AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​ಕುಮಾರ್ ಬರ್ತ್​ಡೇ ದಿನ ಶಿವಣ್ಣ ನಟನೆಯ ‘ಘೋಸ್ಟ್​’ ಲುಕ್ ರಿಲೀಸ್​; ಏನಿದರ ಕಥೆ?

ಖ್ಯಾತ ನಿರ್ಮಾಪಕ ಸಂದೇಶ್ ನಾಗರಾಜ್​ ನಿರ್ಮಾಣದ ಈ ಸಿನಿಮಾಗೆ ಶ್ರೀನಿ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಫಸ್ಟ್ ಲುಕ್ ತುಂಬಾನೇ ಕುತೂಹಲಕಾರಿಯಾಗಿದ್ದು, ಅಭಿಮಾನಿಗಳ ವಲಯದಲ್ಲಿ ನಿರೀಕ್ಷೆ ಹೆಚ್ಚಿದೆ.

ರಾಜ್​ಕುಮಾರ್ ಬರ್ತ್​ಡೇ ದಿನ ಶಿವಣ್ಣ ನಟನೆಯ ‘ಘೋಸ್ಟ್​’ ಲುಕ್ ರಿಲೀಸ್​; ಏನಿದರ ಕಥೆ?
ಘೋಸ್ಟ್​ ಫಸ್ಟ್ ಲುಕ್
TV9 Web
| Edited By: |

Updated on:Apr 24, 2022 | 1:41 PM

Share

ಇಂದು (ಏಪ್ರಿಲ್​ 24) ರಾಜ್​ಕುಮಾರ್ (Dr. Rajkumar) ಹಾಗೂ ಅವರ ಅಭಿಮಾನಿಗಳಿಗೆ ವಿಶೇಷ ದಿನ. ಕಾರಣ, ಇಂದು ರಾಜ್​ಕುಮಾರ್ ಅವರ ಜನ್ಮದಿನ. ಅಭಿಮಾನಿಗಳು ಈ ದಿನವನ್ನು ವಿಶೇಷವಾಗಿ ಆಚರಿಸುತ್ತಿದ್ದಾರೆ. ರಾಜ್​ ಫ್ಯಾಮಿಲಿ ಅಭಿಮಾನಿಗಳಿಗೆ ಈ ದಿನ ಗುಡ್​ನ್ಯೂಸ್ ಒಂದು ಸಿಕ್ಕಿದೆ. ಶಿವರಾಜ್​ಕುಮಾರ್ ನಟನೆಯ ‘ಘೋಸ್ಟ್​’ ಸಿನಿಮಾದ (Ghost Movie) ಫಸ್ಟ್ ಲುಕ್ (ಕಾನ್ಸೆಪ್ಟ್ ಪೋಸ್ಟರ್) ರಿಲೀಸ್ ಮಾಡಲಾಗಿದೆ. ಖ್ಯಾತ ನಿರ್ಮಾಪಕ ಸಂದೇಶ್ ನಾಗರಾಜ್​ ನಿರ್ಮಾಣದ ಈ ಸಿನಿಮಾಗೆ ಶ್ರೀನಿ (Director Srini) ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಫಸ್ಟ್ ಲುಕ್ ತುಂಬಾನೇ ಕುತೂಹಲಕಾರಿಯಾಗಿದ್ದು, ಅಭಿಮಾನಿಗಳ ವಲಯದಲ್ಲಿ ನಿರೀಕ್ಷೆ ಹೆಚ್ಚಿದೆ.

ಫಸ್ಟ್​ ಲುಕ್ ಸಖತ್ ರಾ ಆಗಿ ಮೂಡಿ ಬಂದಿದೆ. ಶಿವರಾಜ್​ಕುಮಾರ್ ಅವರ ಕೈಯಲ್ಲಿ ಎಕೆ47 ಮಾದರಿಯ ಗನ್ ಇದೆ. ಅವರ ಕಡೆಗೆ ಒಂದಷ್ಟು ಗನ್​ಗಳು ಮುಖಮಾಡಿವೆ. ಪೋಸ್ಟರ್​ನಲ್ಲಿ ಕಂಬಿಗಳನ್ನು ಕೂಡ ತೋರಿಸಲಾಗಿದೆ. ಗನ್​ಗಳನ್ನು ನೋಡಿದ ಫ್ಯಾನ್ಸ್ ಇದೊಂದು ಪಕ್ಕಾ ಆ್ಯಕ್ಷನ್ ಸಿನಿಮಾ ಎನ್ನುತ್ತಿದ್ದಾರೆ. ಶಿವಣ್ಣ ಅವರ ವಯಸ್ಸು 60 ಸಮೀಪಿಸಿದೆ. ಆದರೆ, ಅವರ ಎನರ್ಜಿ ಮಾತ್ರ ಸ್ವಲ್ಪವೂ ಕಡಿಮೆ ಆಗಿಲ್ಲ. ಈಗಲೂ ಸಾಕಷ್ಟು ಹುಮ್ಮಸಿನಿಂದ ಆ್ಯಕ್ಷನ್​ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಾರೆ. ಈ ಸಿನಿಮಾದಲ್ಲಿ ಅವರು ಯಾವ ರೀತಿಯಲ್ಲಿ ಆ್ಯಕ್ಷನ್ ಮೆರೆಯಲಿದ್ದಾರೆ ಎಂಬುದು ಮುಂದಿನ ದಿನಗಳಲ್ಲಿ ತಿಳಿಯಲಿದೆ.

ಇತ್ತೀಚೆಗೆ ಪ್ಯಾನ್​ ಇಂಡಿಯಾ ಸಿನಿಮಾಗಳ ಸಂಖ್ಯೆ ಹೆಚ್ಚುತ್ತಿದೆ. ಸ್ಟಾರ್ ನಟರ ಸಿನಿಮಾಗಳು ಕನ್ನಡದಲ್ಲಿ ಸಿದ್ಧಗೊಂಡು, ಪರ ಭಾಷೆಗೆ ಡಬ್​ ಆಗಿ ರಿಲೀಸ್ ಆಗುತ್ತಿದೆ. ‘ಘೋಸ್ಟ್’ ಕೂಡ ಪ್ಯಾನ್ ಇಂಡಿಯಾ ಸಿನಿಮಾ. ಪೋಸ್ಟರ್​ನಲ್ಲಿ ಈ ವಿಚಾರವನ್ನು ಚಿತ್ರತಂಡ ಬಿಟ್ಟುಕೊಟ್ಟಿದೆ. ಕನ್ನಡ, ತಮಿಳು, ತೆಲುಗು ಹಾಗೂ ಹಿಂದಿ ಭಾಷೆಗಳಲ್ಲಿ ಈ ಸಿನಿಮಾ ರಿಲೀಸ್ ಆಗುತ್ತಿದೆ. ‘ಘೋಸ್ಟ್’ ಸಂದೇಶ್ ನಾಗರಾಜ್ ಬ್ಯಾನರ್​ನಲ್ಲಿ ಮೂಡಿ ಬರುತ್ತಿರುವ 29ನೇ ಸಿನಿಮಾ.

ಈ ಬಗ್ಗೆ ಟ್ವೀಟ್ ಮಾಡಿರುವ ನಿರ್ದೇಶಕ ಶ್ರೀನಿ, ‘ಕನ್ನಡಿಗರ ಸಾರ್ವಕಾಲಿಕ ಆರಾಧ್ಯದೈವ ವರನಟ ಡಾ. ರಾಜ್‍ಕುಮಾರ್ ಅವರ ಜನ್ಮದಿನದ ಅಂಗವಾಗಿ ನಮ್ಮ ಕರುನಾಡ ಚಕ್ರವರ್ತಿ ಶಿವರಾಜ್​ಕುಮಾರ್ ಅವರ ಅಭಿನಯದ ಘೋಸ್ಟ್ ಚಿತ್ರದ ಕಾನ್ಸೆಪ್ಟ್ ಪೋಸ್ಟರ್ ನಿಮ್ಮ ಮುಂದೆ ಅರ್ಪಿಸುತಿದ್ದೇವೆ. ಹರಸಿ ಪ್ರೀತಿಸಿ ಆಶೀರ್ವದಿಸಿ’ ಎಂದು ಕೋರಿದ್ದಾರೆ.

ಇದನ್ನೂ ಓದಿ: Old Monk Review: ಕಾಮಿಡಿ ಪ್ರಿಯರಿಗೆ ನಗುವಿನ ಕಿಕ್​ ನೀಡುವ ‘ಓಲ್ಡ್​ ಮಾಂಕ್​’

‘ಓಲ್ಡ್​ ಮಾಂಕ್​’ ಗೆದ್ದ ಬಳಿಕ ಶ್ರೀನಿ ಹೊಸ ಚಿತ್ರ ಅನೌನ್ಸ್​; ಈ ಬಾರಿ ಶಿವಣ್ಣ, ಸಂದೇಶ್​ ನಾಗರಾಜ್​ ಜೊತೆ ಸಿನಿಮಾ

Published On - 1:22 pm, Sun, 24 April 22

Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!