AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶಿವಣ್ಣ ರೂಲ್ ಮಾಡ್ತಾರೆ’: ‘ಘೋಸ್ಟ್’ ಹೊಸ ಹಾಡಿನ ಮ್ಯೂಸಿಕ್​ಗೆ ಫ್ಯಾನ್ಸ್ ಫಿದಾ

ಅರ್ಜುನ್ ಜನ್ಯಾ ಅವರು ಮ್ಯೂಸಿಕ್ ಕಂಪೋಸರ್ ಆಗಿ ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಇದ್ದಾರೆ. ಅವರು ವಿವಿಧ ರೀತಿಯ ಹಾಡುಗಳನ್ನು ನೀಡಿ ಗಮನ ಸೆಳೆದಿದ್ದಾರೆ. ‘ಒಎಂಜಿ ಮ್ಯೂಸಿಕ್’ ರಿಲೀಸ್ ಮಾಡಲಾಗಿದೆ. ಒಂದೇ ವಿಡಿಯೋದಲ್ಲಿ ಕನ್ನಡ, ಮಲಯಾಳಂ, ತಮಿಳಿನ ಲಿರಿಕ್ಸ್ ಇದೆ.

‘ಶಿವಣ್ಣ ರೂಲ್ ಮಾಡ್ತಾರೆ’: ‘ಘೋಸ್ಟ್’ ಹೊಸ ಹಾಡಿನ ಮ್ಯೂಸಿಕ್​ಗೆ ಫ್ಯಾನ್ಸ್ ಫಿದಾ
ಶಿವರಾಜ್​ಕುಮಾರ್
ರಾಜೇಶ್ ದುಗ್ಗುಮನೆ
|

Updated on: Sep 22, 2023 | 3:16 PM

Share

ಶಿವರಾಜ್​ಕುಮಾರ್ ಅವರು ‘ಘೋಸ್ಟ್’ ಸಿನಿಮಾ (Ghost Movie) ಮೂಲಕ ಪ್ರೇಕ್ಷಕರ ಎದುರು ಬರೋಕೆ ರೆಡಿ ಆಗಿದ್ದಾರೆ. ಈ ಚಿತ್ರದಲ್ಲಿ ಅವರು ಗ್ಯಾಂಗ್​​ಸ್ಟರ್ ಅವತಾರ ತಾಳಿದ್ದಾರೆ. ಶಿವಣ್ಣ ಅವರಿಗೆ ಈ ರೀತಿಯ ಪಾತ್ರಗಳು ಹೆಚ್ಚು ಹೊಂದುತ್ತವೆ ಅನ್ನೋದನ್ನು ಮತ್ತೆ ಹೇಳಬೇಕಿಲ್ಲ. ಈ ಕಾರಣದಿಂದಲೇ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಈಗ ಈ ಚಿತ್ರದ ಸಾಂಗ್ ರಿಲೀಸ್ ಆಗಿದ್ದು, ಎಲ್ಲರ ಗಮನ ಸೆಳೆಯುತ್ತಿದೆ. ಈ ಸಾಂಗ್​ ಕಂಪೋಸರ್ ಅರ್ಜುನ್ ಜನ್ಯಾಗೆ ಎಲ್ಲರೂ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಅರ್ಜುನ್ ಜನ್ಯಾ ಅವರು ಮ್ಯೂಸಿಕ್ ಕಂಪೋಸರ್ ಆಗಿ ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಇದ್ದಾರೆ. ಅವರು ವಿವಿಧ ರೀತಿಯ ಹಾಡುಗಳನ್ನು ನೀಡಿ ಗಮನ ಸೆಳೆದಿದ್ದಾರೆ. ‘ಒಎಂಜಿ ಮ್ಯೂಸಿಕ್’ ರಿಲೀಸ್ ಮಾಡಲಾಗಿದೆ. ಒಂದೇ ವಿಡಿಯೋದಲ್ಲಿ ಕನ್ನಡ, ಮಲಯಾಳಂ, ತಮಿಳಿನ ಲಿರಿಕ್ಸ್ ಇದೆ. ಪೂರ್ತಿ ಹಾಡನ್ನು ಕೇಳೋಕೆ ಅಭಿಮಾನಿಗಳು ಕಾದಿದ್ದಾರೆ. ಸದ್ಯ, ಹಾಡಿನ ತುಣುಕಿಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಕೇಳಿ ಬರುತ್ತಿದೆ. ‘ಶಿವಣ್ಣ ರೂಲ್ ಮಾಡೋದು ಪಕ್ಕಾ’ ಎಂದು ಅನೇಕರು ಕಮೆಂಟ್ ಮಾಡಿದ್ದಾರೆ.

ಆ್ಯಕ್ಷನ್ ಸಿನಿಮಾಗಳಲ್ಲಿ ಬಿಜಿಎಂ ಪ್ರಮುಖ ಪಾತ್ರ ವಹಿಸುತ್ತದೆ. ಬಿಜಿಎಂ ಚೆನ್ನಾಗಿದ್ದರೆ ಸಿನಿಮಾದ ತೂಕ ಹೆಚ್ಚುತ್ತದೆ. ‘ಘೋಸ್ಟ್’ ಸಿನಿಮಾದಲ್ಲಿ ಬಿಜಿಎಂ ಭರ್ಜರಿಯಾಗಿದೆ ಅನ್ನೋದಕ್ಕೆ ಈ ಹಾಡು ಸಾಕ್ಷಿ ಒದಗಿಸುವಂತಿದೆ. ಪರಭಾಷಿಗರು ಈ ಹಾಡನ್ನು ಕೇಳಿ ಇಷ್ಟಪಡುತ್ತಿದ್ದಾರೆ.

ಇದನ್ನೂ ಓದಿ: ಸಿನಿಮಾ ರಿಲೀಸ್​ಗೂ ಮೊದಲೇ ದೊಡ್ಡ ಬಿಸ್ನೆಸ್ ಮಾಡಿದ ಶಿವಣ್ಣನ ‘ಘೋಸ್ಟ್’ ಸಿನಿಮಾ

‘ಘೋಸ್ಟ್’ ಚಿತ್ರವನ್ನು ಶ್ರೀನಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಶಿವರಾಜ್​ಕುಮಾರ್, ಅನುಪಮ್ ಖೇರ್, ಪ್ರಶಾಂತ್ ನಾರಾಯಣ್, ಅರ್ಚನಾ ಜೋಯಿಸ್, ಸತ್ಯಪ್ರಕಾಶ್, ದತ್ತಣ್ಣ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಶ್ರೀನಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಸಂದೇಶ್ ಪ್ರೊಡಕ್ಷನ್ಸ್ ಮೂಲಕ ಸಂದೇಶ್ ನಾಗರಾಜ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಮಹೇಂದ್ರ ಸಿಂಹ ಛಾಯಾಗ್ರಹಣ ಚಿತ್ರಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ