‘ಘೋಸ್ಟ್ ಸಿನಿಮಾದ ಹಿಂದಿ ರಿಲೀಸ್ ಕಥೆ ಏನು?’; ಶಿವಣ್ಣನಿಗೆ ಅನುಪಮ್ ಖೇರ್ ಪ್ರಶ್ನೆ

ಶಿವರಾಜ್​ಕುಮಾರ್ ನಟನೆಯ ‘ಘೋಸ್ಟ್’ ಸಿನಿಮಾದ ಟೀಸರ್ ಗಮನ ಸೆಳೆದಿದೆ. ಅವರು ಗ್ಯಾಂಗ್​ಸ್ಟರ್ ಆಗಿ ಮಿಂಚಲು ರೆಡಿ ಆಗಿದ್ದಾರೆ. ಶಿವಣ್ಣನಿಗೆ ಈ ರೀತಿಯ ಪಾತ್ರಗಳು ಹೆಚ್ಚು ಹೊಂದುತ್ತವೆ. ಈ ಕಾರಣದಿಂದಲೇ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿದೆ. ‘ಘೋಸ್ಟ್’ ಸಿನಿಮಾ ಹಿಂದಿಯಲ್ಲಿ ದೊಡ್ಡ ಮಟ್ಟದಲ್ಲಿ ರಿಲೀಸ್ ಆಗುವ ಸೂಚನೆ ನೀಡಿದ್ದಾರೆ ಶಿವಣ್ಣ.

‘ಘೋಸ್ಟ್ ಸಿನಿಮಾದ ಹಿಂದಿ ರಿಲೀಸ್ ಕಥೆ ಏನು?’; ಶಿವಣ್ಣನಿಗೆ ಅನುಪಮ್ ಖೇರ್ ಪ್ರಶ್ನೆ
ಅನುಪಮ್-ಶಿವಣ್ಣ
Follow us
|

Updated on: Sep 25, 2023 | 12:49 PM

ಶಿವರಾಜ್​ಕುಮಾರ್ (Shivarajkumar) ನಟನೆಯ ‘ಘೋಸ್ಟ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಚಿತ್ರ ಅಕ್ಟೋಬರ್ 19ರಂದು ಅದ್ದೂರಿಯಾಗಿ ರಿಲೀಸ್ ಆಗಲಿದೆ. ಈ ಚಿತ್ರ ಕನ್ನಡ ಮಾತ್ರವಲ್ಲದೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆ. ಈ ಚಿತ್ರಕ್ಕೆ ಶ್ರೀನಿ ನಿರ್ದೇಶನ ಮಾಡಿದ್ದಾರೆ. ‘ಘೋಸ್ಟ್’ ಸಿನಿಮಾದ ಹಿಂದಿ ಅವತರಣಿಕೆ​ ಅಕ್ಟೋಬರ್ 19ರಂದೇ ರಿಲೀಸ್ ಆಗಲಿದೆಯೇ ಎನ್ನುವ ಪ್ರಶ್ನೆ ಅನೇಕರಲ್ಲಿದೆ. ಇದೇ ಪ್ರಶ್ನೆಯನ್ನು ಶಿವಣ್ಣನಿಗೆ ಅನುಪಮ್ ಖೇರ್ ಅವರು ಕೇಳಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದೆ.

ಶಿವರಾಜ್​ಕುಮಾರ್ ನಟನೆಯ ‘ಘೋಸ್ಟ್’ ಸಿನಿಮಾದ ಟೀಸರ್ ಗಮನ ಸೆಳೆದಿದೆ. ಅವರು ಗ್ಯಾಂಗ್​ಸ್ಟರ್ ಆಗಿ ಮಿಂಚಲು ರೆಡಿ ಆಗಿದ್ದಾರೆ. ಶಿವಣ್ಣನಿಗೆ ಈ ರೀತಿಯ ಪಾತ್ರಗಳು ಹೆಚ್ಚು ಹೊಂದುತ್ತವೆ. ಈ ಕಾರಣದಿಂದಲೇ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿದೆ. ‘ಘೋಸ್ಟ್’ ಸಿನಿಮಾ ಹಿಂದಿಯಲ್ಲಿ ದೊಡ್ಡ ಮಟ್ಟದಲ್ಲಿ ರಿಲೀಸ್ ಆಗುವ ಸೂಚನೆ ನೀಡಿದ್ದಾರೆ ಶಿವಣ್ಣ.

‘ಹೇಗಿದ್ದೀರಿ?’ ಎಂದು ಶಿವಣ್ಣನಿಗೆ ಕೇಳಿದರು ಅನುಪಮ್ ಖೇರ್. ಇದಕ್ಕೆ ಶಿವರಾಜ್​ಕುಮಾರ್ ಖುಷಿಖುಷಿಯಿಂದ ಉತ್ತರಿಸಿದರು. ‘ಘೋಸ್ಟ್ ಹಿಂದಿ ಸಿನಿಮಾ ರಿಲೀಸ್ ಕಥೆ ಏನು?’ ಎಂದು ಅನುಪಮ್ ಖೇರ್ ಪ್ರಶ್ನೆ ಮಾಡಿದರು. ‘ತಾಳ್ಮೆಯಿಂದ ಕಾಯಿರಿ. ಸರ್​ಪ್ರೈಸ್ ಇದೆ’ ಎಂದರು ಶಿವಣ್ಣ. ಇದೇನು ಎನ್ನುವ ಬಗ್ಗೆ ಅಭಿಮಾನಿಗಳಲ್ಲಿ ಪ್ರಶ್ನೆ ಇದೆ.

ಹಿಂದಿ ಭಾಷೆಯಲ್ಲಿ ‘ಪೆನ್ ಸ್ಟುಡಿಯೋಸ್’ ‘ಘೋಸ್ಟ್’ ಚಿತ್ರದ ಹಂಚಿಕೆ ಹಕ್ಕನ್ನು ಪಡೆದಿದೆ. ಮೂಲಗಳ ಪ್ರಕಾರ ದೊಡ್ಡ ಮಟ್ಟದಲ್ಲಿ ಈ ಸಿನಿಮಾ ರಿಲೀಸ್ ಮಾಡಲು ಅವರು ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗುತ್ತಿದೆ. ‘ಜೈಲರ್’ ಚಿತ್ರದಿಂದ ಶಿವಣ್ಣ ಅವರ ಖ್ಯಾತಿ ಹೆಚ್ಚಿದೆ. ಪರಭಾಷೆಯಲ್ಲಿ ‘ಘೋಸ್ಟ್’ ರಿಲೀಸ್ ಆಗಲು ಇದು ಸಹಕಾರಿ ಆಗುವ ಸಾಧ್ಯತೆ ಇದೆ.

ಇದನ್ನೂ ಓದಿ: ‘ಶಿವಣ್ಣ ರೂಲ್ ಮಾಡ್ತಾರೆ’: ‘ಘೋಸ್ಟ್’ ಹೊಸ ಹಾಡಿನ ಮ್ಯೂಸಿಕ್​ಗೆ ಫ್ಯಾನ್ಸ್ ಫಿದಾ

‘ಘೋಸ್ಟ್’ ಚಿತ್ರದ ಬಿಡುಗಡೆ ಹಕ್ಕು, ಡಿಜಿಟಲ್ ಹಕ್ಕು, ಸ್ಯಾಟಲೈಟ್ ಹಕ್ಕುಗಳು ಭಾರಿ ಮೊತ್ತಕ್ಕೆ ಮಾರಾಟ ಆಗಿದೆ. ‘ಜವಾನ್’, ‘ಆರ್​ಆರ್​ಆರ್’ ಸಿನಿಮಾಗಳನ್ನು ವಿತರಣೆ ಮಾಡಿದ ಅನುಭವ ಪೆನ್ ಸ್ಟುಡಿಯೋಗೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು