ಮಿಲ್​ನಲ್ಲಿ 15ಕ್ಕೂ ಹೆಚ್ಚು ಸೆಟ್​ಗಳನ್ನು ನಿರ್ಮಿಸಿ, ಹಲವು ದಿನಗಳ ಕಾಲ ಶೂಟಿಂಗ್​ ಮಾಡಲಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:18 pm, Sun, 1 January 23

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ