AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶಿವಣ್ಣ ರೂಲ್ ಮಾಡ್ತಾರೆ’: ‘ಘೋಸ್ಟ್’ ಹೊಸ ಹಾಡಿನ ಮ್ಯೂಸಿಕ್​ಗೆ ಫ್ಯಾನ್ಸ್ ಫಿದಾ

ಅರ್ಜುನ್ ಜನ್ಯಾ ಅವರು ಮ್ಯೂಸಿಕ್ ಕಂಪೋಸರ್ ಆಗಿ ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಇದ್ದಾರೆ. ಅವರು ವಿವಿಧ ರೀತಿಯ ಹಾಡುಗಳನ್ನು ನೀಡಿ ಗಮನ ಸೆಳೆದಿದ್ದಾರೆ. ‘ಒಎಂಜಿ ಮ್ಯೂಸಿಕ್’ ರಿಲೀಸ್ ಮಾಡಲಾಗಿದೆ. ಒಂದೇ ವಿಡಿಯೋದಲ್ಲಿ ಕನ್ನಡ, ಮಲಯಾಳಂ, ತಮಿಳಿನ ಲಿರಿಕ್ಸ್ ಇದೆ.

‘ಶಿವಣ್ಣ ರೂಲ್ ಮಾಡ್ತಾರೆ’: ‘ಘೋಸ್ಟ್’ ಹೊಸ ಹಾಡಿನ ಮ್ಯೂಸಿಕ್​ಗೆ ಫ್ಯಾನ್ಸ್ ಫಿದಾ
ಶಿವರಾಜ್​ಕುಮಾರ್
ರಾಜೇಶ್ ದುಗ್ಗುಮನೆ
|

Updated on: Sep 22, 2023 | 3:16 PM

Share

ಶಿವರಾಜ್​ಕುಮಾರ್ ಅವರು ‘ಘೋಸ್ಟ್’ ಸಿನಿಮಾ (Ghost Movie) ಮೂಲಕ ಪ್ರೇಕ್ಷಕರ ಎದುರು ಬರೋಕೆ ರೆಡಿ ಆಗಿದ್ದಾರೆ. ಈ ಚಿತ್ರದಲ್ಲಿ ಅವರು ಗ್ಯಾಂಗ್​​ಸ್ಟರ್ ಅವತಾರ ತಾಳಿದ್ದಾರೆ. ಶಿವಣ್ಣ ಅವರಿಗೆ ಈ ರೀತಿಯ ಪಾತ್ರಗಳು ಹೆಚ್ಚು ಹೊಂದುತ್ತವೆ ಅನ್ನೋದನ್ನು ಮತ್ತೆ ಹೇಳಬೇಕಿಲ್ಲ. ಈ ಕಾರಣದಿಂದಲೇ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಈಗ ಈ ಚಿತ್ರದ ಸಾಂಗ್ ರಿಲೀಸ್ ಆಗಿದ್ದು, ಎಲ್ಲರ ಗಮನ ಸೆಳೆಯುತ್ತಿದೆ. ಈ ಸಾಂಗ್​ ಕಂಪೋಸರ್ ಅರ್ಜುನ್ ಜನ್ಯಾಗೆ ಎಲ್ಲರೂ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಅರ್ಜುನ್ ಜನ್ಯಾ ಅವರು ಮ್ಯೂಸಿಕ್ ಕಂಪೋಸರ್ ಆಗಿ ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಇದ್ದಾರೆ. ಅವರು ವಿವಿಧ ರೀತಿಯ ಹಾಡುಗಳನ್ನು ನೀಡಿ ಗಮನ ಸೆಳೆದಿದ್ದಾರೆ. ‘ಒಎಂಜಿ ಮ್ಯೂಸಿಕ್’ ರಿಲೀಸ್ ಮಾಡಲಾಗಿದೆ. ಒಂದೇ ವಿಡಿಯೋದಲ್ಲಿ ಕನ್ನಡ, ಮಲಯಾಳಂ, ತಮಿಳಿನ ಲಿರಿಕ್ಸ್ ಇದೆ. ಪೂರ್ತಿ ಹಾಡನ್ನು ಕೇಳೋಕೆ ಅಭಿಮಾನಿಗಳು ಕಾದಿದ್ದಾರೆ. ಸದ್ಯ, ಹಾಡಿನ ತುಣುಕಿಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಕೇಳಿ ಬರುತ್ತಿದೆ. ‘ಶಿವಣ್ಣ ರೂಲ್ ಮಾಡೋದು ಪಕ್ಕಾ’ ಎಂದು ಅನೇಕರು ಕಮೆಂಟ್ ಮಾಡಿದ್ದಾರೆ.

ಆ್ಯಕ್ಷನ್ ಸಿನಿಮಾಗಳಲ್ಲಿ ಬಿಜಿಎಂ ಪ್ರಮುಖ ಪಾತ್ರ ವಹಿಸುತ್ತದೆ. ಬಿಜಿಎಂ ಚೆನ್ನಾಗಿದ್ದರೆ ಸಿನಿಮಾದ ತೂಕ ಹೆಚ್ಚುತ್ತದೆ. ‘ಘೋಸ್ಟ್’ ಸಿನಿಮಾದಲ್ಲಿ ಬಿಜಿಎಂ ಭರ್ಜರಿಯಾಗಿದೆ ಅನ್ನೋದಕ್ಕೆ ಈ ಹಾಡು ಸಾಕ್ಷಿ ಒದಗಿಸುವಂತಿದೆ. ಪರಭಾಷಿಗರು ಈ ಹಾಡನ್ನು ಕೇಳಿ ಇಷ್ಟಪಡುತ್ತಿದ್ದಾರೆ.

ಇದನ್ನೂ ಓದಿ: ಸಿನಿಮಾ ರಿಲೀಸ್​ಗೂ ಮೊದಲೇ ದೊಡ್ಡ ಬಿಸ್ನೆಸ್ ಮಾಡಿದ ಶಿವಣ್ಣನ ‘ಘೋಸ್ಟ್’ ಸಿನಿಮಾ

‘ಘೋಸ್ಟ್’ ಚಿತ್ರವನ್ನು ಶ್ರೀನಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಶಿವರಾಜ್​ಕುಮಾರ್, ಅನುಪಮ್ ಖೇರ್, ಪ್ರಶಾಂತ್ ನಾರಾಯಣ್, ಅರ್ಚನಾ ಜೋಯಿಸ್, ಸತ್ಯಪ್ರಕಾಶ್, ದತ್ತಣ್ಣ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಶ್ರೀನಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಸಂದೇಶ್ ಪ್ರೊಡಕ್ಷನ್ಸ್ ಮೂಲಕ ಸಂದೇಶ್ ನಾಗರಾಜ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಮಹೇಂದ್ರ ಸಿಂಹ ಛಾಯಾಗ್ರಹಣ ಚಿತ್ರಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?