AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾಜ್​ಕುಮಾರ್​ ಕಂಠದಲ್ಲಿ ಮೂಡಿ ಬಂದ ‘ಕನ್ನಡಿಗ’ ಹಾಡು; ರವಿಚಂದ್ರನ್​ ಸಿನಿಮಾಗೆ ಶಿವಣ್ಣನ ಬೆಂಬಲ

ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರ್​ ಅವರು ಈ ಹಾಡಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ‘ಕೆಜಿಎಫ್​’ನಂತಹ ಹಿಟ್​ ಚಿತ್ರಗಳಿಗೆ ಸಂಗೀತ ಸಂಯೋಜನೆ ಮಾಡಿದ ಖ್ಯಾತಿ ಅವರಿಗೆ ಇದೆ. ‘

ಶಿವರಾಜ್​ಕುಮಾರ್​ ಕಂಠದಲ್ಲಿ ಮೂಡಿ ಬಂದ ‘ಕನ್ನಡಿಗ’ ಹಾಡು; ರವಿಚಂದ್ರನ್​ ಸಿನಿಮಾಗೆ ಶಿವಣ್ಣನ ಬೆಂಬಲ
ಶಿವರಾಜ್​ಕುಮಾರ್​-ರವಿಚಂದ್ರನ್
TV9 Web
| Edited By: |

Updated on:Nov 23, 2021 | 5:49 PM

Share

ನಟ ಶಿವರಾಜ್​ಕುಮಾರ್​ ಅವರು ನಟನೆಯ ಜತೆಗೆ ಕೆಲ ಹಾಡುಗಳನ್ನು ಕೂಡ ಹಾಡಿದ್ದಾರೆ. ಅವರ ಕಂಠ ಅನೇಕರಿಗೆ ಇಷ್ಟವಾಗುತ್ತದೆ. ಶಿವಣ್ಣ ಸಾಕಷ್ಟು ಹಾಡುಗಳಿಗೆ ಧ್ವನಿಯಾಗಿದ್ದಾರೆ. ಈಗ ರವಿಚಂದ್ರನ್​ ಅಭಿನಯದ ‘ಕನ್ನಡಿಗ’ ಸಿನಿಮಾದ ಟೈಟಲ್​ ಟ್ರ್ಯಾಕ್​ಅನ್ನು ಶಿವರಾಜ್​ಕುಮಾರ್​ ಹಾಡಿದ್ದಾರೆ. ಈ ಸಾಂಗ್​ ಅದ್ಭುತವಾಗಿ ಮೂಡಿ ಬಂದಿದ್ದು, ಸಿನಿಪ್ರಿಯರಿಗೆ ಇಷ್ಟವಾಗಿದೆ.

ಓಂಕಾರ್​ ಮೂವೀಸ್​ ಬ್ಯಾನರ್​ ಅಡಿಯಲ್ಲಿ ‘ಕನ್ನಡಿಗ’ ಸಿನಿಮಾ ಸಿದ್ಧವಾಗಿದೆ. ಎನ್​.ಎಸ್​. ರಾಜ್​ಕುಮಾರ್​ ಅವರು ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಬಿ.ಎಂ. ಗಿರಿರಾಜ್​ ಅವರು ಈ ಸಿನಿಮಾದ ಕಥೆಯನ್ನು ಬರೆದು ನಿರ್ದೇಶನ ಮಾಡುತ್ತಿದ್ದಾರೆ. ರವಿಂದ್ರನ್​, ಪಾವನಾ, ಜೀವಿಕಾ ಜಗದೀಶ್​ ಮೈತ್ರಿ, ಬಾಲಾಜಿ ಮನನೋಹರ್​, ಅಚ್ಯುತ್​ ಕುಮಾರ್​ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾದ ಟೈಟಲ್​ ಟ್ರ್ಯಾಕ್​ ಶಿವರಾಜ್​ಕುಮಾರ್​​ ಕಂಠದಿಂದ ಮೂಡಿ ಬಂದಿದೆ.

ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರ್​ ಅವರು ಈ ಹಾಡಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ‘ಕೆಜಿಎಫ್​’ನಂತಹ ಹಿಟ್​ ಚಿತ್ರಗಳಿಗೆ ಸಂಗೀತ ಸಂಯೋಜನೆ ಮಾಡಿದ ಖ್ಯಾತಿ ಅವರಿಗೆ ಇದೆ. ‘ಕೆಜಿಎಫ್​’ ಸಿನಿಮಾ ಮೂಲಕ ಅವರ ಜನಪ್ರಿಯತೆ ಹೆಚ್ಚಾಗಿದೆ. ಈಗ ‘ಕನ್ನಡಿಗ’ ಚಿತ್ರಕ್ಕೂ ಅವರೇ ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಹಾಡಿಗೆ ಖ್ಯಾತ ನಿರ್ದೇಶಕ ಸಂತೋಷ್​ ಆನಂದ್​ರಾಮ್​ ಅವರು ಸಾಹಿತ್ಯ ಬರೆದಿದ್ದಾರೆ.

ರವಿಚಂದ್ರನ್​ ಅವರು ಸಾಲುಸಾಲು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ‘ಕನ್ನಡಿಗ’ ಚಿತ್ರ ಹೆಸರೇ ಹೇಳುವಂತೆ ಇದೊಂದು ಕನ್ನಡಿಗನ ಕಥೆ ಹೇಳುತ್ತದೆ ಎಂಬುದು ಗೊತ್ತಾಗುತ್ತದೆ. ‘ಕನ್ನಡಿಗ’ ಯಾವ ರೀತಿಯಲ್ಲಿ ಮೂಡಿ ಬಂದಿದೆ ಎಂಬುದನ್ನು ಕಾದು ನೋಡಬೇಕಿದೆ. ಈ ಸಿನಿಮಾ ಯಾವಾಗ ರಿಲೀಸ್​ ಆಗಲಿದೆ ಎನ್ನುವ ವಿಚಾರಕ್ಕೆ ಚಿತ್ರತಂಡದಿಂದಲೇ ಉತ್ತರ ಸಿಗಬೇಕಿದೆ.

ಪುನೀತ್​ ರಾಜ್​ಕುಮಾರ್​ ಅವರು ಅಕ್ಟೋಬರ್​ 29ರಂದು ಮೃತಪಟ್ಟರು. ಅವರ ಅಕಾಲಿಕ ಮರಣದಿಂದ ರಾಜ್​ಕುಮಾರ್​ ಕುಟುಂಬಕ್ಕೆ ಶಾಕ್​ ಉಂಟಾಗಿದೆ. ಶಿವರಾಜ್​ಕುಮಾರ್​ ಅವರು ಯಾವುದೇ ಸಿನಿಮಾ ಕೆಲಸಗಳಲ್ಲೂ ತೊಡಗಿಕೊಳ್ಳುತ್ತಿಲ್ಲ. ಅವರು ಈ ಹಾಡನ್ನು ಪುನೀತ್​ ನಿಧನ ಹೊಂದುವುದಕ್ಕೂ ಮೊದಲೇ ಹಾಡಿದ್ದರು.

ಇದನ್ನೂ ಓದಿ: ‘ಭಜರಂಗಿ 2’ ಸಿನಿಮಾ ನೋಡಿದ ನಂತರ ಮಹತ್ವದ ಘೋಷಣೆ ಮಾಡಿದ ಶಿವರಾಜ್​ಕುಮಾರ್​

‘ಸಾಧು ನನ್ನ ಕೈಗೆ ಸಿಕ್ಕಿದ್ದರೆ ಒಂದೆರಡು ಏಟು ಚೆನ್ನಾಗಿ ಬಿದ್ದಿರುತ್ತಿತ್ತು’: ರವಿಚಂದ್ರನ್​

Published On - 5:31 pm, Tue, 23 November 21

Follow Us
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ
Video: ರಸ್ತೆ ದಾಟಲು ಪರದಾಡಿದ ಕಾಡಾನೆಗಳ ಹಿಂಡು!
Video: ರಸ್ತೆ ದಾಟಲು ಪರದಾಡಿದ ಕಾಡಾನೆಗಳ ಹಿಂಡು!
ಬಾಗಲಕೋಟೆಯ ಬೀಳಗಿ ಕ್ರಾಸ್ ಬಳಿ ಬಸ್ ಪಲ್ಟಿ, ಇಬ್ಬರು ಸಾವು
ಬಾಗಲಕೋಟೆಯ ಬೀಳಗಿ ಕ್ರಾಸ್ ಬಳಿ ಬಸ್ ಪಲ್ಟಿ, ಇಬ್ಬರು ಸಾವು
ಸರ್ಕಾರಿ ಆಂಬ್ಯುಲೆನ್ಸ್ ಏರ್‌ಪೋರ್ಟ್‌ನ ವಿಐಪಿ ಪ್ರೋಟೋಕಾಲ್‌ಗೆ ಬಳಕೆ
ಸರ್ಕಾರಿ ಆಂಬ್ಯುಲೆನ್ಸ್ ಏರ್‌ಪೋರ್ಟ್‌ನ ವಿಐಪಿ ಪ್ರೋಟೋಕಾಲ್‌ಗೆ ಬಳಕೆ
ಕೆಆರ್​ಎಸ್​ನಿಂದ ಕದ್ದು ಮುಚ್ಚಿ ತಮಿಳುನಾಡಿಗೆ ನೀರು ಹರಿಸ್ತಿದ್ಯಾ ಸರ್ಕಾರ?
ಕೆಆರ್​ಎಸ್​ನಿಂದ ಕದ್ದು ಮುಚ್ಚಿ ತಮಿಳುನಾಡಿಗೆ ನೀರು ಹರಿಸ್ತಿದ್ಯಾ ಸರ್ಕಾರ?
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್
ಚಿಕ್ಕಬಳ್ಳಾಪುರ: 2 ವರ್ಷದಲ್ಲಿ 30 ಮಂದಿಯನ್ನು ಬಲಿ ಪಡೆದ ಸಾವಿನ ಹೆದ್ದಾರಿ
ಚಿಕ್ಕಬಳ್ಳಾಪುರ: 2 ವರ್ಷದಲ್ಲಿ 30 ಮಂದಿಯನ್ನು ಬಲಿ ಪಡೆದ ಸಾವಿನ ಹೆದ್ದಾರಿ