AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivarajkumar: ಶಿವರಾಜ್​ಕುಮಾರ್ ಈಗ ‘ಮಾಲೀಕ’; ಹೇಗಿದೆ ನೋಡಿ ‘ಉತ್ತರಕಾಂಡ’ ಲುಕ್

Uttarakaanda Movie: ನಿರ್ಮಾಪಕರಾದ ಕಾರ್ತಿಕ್​ ಗೌಡ, ಯೋಗಿ ಜಿ. ರಾಜ್​ ಹಾಗೂ ನಟ ಡಾಲಿ ಧನಂಜಯ್ ಅವರು ‘ರತ್ನನ್ ಪ್ರಪಂಚ’ ಹಾಗೂ ‘ಗುರುದೇವ ಹೊಯ್ಸಳ’ ಸಿನಿಮಾದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. ಈಗ ಇವರ ಕಾಂಬಿನೇಷನ್​ನಲ್ಲಿ ‘ಉತ್ತರಕಾಂಡ’ ಸಿನಿಮಾ ಮೂಡಿಬರುತ್ತಿದೆ. ಈ ಸಿನಿಮಾದಲ್ಲಿ ಶಿವಣ್ಣ ಕೂಡ ನಟಿಸುತ್ತಿದ್ದಾರೆ. ಅವರ ಲುಕ್ ರಿವೀಲ್ ಆಗಿದೆ.

Shivarajkumar: ಶಿವರಾಜ್​ಕುಮಾರ್ ಈಗ ‘ಮಾಲೀಕ’; ಹೇಗಿದೆ ನೋಡಿ ‘ಉತ್ತರಕಾಂಡ’ ಲುಕ್
ಶಿವರಾಜ್​ಕುಮಾರ್
ರಾಜೇಶ್ ದುಗ್ಗುಮನೆ
|

Updated on: Jul 11, 2024 | 12:04 PM

Share

ಶಿವರಾಜ್​ಕುಮಾರ್ ಸಿನಿಮಾ ರಂಗದಲ್ಲಿ ಹಲವು ವರ್ಷಗಳಿಂದ ಆ್ಯಕ್ಟೀವ್ ಆಗಿದ್ದಾರೆ. ಹಲವು ಸೂಪರ್ ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ. ಅವರು ವೈಲೆಂಟ್ ಲುಕ್​ನಲ್ಲಿ ಕಾಣಿಸಿಕೊಂಡರೆ ಸಿನಿಮಾ ಹಿಟ್ ಆಗುತ್ತದೆ ಎನ್ನುವ ನಂಬಿಕೆ ಅನೇಕರಲ್ಲಿ ಇದೆ. ಇದು ಸತ್ಯ ಕೂಡ. ಈಗ ಅವರ ನಟನೆಯ ‘ಉತ್ತರಕಾಂಡ’ ಸಿನಿಮಾದ ಲುಕ್ ರಿವೀಲ್ ಆಗಿದೆ. ಈ ಲುಕ್ ಸಖತ್ ರಗಡ್ ಆಗಿದೆ. ಅವರ ಬರ್ತ್​ಡೇಗೆ ಸಿಕ್ಕಿರುವ ಬೆಸ್ಟ್​ ಗಿಫ್ಟ್ ಎಂದು ಫ್ಯಾನ್ಸ್ ಹೇಳುತ್ತಿದ್ದಾರೆ.

ಶಿವರಾಜ್​ಕುಮಾರ್ ಅವರು ‘ಉತ್ತರಕಾಂಡ’ ಚಿತ್ರದಲ್ಲಿ ‘ಮಾಲಿಕ್’ ಹೆಸರಿನ ಪಾತ್ರ ಮಾಡುತ್ತಿದ್ದಾರೆ. ಅವರ ಮುಖದ ಒಂದು ಭಾಗಕ್ಕೆ ರಕ್ತ ಬಡಿದಿದೆ. ಶರ್ಟ್​ಗಳ ಮೇಲೂ ರಕ್ತದ ಕಲೆಗಳು ಇವೆ. ಮೈಮೇಲೆ ಬುಲೆಟ್​ಗಳ ಸರಮಾಲೆ ಇದೆ. ಕೈಯಲ್ಲಿ ಅವರು ಸಿಗಾರ್ ಹಿಡಿದುಕೊಂಡಿದ್ದಾರೆ. ಅವರ ಪಕ್ಕದಲ್ಲೇ ಬಾಂಗ್​ಗಳ ಬಾಕ್ಸ್ ಇದೆ. ಅವರ ಲುಕ್ ಫ್ಯಾನ್ಸ್​ಗೆ ಸಖತ್ ಇಷ್ಟ ಆಗಿದೆ.

ಶಿವರಾಜ್​ಕುಮಾರ್ ಅವರಿಗೆ ಜುಲೈ 12ರಂದು ಜನ್ಮದಿನ. ಈ ವಿಶೇಷ ದಿನ ಸಮೀಪಿಸಿರುವುದರಿಂದ ಅವರ ಸಿನಿಮಾಗಳ ತಂಡದಿಂದ ಹೊಸ ಹೊಸ ಲುಕ್​ಗಳು ರಿವೀಲ್ ಆಗುತ್ತಿವೆ. ‘ಉತ್ತರಕಾಂಡ’ ಲುಕ್ ಎಲ್ಲರಿಗೂ ಇಷ್ಟ ಆಗಿದೆ. ಈ ಚಿತ್ರಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ.

‘ಉತ್ತರಕಾಂಡ’ ಆ್ಯಕ್ಷನ್‌ ಡ್ರಾಮಾ ಶೈಲಿಯಲ್ಲಿ ಮೂಡಿ ಬರುತ್ತಿದೆ. ರೋಹಿತ್‌ ಪದಕಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಅಮಿತ್‌ ತ್ರಿವೇದಿ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ, ಅಧ್ವೈತ ಗುರುಮೂರ್ತಿ ಛಾಯಾಗ್ರಹಣ ಚಿತ್ರಕ್ಕೆ ಇದೆ. ವಿಶ್ವಾಸ್‌ ಕಶ್ಯಪ್‌ ಪ್ರೊಡಕ್ಷನ್‌ ವಿನ್ಯಾಸ ಮಾಡಿದ್ದು, ಅನಿಲ್ ಅನಿರುದ್ಧ್ ಮುಖ್ಯ ಸಂಕಲನಕಾರರಾಗಿರುತ್ತಾರೆ. ಕೆಆರ್​ಜಿ ಸ್ಟೂಡಿಯೋಸ್‌ ಬ್ಯಾನರ್‌ ಅಡಿಯಲ್ಲಿ ಕಾರ್ತಿಕ್‌ ಗೌಡ ಮತ್ತು ಯೋಗಿ ಜಿ ರಾಜ್‌ ಚಿತ್ರವನ್ನು ನಿರ್ಮಿಸಿದ್ದಾರೆ.

ಇದನ್ನೂ ಓದಿ: ಎಲ್ಲೆಲ್ಲೂ ಶಿವಣ್ಣ; ‘ಉತ್ತರಕಾಂಡ’ ಸೆಟ್​ನಲ್ಲಿ ಶಿವರಾಜ್​ಕುಮಾರ್​ಗೆ ಅದ್ದೂರಿ ಸ್ವಾಗತ

ಈ ಸಿನಿಮಾದಲ್ಲಿ ದೊಡ್ಡ ಪಾತ್ರವರ್ಗ ಇದೆ. ಶಿವರಾಜ್​ಕುಮಾರ್, ಡಾಲಿ ಧನಂಜಯ, ಭಾವನಾ ಮೆನನ್‌, ಐಶ್ವರ್ಯ ರಾಜೇಶ್‌, ದಿಗಂತ್‌ ಮುಂತಾದವರು ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ