AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ್​ ಚರಣ್​ ಫ್ಯಾನ್​ ಪೇಜ್​ನಲ್ಲಿ ಶಿವಣ್ಣನ ವಿಡಿಯೋ ವೈರಲ್​; ಏನಿದೆ ಇದರಲ್ಲಿ?

ಟಾಲಿವುಡ್​ ನಟ ರಾಮ್​ ಚರಣ್​ ಅಭಿನಯಿಸಲಿರುವ 16ನೇ ಸಿನಿಮಾ ಸೆಟ್ಟೇರಿದೆ. ಈ ಚಿತ್ರದಲ್ಲಿ ಕನ್ನಡದ ಸ್ಟಾರ್​ ನಟ ಶಿವರಾಜ್​ಕುಮಾರ್​ ಕೂಡ ಒಂದು ಮುಖ್ಯ ಪಾತ್ರ ಮಾಡಲಿದ್ದಾರೆ ಎಂಬುದು ವಿಶೇಷ. ಈ ಸಿನಿಮಾದ ಬಗ್ಗೆ ಶಿವಣ್ಣ ಮಾತನಾಡಿದ ವಿಡಿಯೋ ವೈರಲ್​ ಆಗಿದೆ. ರಾಮ್​ ಚರಣ್​ ಅವರ ಫ್ಯಾನ್ಸ್​​ ಪೇಜ್​ಗಳಲ್ಲಿ ಈ ವಿಡಿಯೋವನ್ನು ಶೇರ್​ ಮಾಡಿಕೊಳ್ಳಲಾಗಿದೆ.

ರಾಮ್​ ಚರಣ್​ ಫ್ಯಾನ್​ ಪೇಜ್​ನಲ್ಲಿ ಶಿವಣ್ಣನ ವಿಡಿಯೋ ವೈರಲ್​; ಏನಿದೆ ಇದರಲ್ಲಿ?
ಶಿವರಾಜ್​ಕುಮಾರ್​, ರಾಮ್​ ಚರಣ್​
ಮದನ್​ ಕುಮಾರ್​
|

Updated on: Mar 20, 2024 | 4:24 PM

Share

ಹ್ಯಾಟ್ರಿಕ್​ ಹೀರೋ ಶಿವರಾಜ್​ಕುಮಾರ್​ (Shivarajkumar) ಅವರು ಈಗ ಪರಭಾಷೆಯಲ್ಲೂ ಸಖತ್​ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ‘ಜೈಲರ್​’ ಸಿನಿಮಾದಲ್ಲಿ ಅವರು ನಟಿಸಿದ ಬಳಿಕ ತಮಿಳು ಮತ್ತು ತೆಲುಗು ನಿರ್ಮಾಪಕರು ಶಿವಣ್ಣನ ಕಾಲ್​ಶೀಟ್​ಗಾಗಿ ಮುಗಿಬಿದ್ದಿದ್ದಾರೆ. ರಾಮ್​ ಚರಣ್​ (Ram Charan) ನಟಿಸಲಿರುವ 16ನೇ ಸಿನಿಮಾದಲ್ಲಿ ಶಿವರಾಜ್​ಕುಮಾರ್​ ಕೂಡ ಅಭಿನಯಿಸುತ್ತಿದ್ದಾರೆ. ಈ ಚಿತ್ರಕ್ಕೆ ‘ಉಪ್ಪೆನಾ’ ಖ್ಯಾತಿಯ ಬುಚ್ಚಿ ಬಾಬು ಸನಾ ಅವರು ನಿರ್ದೇಶನ ಮಾಡಲಿದ್ದಾರೆ. ಇನ್ನೂ ಶೀರ್ಷಿಕೆ ಅಂತಿಮವಾಗದ ಈ ಸಿನಿಮಾವನ್ನು ಸದ್ಯಕ್ಕೆ RC16 ಎಂದು ಕರೆಯಲಾಗುತ್ತಿದೆ. ಈ ಸಿನಿಮಾಗೆ ಸಂಬಂಧಿಸಿದಂತೆ ಶಿವಣ್ಣ (Shivanna)​ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ.

ಹೈದರಾಬಾದ್​ನಲ್ಲಿ ‘RC16’ ಸಿನಿಮಾದ ಮುಹೂರ್ತ ಕಾರ್ಯಕ್ರಮ ಇಂದು (ಮಾರ್ಚ್​ 20) ನಡೆದಿದೆ. ಟಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದಾರೆ. ಕಾರಣಾಂತರಗಳಿಂದ ಶಿವರಾಜ್​ಕುಮಾರ್​ ಅವರು ಈ ಇವೆಂಟ್​ನಲ್ಲಿ ಭಾಗಿಯಾಗಿಲ್ಲ. ಆದರೂ ಸಂದರ್ಶವೊಂದರಲ್ಲಿ ಈ ಸಿನಿಮಾದ ಬಗ್ಗೆ ಶಿವಣ್ಣ ಮಾತನಾಡಿರುವ ವಿಡಿಯೋ ವೈರಲ್​ ಆಗಿದೆ. ರಾಮ್​ ಚರಣ್​ ಅಭಿಮಾನಿಗಳು ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಇದನ್ನು ಹಂಚಿಕೊಳ್ಳಲಾಗಿದೆ.

ಪತ್ರಕರ್ತ ಬಿ. ಗಣಪತಿ ಅವರಿಗೆ ನೀಡಿದ ಸಂದರ್ಶನದಲ್ಲಿ ಶಿವರಾಜ್​ಕುಮಾರ್​ ಅವರು ನಿರ್ದೇಶಕ ಬುಚ್ಚಿ ಬಾಬು ಸನಾ ಹಾಗೂ ರಾಮ್​ ಚರಣ್​ ಬಗ್ಗೆ ಮಾತನಾಡಿದ್ದಾರೆ. ‘ರಾಮ್​ ಚರಣ್​ ಅವರ ಒಂದು ತೆಲುಗು ಸಿನಿಮಾ ಆಫರ್​ ಬಂದಿದೆ. ಅದು ಬೇರೆ ಥರ ಇದೆ. ಆ ಪಾತ್ರದ ತೂಕ, ಅವರು ಹೆಂಗೆ ಯೋಚನೆ ಮಾಡುತ್ತಾರೆ ಎಂಬುದೇ ಗೊತ್ತಿಲ್ಲ. ರಾಮ್​ ಚರಣ್​ ಕೂಡ ಥ್ರಿಲ್​ ಆಗಿಬಿಟ್ಟರು. ‘ಶಿವಣ್ಣ ಆ್ಯಕ್ಟ್​ ಮಾಡುತ್ತಾರಾ. ನಂಗೆ ಬಹಳ ಇಷ್ಟ’ ಅಂದ್ರು. ನನಗೂ ರಾಮ್​ ಚರಣ್​ ಅಂದ್ರೆ ತುಂಬ ಇಷ್ಟ’ ಎಂದು ಶಿವಣ್ಣ ಹೇಳಿದ್ದಾರೆ.

ಶಿವರಾಜ್​ಕುಮಾರ್​ ಮಾತನಾಡಿರುವ ವೈರಲ್​ ವಿಡಿಯೋ:

‘ರಾಮ್​ ಚರಣ್​ ಒಬ್ಬ ಅದ್ಭುತವಾದ ವ್ಯಕ್ತಿ. ಅದ್ಭುತವಾದ ನಟ. ನನ್ನ ಪಾತ್ರದಲ್ಲಿ ವಿಭಿನ್ನತೆ ಇದೆ, ಒಂದು ಉದ್ದೇಶ ಉದೆ. ಆ ಪಾತ್ರ ನಾನು ಮಾಡಿದರೆ ಆ ಉದ್ದೇಶಕ್ಕೆ ಅರ್ಥ ಎಂದು ನಿರ್ದೇಶಕ ಬುಚ್ಚಿ ಬಾಬು ಸನಾ ಹೇಳಿದ್ರು. ಅವರು ಕೈ ಕಟ್ಟಿಕೊಂಡು ಕುಳಿತು ಕಥೆ ಹೇಳಿದರು. ನಿರ್ದೇಶಕರಾದ ನೀವು ಈ ರೀತಿ ಕುಳಿತುಕೊಳ್ಳಬಾರದು, ಆರಾಮಾಗಿ ಕುಳಿತುಕೊಂಡು ಕಥೆ ಹೇಳಿ ಎಂದೆ. ಕಥೆ ಹೇಳಲು ಅರ್ಧ ಗಂಟೆ ಕೊಡಿ ಎಂದಿದ್ದರು. ನಾನು ಒಂದೂವರೆ ಗಂಟೆ ಕಥೆ ಕೇಳಿದೆ. ಅವರು ಇಡೀ ಕಥೆ ಹೇಳಿದರು’ ಎಂದಿದ್ದಾರೆ ಶಿವಣ್ಣ.

ಇದನ್ನೂ ಓದಿ: ‘ಅಪ್ಪಾಜಿಗೂ ಪಾಲಿಟಿಕ್ಸ್​ ಬೇಕು, ಅದಕ್ಕಾಗಿಯೇ..’: ಮನದ ಮಾತು ತಿಳಿಸಿದ ಶಿವಣ್ಣ

ಕನ್ನಡದಲ್ಲಿ ಶಿವಣ್ಣ ಮಾತನಾಡಿದ್ದನ್ನು ರಾಮ್​ ಚರಣ್​ ಅವರ ಅಭಿಮಾನಿಗಳು ತೆಲುಗಿಗೆ ಭಾಷಾಂತರ ಮಾಡಿಕೊಂಡು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಳ್ಳುತ್ತಿದ್ದಾರೆ. ಈ ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಾಗಿದೆ. ದೊಡ್ಡ ಪರದೆಯಲ್ಲಿ ಶಿವರಾಜ್​ಕುಮಾರ್​ ಮತ್ತು ರಾಮ್​ ಚರಣ್​ ಅವರ ಕಾಂಬಿನೇಷನ್​ ನೋಡಲು ಫ್ಯಾನ್ಸ್​ ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು