AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivarajkumar: ‘ಎಲ್ಲರಿಗೂ ಬಾಸ್ ಒಬ್ಬರೇ’; ಬಾಸ್ ಎಂದ ಅಭಿಮಾನಿಗೆ ಬುದ್ಧಿವಾದ ಹೇಳಿದ ಶಿವಣ್ಣ

ನವೆಂಬರ್ 28ರಂದು ಮೈಸೂರಿನ ಇಟ್ಟಿಗೆಗೂಡು ಬಡಾವಣೆಯಲ್ಲಿ ಡಾ. ರಾಜ್​ಕುಮಾರ್ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮದಲ್ಲಿ ಶಿವಣ್ಣ ಭಾಗಿ ಆಗಿದ್ದರು. ಈ ಕಾರ್ಯಕ್ರಮದಲ್ಲಿ ಅವರು ಬಾಸ್ ವಿಚಾರವಾಗಿ ಮಾತನಾಡಿದ್ದಾರೆ.

Shivarajkumar: ‘ಎಲ್ಲರಿಗೂ ಬಾಸ್ ಒಬ್ಬರೇ’; ಬಾಸ್ ಎಂದ ಅಭಿಮಾನಿಗೆ ಬುದ್ಧಿವಾದ ಹೇಳಿದ ಶಿವಣ್ಣ
ಶಿವರಾಜ್​ಕುಮಾರ್
TV9 Web
| Edited By: |

Updated on:Dec 29, 2022 | 9:11 AM

Share

ಶಿವರಾಜ್​ಕುಮಾರ್ (Shivarajkumar) ಅವರು ಹಲವು ಬಾರಿ ನೇರ ಮಾತುಗಳನ್ನು ಆಡುವ ಮೂಲಕ ಗುರುತಿಸಿಕೊಂಡಿದ್ದಾರೆ. ಈಗ ಅವರು ಬಾಸ್ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಬಾಸ್ ಬಿರುದಿಗಾಗಿ ಅಭಿಮಾನಿಗಳ ಮಧ್ಯೆ ಕಿತ್ತಾಟ ನಡೆದೇ ಇದೆ. ಹಲವು ಸ್ಟಾರ್​​ಗಳ ಅಭಿಮಾನಿಗಳು ಈ ವಿಚಾರಕ್ಕಾಗಿ ಕಿತ್ತಾಡಿಕೊಳ್ಳುತ್ತಿದ್ದಾರೆ. ಈ ವಿಚಾರದಲ್ಲಿ ಜಗಳ ಮಾಡಿಕೊಳ್ಳುವ ಅಭಿಮಾನಿಗಳಿಗೆ ಶಿವರಾಜ್​ಕುಮಾರ್ ಅವರು ಕಿವಿಮಾತು ಹೇಳಿದ್ದಾರೆ. ‘ಎಲ್ಲರಿಗೂ ಒಬ್ಬರೇ ಬಾಸ್. ಅದು ದೇವರು’ ಎಂದಿದ್ದಾರೆ ಶಿವರಾಜ್​ಕುಮಾರ್​.

ನವೆಂಬರ್ 28ರಂದು ಮೈಸೂರಿನ ಇಟ್ಟಿಗೆಗೂಡು ಬಡಾವಣೆಯಲ್ಲಿ ಡಾ. ರಾಜ್​ಕುಮಾರ್ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮದಲ್ಲಿ ಶಿವಣ್ಣ ಭಾಗಿ ಆಗಿದ್ದರು. ಈ ಕಾರ್ಯಕ್ರಮದಲ್ಲಿ ಅವರು ಬಾಸ್ ವಿಚಾರವಾಗಿ ಮಾತನಾಡಿದ್ದಾರೆ. ‘ಎಲ್ಲರಿಗೂ ಬಾಸ್ ಒಬ್ಬರೇ ಅದು ದೇವರು. ಏಕೆ ಬಾಸ್ ಬಾಸ್ ಅಂತಾ ಒದ್ದಾಡ್ತೀರಾ? ಎಲ್ಲರ ಮನೆಯಲ್ಲೂ ಒಬ್ಬೊಬ್ಬ ಬಾಸ್ ಇರುತ್ತಾನೆ. ಎಲ್ಲರ ಹೃದಯದಲ್ಲೂ ಒಬ್ಬ ಬಾಸ್ ಇರ್ತಾನೆ. ಮನೆಗೆ ಅವನೇ ಬಾಸ್. ನಾನೊಬ್ಬನೇ ಬಾಸ್ ಅಲ್ಲ’ ಎಂದಿದ್ದಾರೆ ಶಿವರಾಜ್​ಕುಮಾರ್.

ಈ ಹೇಳಿಕೆ ಬಂದಿದ್ದೇಕೆ?

ಮೈಸೂರಿನ ರಿಫ್ರೆಶ್​​ಮೆಂಟ್ ಮಾಲೀಕ ವಿಶ್ವ ಎಂಬುವವರು ಈ ಕಾರ್ಯಕ್ರಮ ಆಯೋಜಿಸಿದ್ದರು. ಅಲ್ಲಿದ್ದ ಯುವಕನೋರ್ವ ‘ವಿಶ್ವ ಅವರನ್ನು ನಮ್ಮ ಬಾಸ್’ ಎಂದರು. ಯುವಕನಿಗೆ ಬಾಸ್ ಬಗ್ಗೆ ಶಿವಣ್ಣ ವಿವರಣೆ ನೀಡಿದ್ದಾರೆ. ಶಿವರಾಜ್​ಕುಮಾರ್ ಮಾತಿಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ಕಾರ್ಯಕ್ರಮದಲ್ಲಿ ನಿರ್ಮಾಪಕ ಸಂದೇಶ್ ಸೇರಿ ಹಲವರು ಭಾಗಿ ಆಗಿದ್ದರು.

ಇದನ್ನೂ ಓದಿ
Image
Swetha Changappa: ‘ವೇದ’ ಚಿತ್ರದಲ್ಲಿ ಬೋಲ್ಡ್​ ಪಾತ್ರ ಮಾಡಿದ ಶ್ವೇತಾ ಚಂಗಪ್ಪ; ಅಭಿಮಾನಿಗಳಿಂದ ಭರ್ಜರಿ ಮೆಚ್ಚುಗೆ
Image
Vedha Movie: ‘ಆ ಹೆಣ್ಮಕ್ಕಳಿಗೆ ಒಳ್ಳೇ ಹೆಸರು ಬಂದಿದ್ದು ಖುಷಿ’: ‘ವೇದ’ ಗೆಲುವಿನ ಬಗ್ಗೆ ಗೀತಾ ಶಿವರಾಜ್​ಕುಮಾರ್​ ಮಾತು
Image
Vedha Review: ಉಪದೇಶ ಮಾಡೋದರ ಜೊತೆಗೆ ಹೆಣ್ಮಕ್ಕಳ ಕೈಗೆ ಆಯುಧ ನೀಡಿದ ‘ವೇದ’
Image
Vedha: ‘ವೇದ’ ಕುರಿತು ಇಂಚಿಂಚೂ ಮಾಹಿತಿ ಹಂಚಿಕೊಂಡ ಶಿವಣ್ಣ; ಇಲ್ಲಿದೆ ಟಿವಿ9 ಸ್ಪೆಷಲ್​ ಸಂದರ್ಶನ

ವೇದ ಗೆದ್ದ ಸಂಭ್ರಮದಲ್ಲಿ ಶಿವಣ್ಣ

ಶಿವರಾಜ್​ಕುಮಾರ್ ಅವರು ‘ವೇದ’ ಸಿನಿಮಾ ಗೆದ್ದ ಖುಷಿಯಲ್ಲಿದ್ದಾರೆ. ನಿರ್ದೇಶಕ ಎ.ಹರ್ಷ ಜತೆಗೆ ಸೇರಿ ಮಾಡಿರುವ ನಾಲ್ಕನೇ ಸಿನಿಮಾ ಇದಾಗಿದೆ. ಈ ಸಿನಿಮಾದ ವಿಜಯ ಯಾತ್ರೆಯಲ್ಲಿ ಶಿವರಾಜ್​ಕುಮಾರ್ ಭಾಗಿ ಆಗುತ್ತಿದ್ದಾರೆ. ಇದಕ್ಕಾಗಿ ಅವರು ನಾನಾ ಕಡೆಗೆ ತೆರಳುತ್ತಿದ್ದಾರೆ. ಸದ್ಯ ಅವರು ಮೈಸೂರಿನಲ್ಲಿದ್ದಾರೆ.

ಹರ್ಷ ಕಾಂಬಿನೇಷನ್​ ಬಗ್ಗೆ ಮಾತನಾಡಿದ್ದ ಶಿವಣ್ಣ

ನಿರ್ದೇಶಕ ಎ. ಹರ್ಷ ಮತ್ತು ನಟ ಶಿವರಾಜ್​ಕುಮಾರ್ ಅವರು ‘ಭಜರಂಗಿ’, ‘ವಜ್ರಕಾಯ’, ‘ಭಜರಂಗಿ 2’, ‘ವೇದ’ ಸಿನಿಮಾಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ದಾರೆ. ‘ವೇದ’ ಚಿತ್ರ ಯಶಸ್ಸು ಕಂಡಿದ್ದು, ಹಲವು ಚಿತ್ರಮಂದಿರಗಳಿಗೆ ಎ. ಹರ್ಷ ಮತ್ತು ಶಿವಣ್ಣ ಜೊತೆಯಾಗಿ ಭೇಟಿ ನೀಡುತ್ತಿದ್ದಾರೆ. ಪದೇಪದೇ ಒಟ್ಟಿಗೆ ಸಿನಿಮಾ ಮಾಡುತ್ತಿರುವ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರಿಂದ ಪ್ರಶ್ನೆ ಎದುರಾಗಿತ್ತು. ಅದಕ್ಕೆ ಉತ್ತರಿಸಿದ ಶಿವಣ್ಣ, ‘ಇನ್ನೂ ಹತ್ತು ಸಿನಿಮಾ ಒಟ್ಟಿಗೆ ಮಾಡ್ತೀವಿ. ನಿಮಗೇನಾದರೂ ಹೊಟ್ಟೆಕಿಚ್ಚಾ? ಅವರ ಜೊತೆ ಯಾವಾಗಲೂ ನನಗೆ ಕಂಫರ್ಟ್​ ಆಗಿರುತ್ತದೆ’ ಎಂದಿದ್ದರು ಶಿವರಾಜ್​ಕುಮಾರ್.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:01 am, Thu, 29 December 22

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ