AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಘೋಸ್ಟ್ ಸಿನಿಮಾದ ಹಿಂದಿ ರಿಲೀಸ್ ಕಥೆ ಏನು?’; ಶಿವಣ್ಣನಿಗೆ ಅನುಪಮ್ ಖೇರ್ ಪ್ರಶ್ನೆ

ಶಿವರಾಜ್​ಕುಮಾರ್ ನಟನೆಯ ‘ಘೋಸ್ಟ್’ ಸಿನಿಮಾದ ಟೀಸರ್ ಗಮನ ಸೆಳೆದಿದೆ. ಅವರು ಗ್ಯಾಂಗ್​ಸ್ಟರ್ ಆಗಿ ಮಿಂಚಲು ರೆಡಿ ಆಗಿದ್ದಾರೆ. ಶಿವಣ್ಣನಿಗೆ ಈ ರೀತಿಯ ಪಾತ್ರಗಳು ಹೆಚ್ಚು ಹೊಂದುತ್ತವೆ. ಈ ಕಾರಣದಿಂದಲೇ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿದೆ. ‘ಘೋಸ್ಟ್’ ಸಿನಿಮಾ ಹಿಂದಿಯಲ್ಲಿ ದೊಡ್ಡ ಮಟ್ಟದಲ್ಲಿ ರಿಲೀಸ್ ಆಗುವ ಸೂಚನೆ ನೀಡಿದ್ದಾರೆ ಶಿವಣ್ಣ.

‘ಘೋಸ್ಟ್ ಸಿನಿಮಾದ ಹಿಂದಿ ರಿಲೀಸ್ ಕಥೆ ಏನು?’; ಶಿವಣ್ಣನಿಗೆ ಅನುಪಮ್ ಖೇರ್ ಪ್ರಶ್ನೆ
ಅನುಪಮ್-ಶಿವಣ್ಣ
ರಾಜೇಶ್ ದುಗ್ಗುಮನೆ
|

Updated on: Sep 25, 2023 | 12:49 PM

Share

ಶಿವರಾಜ್​ಕುಮಾರ್ (Shivarajkumar) ನಟನೆಯ ‘ಘೋಸ್ಟ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಚಿತ್ರ ಅಕ್ಟೋಬರ್ 19ರಂದು ಅದ್ದೂರಿಯಾಗಿ ರಿಲೀಸ್ ಆಗಲಿದೆ. ಈ ಚಿತ್ರ ಕನ್ನಡ ಮಾತ್ರವಲ್ಲದೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆ. ಈ ಚಿತ್ರಕ್ಕೆ ಶ್ರೀನಿ ನಿರ್ದೇಶನ ಮಾಡಿದ್ದಾರೆ. ‘ಘೋಸ್ಟ್’ ಸಿನಿಮಾದ ಹಿಂದಿ ಅವತರಣಿಕೆ​ ಅಕ್ಟೋಬರ್ 19ರಂದೇ ರಿಲೀಸ್ ಆಗಲಿದೆಯೇ ಎನ್ನುವ ಪ್ರಶ್ನೆ ಅನೇಕರಲ್ಲಿದೆ. ಇದೇ ಪ್ರಶ್ನೆಯನ್ನು ಶಿವಣ್ಣನಿಗೆ ಅನುಪಮ್ ಖೇರ್ ಅವರು ಕೇಳಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದೆ.

ಶಿವರಾಜ್​ಕುಮಾರ್ ನಟನೆಯ ‘ಘೋಸ್ಟ್’ ಸಿನಿಮಾದ ಟೀಸರ್ ಗಮನ ಸೆಳೆದಿದೆ. ಅವರು ಗ್ಯಾಂಗ್​ಸ್ಟರ್ ಆಗಿ ಮಿಂಚಲು ರೆಡಿ ಆಗಿದ್ದಾರೆ. ಶಿವಣ್ಣನಿಗೆ ಈ ರೀತಿಯ ಪಾತ್ರಗಳು ಹೆಚ್ಚು ಹೊಂದುತ್ತವೆ. ಈ ಕಾರಣದಿಂದಲೇ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿದೆ. ‘ಘೋಸ್ಟ್’ ಸಿನಿಮಾ ಹಿಂದಿಯಲ್ಲಿ ದೊಡ್ಡ ಮಟ್ಟದಲ್ಲಿ ರಿಲೀಸ್ ಆಗುವ ಸೂಚನೆ ನೀಡಿದ್ದಾರೆ ಶಿವಣ್ಣ.

‘ಹೇಗಿದ್ದೀರಿ?’ ಎಂದು ಶಿವಣ್ಣನಿಗೆ ಕೇಳಿದರು ಅನುಪಮ್ ಖೇರ್. ಇದಕ್ಕೆ ಶಿವರಾಜ್​ಕುಮಾರ್ ಖುಷಿಖುಷಿಯಿಂದ ಉತ್ತರಿಸಿದರು. ‘ಘೋಸ್ಟ್ ಹಿಂದಿ ಸಿನಿಮಾ ರಿಲೀಸ್ ಕಥೆ ಏನು?’ ಎಂದು ಅನುಪಮ್ ಖೇರ್ ಪ್ರಶ್ನೆ ಮಾಡಿದರು. ‘ತಾಳ್ಮೆಯಿಂದ ಕಾಯಿರಿ. ಸರ್​ಪ್ರೈಸ್ ಇದೆ’ ಎಂದರು ಶಿವಣ್ಣ. ಇದೇನು ಎನ್ನುವ ಬಗ್ಗೆ ಅಭಿಮಾನಿಗಳಲ್ಲಿ ಪ್ರಶ್ನೆ ಇದೆ.

ಹಿಂದಿ ಭಾಷೆಯಲ್ಲಿ ‘ಪೆನ್ ಸ್ಟುಡಿಯೋಸ್’ ‘ಘೋಸ್ಟ್’ ಚಿತ್ರದ ಹಂಚಿಕೆ ಹಕ್ಕನ್ನು ಪಡೆದಿದೆ. ಮೂಲಗಳ ಪ್ರಕಾರ ದೊಡ್ಡ ಮಟ್ಟದಲ್ಲಿ ಈ ಸಿನಿಮಾ ರಿಲೀಸ್ ಮಾಡಲು ಅವರು ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗುತ್ತಿದೆ. ‘ಜೈಲರ್’ ಚಿತ್ರದಿಂದ ಶಿವಣ್ಣ ಅವರ ಖ್ಯಾತಿ ಹೆಚ್ಚಿದೆ. ಪರಭಾಷೆಯಲ್ಲಿ ‘ಘೋಸ್ಟ್’ ರಿಲೀಸ್ ಆಗಲು ಇದು ಸಹಕಾರಿ ಆಗುವ ಸಾಧ್ಯತೆ ಇದೆ.

ಇದನ್ನೂ ಓದಿ: ‘ಶಿವಣ್ಣ ರೂಲ್ ಮಾಡ್ತಾರೆ’: ‘ಘೋಸ್ಟ್’ ಹೊಸ ಹಾಡಿನ ಮ್ಯೂಸಿಕ್​ಗೆ ಫ್ಯಾನ್ಸ್ ಫಿದಾ

‘ಘೋಸ್ಟ್’ ಚಿತ್ರದ ಬಿಡುಗಡೆ ಹಕ್ಕು, ಡಿಜಿಟಲ್ ಹಕ್ಕು, ಸ್ಯಾಟಲೈಟ್ ಹಕ್ಕುಗಳು ಭಾರಿ ಮೊತ್ತಕ್ಕೆ ಮಾರಾಟ ಆಗಿದೆ. ‘ಜವಾನ್’, ‘ಆರ್​ಆರ್​ಆರ್’ ಸಿನಿಮಾಗಳನ್ನು ವಿತರಣೆ ಮಾಡಿದ ಅನುಭವ ಪೆನ್ ಸ್ಟುಡಿಯೋಗೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!