AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪಾಸ್​ಪೋರ್ಟ್​ನಲ್ಲಿ ನನ್ನ ಹೆಸರು ಹೀಗಿಲ್ಲ’; ಅಸಲಿ ಹೆಸರು ರಿವೀಲ್ ಮಾಡಿದ ಶಿವರಾಜ್​ಕುಮಾರ್

ಶಿವರಾಜ್​ಕುಮಾರ್ ಕೂಡ ಈ ಕಾರ್ಯಕ್ರಮದಲ್ಲಿ ಭಾಗಿ ಆಗಿ ವೇದಿಕೆ ಮೇಲೆ ಮಾತನಾಡಿದರು. ಆಗ ತಮ್ಮ ಅಸಲಿ ಹೆಸರು ಏನು ಎಂಬ ವಿಚಾರದ ಬಗ್ಗೆ ಹೇಳಿಕೊಂಡರು.

‘ಪಾಸ್​ಪೋರ್ಟ್​ನಲ್ಲಿ ನನ್ನ ಹೆಸರು ಹೀಗಿಲ್ಲ’; ಅಸಲಿ ಹೆಸರು ರಿವೀಲ್ ಮಾಡಿದ ಶಿವರಾಜ್​ಕುಮಾರ್
ಶಿವರಾಜ್​ಕುಮಾರ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jul 06, 2022 | 10:08 PM

Share

ನಟ ಶಿವರಾಜ್​ಕುಮಾರ್ (Shivarajkumar)  ಅವರು ಕರ್ನಾಟಕದಲ್ಲಿ ಶಿವಣ್ಣ ಎಂದೇ ಫೇಮಸ್. ಹೋದಲ್ಲಿ ಬಂದಲ್ಲಿ ಅವರನ್ನು ಎಲ್ಲರೂ ಪ್ರೀತಿಯಿಂದ ಶಿವಣ್ಣ ಎಂದೇ ಕರೆಯುತ್ತಾರೆ. ಆದರೆ, ಶಿವರಾಜ್​ಕುಮಾರ್ ಎಂಬುದು ಅವರ ಅಸಲಿ ಹೆಸರಲ್ಲ. ಶಿವರಾಜ್​ಕುಮಾರ್ ಪಾಸ್​ಪೋರ್ಟ್ (Passport)​ ಸೇರಿ ಎಲ್ಲಾ ದಾಖಲೆಗಳಲ್ಲಿ ಅವರ ಅಸಲಿ ಹೆಸರು ಇದೆ. ಈ ಹೆಸರನ್ನು ಅವರು ಇಟ್ಟುಕೊಂಡಿದ್ದು ಏಕೆ? ಅವರ ಮೂಲ ಹೆಸರು ಏನು ಎಂಬ ಬಗ್ಗೆ ಶಿವಣ್ಣ ಮಾತನಾಡಿದ್ದಾರೆ.

ಮೈಸೂರಿನ ಆಂದೋಲನ ಪತ್ರಿಕೆ 50 ವರ್ಷ ಪೂರೈಸಿದೆ. ಕರ್ನಾಟಕ ರಾಜ್ಯ ಮುಕ್ತ ವಿವಿ ಘಟಿಕೋತ್ಸವ ಭವನದಲ್ಲಿ ಈ ಪತ್ರಿಕೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ನೆರವೇರಿದೆ. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಆಗಮಿಸಿದ್ದರು. ಶಿವರಾಜ್​ಕುಮಾರ್ ಕೂಡ ಈ ಕಾರ್ಯಕ್ರಮದಲ್ಲಿ ಭಾಗಿ ಆಗಿ ವೇದಿಕೆ ಮೇಲೆ ಮಾತನಾಡಿದರು. ಆಗ ತಮ್ಮ ಅಸಲಿ ಹೆಸರು ಏನು ಎಂಬ ವಿಚಾರದ ಬಗ್ಗೆ ಹೇಳಿಕೊಂಡರು.

‘ನನ್ನ ಮೂಲ ಹೆಸರು ನಾಗರಾಜ ಶಿವಪುಟ್ಟ ಸ್ವಾಮಿ. ನನ್ನ ಪಾಸ್​ಪೋರ್ಟ್​ ಮೊದಲಾದ ದಾಖಲೆಗಳಲ್ಲಿ ಹೆಸರು ಹೀಗೆಯೇ ಇದೆ. ನಾನು ಓದಿ ಬೆಳೆದಿದ್ದು ಚೆನ್ನೈನಲ್ಲಿ. ಅಲ್ಲಿರುವ ಗೆಳೆಯರು ಪುಟ್ಟು ಅಂತಲೇ ಕರೆಯುತ್ತಾರೆ. ಇಲ್ಲಿ ಸಿನಿಮಾಗೆ ಎಂಟ್ರಿ ಆಗಬೇಕಾದರೆ ಅಪ್ಪಾಜಿ ಅವರ ಫ್ರೆಂಡ್ ರಾಮಸ್ವಾಮಿ ಅಂತ ಭೇಟಿ ಆದ್ರು. ರಾಜ್​ಕುಮಾರ್ ಫ್ಯಾಮಿಲಿಯವರು ನೀವು, ಹೀಗಾಗಿ ಶಿವರಾಜ್​ಕುಮಾರ್ ಅಂತ ಹೆಸರು ಇಟ್ಕೊಳಿ ಅಂದ್ರು. ಹೀಗಾಗಿ, ನಾನು ಶಿವರಾಜ್​ಕುಮಾರ್ ಆದೆ’ ಎಂದಿದ್ದಾರೆ ಶಿವಣ್ಣ.

ಇದನ್ನೂ ಓದಿ
Image
Bairagee Movie Review: ಮಚ್ಚು ಲಾಂಗು ಇಲ್ಲದೆ ಕೈಯಲ್ಲೇ ದುಷ್ಟರನ್ನು ನಾಶ ಮಾಡುವ ಎನರ್ಜಿಟಿಕ್ ‘ಬೈರಾಗಿ’
Image
ಶಿವಣ್ಣ ಜತೆ ನಟಿಸುವ ಚಾನ್ಸ್​ ಸಿಕ್ಕರೂ ಮುಹೂರ್ತಕ್ಕೆ ಪ್ರಭುದೇವ ಬರಲಿಲ್ಲ; ಕಾರಣ ತಿಳಿಸಿ ಕ್ಷಮೆ ಕೇಳಿದ ನಟ
Image
ಶಿವರಾಜ್​​ಕುಮಾರ್ ಅವರನ್ನು ಬಾಯ್ತುಂಬ ಹೊಗಳಿದ ಅನುಶ್ರೀ; ಶಿವಣ್ಣನ ರಿಯಾಕ್ಷನ್ ಹೇಗಿತ್ತು ನೋಡಿ
Image
‘ನಾವು ಬೇರೆ ಭಾಷೆಯಲ್ಲಿ ಮಾತಾಡ್ತೀವಿ, ಅದು ಯಾವುದು ಅಂತ ಈಗ ಬೇಡ’: ವೇದಿಕೆಯಲ್ಲಿ ಶಿವಣ್ಣ ಮನದ ಮಾತು

ಶಿವರಾಜ್​ಕುಮಾರ್ ನಟನೆಯ ‘ಬೈರಾಗಿ’ ಸಿನಿಮಾ ಕಳೆದವಾರ ತೆರೆಗೆ ಬಂತು. ಈ ಚಿತ್ರಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ‘ಟಗರು’ ಬಳಿಕ ಧನಂಜಯ ಹಾಗೂ ಶಿವರಾಜ್​ಕುಮಾರ್ ಮತ್ತೆ ಒಂದಾಗಿದ್ದಾರೆ. ತಮಿಳು ನಿರ್ದೇಶಕ ವಿಜಯ್ ಮಿಲ್ಟನ್ ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಈ ಚಿತ್ರದ ಟಿವಿ ಹಕ್ಕು 10 ಕೋಟಿ ರೂಪಾಯಿಗೆ ಮಾರಾಟ ಆದ ಬಗ್ಗೆ ನಿರ್ಮಾಪಕರು ಸಿನಿಮಾ ರಿಲೀಸ್ ಸಂದರ್ಭದಲ್ಲಿ ಹೇಳಿಕೊಂಡಿದ್ದರು.

ಇದನ್ನೂ ಓದಿ: Bairagee: ಶಿವರಾಜ್​ಕುಮಾರ್-ಧನಂಜಯ ನಟನೆಯ ‘ಬೈರಾಗಿ’ ಚಿತ್ರದ ಮೊದಲಾರ್ಧದ ವಿಮರ್ಶೆ

ಮೈಸೂರಿಗೆ ಆಗಮಿಸಿದ ಶಿವರಾಜ್​ಕುಮಾರ್​ಗೆ ಹೂಮಳೆ ಸ್ವಾಗತ

​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ