AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವ ನಟನಿಗೆ ಮಚ್ಚು ಹಿಡಿಯುವ ಪಾಠ ಮಾಡಿದ ಶಿವರಾಜ್​ಕುಮಾರ್​

ಗುಜ್ಜಲ್ ಪುರುಶೋತ್ತಮ್ ನಿರ್ಮಾಣ ಮಾಡುತ್ತಿರುವ ಹಾಗೂ ನಂದ ಕಿಶೋರ್ ನಿರ್ದೇಶನದ ‘ರಾಣ’ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ. ಈ ಸಿನಿಮಾಗೆ ಶ್ರೇಯಸ್ ನಾಯಕ.

ಯುವ ನಟನಿಗೆ ಮಚ್ಚು ಹಿಡಿಯುವ ಪಾಠ ಮಾಡಿದ ಶಿವರಾಜ್​ಕುಮಾರ್​
ಯುವ ನಟನಿಗೆ ಮಚ್ಚು ಹಿಡಿಯುವ ಪಾಠ ಮಾಡಿದ ಶಿವರಾಜ್​ಕುಮಾರ್​
TV9 Web
| Edited By: |

Updated on: Aug 26, 2021 | 7:31 PM

Share

ಶಿವರಾಜ್​ಕುಮಾರ್​ ಅಂದಾಕ್ಷಣ ನೆನಪಿಗೆ ಬರೋದು ಲಾಂಗ್​. ‘ಓಂ’ ಸಿನಿಮಾದಲ್ಲಿ ಲಾಂಗ್​ ಹಿಡಿದಿದ್ದರು ಶಿವರಾಜ್​ಕುಮಾರ್​. ಈ ಸಿನಿಮಾ ಸೂಪರ್ ಹಿಟ್​ ಆಗಿತ್ತು. ಇದಕ್ಕೆ ಅವರು ಲಾಂಗ್ ಹಿಡಿದಿದ್ದೇ ಕಾರಣ ಎನ್ನುತ್ತಾರೆ ಅನೇಕರು. ಅವರು ಮಚ್ಚು ಹಿಡಿದರೆ ಸಿನಿಮಾ ಹಿಟ್​ ಆಗೋದು ಪಕ್ಕಾ ಎಂಬ ನಂಬಿಕೆ ಅನೇಕ ನಿರ್ದೇಶಕರು ಹಾಗೂ ನಿರ್ಮಾಪಕರಲ್ಲಿದೆ. ಈಗ ಯುವ ನಟ ಶ್ರೇಯಸ್​ಗೆ ಲಾಂಗ್​ ಹಿಡಿಯೋದು ಹೇಗೆ ಎನ್ನುವ ಪಾಠವನ್ನು ಶಿವಣ್ಣ ಮಾಡಿದ್ದಾರೆ.

ಗುಜ್ಜಲ್ ಪುರುಶೋತ್ತಮ್ ನಿರ್ಮಾಣ ಮಾಡುತ್ತಿರುವ ಹಾಗೂ ನಂದ ಕಿಶೋರ್ ನಿರ್ದೇಶನದ ‘ರಾಣ’ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ. ಈ ಸಿನಿಮಾಗೆ ಶ್ರೇಯಸ್ ನಾಯಕ. ಇತ್ತೀಚೆಗೆ ಚಿತ್ರತಂಡ ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್ ಅವರನ್ನು ಭೇಟಿ ಮಾಡಿತ್ತು. ಲಾಂಗ್ ಹೇಗೆ ಹಿಡಿಯಬೇಕು, ಕ್ಯಾಮೆರಾ ಮುಂದೆ ಲಾಂಗ್ ಹಿಡಿದು ಹೇಗೆ ಅಭಿನಯಿಸಬೇಕು ಎನ್ನುವುದನ್ನು ಶ್ರೇಯಸ್​​ಗೆ ಶಿವರಾಜ್​ಕುಮಾರ್​ ಹೇಳಿಕೊಟ್ಟಿದ್ದು ವಿಶೇಷವಾಗಿತ್ತು.

‘ರಾಣ’ ಚಿತ್ರಕ್ಕಾಗಿ ಶ್ರೇಯಸ್​ ಇದೇ ಮೊದಲ ಬಾರಿಗೆ ಲಾಂಗ್​ ಹಿಡಿಯುತ್ತಿದ್ದಾರೆ. ಈ ಕಾರಣಕ್ಕೆ ಹಿರಿಯ ನಟ ಶಿವಣ್ಣನ ಬಳಿ ಟ್ರೇನಿಂಗ್​ ಪಡೆದರೆ ಉತ್ತಮ ಎನ್ನುವ ಆಲೋಚನೆ ಚಿತ್ರತಂಡದ್ದಾಗಿತ್ತು. ಹೀಗಾಗಿ, ನಿರ್ದೇಶಕ ನಂದ ಕಿಶೋರ್ ಹಾಗೂ ಶ್ರೇಯಸ್​ ಹ್ಯಾಟ್ರಿಕ್​ ಹೀರೋನನ್ನು ಭೇಟಿ ಆಗಿದ್ದಾರೆ.

‘ಪಾತ್ರ ಎಂದು ಬಂದಾಗ ಎಲ್ಲ ರೀತಿಯ ಕ್ಯಾರೆಕ್ಟರ್​ಗಳನ್ನೂ ಮಾಡಬೇಕು. ನನಗಿಂತ ಉತ್ತಮವಾಗಿ ಮಚ್ಚು ಹಿಡಿಯವವರು ಇದ್ದಾರೆ. ಪ್ರತಿ ಪಾತ್ರಕ್ಕೂ ಒಂದು ಆ್ಯಟಿಟ್ಯೂಡ್​ ಇರುತ್ತದೆ. ಅದು ತುಂಬಾನೇ ಮುಖ್ಯ. ನಾನು ಮಚ್ಚು ಹಿಡಿದೆ, ಅದಕ್ಕೆ ಸಿನಿಮಾ ಹಿಟ್​ ಆಯಿತು ಎಂದು ಹೇಳೋಕಾಗಲ್ಲ. ನಾನು ಸಿನಿಮಾದಲ್ಲಿ ಮಚ್ಚು ಹಿಡಿದು ನಟಿಸ್ತೀನಿ ನಿಜ. ಆದರೆ, ಅದನ್ನು ಹೇಳಿಕೊಡಿ ಎಂದರೆ ಅದು ಸ್ವಲ್ಪ ಕಷ್ಟದ ಕೆಲಸ’ ಎಂದರು ಶಿವರಾಜ್​ಕುಮಾರ್​.

ನಂತರ ಶ್ರೇಯಸ್​ಗೆ ಲಾಂಗ್​ ಹಿಡಿಯೋದು ಹೇಗೆ ಎನ್ನುವ ತರಬೇತಿ ನೀಡಿದರು. ಜತೆಗೆ ಚಿತ್ರತಂಡಕ್ಕೆ ಶುಭವಾಗಲಿ ಎಂದು ಹಾರೈಸಿದರು.

ಇದನ್ನೂ ಓದಿ: ಶಿವರಾಜ್​ಕುಮಾರ್​ 124ನೇ ಚಿತ್ರಕ್ಕೆ ಅಪ್ಪಟ ಕನ್ನಡ ಶೀರ್ಷಿಕೆ ‘ನೀ ಸಿಗೋವರೆಗೂ’; ಮುಹೂರ್ತಕ್ಕೆ ಕಿಚ್ಚ ಅತಿಥಿ

ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ
ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದ ತೇಜಸ್ವಿ !
ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದ ತೇಜಸ್ವಿ !
ತಮಿಳುನಾಡಲ್ಲಿ ಕರ್ನಾಟಕ ಧ್ವಜ ಎತ್ತಿ ಹಿಡಿದ ಬಗ್ಗೆ ಸುದೀಪ್ ಮಾತು
ತಮಿಳುನಾಡಲ್ಲಿ ಕರ್ನಾಟಕ ಧ್ವಜ ಎತ್ತಿ ಹಿಡಿದ ಬಗ್ಗೆ ಸುದೀಪ್ ಮಾತು
ಪರೀಕ್ಷಾ ಪೆ ಚರ್ಚಾ 2ನೇ ಸಂಚಿಕೆ, ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಮಾತುಕತೆ
ಪರೀಕ್ಷಾ ಪೆ ಚರ್ಚಾ 2ನೇ ಸಂಚಿಕೆ, ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಮಾತುಕತೆ