AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪಾಸ್​ಪೋರ್ಟ್​ನಲ್ಲಿ ನನ್ನ ಹೆಸರು ಹೀಗಿಲ್ಲ’; ಅಸಲಿ ಹೆಸರು ರಿವೀಲ್ ಮಾಡಿದ ಶಿವರಾಜ್​ಕುಮಾರ್

ಶಿವರಾಜ್​ಕುಮಾರ್ ಕೂಡ ಈ ಕಾರ್ಯಕ್ರಮದಲ್ಲಿ ಭಾಗಿ ಆಗಿ ವೇದಿಕೆ ಮೇಲೆ ಮಾತನಾಡಿದರು. ಆಗ ತಮ್ಮ ಅಸಲಿ ಹೆಸರು ಏನು ಎಂಬ ವಿಚಾರದ ಬಗ್ಗೆ ಹೇಳಿಕೊಂಡರು.

‘ಪಾಸ್​ಪೋರ್ಟ್​ನಲ್ಲಿ ನನ್ನ ಹೆಸರು ಹೀಗಿಲ್ಲ’; ಅಸಲಿ ಹೆಸರು ರಿವೀಲ್ ಮಾಡಿದ ಶಿವರಾಜ್​ಕುಮಾರ್
ಶಿವರಾಜ್​ಕುಮಾರ್
TV9 Web
| Edited By: |

Updated on: Jul 06, 2022 | 10:08 PM

Share

ನಟ ಶಿವರಾಜ್​ಕುಮಾರ್ (Shivarajkumar)  ಅವರು ಕರ್ನಾಟಕದಲ್ಲಿ ಶಿವಣ್ಣ ಎಂದೇ ಫೇಮಸ್. ಹೋದಲ್ಲಿ ಬಂದಲ್ಲಿ ಅವರನ್ನು ಎಲ್ಲರೂ ಪ್ರೀತಿಯಿಂದ ಶಿವಣ್ಣ ಎಂದೇ ಕರೆಯುತ್ತಾರೆ. ಆದರೆ, ಶಿವರಾಜ್​ಕುಮಾರ್ ಎಂಬುದು ಅವರ ಅಸಲಿ ಹೆಸರಲ್ಲ. ಶಿವರಾಜ್​ಕುಮಾರ್ ಪಾಸ್​ಪೋರ್ಟ್ (Passport)​ ಸೇರಿ ಎಲ್ಲಾ ದಾಖಲೆಗಳಲ್ಲಿ ಅವರ ಅಸಲಿ ಹೆಸರು ಇದೆ. ಈ ಹೆಸರನ್ನು ಅವರು ಇಟ್ಟುಕೊಂಡಿದ್ದು ಏಕೆ? ಅವರ ಮೂಲ ಹೆಸರು ಏನು ಎಂಬ ಬಗ್ಗೆ ಶಿವಣ್ಣ ಮಾತನಾಡಿದ್ದಾರೆ.

ಮೈಸೂರಿನ ಆಂದೋಲನ ಪತ್ರಿಕೆ 50 ವರ್ಷ ಪೂರೈಸಿದೆ. ಕರ್ನಾಟಕ ರಾಜ್ಯ ಮುಕ್ತ ವಿವಿ ಘಟಿಕೋತ್ಸವ ಭವನದಲ್ಲಿ ಈ ಪತ್ರಿಕೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ನೆರವೇರಿದೆ. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಆಗಮಿಸಿದ್ದರು. ಶಿವರಾಜ್​ಕುಮಾರ್ ಕೂಡ ಈ ಕಾರ್ಯಕ್ರಮದಲ್ಲಿ ಭಾಗಿ ಆಗಿ ವೇದಿಕೆ ಮೇಲೆ ಮಾತನಾಡಿದರು. ಆಗ ತಮ್ಮ ಅಸಲಿ ಹೆಸರು ಏನು ಎಂಬ ವಿಚಾರದ ಬಗ್ಗೆ ಹೇಳಿಕೊಂಡರು.

‘ನನ್ನ ಮೂಲ ಹೆಸರು ನಾಗರಾಜ ಶಿವಪುಟ್ಟ ಸ್ವಾಮಿ. ನನ್ನ ಪಾಸ್​ಪೋರ್ಟ್​ ಮೊದಲಾದ ದಾಖಲೆಗಳಲ್ಲಿ ಹೆಸರು ಹೀಗೆಯೇ ಇದೆ. ನಾನು ಓದಿ ಬೆಳೆದಿದ್ದು ಚೆನ್ನೈನಲ್ಲಿ. ಅಲ್ಲಿರುವ ಗೆಳೆಯರು ಪುಟ್ಟು ಅಂತಲೇ ಕರೆಯುತ್ತಾರೆ. ಇಲ್ಲಿ ಸಿನಿಮಾಗೆ ಎಂಟ್ರಿ ಆಗಬೇಕಾದರೆ ಅಪ್ಪಾಜಿ ಅವರ ಫ್ರೆಂಡ್ ರಾಮಸ್ವಾಮಿ ಅಂತ ಭೇಟಿ ಆದ್ರು. ರಾಜ್​ಕುಮಾರ್ ಫ್ಯಾಮಿಲಿಯವರು ನೀವು, ಹೀಗಾಗಿ ಶಿವರಾಜ್​ಕುಮಾರ್ ಅಂತ ಹೆಸರು ಇಟ್ಕೊಳಿ ಅಂದ್ರು. ಹೀಗಾಗಿ, ನಾನು ಶಿವರಾಜ್​ಕುಮಾರ್ ಆದೆ’ ಎಂದಿದ್ದಾರೆ ಶಿವಣ್ಣ.

ಇದನ್ನೂ ಓದಿ
Image
Bairagee Movie Review: ಮಚ್ಚು ಲಾಂಗು ಇಲ್ಲದೆ ಕೈಯಲ್ಲೇ ದುಷ್ಟರನ್ನು ನಾಶ ಮಾಡುವ ಎನರ್ಜಿಟಿಕ್ ‘ಬೈರಾಗಿ’
Image
ಶಿವಣ್ಣ ಜತೆ ನಟಿಸುವ ಚಾನ್ಸ್​ ಸಿಕ್ಕರೂ ಮುಹೂರ್ತಕ್ಕೆ ಪ್ರಭುದೇವ ಬರಲಿಲ್ಲ; ಕಾರಣ ತಿಳಿಸಿ ಕ್ಷಮೆ ಕೇಳಿದ ನಟ
Image
ಶಿವರಾಜ್​​ಕುಮಾರ್ ಅವರನ್ನು ಬಾಯ್ತುಂಬ ಹೊಗಳಿದ ಅನುಶ್ರೀ; ಶಿವಣ್ಣನ ರಿಯಾಕ್ಷನ್ ಹೇಗಿತ್ತು ನೋಡಿ
Image
‘ನಾವು ಬೇರೆ ಭಾಷೆಯಲ್ಲಿ ಮಾತಾಡ್ತೀವಿ, ಅದು ಯಾವುದು ಅಂತ ಈಗ ಬೇಡ’: ವೇದಿಕೆಯಲ್ಲಿ ಶಿವಣ್ಣ ಮನದ ಮಾತು

ಶಿವರಾಜ್​ಕುಮಾರ್ ನಟನೆಯ ‘ಬೈರಾಗಿ’ ಸಿನಿಮಾ ಕಳೆದವಾರ ತೆರೆಗೆ ಬಂತು. ಈ ಚಿತ್ರಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ‘ಟಗರು’ ಬಳಿಕ ಧನಂಜಯ ಹಾಗೂ ಶಿವರಾಜ್​ಕುಮಾರ್ ಮತ್ತೆ ಒಂದಾಗಿದ್ದಾರೆ. ತಮಿಳು ನಿರ್ದೇಶಕ ವಿಜಯ್ ಮಿಲ್ಟನ್ ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಈ ಚಿತ್ರದ ಟಿವಿ ಹಕ್ಕು 10 ಕೋಟಿ ರೂಪಾಯಿಗೆ ಮಾರಾಟ ಆದ ಬಗ್ಗೆ ನಿರ್ಮಾಪಕರು ಸಿನಿಮಾ ರಿಲೀಸ್ ಸಂದರ್ಭದಲ್ಲಿ ಹೇಳಿಕೊಂಡಿದ್ದರು.

ಇದನ್ನೂ ಓದಿ: Bairagee: ಶಿವರಾಜ್​ಕುಮಾರ್-ಧನಂಜಯ ನಟನೆಯ ‘ಬೈರಾಗಿ’ ಚಿತ್ರದ ಮೊದಲಾರ್ಧದ ವಿಮರ್ಶೆ

ಮೈಸೂರಿಗೆ ಆಗಮಿಸಿದ ಶಿವರಾಜ್​ಕುಮಾರ್​ಗೆ ಹೂಮಳೆ ಸ್ವಾಗತ

ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ
ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದ ತೇಜಸ್ವಿ !
ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದ ತೇಜಸ್ವಿ !
ತಮಿಳುನಾಡಲ್ಲಿ ಕರ್ನಾಟಕ ಧ್ವಜ ಎತ್ತಿ ಹಿಡಿದ ಬಗ್ಗೆ ಸುದೀಪ್ ಮಾತು
ತಮಿಳುನಾಡಲ್ಲಿ ಕರ್ನಾಟಕ ಧ್ವಜ ಎತ್ತಿ ಹಿಡಿದ ಬಗ್ಗೆ ಸುದೀಪ್ ಮಾತು