AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶಿವಣ್ಣ ರೂಲ್ ಮಾಡ್ತಾರೆ’: ‘ಘೋಸ್ಟ್’ ಹೊಸ ಹಾಡಿನ ಮ್ಯೂಸಿಕ್​ಗೆ ಫ್ಯಾನ್ಸ್ ಫಿದಾ

ಅರ್ಜುನ್ ಜನ್ಯಾ ಅವರು ಮ್ಯೂಸಿಕ್ ಕಂಪೋಸರ್ ಆಗಿ ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಇದ್ದಾರೆ. ಅವರು ವಿವಿಧ ರೀತಿಯ ಹಾಡುಗಳನ್ನು ನೀಡಿ ಗಮನ ಸೆಳೆದಿದ್ದಾರೆ. ‘ಒಎಂಜಿ ಮ್ಯೂಸಿಕ್’ ರಿಲೀಸ್ ಮಾಡಲಾಗಿದೆ. ಒಂದೇ ವಿಡಿಯೋದಲ್ಲಿ ಕನ್ನಡ, ಮಲಯಾಳಂ, ತಮಿಳಿನ ಲಿರಿಕ್ಸ್ ಇದೆ.

‘ಶಿವಣ್ಣ ರೂಲ್ ಮಾಡ್ತಾರೆ’: ‘ಘೋಸ್ಟ್’ ಹೊಸ ಹಾಡಿನ ಮ್ಯೂಸಿಕ್​ಗೆ ಫ್ಯಾನ್ಸ್ ಫಿದಾ
ಶಿವರಾಜ್​ಕುಮಾರ್
Follow us
ರಾಜೇಶ್ ದುಗ್ಗುಮನೆ
|

Updated on: Sep 22, 2023 | 3:16 PM

ಶಿವರಾಜ್​ಕುಮಾರ್ ಅವರು ‘ಘೋಸ್ಟ್’ ಸಿನಿಮಾ (Ghost Movie) ಮೂಲಕ ಪ್ರೇಕ್ಷಕರ ಎದುರು ಬರೋಕೆ ರೆಡಿ ಆಗಿದ್ದಾರೆ. ಈ ಚಿತ್ರದಲ್ಲಿ ಅವರು ಗ್ಯಾಂಗ್​​ಸ್ಟರ್ ಅವತಾರ ತಾಳಿದ್ದಾರೆ. ಶಿವಣ್ಣ ಅವರಿಗೆ ಈ ರೀತಿಯ ಪಾತ್ರಗಳು ಹೆಚ್ಚು ಹೊಂದುತ್ತವೆ ಅನ್ನೋದನ್ನು ಮತ್ತೆ ಹೇಳಬೇಕಿಲ್ಲ. ಈ ಕಾರಣದಿಂದಲೇ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಈಗ ಈ ಚಿತ್ರದ ಸಾಂಗ್ ರಿಲೀಸ್ ಆಗಿದ್ದು, ಎಲ್ಲರ ಗಮನ ಸೆಳೆಯುತ್ತಿದೆ. ಈ ಸಾಂಗ್​ ಕಂಪೋಸರ್ ಅರ್ಜುನ್ ಜನ್ಯಾಗೆ ಎಲ್ಲರೂ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಅರ್ಜುನ್ ಜನ್ಯಾ ಅವರು ಮ್ಯೂಸಿಕ್ ಕಂಪೋಸರ್ ಆಗಿ ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಇದ್ದಾರೆ. ಅವರು ವಿವಿಧ ರೀತಿಯ ಹಾಡುಗಳನ್ನು ನೀಡಿ ಗಮನ ಸೆಳೆದಿದ್ದಾರೆ. ‘ಒಎಂಜಿ ಮ್ಯೂಸಿಕ್’ ರಿಲೀಸ್ ಮಾಡಲಾಗಿದೆ. ಒಂದೇ ವಿಡಿಯೋದಲ್ಲಿ ಕನ್ನಡ, ಮಲಯಾಳಂ, ತಮಿಳಿನ ಲಿರಿಕ್ಸ್ ಇದೆ. ಪೂರ್ತಿ ಹಾಡನ್ನು ಕೇಳೋಕೆ ಅಭಿಮಾನಿಗಳು ಕಾದಿದ್ದಾರೆ. ಸದ್ಯ, ಹಾಡಿನ ತುಣುಕಿಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಕೇಳಿ ಬರುತ್ತಿದೆ. ‘ಶಿವಣ್ಣ ರೂಲ್ ಮಾಡೋದು ಪಕ್ಕಾ’ ಎಂದು ಅನೇಕರು ಕಮೆಂಟ್ ಮಾಡಿದ್ದಾರೆ.

ಆ್ಯಕ್ಷನ್ ಸಿನಿಮಾಗಳಲ್ಲಿ ಬಿಜಿಎಂ ಪ್ರಮುಖ ಪಾತ್ರ ವಹಿಸುತ್ತದೆ. ಬಿಜಿಎಂ ಚೆನ್ನಾಗಿದ್ದರೆ ಸಿನಿಮಾದ ತೂಕ ಹೆಚ್ಚುತ್ತದೆ. ‘ಘೋಸ್ಟ್’ ಸಿನಿಮಾದಲ್ಲಿ ಬಿಜಿಎಂ ಭರ್ಜರಿಯಾಗಿದೆ ಅನ್ನೋದಕ್ಕೆ ಈ ಹಾಡು ಸಾಕ್ಷಿ ಒದಗಿಸುವಂತಿದೆ. ಪರಭಾಷಿಗರು ಈ ಹಾಡನ್ನು ಕೇಳಿ ಇಷ್ಟಪಡುತ್ತಿದ್ದಾರೆ.

ಇದನ್ನೂ ಓದಿ: ಸಿನಿಮಾ ರಿಲೀಸ್​ಗೂ ಮೊದಲೇ ದೊಡ್ಡ ಬಿಸ್ನೆಸ್ ಮಾಡಿದ ಶಿವಣ್ಣನ ‘ಘೋಸ್ಟ್’ ಸಿನಿಮಾ

‘ಘೋಸ್ಟ್’ ಚಿತ್ರವನ್ನು ಶ್ರೀನಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಶಿವರಾಜ್​ಕುಮಾರ್, ಅನುಪಮ್ ಖೇರ್, ಪ್ರಶಾಂತ್ ನಾರಾಯಣ್, ಅರ್ಚನಾ ಜೋಯಿಸ್, ಸತ್ಯಪ್ರಕಾಶ್, ದತ್ತಣ್ಣ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಶ್ರೀನಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಸಂದೇಶ್ ಪ್ರೊಡಕ್ಷನ್ಸ್ ಮೂಲಕ ಸಂದೇಶ್ ನಾಗರಾಜ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಮಹೇಂದ್ರ ಸಿಂಹ ಛಾಯಾಗ್ರಹಣ ಚಿತ್ರಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಅವಕಾಶ ಸಿಕ್ಕರೆ ಮೈಸೂರು ಸ್ಯಾಡಲ್ ಸೋಪ್ ರಾಯಭಾರಿ ಆಗಲು ಸಿದ್ಧ’; ವಿನೋದ್
‘ಅವಕಾಶ ಸಿಕ್ಕರೆ ಮೈಸೂರು ಸ್ಯಾಡಲ್ ಸೋಪ್ ರಾಯಭಾರಿ ಆಗಲು ಸಿದ್ಧ’; ವಿನೋದ್
ಕ್ರೀಡಾ ಸ್ಫೂರ್ತಿ ಅಲ್ಲ... ರಿಷಭ್ ಪಂತ್​ ಮಾಡಿದ್ದು ನಾಟಕ: ಇಲ್ಲಿದೆ ವಿಡಿಯೋ
ಕ್ರೀಡಾ ಸ್ಫೂರ್ತಿ ಅಲ್ಲ... ರಿಷಭ್ ಪಂತ್​ ಮಾಡಿದ್ದು ನಾಟಕ: ಇಲ್ಲಿದೆ ವಿಡಿಯೋ
VIDEO: ನಿಜಕ್ಕೂ ಇದು ನೋ ಬಾಲಾ? ಇಲ್ಲಿದೆ ಉತ್ತರ 
VIDEO: ನಿಜಕ್ಕೂ ಇದು ನೋ ಬಾಲಾ? ಇಲ್ಲಿದೆ ಉತ್ತರ 
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್
VIDEO: ಮಂಕಡ್ ರನೌಟ್​ಗೆ ಅಪೀಲ್​ ಮಾಡುತ್ತಿದ್ದಂತೆ, ವಿರಾಟ್ ಕೊಹ್ಲಿ ಆಕ್ರೋಶ
VIDEO: ಮಂಕಡ್ ರನೌಟ್​ಗೆ ಅಪೀಲ್​ ಮಾಡುತ್ತಿದ್ದಂತೆ, ವಿರಾಟ್ ಕೊಹ್ಲಿ ಆಕ್ರೋಶ
ಪರೀಕ್ಷಾರ್ಥ ಹಾರಾಟ ವೇಳೆ ಸಮುದ್ರಕ್ಕೆ ಅಪ್ಪಳಿಸಿದ ಸ್ಪೇಸ್​ಎಕ್ಸ್​ನ ರಾಕೆಟ್
ಪರೀಕ್ಷಾರ್ಥ ಹಾರಾಟ ವೇಳೆ ಸಮುದ್ರಕ್ಕೆ ಅಪ್ಪಳಿಸಿದ ಸ್ಪೇಸ್​ಎಕ್ಸ್​ನ ರಾಕೆಟ್
VIDEO: ದಿಗ್ವೇಶ್ ಮಹಾ ಎಡವಟ್ಟು... ಇದೇ ಕಾರಣಕ್ಕೆ ಅಂಪೈರ್ ಔಟ್ ನೀಡಿಲ್ಲ
VIDEO: ದಿಗ್ವೇಶ್ ಮಹಾ ಎಡವಟ್ಟು... ಇದೇ ಕಾರಣಕ್ಕೆ ಅಂಪೈರ್ ಔಟ್ ನೀಡಿಲ್ಲ
ವಸ್ತ್ರದಾನದ ಮಹತ್ವ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ
ವಸ್ತ್ರದಾನದ ಮಹತ್ವ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ
ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಪ್ರಗತಿ ಹೊಂದುವರು
ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಪ್ರಗತಿ ಹೊಂದುವರು
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ