AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneetha Parva: ಡ್ಯಾನ್ಸ್​ ಮಾಡಿ ಅಪ್ಪುಗೆ ನಮನ ಸಲ್ಲಿಸಿದ ಶಿವಣ್ಣ; ‘ಗಂಧದ ಗುಡಿ’ ಬಗ್ಗೆ ಹ್ಯಾಟ್ರಿಕ್​ ಹೀರೋ ಹೇಳಿದ್ದೇನು?

Gandhada Gudi | Shivarajkumar: ‘ಈ ಸಮಾರಂಭದಲ್ಲಿ ಮಾತಾಡೋದು ಬಹಳ ಕಷ್ಟ. ಒಂದು ವರ್ಷ ಹೇಗೆ ಕಳೆದು ಹೋಯಿತು ಎಂಬುದು ನೆನಪಿಸಿಕೊಂಡರೆ ಸಂಕಟ, ನೋವು ಆಗುತ್ತದೆ’ ಎನ್ನುತ್ತ ಶಿವರಾಜ್​ಕುಮಾರ್​ ಮಾತು ಆರಂಭಿಸಿದರು.

Puneetha Parva: ಡ್ಯಾನ್ಸ್​ ಮಾಡಿ ಅಪ್ಪುಗೆ ನಮನ ಸಲ್ಲಿಸಿದ ಶಿವಣ್ಣ; ‘ಗಂಧದ ಗುಡಿ’ ಬಗ್ಗೆ ಹ್ಯಾಟ್ರಿಕ್​ ಹೀರೋ ಹೇಳಿದ್ದೇನು?
ಶಿವರಾಜ್​ಕುಮಾರ್
TV9 Web
| Edited By: |

Updated on: Oct 21, 2022 | 9:40 PM

Share

ಪುನೀತ್​ ರಾಜ್​ಕುಮಾರ್​ ಅವರ ಡ್ರೀಮ್​ ಪ್ರಾಜೆಕ್ಟ್​ ‘ಗಂಧದ ಗುಡಿ’ (Gandhada Gudi) ಸಾಕ್ಷ್ಯಚಿತ್ರ ಅ.28ಕ್ಕೆ ರಿಲೀಸ್​ ಆಗಲಿದೆ. ಅದರ ಸಲುವಾಗಿ ಇಂದು (ಅ.21) ಅದ್ದೂರಿಯಾಗಿ ಪ್ರೀ ರಿಲೀಸ್​ ಇವೆಂಟ್​ ಮಾಡಲಾಗಿದೆ. ಡಾ. ರಾಜ್​ಕುಮಾರ್​ ಕುಟುಂಬದವರು ‘ಪುನೀತ ಪರ್ವ’ (Puneetha Parva) ಹೆಸರಿನಲ್ಲಿ ಈ ಕಾರ್ಯಕ್ರಮವನ್ನು ಬಹಳ ಕಾಳಜಿಯಿಂದ ಮಾಡಿದ್ದಾರೆ. ಅಣ್ಣಾವ್ರ ಕುಟುಂಬದ ಎಲ್ಲರೂ ಇದರಲ್ಲಿ ಭಾಗಿ ಆಗಿದ್ದಾರೆ. ಶಿವರಾಜ್​ಕುಮಾರ್​ (Puneeth Rajkumar) ಅವರು ವೇದಿಕೆ ಮೇಲೆ ಡ್ಯಾನ್ಸ್​ ಮಾಡುವ ಮೂಲಕ ಸಹೋದರ ಅಪ್ಪುಗೆ ನಮನ ಸಲ್ಲಿಸಿದ್ದಾರೆ. ಬಳಿಕ ಗಂಧದ ಗುಡಿ’ ಹಾಗೂ ಪುನೀತ್​ ಬಗ್ಗೆ ಅವರು ವಿಶೇಷ ಮಾತುಗಳನ್ನು ಹಂಚಿಕೊಂಡರು.

ಶಿವರಾ​ಜ್​ಕುಮಾರ್​ ಜೊತೆ ಪರಭಾಷೆ ಕಲಾವಿದರಾದ​ ರಾಣಾ ದಗ್ಗುಬಾಟಿ, ಅಖಿಲ್​ ಅಕ್ಕಿನೇನಿ, ಸಿದ್ದಾರ್ಥ್​ ಕೂಡ ವೇದಿಕೆಗೆ ಬಂದು ಅಪ್ಪು ಬಗ್ಗೆ ಮಾತನಾಡಿದರು. ಅವರಿಗೆ ಕನ್ನಡದ ಹೀರೋಗಳಾದ ಡಾಲಿ ಧನಂಜಯ್​​, ರಕ್ಷಿತ್​ ಶೆಟ್ಟಿ ಸಾಥ್​ ನೀಡಿದರು.

‘ಈ ಸಮಾರಂಭದಲ್ಲಿ ಮಾತಾಡೋದು ಬಹಳ ಕಷ್ಟ. ಒಂದು ವರ್ಷ ಹೇಗೆ ಕಳೆದು ಹೋಯಿತು ಎಂಬುದು ನೆನಪಿಸಿಕೊಂಡರೆ ಸಂಕಟ, ನೋವು ಆಗುತ್ತದೆ. ಆ ನೋವು ಎಲ್ಲರಿಗೂ ಇದೆ. ಬೇರೆ ಭಾಷೆಯವರಿಗೆ ಅಪ್ಪು ಬಗ್ಗೆ ಪ್ರೀತಿ ಇದೆ. ಹಾಗಾಗಿ ಅವರೆಲ್ಲ ಇಲ್ಲಿಗೆ ಬಂದಿದ್ದಾರೆ. ದುಃಖದಲ್ಲಿ ನಮ್ಮ ಜೊತೆಯಲ್ಲಿ ನೀವೆಲ್ಲ ಇದ್ದಿದ್ದು ಒಂದು ನೈತಿಕ ಬಲ ಆಯ್ತು. ಇಲ್ಲ ಅಂದಿದ್ದರೆ ನಾವು ಕುಗ್ಗಿ ಹೋಗುತ್ತಿದ್ದೆವು’ ಎಂದರು ಶಿವರಾಜ್​ಕುಮಾರ್​.

ಇದನ್ನೂ ಓದಿ
Image
Puneetha Parva: ‘ಮಿಸ್​ ಯೂ ಅಪ್ಪು’: ಪುನೀತ ಪರ್ವ ವೇದಿಕೆಯಲ್ಲಿ ‘ಪವರ್​ ಸ್ಟಾರ್​’ಗೆ ನುಡಿ ನಮನ ಸಲ್ಲಿಸಿದ ಗಣ್ಯರು
Image
‘ನಾನಿರುವವರೆಗೂ ಈ ಹಾಡು ನನ್ನ ಜತೆ ಇರುತ್ತದೆ’; ‘ಪುನೀತ ಪರ್ವ’ ವೇದಿಕೆ ಮೇಲೆ ರಾಘಣ್ಣ ಭಾವುಕ ನುಡಿ
Image
Puneetha Parva: ‘ಪುನೀತ ಪರ್ವ’ ಲೈವ್​ ನೋಡಲು ಇಲ್ಲಿ ಕ್ಲಿಕ್​ ಮಾಡಿ; ಅರಮನೆ ಮೈದಾನದಲ್ಲಿ ತಾರೆಯರ ಸಂಗಮ
Image
Gandhada Gudi Trailer: ಒಂದೇ ದಿನದಲ್ಲಿ 1 ಕೋಟಿ ಬಾರಿ ವೀಕ್ಷಣೆ ಕಂಡ ‘ಗಂಧದ ಗುಡಿ’ ಟ್ರೇಲರ್

‘ಗಂಧದ ಗುಡಿ ಎಂದಾಗ ಮೊದಲು ನೆನಪು ಬರೋದು ಅಪ್ಪಾಜಿ ಸಿನಿಮಾ. ವಿಷ್ಣುವರ್ಧನ್​ ಮತ್ತು ಅಪ್ಪಾಜಿ ಅವರು ಮೊದಲ ಜೊತೆಯಾಗಿ ಮಾಡಿದ ಸಿನಿಮಾ ಅದು. ಗಂಧದ ಗುಡಿ ಪಾರ್ಟ್​ 2 ಮಾಡುವ ಭಾಗ್ಯ ನನಗೆ ಸಿಕ್ತು. ಈಗ ಅಪ್ಪು ಮಾಡಿದ್ದಾನೆ. ಕಾಡು ತುಂಬ ಮುಖ್ಯ. ನಾವು ಪರಿಸರಕ್ಕೆ ಎಷ್ಟು ದ್ರೋಹ ಮಾಡ್ತೀವಿ, ಪ್ರಕೃತಿ ಅಷ್ಟೇ ಸೇಡು ತೀರಿಸಿಕೊಳ್ಳುತ್ತೆ. ಪ್ರಾಣಿಗಳನ್ನು ಉಳಿಸಿ, ಮರ ಬೆಳೆಸಿ ಅಂತ ಕೇಳಿಕೊಳ್ಳುತ್ತೇನೆ’ ಎಂದು ಶಿವಣ್ಣ ಮನವಿ ಮಾಡಿಕೊಂಡರು.

‘ಅಪ್ಪು ನಮ್ಮ ಜೊತೆ ಇಲ್ಲ ಅಂತ ನಾನು ಯಾವಾಗಲೂ ಹೇಳಲ್ಲ. ಅವನು ನನ್ನ ಜೊತೆಯೇ ಇದ್ದಾನೆ. ನಾನೇಕೆ ಮಿಸ್​ ಮಾಡಿಕೊಳ್ಳಲಿ? ಗಂಧದ ಗುಡಿಗೆ ಒಳ್ಳೆಯದಾಗಲಿ’ ಎಂದರು ಶಿವರಾಜ್​ಕುಮಾರ್​.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?