AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ghost Movie: ಶಿವರಾಜ್​ಕುಮಾರ್​ ನಟನೆಯ ‘ಘೋಸ್ಟ್​’ ಮೋಷನ್​ ಪೋಸ್ಟರ್​ ರಿಲೀಸ್​; ಹೊಸ ವರ್ಷಕ್ಕೆ ಶ್ರೀನಿ ಗಿಫ್ಟ್​

Ghost Movie Motion Poster: ‘ಘೋಸ್ಟ್​’ ಬಗ್ಗೆ ಫ್ಯಾನ್ಸ್​ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆ ನಿರೀಕ್ಷೆಯನ್ನು ದುಪ್ಪಟ್ಟು ಮಾಡುವ ರೀತಿಯಲ್ಲಿ ಮೋಷನ್​ ಪೋಸ್ಟರ್​ ರಿಲೀಸ್​ ಮಾಡಲಾಗಿದೆ.

Ghost Movie: ಶಿವರಾಜ್​ಕುಮಾರ್​ ನಟನೆಯ ‘ಘೋಸ್ಟ್​’ ಮೋಷನ್​ ಪೋಸ್ಟರ್​ ರಿಲೀಸ್​; ಹೊಸ ವರ್ಷಕ್ಕೆ ಶ್ರೀನಿ ಗಿಫ್ಟ್​
ಶಿವರಾಜ್​ಕುಮಾರ್
TV9 Web
| Edited By: |

Updated on:Jan 01, 2023 | 1:18 PM

Share

ನಟ, ನಿರ್ದೇಶಕ ಶ್ರೀನಿ (Srini) ಅವರು ‘ಘೋಸ್ಟ್​’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಬಹುನಿರೀಕ್ಷಿತ ಚಿತ್ರಕ್ಕೆ ‘ಸೆಂಚುರಿ ಸ್ಟಾರ್​’ ಶಿವರಾಜ್​ಕುಮಾರ್​ (Shivarajkumar) ಹೀರೋ. ಕೆಲವೇ ದಿನಗಳ ಹಿಂದೆ ಈ ಚಿತ್ರಕ್ಕೆ 2ನೇ ಹಂತದ ಚಿತ್ರೀಕರಣ ಮುಕ್ತಾಯ ಆಗಿತ್ತು. ಈಗ ಹೊಸ ವರ್ಷದ ಪ್ರಯುಕ್ತ ಮೋಷನ್​ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ. ಇದನ್ನು ಕಂಡು ‘ಹ್ಯಾಟ್ರಿಕ್​ ಹೀರೋ’ ಅಭಿಮಾನಿಗಳಿಗೆ ಖುಷಿ ಆಗಿದೆ. ‘ಘೋಸ್ಟ್​’ (Ghost Movie) ಸಿನಿಮಾದಲ್ಲಿ ಶಿವಣ್ಣ ಅವರ ಪಾತ್ರ ಸಖತ್​ ರಗಡ್​​ ಆಗಿರಲಿದೆ. ಮೇಕಿಂಗ್​ ಕೂಡ ಅದ್ದೂರಿಯಾಗಿ ಇರಲಿದೆ ಎಂಬುದಕ್ಕೆ ಈ ಮೋಷನ್​ ಪೋಸ್ಟರ್​ ಸುಳಿವು ನೀಡುತ್ತಿದೆ. ಶೀಘ್ರದಲ್ಲಿಯೇ ಟೀಸರ್​ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ.

ಬ್ಯಾಕ್​ ಟು ಬ್ಯಾಕ್​ ಸಿನಿಮಾ ಕೆಲಸಗಳಲ್ಲಿ ಶಿವರಾಜ್​ಕುಮಾರ್​ ಅವರು ಬ್ಯುಸಿ ಆಗಿದ್ದಾರೆ. ಇತ್ತೀಚೆಗೆ ತೆರೆಕಂಡ ಅವರ ‘ವೇದ’ ಸಿನಿಮಾ ಸೂಪರ್​ ಹಿಟ್​ ಆಗಿದೆ. ಆದ್ದರಿಂದ ಅವರ ಮುಂಬರುವ ಸಿನಿಮಾಗಳ ಮೇಲೆ ಸಹಜವಾಗಿಯೇ ನಿರೀಕ್ಷೆ ಜೋರಾಗಿದೆ. ಅದರಲ್ಲೂ ಶ್ರೀನಿ ಜೊತೆ ಅವರು ಕೈ ಜೋಡಿಸಿರುವುದರಿಂದ ಹೆಚ್ಚು ಹೈಪ್​ ಸೃಷ್ಟಿ ಮಾಡಿದೆ. ಶ್ರೀನಿ ಮತ್ತು ಶಿವಣ್ಣ ಅವರ ಕಾಂಬಿನೇಷನ್​ ಆದ್ದರಿಂದ ‘ಘೋಸ್ಟ್‌’ ಬಗ್ಗೆ ಫ್ಯಾನ್ಸ್​ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆ ನಿರೀಕ್ಷೆಯನ್ನು ದುಪ್ಪಟ್ಟು ಮಾಡುವ ರೀತಿಯಲ್ಲಿ ಮೋಷನ್​ ಪೋಸ್ಟರ್​ ರಿಲೀಸ್​ ಮಾಡಲಾಗಿದೆ.

ಇದನ್ನೂ ಓದಿ
Image
Vedha Movie: ‘ವೇದ’ ವಿಜಯ ಯಾತ್ರೆಯಲ್ಲಿ ಮಾತಾಡಲೂ ಬಿಡದೇ ಜೈಕಾರ ಹಾಕಿದ ಫ್ಯಾನ್ಸ್​; ಶಿವರಾಜ್​ಕುಮಾರ್​ ಗರಂ
Image
Vedha Movie: ‘ವೇದ’ ಸಿನಿಮಾ ಯಶಸ್ಸಿನ ಯಾತ್ರೆಯಲ್ಲಿ ರಥ ಬಿಟ್ಟು ಕೆಳಗಿಳಿದ ಶಿವರಾಜ್​ಕುಮಾರ್​
Image
Mangaluru: ಕೊರಗಜ್ಜನ ಆದಿಸ್ಥಳಕ್ಕೆ ಕುಟುಂಬದ ಜತೆಗೆ ಭೇಟಿ ನೀಡಿದ ಶಿವಣ್ಣ
Image
‘ಡಾ. ಶಿವರಾಜ್​ಕುಮಾರ್​ ವೃತ್ತ’: ಮಾನ್ಯತಾ ರೆಸಿಡೆನ್ಸಿ ಸರ್ಕಲ್​ಗೆ ಶಿವಣ್ಣನ ಹೆಸರಿಟ್ಟ ನಿವಾಸಿಗಳು

ಇದನ್ನೂ ಓದಿ: Shivarajkumar: ಮೊದಲ ಹಂತದ ಶೂಟಿಂಗ್​ ಮುಗಿಸಿದ ‘ಘೋಸ್ಟ್​’; ಶಿವಣ್ಣ-ಶ್ರೀನಿ ಸೂಪರ್​ ಫಾಸ್ಟ್​

ಶ್ರೀನಿ ಅವರು ಕನ್ನಡ ಚಿತ್ರರಂಗದಲ್ಲಿ ನಟನಾಗಿ, ನಿರ್ದೇಶಕನಾಗಿ ಗುರುತಿಸಿಕೊಂಡಿದ್ದಾರೆ. ‘ಬೀರ್​ಬಲ್​’ ಅಂತಹ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರಗಳನ್ನು ಅವರು ನಿರ್ದೇಶನ ಮಾಡಿದ್ದಾರೆ. 2022ರಲ್ಲಿ ತೆರೆಗೆ ಬಂದ ‘ಓಲ್ಡ್​ ಮಾಂಕ್​’ ಚಿತ್ರಕ್ಕೆ ನಿರ್ದೇಶನ ಮಾಡುವುದರ ಜೊತೆಗೆ ಮುಖ್ಯಭೂಮಿಕೆಯಲ್ಲೂ ನಟಿಸಿದರು. ಪ್ರೇಕ್ಷಕರಿಗೆ ಆ ಸಿನಿಮಾ ಸಖತ್​ ಇಷ್ಟವಾಯಿತು. ಹಾಗಾಗಿ ಶ್ರೀನಿ ಅವರ ನಿರ್ದೇಶನದ ಮೇಲೆ ಸಿನಿಪ್ರಿಯರಿಗೆ ಭರವಸೆ ಮೂಡಿದೆ.

ಇದನ್ನೂ ಓದಿ: Shivarajkumar: ‘ಎಲ್ಲರಿಗೂ ಬಾಸ್ ಒಬ್ಬರೇ’; ಬಾಸ್ ಎಂದ ಅಭಿಮಾನಿಗೆ ಬುದ್ಧಿವಾದ ಹೇಳಿದ ಶಿವಣ್ಣ

ಶ್ರೀನಿ ಅವರ ಈ ಹಿಂದಿನ ಸಿನಿಮಾಗಳಿಗಿಂತಲೂ ತುಂಬ ಡಿಫರೆಂಟ್​ ಆಗಿ ‘ಘೋಸ್ಟ್’ ಚಿತ್ರ ಮೂಡಿಬರುತ್ತಿದೆ. ನಿರ್ದೇಶಕ ಶ್ರೀನಿ ಅವರೇ ಕಥೆ-ಚಿತ್ರಕಥೆ ಬರೆದಿದ್ದಾರೆ. ಮಾಸ್ತಿ ಹಾಗೂ ಪ್ರಸನ್ನ ಅವರು ಸಂಭಾಷಣೆ ಬರೆದಿದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಹಾಗೂ ಮಹೇಂದ್ರ ಸಿಂಹ ಛಾಯಾಗ್ರಹಣದಲ್ಲಿ ‘ಘೋಸ್ಟ್‌’ ಚಿತ್ರ ಮೂಡಿಬರುತ್ತಿದೆ.

ಐದು ಸಾಹಸ ಸನ್ನಿವೇಶಗಳು ‘ಘೋಸ್ಟ್​’ ಚಿತ್ರದಲ್ಲಿ ಇರಲಿವೆ. ಶಿವರಾಜ್​ಕುಮಾರ್ ಜೊತೆ ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಮುಂತಾದವರು ನಟಿಸುತ್ತಿದ್ದಾರೆ. ‘ಸಂದೇಶ್ ಪ್ರೊಡಕ್ಷನ್ಸ್’ ಮೂಲಕ ಸಂದೇಶ್ ಎನ್. ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಬೆಂಗಳೂರಿನ ಮಿನರ್ವ ಮಿಲ್​ನಲ್ಲಿ 15ಕ್ಕೂ ಹೆಚ್ಚು ಸೆಟ್​ಗಳನ್ನು ನಿರ್ಮಿಸಿ, ಹಲವು ದಿನಗಳ ಕಾಲ ಶೂಟಿಂಗ್​ ಮಾಡಲಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:18 pm, Sun, 1 January 23

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್