AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾಜ್​ಕುಮಾರ್​ ಕಂಠದಲ್ಲಿ ಮೂಡಿ ಬಂದ ‘ಕನ್ನಡಿಗ’ ಹಾಡು; ರವಿಚಂದ್ರನ್​ ಸಿನಿಮಾಗೆ ಶಿವಣ್ಣನ ಬೆಂಬಲ

ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರ್​ ಅವರು ಈ ಹಾಡಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ‘ಕೆಜಿಎಫ್​’ನಂತಹ ಹಿಟ್​ ಚಿತ್ರಗಳಿಗೆ ಸಂಗೀತ ಸಂಯೋಜನೆ ಮಾಡಿದ ಖ್ಯಾತಿ ಅವರಿಗೆ ಇದೆ. ‘

ಶಿವರಾಜ್​ಕುಮಾರ್​ ಕಂಠದಲ್ಲಿ ಮೂಡಿ ಬಂದ ‘ಕನ್ನಡಿಗ’ ಹಾಡು; ರವಿಚಂದ್ರನ್​ ಸಿನಿಮಾಗೆ ಶಿವಣ್ಣನ ಬೆಂಬಲ
ಶಿವರಾಜ್​ಕುಮಾರ್​-ರವಿಚಂದ್ರನ್
TV9 Web
| Edited By: |

Updated on:Nov 23, 2021 | 5:49 PM

Share

ನಟ ಶಿವರಾಜ್​ಕುಮಾರ್​ ಅವರು ನಟನೆಯ ಜತೆಗೆ ಕೆಲ ಹಾಡುಗಳನ್ನು ಕೂಡ ಹಾಡಿದ್ದಾರೆ. ಅವರ ಕಂಠ ಅನೇಕರಿಗೆ ಇಷ್ಟವಾಗುತ್ತದೆ. ಶಿವಣ್ಣ ಸಾಕಷ್ಟು ಹಾಡುಗಳಿಗೆ ಧ್ವನಿಯಾಗಿದ್ದಾರೆ. ಈಗ ರವಿಚಂದ್ರನ್​ ಅಭಿನಯದ ‘ಕನ್ನಡಿಗ’ ಸಿನಿಮಾದ ಟೈಟಲ್​ ಟ್ರ್ಯಾಕ್​ಅನ್ನು ಶಿವರಾಜ್​ಕುಮಾರ್​ ಹಾಡಿದ್ದಾರೆ. ಈ ಸಾಂಗ್​ ಅದ್ಭುತವಾಗಿ ಮೂಡಿ ಬಂದಿದ್ದು, ಸಿನಿಪ್ರಿಯರಿಗೆ ಇಷ್ಟವಾಗಿದೆ.

ಓಂಕಾರ್​ ಮೂವೀಸ್​ ಬ್ಯಾನರ್​ ಅಡಿಯಲ್ಲಿ ‘ಕನ್ನಡಿಗ’ ಸಿನಿಮಾ ಸಿದ್ಧವಾಗಿದೆ. ಎನ್​.ಎಸ್​. ರಾಜ್​ಕುಮಾರ್​ ಅವರು ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಬಿ.ಎಂ. ಗಿರಿರಾಜ್​ ಅವರು ಈ ಸಿನಿಮಾದ ಕಥೆಯನ್ನು ಬರೆದು ನಿರ್ದೇಶನ ಮಾಡುತ್ತಿದ್ದಾರೆ. ರವಿಂದ್ರನ್​, ಪಾವನಾ, ಜೀವಿಕಾ ಜಗದೀಶ್​ ಮೈತ್ರಿ, ಬಾಲಾಜಿ ಮನನೋಹರ್​, ಅಚ್ಯುತ್​ ಕುಮಾರ್​ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾದ ಟೈಟಲ್​ ಟ್ರ್ಯಾಕ್​ ಶಿವರಾಜ್​ಕುಮಾರ್​​ ಕಂಠದಿಂದ ಮೂಡಿ ಬಂದಿದೆ.

ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರ್​ ಅವರು ಈ ಹಾಡಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ‘ಕೆಜಿಎಫ್​’ನಂತಹ ಹಿಟ್​ ಚಿತ್ರಗಳಿಗೆ ಸಂಗೀತ ಸಂಯೋಜನೆ ಮಾಡಿದ ಖ್ಯಾತಿ ಅವರಿಗೆ ಇದೆ. ‘ಕೆಜಿಎಫ್​’ ಸಿನಿಮಾ ಮೂಲಕ ಅವರ ಜನಪ್ರಿಯತೆ ಹೆಚ್ಚಾಗಿದೆ. ಈಗ ‘ಕನ್ನಡಿಗ’ ಚಿತ್ರಕ್ಕೂ ಅವರೇ ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಹಾಡಿಗೆ ಖ್ಯಾತ ನಿರ್ದೇಶಕ ಸಂತೋಷ್​ ಆನಂದ್​ರಾಮ್​ ಅವರು ಸಾಹಿತ್ಯ ಬರೆದಿದ್ದಾರೆ.

ರವಿಚಂದ್ರನ್​ ಅವರು ಸಾಲುಸಾಲು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ‘ಕನ್ನಡಿಗ’ ಚಿತ್ರ ಹೆಸರೇ ಹೇಳುವಂತೆ ಇದೊಂದು ಕನ್ನಡಿಗನ ಕಥೆ ಹೇಳುತ್ತದೆ ಎಂಬುದು ಗೊತ್ತಾಗುತ್ತದೆ. ‘ಕನ್ನಡಿಗ’ ಯಾವ ರೀತಿಯಲ್ಲಿ ಮೂಡಿ ಬಂದಿದೆ ಎಂಬುದನ್ನು ಕಾದು ನೋಡಬೇಕಿದೆ. ಈ ಸಿನಿಮಾ ಯಾವಾಗ ರಿಲೀಸ್​ ಆಗಲಿದೆ ಎನ್ನುವ ವಿಚಾರಕ್ಕೆ ಚಿತ್ರತಂಡದಿಂದಲೇ ಉತ್ತರ ಸಿಗಬೇಕಿದೆ.

ಪುನೀತ್​ ರಾಜ್​ಕುಮಾರ್​ ಅವರು ಅಕ್ಟೋಬರ್​ 29ರಂದು ಮೃತಪಟ್ಟರು. ಅವರ ಅಕಾಲಿಕ ಮರಣದಿಂದ ರಾಜ್​ಕುಮಾರ್​ ಕುಟುಂಬಕ್ಕೆ ಶಾಕ್​ ಉಂಟಾಗಿದೆ. ಶಿವರಾಜ್​ಕುಮಾರ್​ ಅವರು ಯಾವುದೇ ಸಿನಿಮಾ ಕೆಲಸಗಳಲ್ಲೂ ತೊಡಗಿಕೊಳ್ಳುತ್ತಿಲ್ಲ. ಅವರು ಈ ಹಾಡನ್ನು ಪುನೀತ್​ ನಿಧನ ಹೊಂದುವುದಕ್ಕೂ ಮೊದಲೇ ಹಾಡಿದ್ದರು.

ಇದನ್ನೂ ಓದಿ: ‘ಭಜರಂಗಿ 2’ ಸಿನಿಮಾ ನೋಡಿದ ನಂತರ ಮಹತ್ವದ ಘೋಷಣೆ ಮಾಡಿದ ಶಿವರಾಜ್​ಕುಮಾರ್​

‘ಸಾಧು ನನ್ನ ಕೈಗೆ ಸಿಕ್ಕಿದ್ದರೆ ಒಂದೆರಡು ಏಟು ಚೆನ್ನಾಗಿ ಬಿದ್ದಿರುತ್ತಿತ್ತು’: ರವಿಚಂದ್ರನ್​

Published On - 5:31 pm, Tue, 23 November 21

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್