AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾಜ್​ಕುಮಾರ್​ ಕಂಠದಲ್ಲಿ ಮೂಡಿ ಬಂದ ‘ಕನ್ನಡಿಗ’ ಹಾಡು; ರವಿಚಂದ್ರನ್​ ಸಿನಿಮಾಗೆ ಶಿವಣ್ಣನ ಬೆಂಬಲ

ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರ್​ ಅವರು ಈ ಹಾಡಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ‘ಕೆಜಿಎಫ್​’ನಂತಹ ಹಿಟ್​ ಚಿತ್ರಗಳಿಗೆ ಸಂಗೀತ ಸಂಯೋಜನೆ ಮಾಡಿದ ಖ್ಯಾತಿ ಅವರಿಗೆ ಇದೆ. ‘

ಶಿವರಾಜ್​ಕುಮಾರ್​ ಕಂಠದಲ್ಲಿ ಮೂಡಿ ಬಂದ ‘ಕನ್ನಡಿಗ’ ಹಾಡು; ರವಿಚಂದ್ರನ್​ ಸಿನಿಮಾಗೆ ಶಿವಣ್ಣನ ಬೆಂಬಲ
ಶಿವರಾಜ್​ಕುಮಾರ್​-ರವಿಚಂದ್ರನ್
TV9 Web
| Edited By: |

Updated on:Nov 23, 2021 | 5:49 PM

Share

ನಟ ಶಿವರಾಜ್​ಕುಮಾರ್​ ಅವರು ನಟನೆಯ ಜತೆಗೆ ಕೆಲ ಹಾಡುಗಳನ್ನು ಕೂಡ ಹಾಡಿದ್ದಾರೆ. ಅವರ ಕಂಠ ಅನೇಕರಿಗೆ ಇಷ್ಟವಾಗುತ್ತದೆ. ಶಿವಣ್ಣ ಸಾಕಷ್ಟು ಹಾಡುಗಳಿಗೆ ಧ್ವನಿಯಾಗಿದ್ದಾರೆ. ಈಗ ರವಿಚಂದ್ರನ್​ ಅಭಿನಯದ ‘ಕನ್ನಡಿಗ’ ಸಿನಿಮಾದ ಟೈಟಲ್​ ಟ್ರ್ಯಾಕ್​ಅನ್ನು ಶಿವರಾಜ್​ಕುಮಾರ್​ ಹಾಡಿದ್ದಾರೆ. ಈ ಸಾಂಗ್​ ಅದ್ಭುತವಾಗಿ ಮೂಡಿ ಬಂದಿದ್ದು, ಸಿನಿಪ್ರಿಯರಿಗೆ ಇಷ್ಟವಾಗಿದೆ.

ಓಂಕಾರ್​ ಮೂವೀಸ್​ ಬ್ಯಾನರ್​ ಅಡಿಯಲ್ಲಿ ‘ಕನ್ನಡಿಗ’ ಸಿನಿಮಾ ಸಿದ್ಧವಾಗಿದೆ. ಎನ್​.ಎಸ್​. ರಾಜ್​ಕುಮಾರ್​ ಅವರು ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಬಿ.ಎಂ. ಗಿರಿರಾಜ್​ ಅವರು ಈ ಸಿನಿಮಾದ ಕಥೆಯನ್ನು ಬರೆದು ನಿರ್ದೇಶನ ಮಾಡುತ್ತಿದ್ದಾರೆ. ರವಿಂದ್ರನ್​, ಪಾವನಾ, ಜೀವಿಕಾ ಜಗದೀಶ್​ ಮೈತ್ರಿ, ಬಾಲಾಜಿ ಮನನೋಹರ್​, ಅಚ್ಯುತ್​ ಕುಮಾರ್​ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾದ ಟೈಟಲ್​ ಟ್ರ್ಯಾಕ್​ ಶಿವರಾಜ್​ಕುಮಾರ್​​ ಕಂಠದಿಂದ ಮೂಡಿ ಬಂದಿದೆ.

ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರ್​ ಅವರು ಈ ಹಾಡಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ‘ಕೆಜಿಎಫ್​’ನಂತಹ ಹಿಟ್​ ಚಿತ್ರಗಳಿಗೆ ಸಂಗೀತ ಸಂಯೋಜನೆ ಮಾಡಿದ ಖ್ಯಾತಿ ಅವರಿಗೆ ಇದೆ. ‘ಕೆಜಿಎಫ್​’ ಸಿನಿಮಾ ಮೂಲಕ ಅವರ ಜನಪ್ರಿಯತೆ ಹೆಚ್ಚಾಗಿದೆ. ಈಗ ‘ಕನ್ನಡಿಗ’ ಚಿತ್ರಕ್ಕೂ ಅವರೇ ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಹಾಡಿಗೆ ಖ್ಯಾತ ನಿರ್ದೇಶಕ ಸಂತೋಷ್​ ಆನಂದ್​ರಾಮ್​ ಅವರು ಸಾಹಿತ್ಯ ಬರೆದಿದ್ದಾರೆ.

ರವಿಚಂದ್ರನ್​ ಅವರು ಸಾಲುಸಾಲು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ‘ಕನ್ನಡಿಗ’ ಚಿತ್ರ ಹೆಸರೇ ಹೇಳುವಂತೆ ಇದೊಂದು ಕನ್ನಡಿಗನ ಕಥೆ ಹೇಳುತ್ತದೆ ಎಂಬುದು ಗೊತ್ತಾಗುತ್ತದೆ. ‘ಕನ್ನಡಿಗ’ ಯಾವ ರೀತಿಯಲ್ಲಿ ಮೂಡಿ ಬಂದಿದೆ ಎಂಬುದನ್ನು ಕಾದು ನೋಡಬೇಕಿದೆ. ಈ ಸಿನಿಮಾ ಯಾವಾಗ ರಿಲೀಸ್​ ಆಗಲಿದೆ ಎನ್ನುವ ವಿಚಾರಕ್ಕೆ ಚಿತ್ರತಂಡದಿಂದಲೇ ಉತ್ತರ ಸಿಗಬೇಕಿದೆ.

ಪುನೀತ್​ ರಾಜ್​ಕುಮಾರ್​ ಅವರು ಅಕ್ಟೋಬರ್​ 29ರಂದು ಮೃತಪಟ್ಟರು. ಅವರ ಅಕಾಲಿಕ ಮರಣದಿಂದ ರಾಜ್​ಕುಮಾರ್​ ಕುಟುಂಬಕ್ಕೆ ಶಾಕ್​ ಉಂಟಾಗಿದೆ. ಶಿವರಾಜ್​ಕುಮಾರ್​ ಅವರು ಯಾವುದೇ ಸಿನಿಮಾ ಕೆಲಸಗಳಲ್ಲೂ ತೊಡಗಿಕೊಳ್ಳುತ್ತಿಲ್ಲ. ಅವರು ಈ ಹಾಡನ್ನು ಪುನೀತ್​ ನಿಧನ ಹೊಂದುವುದಕ್ಕೂ ಮೊದಲೇ ಹಾಡಿದ್ದರು.

ಇದನ್ನೂ ಓದಿ: ‘ಭಜರಂಗಿ 2’ ಸಿನಿಮಾ ನೋಡಿದ ನಂತರ ಮಹತ್ವದ ಘೋಷಣೆ ಮಾಡಿದ ಶಿವರಾಜ್​ಕುಮಾರ್​

‘ಸಾಧು ನನ್ನ ಕೈಗೆ ಸಿಕ್ಕಿದ್ದರೆ ಒಂದೆರಡು ಏಟು ಚೆನ್ನಾಗಿ ಬಿದ್ದಿರುತ್ತಿತ್ತು’: ರವಿಚಂದ್ರನ್​

Published On - 5:31 pm, Tue, 23 November 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ