AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivarajkumar: ಶಿವರಾಜ್​ಕುಮಾರ್ ಈಗ ‘ಮಾಲೀಕ’; ಹೇಗಿದೆ ನೋಡಿ ‘ಉತ್ತರಕಾಂಡ’ ಲುಕ್

Uttarakaanda Movie: ನಿರ್ಮಾಪಕರಾದ ಕಾರ್ತಿಕ್​ ಗೌಡ, ಯೋಗಿ ಜಿ. ರಾಜ್​ ಹಾಗೂ ನಟ ಡಾಲಿ ಧನಂಜಯ್ ಅವರು ‘ರತ್ನನ್ ಪ್ರಪಂಚ’ ಹಾಗೂ ‘ಗುರುದೇವ ಹೊಯ್ಸಳ’ ಸಿನಿಮಾದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. ಈಗ ಇವರ ಕಾಂಬಿನೇಷನ್​ನಲ್ಲಿ ‘ಉತ್ತರಕಾಂಡ’ ಸಿನಿಮಾ ಮೂಡಿಬರುತ್ತಿದೆ. ಈ ಸಿನಿಮಾದಲ್ಲಿ ಶಿವಣ್ಣ ಕೂಡ ನಟಿಸುತ್ತಿದ್ದಾರೆ. ಅವರ ಲುಕ್ ರಿವೀಲ್ ಆಗಿದೆ.

Shivarajkumar: ಶಿವರಾಜ್​ಕುಮಾರ್ ಈಗ ‘ಮಾಲೀಕ’; ಹೇಗಿದೆ ನೋಡಿ ‘ಉತ್ತರಕಾಂಡ’ ಲುಕ್
ಶಿವರಾಜ್​ಕುಮಾರ್
ರಾಜೇಶ್ ದುಗ್ಗುಮನೆ
|

Updated on: Jul 11, 2024 | 12:04 PM

Share

ಶಿವರಾಜ್​ಕುಮಾರ್ ಸಿನಿಮಾ ರಂಗದಲ್ಲಿ ಹಲವು ವರ್ಷಗಳಿಂದ ಆ್ಯಕ್ಟೀವ್ ಆಗಿದ್ದಾರೆ. ಹಲವು ಸೂಪರ್ ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ. ಅವರು ವೈಲೆಂಟ್ ಲುಕ್​ನಲ್ಲಿ ಕಾಣಿಸಿಕೊಂಡರೆ ಸಿನಿಮಾ ಹಿಟ್ ಆಗುತ್ತದೆ ಎನ್ನುವ ನಂಬಿಕೆ ಅನೇಕರಲ್ಲಿ ಇದೆ. ಇದು ಸತ್ಯ ಕೂಡ. ಈಗ ಅವರ ನಟನೆಯ ‘ಉತ್ತರಕಾಂಡ’ ಸಿನಿಮಾದ ಲುಕ್ ರಿವೀಲ್ ಆಗಿದೆ. ಈ ಲುಕ್ ಸಖತ್ ರಗಡ್ ಆಗಿದೆ. ಅವರ ಬರ್ತ್​ಡೇಗೆ ಸಿಕ್ಕಿರುವ ಬೆಸ್ಟ್​ ಗಿಫ್ಟ್ ಎಂದು ಫ್ಯಾನ್ಸ್ ಹೇಳುತ್ತಿದ್ದಾರೆ.

ಶಿವರಾಜ್​ಕುಮಾರ್ ಅವರು ‘ಉತ್ತರಕಾಂಡ’ ಚಿತ್ರದಲ್ಲಿ ‘ಮಾಲಿಕ್’ ಹೆಸರಿನ ಪಾತ್ರ ಮಾಡುತ್ತಿದ್ದಾರೆ. ಅವರ ಮುಖದ ಒಂದು ಭಾಗಕ್ಕೆ ರಕ್ತ ಬಡಿದಿದೆ. ಶರ್ಟ್​ಗಳ ಮೇಲೂ ರಕ್ತದ ಕಲೆಗಳು ಇವೆ. ಮೈಮೇಲೆ ಬುಲೆಟ್​ಗಳ ಸರಮಾಲೆ ಇದೆ. ಕೈಯಲ್ಲಿ ಅವರು ಸಿಗಾರ್ ಹಿಡಿದುಕೊಂಡಿದ್ದಾರೆ. ಅವರ ಪಕ್ಕದಲ್ಲೇ ಬಾಂಗ್​ಗಳ ಬಾಕ್ಸ್ ಇದೆ. ಅವರ ಲುಕ್ ಫ್ಯಾನ್ಸ್​ಗೆ ಸಖತ್ ಇಷ್ಟ ಆಗಿದೆ.

ಶಿವರಾಜ್​ಕುಮಾರ್ ಅವರಿಗೆ ಜುಲೈ 12ರಂದು ಜನ್ಮದಿನ. ಈ ವಿಶೇಷ ದಿನ ಸಮೀಪಿಸಿರುವುದರಿಂದ ಅವರ ಸಿನಿಮಾಗಳ ತಂಡದಿಂದ ಹೊಸ ಹೊಸ ಲುಕ್​ಗಳು ರಿವೀಲ್ ಆಗುತ್ತಿವೆ. ‘ಉತ್ತರಕಾಂಡ’ ಲುಕ್ ಎಲ್ಲರಿಗೂ ಇಷ್ಟ ಆಗಿದೆ. ಈ ಚಿತ್ರಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ.

‘ಉತ್ತರಕಾಂಡ’ ಆ್ಯಕ್ಷನ್‌ ಡ್ರಾಮಾ ಶೈಲಿಯಲ್ಲಿ ಮೂಡಿ ಬರುತ್ತಿದೆ. ರೋಹಿತ್‌ ಪದಕಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಅಮಿತ್‌ ತ್ರಿವೇದಿ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ, ಅಧ್ವೈತ ಗುರುಮೂರ್ತಿ ಛಾಯಾಗ್ರಹಣ ಚಿತ್ರಕ್ಕೆ ಇದೆ. ವಿಶ್ವಾಸ್‌ ಕಶ್ಯಪ್‌ ಪ್ರೊಡಕ್ಷನ್‌ ವಿನ್ಯಾಸ ಮಾಡಿದ್ದು, ಅನಿಲ್ ಅನಿರುದ್ಧ್ ಮುಖ್ಯ ಸಂಕಲನಕಾರರಾಗಿರುತ್ತಾರೆ. ಕೆಆರ್​ಜಿ ಸ್ಟೂಡಿಯೋಸ್‌ ಬ್ಯಾನರ್‌ ಅಡಿಯಲ್ಲಿ ಕಾರ್ತಿಕ್‌ ಗೌಡ ಮತ್ತು ಯೋಗಿ ಜಿ ರಾಜ್‌ ಚಿತ್ರವನ್ನು ನಿರ್ಮಿಸಿದ್ದಾರೆ.

ಇದನ್ನೂ ಓದಿ: ಎಲ್ಲೆಲ್ಲೂ ಶಿವಣ್ಣ; ‘ಉತ್ತರಕಾಂಡ’ ಸೆಟ್​ನಲ್ಲಿ ಶಿವರಾಜ್​ಕುಮಾರ್​ಗೆ ಅದ್ದೂರಿ ಸ್ವಾಗತ

ಈ ಸಿನಿಮಾದಲ್ಲಿ ದೊಡ್ಡ ಪಾತ್ರವರ್ಗ ಇದೆ. ಶಿವರಾಜ್​ಕುಮಾರ್, ಡಾಲಿ ಧನಂಜಯ, ಭಾವನಾ ಮೆನನ್‌, ಐಶ್ವರ್ಯ ರಾಜೇಶ್‌, ದಿಗಂತ್‌ ಮುಂತಾದವರು ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​