AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ್​ ಚರಣ್​ ಫ್ಯಾನ್​ ಪೇಜ್​ನಲ್ಲಿ ಶಿವಣ್ಣನ ವಿಡಿಯೋ ವೈರಲ್​; ಏನಿದೆ ಇದರಲ್ಲಿ?

ಟಾಲಿವುಡ್​ ನಟ ರಾಮ್​ ಚರಣ್​ ಅಭಿನಯಿಸಲಿರುವ 16ನೇ ಸಿನಿಮಾ ಸೆಟ್ಟೇರಿದೆ. ಈ ಚಿತ್ರದಲ್ಲಿ ಕನ್ನಡದ ಸ್ಟಾರ್​ ನಟ ಶಿವರಾಜ್​ಕುಮಾರ್​ ಕೂಡ ಒಂದು ಮುಖ್ಯ ಪಾತ್ರ ಮಾಡಲಿದ್ದಾರೆ ಎಂಬುದು ವಿಶೇಷ. ಈ ಸಿನಿಮಾದ ಬಗ್ಗೆ ಶಿವಣ್ಣ ಮಾತನಾಡಿದ ವಿಡಿಯೋ ವೈರಲ್​ ಆಗಿದೆ. ರಾಮ್​ ಚರಣ್​ ಅವರ ಫ್ಯಾನ್ಸ್​​ ಪೇಜ್​ಗಳಲ್ಲಿ ಈ ವಿಡಿಯೋವನ್ನು ಶೇರ್​ ಮಾಡಿಕೊಳ್ಳಲಾಗಿದೆ.

ರಾಮ್​ ಚರಣ್​ ಫ್ಯಾನ್​ ಪೇಜ್​ನಲ್ಲಿ ಶಿವಣ್ಣನ ವಿಡಿಯೋ ವೈರಲ್​; ಏನಿದೆ ಇದರಲ್ಲಿ?
ಶಿವರಾಜ್​ಕುಮಾರ್​, ರಾಮ್​ ಚರಣ್​
ಮದನ್​ ಕುಮಾರ್​
|

Updated on: Mar 20, 2024 | 4:24 PM

Share

ಹ್ಯಾಟ್ರಿಕ್​ ಹೀರೋ ಶಿವರಾಜ್​ಕುಮಾರ್​ (Shivarajkumar) ಅವರು ಈಗ ಪರಭಾಷೆಯಲ್ಲೂ ಸಖತ್​ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ‘ಜೈಲರ್​’ ಸಿನಿಮಾದಲ್ಲಿ ಅವರು ನಟಿಸಿದ ಬಳಿಕ ತಮಿಳು ಮತ್ತು ತೆಲುಗು ನಿರ್ಮಾಪಕರು ಶಿವಣ್ಣನ ಕಾಲ್​ಶೀಟ್​ಗಾಗಿ ಮುಗಿಬಿದ್ದಿದ್ದಾರೆ. ರಾಮ್​ ಚರಣ್​ (Ram Charan) ನಟಿಸಲಿರುವ 16ನೇ ಸಿನಿಮಾದಲ್ಲಿ ಶಿವರಾಜ್​ಕುಮಾರ್​ ಕೂಡ ಅಭಿನಯಿಸುತ್ತಿದ್ದಾರೆ. ಈ ಚಿತ್ರಕ್ಕೆ ‘ಉಪ್ಪೆನಾ’ ಖ್ಯಾತಿಯ ಬುಚ್ಚಿ ಬಾಬು ಸನಾ ಅವರು ನಿರ್ದೇಶನ ಮಾಡಲಿದ್ದಾರೆ. ಇನ್ನೂ ಶೀರ್ಷಿಕೆ ಅಂತಿಮವಾಗದ ಈ ಸಿನಿಮಾವನ್ನು ಸದ್ಯಕ್ಕೆ RC16 ಎಂದು ಕರೆಯಲಾಗುತ್ತಿದೆ. ಈ ಸಿನಿಮಾಗೆ ಸಂಬಂಧಿಸಿದಂತೆ ಶಿವಣ್ಣ (Shivanna)​ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ.

ಹೈದರಾಬಾದ್​ನಲ್ಲಿ ‘RC16’ ಸಿನಿಮಾದ ಮುಹೂರ್ತ ಕಾರ್ಯಕ್ರಮ ಇಂದು (ಮಾರ್ಚ್​ 20) ನಡೆದಿದೆ. ಟಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದಾರೆ. ಕಾರಣಾಂತರಗಳಿಂದ ಶಿವರಾಜ್​ಕುಮಾರ್​ ಅವರು ಈ ಇವೆಂಟ್​ನಲ್ಲಿ ಭಾಗಿಯಾಗಿಲ್ಲ. ಆದರೂ ಸಂದರ್ಶವೊಂದರಲ್ಲಿ ಈ ಸಿನಿಮಾದ ಬಗ್ಗೆ ಶಿವಣ್ಣ ಮಾತನಾಡಿರುವ ವಿಡಿಯೋ ವೈರಲ್​ ಆಗಿದೆ. ರಾಮ್​ ಚರಣ್​ ಅಭಿಮಾನಿಗಳು ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಇದನ್ನು ಹಂಚಿಕೊಳ್ಳಲಾಗಿದೆ.

ಪತ್ರಕರ್ತ ಬಿ. ಗಣಪತಿ ಅವರಿಗೆ ನೀಡಿದ ಸಂದರ್ಶನದಲ್ಲಿ ಶಿವರಾಜ್​ಕುಮಾರ್​ ಅವರು ನಿರ್ದೇಶಕ ಬುಚ್ಚಿ ಬಾಬು ಸನಾ ಹಾಗೂ ರಾಮ್​ ಚರಣ್​ ಬಗ್ಗೆ ಮಾತನಾಡಿದ್ದಾರೆ. ‘ರಾಮ್​ ಚರಣ್​ ಅವರ ಒಂದು ತೆಲುಗು ಸಿನಿಮಾ ಆಫರ್​ ಬಂದಿದೆ. ಅದು ಬೇರೆ ಥರ ಇದೆ. ಆ ಪಾತ್ರದ ತೂಕ, ಅವರು ಹೆಂಗೆ ಯೋಚನೆ ಮಾಡುತ್ತಾರೆ ಎಂಬುದೇ ಗೊತ್ತಿಲ್ಲ. ರಾಮ್​ ಚರಣ್​ ಕೂಡ ಥ್ರಿಲ್​ ಆಗಿಬಿಟ್ಟರು. ‘ಶಿವಣ್ಣ ಆ್ಯಕ್ಟ್​ ಮಾಡುತ್ತಾರಾ. ನಂಗೆ ಬಹಳ ಇಷ್ಟ’ ಅಂದ್ರು. ನನಗೂ ರಾಮ್​ ಚರಣ್​ ಅಂದ್ರೆ ತುಂಬ ಇಷ್ಟ’ ಎಂದು ಶಿವಣ್ಣ ಹೇಳಿದ್ದಾರೆ.

ಶಿವರಾಜ್​ಕುಮಾರ್​ ಮಾತನಾಡಿರುವ ವೈರಲ್​ ವಿಡಿಯೋ:

‘ರಾಮ್​ ಚರಣ್​ ಒಬ್ಬ ಅದ್ಭುತವಾದ ವ್ಯಕ್ತಿ. ಅದ್ಭುತವಾದ ನಟ. ನನ್ನ ಪಾತ್ರದಲ್ಲಿ ವಿಭಿನ್ನತೆ ಇದೆ, ಒಂದು ಉದ್ದೇಶ ಉದೆ. ಆ ಪಾತ್ರ ನಾನು ಮಾಡಿದರೆ ಆ ಉದ್ದೇಶಕ್ಕೆ ಅರ್ಥ ಎಂದು ನಿರ್ದೇಶಕ ಬುಚ್ಚಿ ಬಾಬು ಸನಾ ಹೇಳಿದ್ರು. ಅವರು ಕೈ ಕಟ್ಟಿಕೊಂಡು ಕುಳಿತು ಕಥೆ ಹೇಳಿದರು. ನಿರ್ದೇಶಕರಾದ ನೀವು ಈ ರೀತಿ ಕುಳಿತುಕೊಳ್ಳಬಾರದು, ಆರಾಮಾಗಿ ಕುಳಿತುಕೊಂಡು ಕಥೆ ಹೇಳಿ ಎಂದೆ. ಕಥೆ ಹೇಳಲು ಅರ್ಧ ಗಂಟೆ ಕೊಡಿ ಎಂದಿದ್ದರು. ನಾನು ಒಂದೂವರೆ ಗಂಟೆ ಕಥೆ ಕೇಳಿದೆ. ಅವರು ಇಡೀ ಕಥೆ ಹೇಳಿದರು’ ಎಂದಿದ್ದಾರೆ ಶಿವಣ್ಣ.

ಇದನ್ನೂ ಓದಿ: ‘ಅಪ್ಪಾಜಿಗೂ ಪಾಲಿಟಿಕ್ಸ್​ ಬೇಕು, ಅದಕ್ಕಾಗಿಯೇ..’: ಮನದ ಮಾತು ತಿಳಿಸಿದ ಶಿವಣ್ಣ

ಕನ್ನಡದಲ್ಲಿ ಶಿವಣ್ಣ ಮಾತನಾಡಿದ್ದನ್ನು ರಾಮ್​ ಚರಣ್​ ಅವರ ಅಭಿಮಾನಿಗಳು ತೆಲುಗಿಗೆ ಭಾಷಾಂತರ ಮಾಡಿಕೊಂಡು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಳ್ಳುತ್ತಿದ್ದಾರೆ. ಈ ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಾಗಿದೆ. ದೊಡ್ಡ ಪರದೆಯಲ್ಲಿ ಶಿವರಾಜ್​ಕುಮಾರ್​ ಮತ್ತು ರಾಮ್​ ಚರಣ್​ ಅವರ ಕಾಂಬಿನೇಷನ್​ ನೋಡಲು ಫ್ಯಾನ್ಸ್​ ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?