AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾಜ್​ಕುಮಾರ್​ ಕಂಠದಲ್ಲಿ ಮೂಡಿ ಬಂದ ‘ಕನ್ನಡಿಗ’ ಹಾಡು; ರವಿಚಂದ್ರನ್​ ಸಿನಿಮಾಗೆ ಶಿವಣ್ಣನ ಬೆಂಬಲ

ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರ್​ ಅವರು ಈ ಹಾಡಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ‘ಕೆಜಿಎಫ್​’ನಂತಹ ಹಿಟ್​ ಚಿತ್ರಗಳಿಗೆ ಸಂಗೀತ ಸಂಯೋಜನೆ ಮಾಡಿದ ಖ್ಯಾತಿ ಅವರಿಗೆ ಇದೆ. ‘

ಶಿವರಾಜ್​ಕುಮಾರ್​ ಕಂಠದಲ್ಲಿ ಮೂಡಿ ಬಂದ ‘ಕನ್ನಡಿಗ’ ಹಾಡು; ರವಿಚಂದ್ರನ್​ ಸಿನಿಮಾಗೆ ಶಿವಣ್ಣನ ಬೆಂಬಲ
ಶಿವರಾಜ್​ಕುಮಾರ್​-ರವಿಚಂದ್ರನ್
TV9 Web
| Edited By: |

Updated on:Nov 23, 2021 | 5:49 PM

Share

ನಟ ಶಿವರಾಜ್​ಕುಮಾರ್​ ಅವರು ನಟನೆಯ ಜತೆಗೆ ಕೆಲ ಹಾಡುಗಳನ್ನು ಕೂಡ ಹಾಡಿದ್ದಾರೆ. ಅವರ ಕಂಠ ಅನೇಕರಿಗೆ ಇಷ್ಟವಾಗುತ್ತದೆ. ಶಿವಣ್ಣ ಸಾಕಷ್ಟು ಹಾಡುಗಳಿಗೆ ಧ್ವನಿಯಾಗಿದ್ದಾರೆ. ಈಗ ರವಿಚಂದ್ರನ್​ ಅಭಿನಯದ ‘ಕನ್ನಡಿಗ’ ಸಿನಿಮಾದ ಟೈಟಲ್​ ಟ್ರ್ಯಾಕ್​ಅನ್ನು ಶಿವರಾಜ್​ಕುಮಾರ್​ ಹಾಡಿದ್ದಾರೆ. ಈ ಸಾಂಗ್​ ಅದ್ಭುತವಾಗಿ ಮೂಡಿ ಬಂದಿದ್ದು, ಸಿನಿಪ್ರಿಯರಿಗೆ ಇಷ್ಟವಾಗಿದೆ.

ಓಂಕಾರ್​ ಮೂವೀಸ್​ ಬ್ಯಾನರ್​ ಅಡಿಯಲ್ಲಿ ‘ಕನ್ನಡಿಗ’ ಸಿನಿಮಾ ಸಿದ್ಧವಾಗಿದೆ. ಎನ್​.ಎಸ್​. ರಾಜ್​ಕುಮಾರ್​ ಅವರು ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಬಿ.ಎಂ. ಗಿರಿರಾಜ್​ ಅವರು ಈ ಸಿನಿಮಾದ ಕಥೆಯನ್ನು ಬರೆದು ನಿರ್ದೇಶನ ಮಾಡುತ್ತಿದ್ದಾರೆ. ರವಿಂದ್ರನ್​, ಪಾವನಾ, ಜೀವಿಕಾ ಜಗದೀಶ್​ ಮೈತ್ರಿ, ಬಾಲಾಜಿ ಮನನೋಹರ್​, ಅಚ್ಯುತ್​ ಕುಮಾರ್​ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾದ ಟೈಟಲ್​ ಟ್ರ್ಯಾಕ್​ ಶಿವರಾಜ್​ಕುಮಾರ್​​ ಕಂಠದಿಂದ ಮೂಡಿ ಬಂದಿದೆ.

ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರ್​ ಅವರು ಈ ಹಾಡಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ‘ಕೆಜಿಎಫ್​’ನಂತಹ ಹಿಟ್​ ಚಿತ್ರಗಳಿಗೆ ಸಂಗೀತ ಸಂಯೋಜನೆ ಮಾಡಿದ ಖ್ಯಾತಿ ಅವರಿಗೆ ಇದೆ. ‘ಕೆಜಿಎಫ್​’ ಸಿನಿಮಾ ಮೂಲಕ ಅವರ ಜನಪ್ರಿಯತೆ ಹೆಚ್ಚಾಗಿದೆ. ಈಗ ‘ಕನ್ನಡಿಗ’ ಚಿತ್ರಕ್ಕೂ ಅವರೇ ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಹಾಡಿಗೆ ಖ್ಯಾತ ನಿರ್ದೇಶಕ ಸಂತೋಷ್​ ಆನಂದ್​ರಾಮ್​ ಅವರು ಸಾಹಿತ್ಯ ಬರೆದಿದ್ದಾರೆ.

ರವಿಚಂದ್ರನ್​ ಅವರು ಸಾಲುಸಾಲು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ‘ಕನ್ನಡಿಗ’ ಚಿತ್ರ ಹೆಸರೇ ಹೇಳುವಂತೆ ಇದೊಂದು ಕನ್ನಡಿಗನ ಕಥೆ ಹೇಳುತ್ತದೆ ಎಂಬುದು ಗೊತ್ತಾಗುತ್ತದೆ. ‘ಕನ್ನಡಿಗ’ ಯಾವ ರೀತಿಯಲ್ಲಿ ಮೂಡಿ ಬಂದಿದೆ ಎಂಬುದನ್ನು ಕಾದು ನೋಡಬೇಕಿದೆ. ಈ ಸಿನಿಮಾ ಯಾವಾಗ ರಿಲೀಸ್​ ಆಗಲಿದೆ ಎನ್ನುವ ವಿಚಾರಕ್ಕೆ ಚಿತ್ರತಂಡದಿಂದಲೇ ಉತ್ತರ ಸಿಗಬೇಕಿದೆ.

ಪುನೀತ್​ ರಾಜ್​ಕುಮಾರ್​ ಅವರು ಅಕ್ಟೋಬರ್​ 29ರಂದು ಮೃತಪಟ್ಟರು. ಅವರ ಅಕಾಲಿಕ ಮರಣದಿಂದ ರಾಜ್​ಕುಮಾರ್​ ಕುಟುಂಬಕ್ಕೆ ಶಾಕ್​ ಉಂಟಾಗಿದೆ. ಶಿವರಾಜ್​ಕುಮಾರ್​ ಅವರು ಯಾವುದೇ ಸಿನಿಮಾ ಕೆಲಸಗಳಲ್ಲೂ ತೊಡಗಿಕೊಳ್ಳುತ್ತಿಲ್ಲ. ಅವರು ಈ ಹಾಡನ್ನು ಪುನೀತ್​ ನಿಧನ ಹೊಂದುವುದಕ್ಕೂ ಮೊದಲೇ ಹಾಡಿದ್ದರು.

ಇದನ್ನೂ ಓದಿ: ‘ಭಜರಂಗಿ 2’ ಸಿನಿಮಾ ನೋಡಿದ ನಂತರ ಮಹತ್ವದ ಘೋಷಣೆ ಮಾಡಿದ ಶಿವರಾಜ್​ಕುಮಾರ್​

‘ಸಾಧು ನನ್ನ ಕೈಗೆ ಸಿಕ್ಕಿದ್ದರೆ ಒಂದೆರಡು ಏಟು ಚೆನ್ನಾಗಿ ಬಿದ್ದಿರುತ್ತಿತ್ತು’: ರವಿಚಂದ್ರನ್​

Published On - 5:31 pm, Tue, 23 November 21

Follow Us
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ